< यहोशू 22 >
1 त्यस बेला यहोशूले रूबेनीहरू, गादीहरू र मनश्शेको आधा कुललाई बोलाए ।
೧ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಕುಲದ ಅರ್ಧ ಜನರನ್ನು ಕರೆಸಿ ಅವರಿಗೆ,
2 तिनले तिनीहरूलाई भने, “तिमीहरूले परमप्रभु परमेश्वरका दास मोशाले आज्ञा गरेका सबै गरेका छौ । तिमीहरूले मैले आज्ञा गरेका सबै कुरामा मेरो आज्ञा पालन गरेका छौ ।
೨“ನೀವು ಯೆಹೋವನ ಸೇವಕನಾದ ಮೋಶೆಯ ಆಜ್ಞೆಗಳೆಲ್ಲವನ್ನು ಕೈಕೊಂಡಿದ್ದೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ್ದೀರಿ.
3 तिमीहरूले वर्तमानसम्म यति धेरै दिनसम्म पनि आफ्ना दाजुभाइहरूलाई छाडेका छैनौ, र तिमीहरूले परमप्रभु तिमीहरूका परमेश्वरको आज्ञाअनुसार आवश्यक कर्तव्यहरू पुरा गरेका छौ ।
೩ಈ ಕಾಲದಲ್ಲೆಲ್ಲಾ ನೀವು ನಿಮ್ಮ ಸಹೋದರರಿಂದ ಬೇರ್ಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾ ಬಂದಿದ್ದೀರಿ.
4 अहिले परमप्रभु तिमीहरूका परमेश्वरले तिमीहरूलाई प्रतिज्ञा गर्नुभएझैँ तिमीहरूका दाजुभाइहरूलाई विश्राम दिनुभएको छ । यसकारण, फर्क र तिमीहरूको आफ्नै भूमिमा जाओ, जुन परमप्रभुका दास मोशाले यर्दन पारिपट्टि तिमीहरूलाई दिएका छन् ।
೪ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.
5 परमप्रभुका दास मोशाले तिनीहरूलाई दिएका आज्ञाहरू र व्यवस्था पालन गर्न, परमप्रभु तिमीहरूका परमेश्वरलाई प्रेम गर्न, उहाँका सबै मार्गमा हिँड्न, उहाँका सबै आज्ञा पालन गर्न, उहाँमा नै रहिरहन र तिमीहरूका सारा ह्रदय र सारा प्राणले उहाँको आराधना गर्नमा होसियार होओ ।”
೫ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ
6 त्यसैले यहोशूले तिनीहरूलाई आशिष् दिएर पठाए, र तिनीहरू आफ्ना पालहरूतिर गए ।
೬ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು.
7 मनश्शेको आधा कुललाई मोशाले बाशानमा नै उत्तराधिकार दिएका थिए, तर बाँकी आधा कुललाई तिनीहरूका दाजुभाइको छेउमा यर्दनको पश्चिमपट्टि दिए । यहोशूले तिनीहरूलाई आ-आफ्ना पालहरूमा पठाए; तिनले तिनीहरूलाई आशिष् दिए
೭ಮೋಶೆಯು ಮನಸ್ಸೆ ಕುಲದ ಅರ್ಧ ಜನರಿಗೆ ಬಾಷಾನಿನಲ್ಲಿ ಸ್ವತ್ತನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳುಹಿಸುವಾಗ
8 र तिनीहरूलाई भने, “धेरै रुपियाँ-पैसा र सुन, चाँदी, काँसा र फलामसहित धेरै लत्ताकपडासहित तिमीहरूका पालहरूमा फर्क । तिमीहरूका शत्रुहरूबाट लिएका लूटका मालहरू तिमीहरूका दाजुभाइहरूसँग बाँड ।
೮ಅವರನ್ನು ಆಶೀರ್ವದಿಸಿ “ನೀವು ಬಹಳ ಸಮೃದ್ಧಿಯುಳ್ಳವರಾಗಿ ದನಕುರಿ, ಬೆಳ್ಳಿಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ, ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮನಿಮ್ಮ ನಿವಾಸಗಳಿಗೆ ಹೋಗಿರಿ. ನಿಮ್ಮ ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ” ಎಂದನು
9 त्यसैले रूबेनका सन्तानहरू, गादका सन्तानहरू र मनश्शेका आधा कुल इस्राएलका मानिसहरूलाई शीलोमा छोडेर घरतिर फर्के, जुन कनानको भूमि हो । तिनीहरू आफ्नै भू-भाग गिलादको प्रदेशमा जानलाई हिँडे, जुन तिनीहरूले मोशाद्वारा परमप्रभुको आज्ञा पालनमा आफैले स्वामित्वमा लिएका थिए ।
೯ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು.
10 जब तिनीहरू कनानको भूमि यर्दनमा आए, रूबेनीहरू, गादीहरू र मनश्शेका आधा कुलहरूले यर्दन नजिकै निकै ठुलो र सजिलै देखिने वेदी बनाए ।
೧೦ರೂಬೇನ್ಯರೂ ಗಾದ್ಯರೂ ಹಾಗೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದಲ್ಲಿರುವ ಯೊರ್ದನಿನ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ದೊಡ್ಡ ಯಜ್ಞವೇದಿಯನ್ನು ಕಟ್ಟಿದರು.
11 इस्राएलका मानिसहरूले यो सुने र भने, “हेर, रूबेन, गाद र मनश्शेका आधा कुलका मानिसहरूले इस्राएलका मानिसहरूको अधीनमा पर्ने यर्दन नजिकको प्रदेशको गलिलोथको कनानको भूमिको सामुन्ने वेदी निर्माण गरेका छन् ।”
೧೧ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಜನರು ಇಸ್ರಾಯೇಲ ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್ ನದಿಯ ತೀರಪ್ರದೇಶದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ಮಿಕ್ಕ ಇಸ್ರಾಯೇಲರಿಗೂ ತಿಳಿದಾಗ,
12 जब इस्राएलका मानिसहरूले यो कुरा सुने, इस्राएलका मानिसको सारा भेला तिनीहरू विरुद्ध युद्ध गर्न जान शीलोमा जान सँगै भेला भए ।
೧೨ಅವರೆಲ್ಲರೂ ಶೀಲೋವಿನಲ್ಲಿ ಒಟ್ಟಿಗೆ ಸೇರಿ ಅವರೊಡನೆ ಹೋರಾಡಲು ಸಿದ್ಧರಾದರು.
13 त्यसपछि इस्राएलका मानिसहरूले गिलादको भूमिमा रूबेनीहरू, गादीहरू र मनश्शेका आधा कुलकहाँ समाचारवाहकहरू पठाए । तिनीहरूले एलाजारका छोरा पुजारी पीनहास,
೧೩ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಮಹಾಯಾಜಕ ಎಲಿಯಾಜರನ ಮಗನಾದ ಫೀನೆಹಾಸನನ್ನು
14 र इस्राएलको हरेक कुलबाट एक-एक जना गरी दस जना अगुवालाई तिनीसँगै पठाए र तिनीहरू सबै इस्राएलको कुलका परिवारको प्रमुख थिए ।
೧೪ಮತ್ತು ಕುಲಕ್ಕೆ ಒಬ್ಬನಂತೆ ಹತ್ತು ಮಂದಿ ನಾಯಕರನ್ನು ಕಳುಹಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು.
15 तिनीहरू गिलादको मुलुकमा रूबेन, गाद र मनश्शेको आधा कुलकहाँ आए र तिनीहरूले तिनीहरूलाई भने,
೧೫ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,
16 “परमप्रभुका सारा समुदाय यसो भन्छ, 'परमप्रभुको विरुद्धमा आजको दिन आफ्नो निम्ति वेदी निर्माण गरेर परमप्रभुलाई पछ्याउनबाट तर्किएर इस्राएलका परमेश्वरको विरुद्ध तिमीहरूले कस्तो बेइमानी गरेको?
೧೬“ಯೆಹೋವನ ಸರ್ವ ಸಭೆಯ ಮಾತನ್ನು ಕೇಳಿರಿ; ನೀವು ಇಸ್ರಾಯೇಲಿನ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ಯಜ್ಞವೇದಿಯನ್ನು ಕಟ್ಟಿಕೊಂಡದ್ದರಿಂದ ನೀವು ಯೆಹೋವನಿಗೆ ದ್ರೋಹ ಮಾಡಿದಂತಾಯಿತು; ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಂತಾಯಿತು.
17 के पोरको हाम्रो पाप पर्याप्त थिएन? तैपनि हामीले आफूलाई यसबाट अझै शुद्ध पारेका छैनौँ । त्यो पापको निम्ति परमप्रभुको समुदायमा विपत्ति आइपर्यो ।
೧೭ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಲಿಲ್ಲ.
18 के तिमीहरू पनि अहिले नै परमप्रभुलाई पछ्याउनबाट तर्किनुपर्छ? यदि तिमीहरूले आज उहाँको विरुद्ध विद्रोह गर्यौ भने, उहाँ भोलि हामी इस्राएलको सबै समुदायसँग रिसाउनुहुने छ ।
೧೮ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತಿದ್ದೀರೋ? ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯ ತೊಡಗುವುದು.
19 यदि तिमीहरूको अधीनमा भएको भूमि अशुद्ध छ भने, तिमीहरू परमप्रभुको पवित्र वासस्थान खडा भएको भूमिमा नै तरेर आउनुपर्छ र हाम्रो माझमा नै भाग लिन आउनुपर्छ । परमप्रभुको विरुद्ध विद्रोह मात्र नगर, न त परमप्रभुको वेदीबाहेक अन्य वेदी निर्माण गरेर हाम्रो विरुद्धमा विद्रोह गर ।
೧೯ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿರುವ ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.
20 के परमेश्वरलाई सुम्पेका थोकहरूको विषयमा जेरहको छोरो आकानले विश्वास तोडेनन्? के सबै इस्राएलका मानिसमाथि क्रोध परेन? त्यसको पापको निम्ति आफू मात्रै मरेन' ।”
೨೦ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ” ಎಂದು ಹೇಳಿದನು.
21 त्यसपछि रूबेन, गाद, र मनश्शेका आधा कुलले इस्राएलका कुलका प्रमुखहरूलाई जवाफ दिए,
೨೧ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧ ಜನರು ಇಸ್ರಾಯೇಲ್ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು:
22 “हे सर्वशक्तिमान्, परमप्रभु परमेश्वर सर्वशक्तिमान्, हे परमप्रभु परमेश्वर! उहाँ जान्नुहुन्छ, इस्राएलले जानोस्! यदि यो विद्रोह वा विश्वास तोड्नलाई परमप्रभुको विरुद्धमा थियो भने,
೨೨“ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.
23 परमप्रभुलाई पछ्याउनबाट आफै तर्कन यो वेदी बनाएका हौँ भने आज हामीलाई नछोड्नुहोस् ।
೨೩ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಈ ಯಜ್ಞವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ.
24 यदि हामीले यो वेदी होमबलि, अन्नबलि वा मेलबलि चढाउनलाई निर्माण गरेका हौँ भने, परमप्रभुले हामीलाई यसको निम्ति मूल्य चुकाउन लगाउनुभएको होस् । होइन! हामीले आउँदो दिनमा तिमीहरूका सन्तानहरूले हाम्रा सन्तानहरूलाई यसो भन्लान् भन्ने डरले हामीले यसो गर्यौँ, 'परमप्रभु इस्राएलका परमेश्वरसँग तिमीहरूको के सरोकार?
೨೪ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದ್ದೇವಷ್ಟೇ, ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?’
25 किनभने परमप्रभुले तिमीहरू र हामीबिच यर्दनलाई सिमान बनाउनुभएको छ । तिमीहरू रूबेन र गादका मानिसहरू, तिमीहरूको परमप्रभुसँग कुनै सरोकार छैन ।'
೨೫ರೂಬೇನ್ಯರೇ, ಗಾದ್ಯರೇ, ಯೆಹೋವನು ನಿಮಗೂ ನಮಗೂ ನಡುವೆ ಈ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದಾನೆ. ಯೆಹೋವನಲ್ಲಿ ನಿಮಗೆ ಯಾವ ಪಾಲೂ ಇಲ್ಲ ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೈವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು.
26 त्यसैले तिमीहरूका सन्तानहरूले हाम्रा सन्तानहरूलाई परमप्रभुको आराधना गर्न छोड्न लगाउन सक्छन् । त्यसैले हामीले भन्यौ, 'एउटा वेदी बनाऔँ, न त कुनै होमबलि न त कुनै बलिदानको निम्ति,
೨೬ಈ ಕಾರಣದಿಂದಲೇ, ‘ಬನ್ನಿ, ಒಂದು ಯಜ್ಞವೇದಿಯನ್ನು ಕಟ್ಟೋಣ. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕಲ್ಲ,’
27 तर हामीपछिका हाम्रा पुस्ताहरूका निम्ति हामीहरू र तिमीहरूबिच साक्षी हुनलाई, ताकि हामीले हाम्रा होमबलिहरू र हाम्रा मेलबलिसहित हामीले परमप्रभुको सेवा गर्न सकौँ, ताकि तिमीहरूका सन्तानहरूले हाम्रा सन्तानहरूलाई, “परमप्रभुमा तिमीहरूको कुनै हिस्सा छैन” भनी आउँदो समयमा कहिल्यै नभनून् ।'
೨೭ಆದರೆ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವುದಕ್ಕೋಸ್ಕರ ನಮಗೂ ಹಕ್ಕಿದೆ ಎಂಬುದಕ್ಕೆ ಇದು ನಮಗೂ, ನಿಮಗೂ, ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವುದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವುದಕ್ಕೆ ಆಸ್ಪದವಿರುವುದಿಲ್ಲ.
28 त्यसैले हामीले भन्यौँ, 'यदि भविष्यमा हामीलाई वा हाम्रा सन्तानहरूलाई यसो भनिएमा, हामीले भन्नेथियौँ, “हेर, यो वेदीको प्रतिरूप, जुन हाम्रा पुर्खाहरूले न त होमबलि, न त बलिदानहरूको निम्ति, तर हामीहरू र तिमीहरू बिच गवाही हुनको निम्ति बनाए ।”
೨೮ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು.
29 हामी आज परमप्रभुको पवित्र वासस्थान सामु रहेको हाम्रो परमप्रभु परमेश्वरको वेदीभन्दा अर्को वेदी होमबलि वा अन्नबलि वा बलिदानको निम्ति निर्माण गरेर उहाँलाई पछ्याउन छोडेर परमप्रभुको विरुद्धमा विद्रोह गर्ने कुरा हामीबाट दूर होस्' ।”
೨೯ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ” ಎಂದರು.
30 जब पुजारी पीनहास र मानिसहरूका अगुवाहरू अर्थात् तिनीसँग भएका इस्राएलका कुलहरूका प्रमुखहरूले रूबेन, गाद र मनश्शेका मानिसहरूको कुरा सुने । यो तिनीहरूलाई नजरमा असल लाग्यो ।
೩೦ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳು, ರೂಬೇನ್, ಗಾದ್, ಮನಸ್ಸೆಯ ಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.
31 एलाजारका छोरा पुजारी पीनहासले रूबेन, गाद र मनश्शेका मानिसहरूलाई भने, “आज परमप्रभु हाम्रा माझमा हुनुहुन्छ भनी हामीले थाहा पायौँ, किनभने तिमीहरूले यो उहाँको विरुद्धमा विश्वासलाई तोडेका छैनौ । अहिले तिमीहरूले इस्राएलका मानिसरूलाई परमप्रभुको हातबाट छुटकारा दिएका छौ ।”
೩೧ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ “ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಆತನು ನಮ್ಮ ಮಧ್ಯದಲ್ಲಿದ್ದಾನೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವನ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ” ಎಂದನು.
32 त्यसपछि एलाजारका छोरा पीनहास र अगुवाहरू रूबेनीहरू, गादीहरूको गिलादको मुलुकबाट कनानको भू-भागमा इस्राएलका मानिसहरूकहाँ फर्के र तिनीहरूलाई यो समाचार ल्याए । तिनीहरूको प्रतिवेदन इस्राएलका मानिसहरूको नजरमा असल थियो ।
೩೨ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು, ಪ್ರಭುಗಳು, ಗಿಲ್ಯಾದ್ ಸೀಮೆಯಲ್ಲಿದ್ದ ರೂಬೇನ್ಯರು, ಗಾದ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲರ ಬಳಿಗೆ ಬಂದು, ಅವರಿಗೆ ಈ ವರ್ತಮಾನವನ್ನು ತಿಳಿಸಲು
33 इस्राएलका मानिसहरूले परमेश्वरको प्रशंसा गरे र रूबेनी र गादीहरूलाई तिनीहरू बसोबास गरेका ठाउँबाट नष्ट पार्नलाई तिनीहरूको विरुद्धमा युद्ध गर्नेबारे कुनै कुरा गरेनन् ।
೩೩ಅವರು ಬಹು ಸಂತೋಷಪಟ್ಟು ದೇವರನ್ನು ಕೊಂಡಾಡಿ ರೂಬೇನ್ ಗಾದ್ ಕುಲಗಳೊಡನೆ ಯುದ್ಧ ಮಾಡಿ ಅವರ ದೇಶವನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ಬಿಟ್ಟರು.
34 रूबेनीहरू र गादीहरूले त्यो वेदीलाई “साक्षी” नाउँ राखे, किनभने तिनीहरूले भने, “यो हामी र परमप्रभु नै परमेश्वर हुनुहन्छ भन्ने बिच साक्षी छ ।”
೩೪ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.