< अय्यूब 22 >

1 तब एलीपज तेमानीले जवाफ दिए र यसो भने,
ಆ ಮೇಲೆ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,
2 “के मानिस परमेश्‍वरको लागि उपयोगी हुन सक्छ र? के बुद्धिमान् मानिस उहाँको लागि उपयोगी हुन सक्छ र?
“ಮನುಷ್ಯ ಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೆ ಪ್ರಯೋಜನವಷ್ಟೆ.
3 तपाईं धर्मी हुनुहुन्छ भने, सर्वशक्तिमान्‌लाई के आनन्द मिल्छ र? तपाईंले आफ्ना मार्गहरू दोषरहित बनाउनुहुन्‍छ भने, त्यो उहाँको लाभ हो र?
ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?
4 तपाईंले उहाँको आदर गरेको हुनाले, उहाँले तपाईंलाई हप्काउनुहुन्छ अनि तपाईंलाई इन्साफमा लानुहुन्छ र?
ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?
5 के तपाईंको दुष्‍टता विशाल छैन र? के तपाईंको अधर्मको असीमित छैन र?
ನಿನ್ನ ಕೆಟ್ಟತನವು ಬಹಳವಲ್ಲವೇ? ನಿನ್ನ ಪಾಪಗಳಿಗೆ ಮಿತಿಯೇ ಇಲ್ಲವಲ್ಲಾ?
6 किनकि विनाकारण तपाईंले आफ्नो भाइबाट ऋणको जमानत माग्‍नुभएको छ, अनि तपाईंले दरिद्रहरूको सबै लुगा खोसेर तिनीहरूलाई नाङ्गो पार्नुभएको छ ।
ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಯಾಳುಗಳನ್ನು ತೆಗೆದುಕೊಂಡಿದ್ದಿ, ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದಿ.
7 थाकेका मानिसहरूलाई तपाईंले पानी पिउन दिनुभएको छैन । भोकाएका मानिसहरूले रोटी पाउन तपाईंले रोक्‍नुभएको छ ।
ಬಳಲಿದವನಿಗೆ ನೀರು ಕೊಡದೆ, ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ.
8 तपाईं, शक्तिशाली मानिससित जग्गाजमिन भए पनि, तपाईं, इज्‍जतदार मानिस त्‍यसमा बसोबास गर्नुभए पनि,
ಬಲಿಷ್ಠನಾದರೆ ದೇಶವೇ ಅವನದು, ಅಲ್ಲಿ ಸನ್ಮಾನ ಯೋಗ್ಯನಾಗಿ ವಾಸಿಸತಕ್ಕವನು ಅವನೇ.
9 तपाईंले विधवाहरूलाई रित्तो हात पठाउनुभएको छ । अनाथहरूका पाखुरा भाँचिएका छन् ।
ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದಿ.
10 त्यसकारण पासोहरू तपाईंको चारैतिर छन्, र एक्‍कासि आउने डरले तपाईंलाई कष्‍ट दिन्छ ।
೧೦ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ, ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ.
11 अन्धकार हुन्‍छ जसले गर्दा तपाईंले देख्‍न सक्‍नुहुन्‍न । पानीको भलले तपाईंलाई डुबाउँछ ।
೧೧ಇದಲ್ಲದೆ ದಾರಿಕಾಣದಂತೆ ಕತ್ತಲೂ, ಮುಸುಕಿ ಜಲಪ್ರವಾಹವೂ ನಿನ್ನನ್ನು ಆವರಿಸುತ್ತವೆ.
12 के परमेश्‍वर स्‍वर्गको उच्‍चमा हुनुहुन्‍न र? आकाशका ताराहरूको उच्‍चता हेर्नुहोस्, ती कति उच्‍चमा छन्!
೧೨ದೇವರು ಉನ್ನತ ಆಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು!
13 तपाईं भन्‍नुहुन्छ, 'परमेश्‍वरलाई के थाहा छ? के उहाँले निस्पट्ट अन्धकारमा न्याय गर्न सक्‍नहुन्छ र?
೧೩ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?
14 उहाँले हामीलाई देख्‍न नसकून् भनेर बाक्ला बादलहरूले उहाँलाई घेरेका छन् । उहाँ आकाशको चक्रमा हिंड्‍नुहुन्छ ।'
೧೪ದಟ್ಟವಾದ ಮೋಡಗಳು ಆತನಿಗೆ ಪರದೆಯ ಹಾಗಿರುವುದರಿಂದ ನೋಡಲಾರನು; ಆಕಾಶಮಂಡಲದ ಮೇಲೆ ನಡೆದಾಡುತ್ತಾನೆ’ ಎಂದು ಹೇಳಿಕೊಂಡೆಯಲ್ಲವೇ.
15 दुष्‍ट मानिसहरू हिंडेका पुरानै मार्गमा, तपाईं पनि हिंड्नुहुन्‍छ र—
೧೫ಕೆಟ್ಟವರು ಮೊದಲಿನಿಂದಲೂ, ನಡೆದ ದಾರಿಯನ್ನು ನೀನು ಹಿಡಿಯುವಿಯಾ?
16 तिनीहरूको समय हुनुअगि नै तिनीहरूको जीवन लिइयो, तिनीहरूका जगहरू नदीले झैं बगाएर लगेको छ,
೧೬ಅಕಾಲ ಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.
17 जसले परमेश्‍वरलाई यसो भने, 'हामीबाट जानुहोस्, ' जसले यसो भने, 'सर्वशक्तिमान्‌ले हामीलाई के गर्न सक्‍नुहुन्छ र?'
೧೭ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು.
18 तापनि उहाँले तिनीहरूका घरहरू असल कुराहरूले भर्नुभयो । दुष्‍ट मानिसहरूका योजनाहरू मबाटै धेरै टाढा छन् ।
೧೮ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!
19 धर्मी मानिसहरूले तिनीहरूको सुदिन देख्छन्, र खुसी हुन्छन् । निर्दोष मानिसहरूले हाँसेर तिनीहरूको उपहास गर्छन् ।
೧೯ನೀತಿವಂತರು ಇದನ್ನು ನೋಡಿ ಹಿಗ್ಗುವರು, ನಮ್ಮ ವಿರುದ್ಧವಾಗಿ ಎದ್ದವರು ಹಾಳಾಗಿಯೇ ಹೋದರು.
20 तिनीहरू भन्छन्, 'निश्‍चय नै हाम्रो विरुद्धमा उठ्नेहरू त्‍यागिएका छन् । आगोले तिनीहरूको धन-सम्पत्ति भस्म पारेको छ ।'
೨೦‘ಅವರ ಉಳಿದ ಸೊತ್ತನ್ನು ಬೆಂಕಿಯು ನಾಶಮಾಡಿತು’ ಎಂದು, ನಿರ್ದೋಷಿಗಳು ದುಷ್ಟರನ್ನು ಅಣಕಿಸುವರು.
21 अब परमेश्‍वरसित सहमत हुनुहोस्, र मिलाप गर्नुहोस् । त्‍यसरी तपाईंकहाँ भलाइ आउनेछ ।
೨೧ದೇವರ ಚಿತ್ತಕ್ಕೆ ಒಳಪಟ್ಟು ಸಮಾಧಾನ ಹೊಂದು, ಇದರಿಂದ ನಿನಗೆ ಶುಭವಾಗುವುದು.
22 म तपाईंलाई बिन्ती गर्छु, उहाँको निर्देशनको वचन ग्रहण गर्नुहोस् । उहाँका वचनहरू आफ्‍नो हृदयमा जम्‍मा गर्नुहोस् ।
೨೨ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ, ಆತನ ಮಾತುಗಳನ್ನು ಹೃದಯದಲ್ಲಿ ಇಟ್ಟುಕೋ.
23 तपाईं सर्वशक्तिमान्‌कहाँ फर्कनुहुन्‍छ भने, अधार्मिकतालाई तपाईंले आफ्ना पालहरूबाट धेरै टाढा राख्‍नुहुन्‍छ भने, तपाईंको निर्माण हुनेछ ।
೨೩ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.
24 आफ्‍नो खजाना भुइँको धूलोमा, ओपीरको सुनलाई खोलाका ढुङ्गाहरूका बिचमा फाल्‍नुहोस्,
೨೪ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು.
25 अनि सर्वशक्तिमान्‌ तपाईंको खजाना, तपाईंको बहुमूल्य चाँदी बन्‍नुहुनेछ ।
೨೫ಸರ್ವಶಕ್ತನಾದ ದೇವರು ನಿನಗೆ ಚಿನ್ನವಾಗಿಯೂ, ಬೆಳ್ಳಿಯ ರಾಶಿಗಳಾಗಿಯೂ ಇರುವನು.
26 किनकि त्‍यसपछि तपाईं सर्वशक्तिमान्‌मा रमाउनुहुनेछ । तपाईंले आफ्नो अनुहार परमेश्‍वरमा उचाल्‍नुहुनेछ ।
೨೬ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ದೇವರ ಅಭಿಮುಖನಾಗಿರುವೆ.
27 तपाईंले आफ्‍नो प्रार्थना उहाँमा नै चढाउनुहुनेछ, अनि उहाँले तपाईंको बिन्‍ती सुन्‍नुहुनेछ । तपाईंले उहाँमा आफ्नो भाकल पुरा गर्नुहुनेछ ।
೨೭ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.
28 तपाईंले कुनै पनि आदेश दिनुहुनेछ, र तपाईंको निम्‍ति त्‍यो कुरो पुरा हुनेछ । तपाईंका मार्गहरूमा ज्योति चम्कनेछ ।
೨೮ಯಾವುದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವುದು, ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.
29 परमेश्‍वरले घमण्डी मानिसलाई निम्‍न स्‍तरमा झर्नुहुन्छ, र निराश भएकाहरूलाई उहाँले बचाउनुहुन्छ ।
೨೯ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.
30 जो निर्दोष छैन त्‍यो मानिसलाई पनि उहाँले छुटकारा दिनुहुन्छ । तपाईंका हातको शुद्धताले गर्दा तिनीहरूले छुटकारा पाउनेछन् ।”
೩೦ನಿರ್ದೋಷಿಯನ್ನು ಆತನು ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವುದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವುದು.”

< अय्यूब 22 >