< यूहन्ना 12 >
1 निस्तार-चाडको छ दिन अगाडि येशू बेथानिया आउनुभयो, जहाँ उहाँले मृत्युबाट जीवित पार्नुभएका लाजरस थिए ।
ಪಸ್ಕಹಬ್ಬಕ್ಕೆ ಆರು ದಿನಗಳ ಮುಂಚೆ ಯೇಸು ಬೇಥಾನ್ಯಕ್ಕೆ ಬಂದರು. ಅಲ್ಲಿಯೇ ಯೇಸು ಮರಣದಿಂದ ಎಬ್ಬಿಸಿದ ಲಾಜರನು ಇದ್ದನು.
2 त्यसकारण, तिनीहरूले उहाँको लागि बेलुकीको खाना तयार पारे । मार्थाले सेवा-सत्कार गरिरहेकी थिइन् र लाजरस येशूसँगै टेबलमा ढल्किरहेकाहरूमध्ये एक जना थिए ।
ಅಲ್ಲಿ ಅವರು ಯೇಸುವಿಗಾಗಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟಕ್ಕೆ ಕುಳಿತವರಲ್ಲಿ ಲಾಜರನೂ ಒಬ್ಬನಾಗಿದ್ದನು.
3 तब मरियमले आधा लिटर जति शुद्ध जटामसीले बनेको बहुमूल्य अत्तर लिइन्, र येशूको पाउ अभिषेक गरिन्, अनि तिनको आफ्नो कपालले उहाँको पाउ पुछिन् । त्यो घर अत्तरको सुगन्धले भरियो ।
ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ತೈಲವನ್ನು ಸುಮಾರು ಅರ್ಧ ಲೀಟರಿನಷ್ಟು ತಂದು ಯೇಸುವಿನ ಪಾದಕ್ಕೆ ಸುರಿದು ತನ್ನ ತಲೆಯ ಕೂದಲಿನಿಂದ ಅವರ ಪಾದಗಳನ್ನು ಒರೆಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.
4 उहाँका चेलाहरूमध्ये एक जना यहूदा स्करियोत जसले उहाँलाई विश्वासघात गर्ने थियो, त्यसले भन्यो,
ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿದ್ದ ಹಾಗೂ ಅವರನ್ನು ಹಿಡಿದುಕೊಡುವುದಕ್ಕಿದ್ದ ಯೂದ ಇಸ್ಕರಿಯೋತನು,
5 “यो अत्तर तिन सय चाँदीका सिक्कामा बेचेरे गरिबहरूलाई किन दिइएन?”
“ಈ ತೈಲವನ್ನು ಏಕೆ ಮುನ್ನೂರು ಬೆಳ್ಳಿ ನಾಣ್ಯಗಳನ್ನು ಮಾರಿ ಬಡವರಿಗೆ ಕೊಡಲಿಲ್ಲ?” ಎಂದನು.
6 त्यसले यो कुरा गरिबहरूको वास्ता गरेर भनेको थिएन, तर त्यो चोर भएकोले भनेको हो । त्यससँग पैसाको थैलो हुन्थ्यो र यसमा राखिएकोबाट चोर्ने गर्थ्यो ।
ಅವನು ಬಡವರ ಹಿತಚಿಂತನೆಯಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು, ಹಣದ ಚೀಲವನ್ನು ಇಟ್ಟುಕೊಂಡು ಅದರಲ್ಲಿ ಹಾಕಿದ್ದನ್ನು ಕದ್ದುಕೊಳ್ಳುತ್ತಿದ್ದನು. ಆದ್ದರಿಂದಲೇ ಇದನ್ನು ಹೇಳಿದನು.
7 येशूले भन्नुभयो, “तिनीसँग मेरो दफनको दिनको लागि जे छ, त्यो राख्न देऊ ।
ಆಗ ಯೇಸು, “ಮರಿಯಳನ್ನು ಬಿಟ್ಟುಬಿಡಿರಿ, ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಳ್ಳಲಿ.
8 गरिबहरू त तिमीहरूसँग सधैँ हुनेछन्, तर म तिमीहरूसँग सधैँ हुनेछैनँ ।”
ಏಕೆಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ,” ಎಂದರು.
9 अब यहूदीहरूको ठुलो भिडले येशू त्यहाँ हुनुहुन्छ भन्ने थाहा पायो र तिनीहरू येशूको निम्ति मात्र होइन, तर लाजरसलाई हेर्न पनि आए, जसलाई येशूले मृत्युबाट जीवित पार्नुभएको थियो ।
ಯೇಸು ಅಲ್ಲಿರುವುದನ್ನು ಯೆಹೂದ್ಯರ ದೊಡ್ಡ ಗುಂಪು ತಿಳಿದು, ಅವರನ್ನು ಮಾತ್ರವಲ್ಲ, ಯೇಸು ಮರಣದಿಂದ ಎಬ್ಬಿಸಿದ ಲಾಜರನನ್ನೂ ಕಾಣಲು ಬಂದಿದ್ದರು.
10 मुख्य पुजारीहरूले सँगसँगै षड्यन्त्र रचे, ताकि तिनीहरूले लाजरसलाई पनि मार्न सकेको होस् ।
ಮುಖ್ಯಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚಿಸಿದರು.
11 किनकि तिनको कारण धेरै यहूदीहरू भड्किएका थिए र येशूमा विश्वास गरेका थिए ।
ಏಕೆಂದರೆ ಅವನ ದೆಸೆಯಿಂದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಡೆಗೆ ಹೋಗಿ ನಂಬಿಕೆ ಇಟ್ಟಿದ್ದರು.
12 अर्को दिन चाडमा ठुलो भिड आयो । जब येशू यरूशलेममा आउँदै हुनुहुन्छ भन्ने तिनीहरूले सुने,
ಮರುದಿನ ಹಬ್ಬಕ್ಕೆ ಬಂದ ದೊಡ್ಡ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಕೇಳಿ,
13 तिनीहरूले खजुरको बोटका हाँगाहरू लिए र उहाँलाई भेट्न गए, अनि उच्च सोरमा यसो भने, “होसन्ना! इस्राएलका राजा अर्थात् परमप्रभुको नाउँमा आउनुहुने धन्यको हुनुहुन्छ ।”
ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!” ಎಂದು ಕೂಗಿದರು.
14 येशूले एउटा गधाको बछेडा भेट्टाउनुभयो र त्यसमाथि चढ्नुभयो, जस्तो यो लेखिएको थियो,
ಯೇಸು ಕತ್ತೆಮರಿಯನ್ನು ಕಂಡು ಅದರ ಮೇಲೆ ಕುಳಿತುಕೊಂಡರು. ಪವಿತ್ರ ವೇದದಲ್ಲಿ ಬರೆದಿರುವಂತೆ:
15 “सियोनकी छोरी नडराऊ, हेर, तिम्रा राजा गधामा चढेर आउँदै हुनुहुन्छ ।”
“ಚೀಯೋನ್ ಪುತ್ರಿಯೇ, ಭಯಪಡಬೇಡ, ಇಗೋ, ನಿನ್ನ ಅರಸ ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾರೆ,” ಎಂಬ ಮಾತು ನೆರವೇರಿತು.
16 उहाँका चेलाहरूले सुरुमा यी कुराहरू बुझेनन्, तर जब येशू महिमित हुनुभयो तब उहाँको विषयमा लेखिएका थिए र यी सबै कुराहरू तिनीहरूले उहाँकै निम्ति गरेका थिए भनी उनीहरूले सम्झे ।
ಇವುಗಳನ್ನು ಯೇಸುವಿನ ಶಿಷ್ಯರು ಮೊದಲು ತಿಳಿದಿರಲಿಲ್ಲ. ಆದರೆ ಯೇಸು ಮಹಿಮೆ ಹೊಂದಿದಾಗ ಪವಿತ್ರ ವೇದದಲ್ಲಿ ಅವರ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಜನರು ಅವರಿಗೆ ಮಾಡಿದರೆಂದು ಗ್ರಹಿಸಿದರು.
17 उहाँले अहिले लाजरसलाई चिहानबाट बाहिर बोलाउनुहुँदा र तिनलाई मृत्युबाट जीवित पार्नुहुँदा उहाँसँग भएको भिडले गवाही दियो ।
ಯೇಸು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾಗ ಅವರ ಸಂಗಡ ಇದ್ದ ಜನರೇ ಈ ವಿಷಯವನ್ನು ಸಾರುತ್ತಿದ್ದರು.
18 यही कारणले गर्दा पनि भिडहरू उहाँलाई भेट्न गए, किनकि उहाँले यो चिह्न गर्नुभयो भन्ने तिनीहरूले सुने ।
ಯೇಸು ಈ ಸೂಚಕಕಾರ್ಯವನ್ನು ಮಾಡಿದರೆಂದು ಅನೇಕ ಜನರು ಕೇಳಿದ್ದರಿಂದ ಅವರು ಸಹ ಯೇಸುವನ್ನು ಸಂಧಿಸಲು ಬಂದರು.
19 यसकारण फरिसीहरूले एक-आपसमा भने, “हेर, तिमीहरू केही पनि गर्न सक्दैनौ; हेर, सारा संसारै त्यसको पछि लागेको छ ।”
ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.
20 अहिले चाडमा आराधना गर्न माथि गइरहेका तिनीहरूमध्ये केही ग्रिकहरू पनि थिए ।
ಹಬ್ಬದ ಆರಾಧನೆಗೆ ಗ್ರೀಕರಲ್ಲಿ ಕೆಲವರು ಬಂದಿದ್ದರು.
21 यिनीहरू फिलिपकहाँ गए जो गालीलको बेथसेदाका थिए र तिनलाई भने, “महाशय, हामी येशूलाई भेट्न चाहन्छौँ ।”
ಇವರು ಗಲಿಲಾಯದ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದರು.
22 फिलिपले गएर अन्द्रियासलाई भने । अनि अन्द्रियास फिलिपसँग गए, र तिनीहरूले येशूलाई भने ।
ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನೂ ಫಿಲಿಪ್ಪನೂ ಬಂದು ಯೇಸುವಿಗೆ ತಿಳಿಸಿದರು.
23 येशूले तिनीहरूलाई जवाफ दिनुभयो र भन्नुभयो, “मानिसका पुत्रको निम्ति महिमित हुने समय आएको छ ।
ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.
24 साँचो, साँचो म तिमीहरूलाई भन्दछु, गहुँको दाना जबसम्म माटोमा झरेर मर्दैन, यो आफैँ एकलो रहन्छ, तर यदि त्यो मर्छ भने यसले धेरै फल फलाउनेछ ।
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.
25 जसले आफ्नो जीवनलाई प्रेम गर्छ त्यसले त्यो गुमाउनेछ, तर जसले यस संसारमा आफ्नो जीवनलाई घृणा गर्छ त्यसले यो अनन्त जीवनको लागि जोगाइराख्नेछ । (aiōnios )
ತಮ್ಮ ಪ್ರಾಣವನ್ನು ಪ್ರೀತಿಸುವವರು ಅದನ್ನು ಕಳೆದುಕೊಳ್ಳುವರು. ಈ ಲೋಕದಲ್ಲಿ ತಮ್ಮ ಪ್ರಾಣವನ್ನು ದ್ವೇಷಿಸುವವರು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವರು. (aiōnios )
26 यदि कसैले मेरो सेवा गर्छ भने, त्यसले मलाई पछ्याओस्, र म जहाँ हुन्छु त्यहाँ मेरो सेवक पनि हुनेछ । यदि कसैले मेरो सेवा गर्छ भने पिताले त्यसको आदर गर्नुहुनेछ ।
ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.
27 अहिले मेरो प्राण दुःखित भएको छः म के भनूँ? हे पिता, मलाई यो घडीबाट बचाउनुहोस्? तर यही कारणको निम्ति म यो घडीमा आएँ ।
“ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸಿರಿ’ ಎಂದು ಹೇಳಲೋ? ಇಲ್ಲ. ನಾನು ಈ ಗಳಿಗೆಗಾಗಿಯೇ ಬಂದಿದ್ದೇನಲ್ಲಾ?
28 हे पिता, तपाईंको नाउँ महिमित पार्नुहोस् ।” तब स्वर्गबाट एउटा आवाज आयो, र भन्यो, “मैले यिनलाई महिमित पारेको छु र म फेरि महिमित पार्नेछु ।”
ತಂದೆಯೇ, ನಿಮ್ಮ ಹೆಸರನ್ನು ಮಹಿಮೆ ಪಡಿಸಿಕೊಳ್ಳಿರಿ,” ಎಂದರು. ಆಗ, “ಹೌದು, ನಾನು ಮಹಿಮೆಪಡಿಸಿದ್ದೇನೆ, ಪುನಃ ಮಹಿಮೆ ಪಡಿಸುವೆನು,” ಎಂಬ ಸ್ವರವು ಪರಲೋಕದಿಂದ ಕೇಳಿಸಿತು.
29 तब उहाँको छेउमा उभिने भिडले यो आवाज सुने, र तिनीहरूले मेघ गर्ज्यौ भने । अरूहरूले भने, “स्वर्गदूत उहाँसँग बोलेको हो ।”
ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ, “ಗುಡುಗಿತು,” ಎಂದರು. ಬೇರೆಯವರು, “ದೇವದೂತನೊಬ್ಬನು ಈತನ ಸಂಗಡ ಮಾತನಾಡಿದನು,” ಎಂದರು.
30 येशूले जवाफ दिनुभयो र भन्नुभयो, “यो आवाज मेरो निम्ति होइन, तर तिमीहरूका निम्ति आएको हो ।”
ಯೇಸು, “ಈ ಸ್ವರವು ನನಗಾಗಿ ಅಲ್ಲ, ನಿಮಗಾಗಿಯೇ ಬಂದಿದೆ.
31 अब यो संसारको न्याय हुन्छ, अब यस संसारको शासक फ्याँकिनेछ ।
ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.
32 अनि जब म पृथ्वीबाट उचालिन्छु, म सबैलाई आफूतिर खिँच्नेछु ।”
ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುತ್ತೇನೆ,” ಎಂದರು.
33 कस्तो किसिमको मृत्यु मर्दै हुनुहुन्छ भन्ने सङ्केत गर्न उहाँले यो कुरा भन्नुभएको थियो ।
ತಾವು ಎಂಥಾ ಮರಣದಿಂದ ಸಾಯಬೇಕಾಗಿದೆ ಎಂದು ಸೂಚಿಸಿ ಇದನ್ನು ಹೇಳಿದರು.
34 भिडले उहाँलाई जवाफ दियो, “हामीले व्यवस्थाबाट सुनेका छौँ, कि ख्रीष्ट सधैँ रहनुहुनेछ । तपाईं कसरी भन्नुहुन्छ, ‘मानिसका पुत्र उचालिनुपर्छ?’ यो मानिसका पुत्र को हो?” (aiōn )
ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು. (aiōn )
35 तब येशूले तिनीहरूलाई भन्नुभयो, “केही समयको निम्ति ज्योति तिमीहरूसँग अझै हुनेछ । तिमीहरूसँग ज्योति हुँदा हिँड, ताकि अन्धकारले तिमीहरूलाई नढाकोस् । जो अन्धकारमा हिँड्छ त्यो कहाँ जाँदै छ भनी त्यसलाई थाहा हुँदैन ।
ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.
36 तिमीसँग ज्योति हुँदा नै त्यो ज्योतिमा विश्वास गर, ताकि तिमीहरू ज्योतिको सन्तान हुन सक ।” येशूले यी कुराहरू भन्नुभयो र त्यसपछि उहाँ त्यहाँबाट प्रस्थान गर्नुभयो र उहाँ तिनीहरूबाट लुकेर बस्नुभयो ।
ನೀವು ಬೆಳಕಿನ ಪುತ್ರರಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ,” ಎಂದರು. ಯೇಸು ಇವುಗಳನ್ನು ಹೇಳಿ, ಅವರಿಂದ ಹೊರಟುಹೋಗಿ ಅಡಗಿಕೊಂಡರು.
37 तिनीहरूको सामु येशूले यति धेरै चिह्नहरू गर्नुभए तापनि तिनीहरूले उहाँमाथि अझै पनि विश्वास गरेनन् ।
ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಜನರು ಅವರನ್ನು ನಂಬಲಿಲ್ಲ.
38 यशैया अगमवक्ताको वचन पुरा होस् भनेर यसो भएको थियो । तिनी भन्दछन्, “प्रभु, हाम्रो समाचार कसले विश्वास गरेको छ? र परमेश्वरको बाहुली कसलाई प्रकट गरिएको छ?”
ಇದರಿಂದ, “ಸ್ವಾಮೀ, ನಮ್ಮ ಸುದ್ದಿಯನ್ನು ಯಾರು ನಂಬಿದರು? ಕರ್ತ ಆಗಿರುವವರ ಬಾಹುವು ಯಾರಿಗೆ ಪ್ರಕಟವಾಯಿತು?” ಎಂದು ಪ್ರವಾದಿ ಯೆಶಾಯನು ನುಡಿದದ್ದು ನೆರವೇರಿತು.
39 यसैकारण, तिनीहरूले विश्वास गर्न सकेनन्, किनकि यशैयाले यसो पनि भने,
ಅವರು ನಂಬಲಾರದೆ ಹೋದದ್ದರಿಂದ ಯೆಶಾಯನು ಮತ್ತೊಂದು ಕಡೆ ಹೇಳಿದ್ದೇನೆಂದರೆ:
40 “उहाँले तिनीहरूका आँखा अन्धो तुल्याइदिनुभएको छ र उहाँले तिनीहरूका हृदय कठोर पारिदिनुभएको छ; नत्रता तिनीहरूका आँखाले देख्ने थिए र उनीहरूका हृदयले बुझ्ने थिए र फर्किने थिए, अनि म तिनीहरूलाई निको पार्ने थिएँ ।”
“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”
41 यशैयाले यी कुराहरू भने, किनकि तिनले येशूको महिमा देखे र उहाँको विषयमा बोले ।
ಯೆಶಾಯನು ಯೇಸುವಿನ ಮಹಿಮೆಯನ್ನು ಕಂಡಿದ್ದರಿಂದ ಅವರ ವಿಷಯವಾಗಿ ಇವುಗಳನ್ನು ಹೇಳಿದನು.
42 तरै पनि शासकहरूमध्ये धेरैले येशूमा विश्वास गरे, तर फरिसीहरूको कारणले गर्दा तिनीहरूले यसलाई स्वीकार गरेनन्, ताकि तिनीहरूलाई सभाघरमा रोक नलगाइयोस् ।
ಆದರೂ ಅಧಿಕಾರಿಗಳಲ್ಲಿ ಅನೇಕರು ಆ ಸಮಯದಲ್ಲಿ ಯೇಸುವನ್ನು ನಂಬಿದರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕಾರ ಆಗಬಾರದೆಂದು ಅವರು ತಮ್ಮ ನಂಬಿಕೆಯನ್ನು ಬಹಿರಂಗವಾಗಿ ಅರಿಕೆ ಮಾಡಲಿಲ್ಲ.
43 तिनीहरूले परमेश्वरबाट आउने प्रशंसाभन्दा मानिसहरूबाट आउने प्रशंसा बढी रुचाए ।
ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
44 येशूले ठुलो सोरमा भन्नुभयो, “जसले ममाथि विश्वास गर्छ त्यसले मलाई मात्र होइन, तर मलाई पठाउनुहुनेमाथि पनि विश्वास गर्छ,
ಯೇಸು, ಕೂಗಿ ಹೇಳಿದ್ದೇನೆಂದರೆ, “ನನ್ನನ್ನು ನಂಬುವವರು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿಕೊಟ್ಟ ತಂದೆಯಲ್ಲಿಯೇ ವಿಶ್ವಾಸವಿಡುತ್ತಾರೆ.
45 र जसले मलाई देख्छ त्यसले मलाई पठाउनुहुनेलाई देख्छ ।”
ನನ್ನನ್ನು ನೋಡುವವರು ನನ್ನನ್ನು ಕಳುಹಿಸಿದ ತಂದೆಯನ್ನೇ ಕಾಣುತ್ತಾರೆ.
46 म संसारमा ज्योतिको रूपमा आएको छु ताकि जसले मलाई विश्वास गर्छ त्यो अन्धकारमा नरहोस् ।
ನನ್ನಲ್ಲಿ ನಂಬಿಕೆಯಿಡುವವರು ಕತ್ತಲೆಯಲ್ಲಿ ಉಳಿಯಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
47 यदि कसैले मेरो वचन सुन्छ, तर त्यसको पालना गर्दैन भने म त्यसको न्याय गर्दिनँ, किनकि म संसारको न्याय गर्न आएको होइनँ, तर संसारलाई बचाउन आएको हुँ ।
“ಯಾರು ನನ್ನ ಮಾತುಗಳನ್ನು ಕೇಳಿಯೂ ಅವುಗಳನ್ನು ಕೈಕೊಂಡು ನಡೆಯದೆ ಹೋದರೆ ನಾನು ಅವರಿಗೆ ಈಗ ತೀರ್ಪು ಮಾಡುವುದಿಲ್ಲ. ಏಕೆಂದರೆ ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವುದಕ್ಕಾಗಿಯೇ ನಾನು ಬಂದಿದ್ದೇನೆ.
48 जसले मलाई इन्कार गर्छ, र मेरा वचनहरू ग्रहण गर्दैन, त्यसको न्याय गर्ने एक जना हुनुहुन्छः मैले बोलेको मेरो वचनले नै अन्त्यको दिनमा त्यसको न्याय गर्नेछ ।
ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.
49 किनकि म मेरो आफ्नै तर्फबाट बोलिनँ, तर मलाई पठाउनुहुने पिता नै हुनुहुन्छ, जसले मैले के बोल्ने र के भन्ने विषयमा आज्ञा दिनुभएको छ ।
ಏಕೆಂದರೆ ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ. ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕು ಎಂದು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞೆ ಕೊಟ್ಟಿದ್ದಾರೆ.
50 म जान्दछु, कि उहाँको आज्ञा अनन्त जीवन हो । त्यसैले, म त्यही भन्छुः पिता मसँग जस्तो बोल्नुभएको छ, म त्यस्तै बोल्छु । (aiōnios )
ಅವರ ಆಜ್ಞೆಯು ನಿತ್ಯಜೀವಕ್ಕೆ ಮಾರ್ಗವಾಗಿದೆ ಎಂದು ನಾನು ಬಲ್ಲೆನು. ಆದ್ದರಿಂದ, ತಂದೆಯು ನನಗೆ ಹೇಳಿದಂತೆಯೇ ಮಾತನಾಡುತ್ತೇನೆ,” ಎಂದು ಹೇಳಿದರು. (aiōnios )