< यहोशू 22 >
1 त्यस बेला यहोशूले रूबेनीहरू, गादीहरू र मनश्शेको आधा कुललाई बोलाए ।
ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧ ಗೋತ್ರದವರನ್ನೂ ಕರಿಸಿ ಅವರಿಗೆ,
2 तिनले तिनीहरूलाई भने, “तिमीहरूले परमप्रभु परमेश्वरका दास मोशाले आज्ञा गरेका सबै गरेका छौ । तिमीहरूले मैले आज्ञा गरेका सबै कुरामा मेरो आज्ञा पालन गरेका छौ ।
“ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಗೊಂಡು, ನಾನು ನಿಮಗೆ ಆಜ್ಞಾಪಿಸಿದ ಎಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾಗಿದ್ದೀರಿ.
3 तिमीहरूले वर्तमानसम्म यति धेरै दिनसम्म पनि आफ्ना दाजुभाइहरूलाई छाडेका छैनौ, र तिमीहरूले परमप्रभु तिमीहरूका परमेश्वरको आज्ञाअनुसार आवश्यक कर्तव्यहरू पुरा गरेका छौ ।
ನೀವು ಬಹಳ ದಿವಸಗಳಿಂದ ಇಂದಿನವರೆಗೂ ನಿಮ್ಮ ಸಹೋದರರನ್ನು ಕೈಬಿಡದೆ, ನಿಮ್ಮ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಅಪ್ಪಣೆಯನ್ನು ಪಾಲಿಸುತ್ತಾ ಬಂದಿದ್ದೀರಿ.
4 अहिले परमप्रभु तिमीहरूका परमेश्वरले तिमीहरूलाई प्रतिज्ञा गर्नुभएझैँ तिमीहरूका दाजुभाइहरूलाई विश्राम दिनुभएको छ । यसकारण, फर्क र तिमीहरूको आफ्नै भूमिमा जाओ, जुन परमप्रभुका दास मोशाले यर्दन पारिपट्टि तिमीहरूलाई दिएका छन् ।
ಈಗ ನಿಮ್ಮ ದೇವರಾದ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದ ಪ್ರಕಾರ, ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟಿದ್ದಾರೆ. ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಕಡೆ ನಿಮಗೆ ಕೊಟ್ಟ ಸೊತ್ತಿನ ದೇಶದಲ್ಲಿರುವ ನಿಮ್ಮ ನಿವಾಸಗಳಿಗೆ ನೀವು ಹೊರಡಿರಿ.
5 परमप्रभुका दास मोशाले तिनीहरूलाई दिएका आज्ञाहरू र व्यवस्था पालन गर्न, परमप्रभु तिमीहरूका परमेश्वरलाई प्रेम गर्न, उहाँका सबै मार्गमा हिँड्न, उहाँका सबै आज्ञा पालन गर्न, उहाँमा नै रहिरहन र तिमीहरूका सारा ह्रदय र सारा प्राणले उहाँको आराधना गर्नमा होसियार होओ ।”
ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ,” ಎಂದು ಹೇಳಿದನು.
6 त्यसैले यहोशूले तिनीहरूलाई आशिष् दिएर पठाए, र तिनीहरू आफ्ना पालहरूतिर गए ।
ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿಬಿಟ್ಟಾಗ ಅವರು ತಮ್ಮ ಗುಡಾರಗಳಿಗೆ ಹೋದರು.
7 मनश्शेको आधा कुललाई मोशाले बाशानमा नै उत्तराधिकार दिएका थिए, तर बाँकी आधा कुललाई तिनीहरूका दाजुभाइको छेउमा यर्दनको पश्चिमपट्टि दिए । यहोशूले तिनीहरूलाई आ-आफ्ना पालहरूमा पठाए; तिनले तिनीहरूलाई आशिष् दिए
ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸೊತ್ತನ್ನು ಕೊಟ್ಟಿದ್ದನು. ಇದಲ್ಲದೆ ಅವರ ಅರ್ಧ ಗೋತ್ರಕ್ಕೆ ಯೆಹೋಶುವನು ಸಹ ಯೊರ್ದನ್ ನದಿ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸೊತ್ತನ್ನು ಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಅವರ ಗುಡಾರಗಳಿಗೆ ಕಳುಹಿಸುವಾಗ ಅವರನ್ನು ಆಶೀರ್ವದಿಸಿ ಅವರಿಗೆ,
8 र तिनीहरूलाई भने, “धेरै रुपियाँ-पैसा र सुन, चाँदी, काँसा र फलामसहित धेरै लत्ताकपडासहित तिमीहरूका पालहरूमा फर्क । तिमीहरूका शत्रुहरूबाट लिएका लूटका मालहरू तिमीहरूका दाजुभाइहरूसँग बाँड ।
“ನೀವು ಬಹು ಆಸ್ತಿಯುಳ್ಳವರಾಗಿ ಪಶುಗಳು, ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂದಿರುಗಿ, ನಿಮ್ಮ ಗುಡಾರಗಳಿಗೆ ಹೋಗಿರಿ. ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ,” ಎಂದನು.
9 त्यसैले रूबेनका सन्तानहरू, गादका सन्तानहरू र मनश्शेका आधा कुल इस्राएलका मानिसहरूलाई शीलोमा छोडेर घरतिर फर्के, जुन कनानको भूमि हो । तिनीहरू आफ्नै भू-भाग गिलादको प्रदेशमा जानलाई हिँडे, जुन तिनीहरूले मोशाद्वारा परमप्रभुको आज्ञा पालनमा आफैले स्वामित्वमा लिएका थिए ।
ರೂಬೇನನ ಗೋತ್ರದವರು, ಗಾದ್ಯ ಗೋತ್ರದವರು, ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು, ಯೆಹೋವ ದೇವರು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ತಾವು ವಶಮಾಡಿಕೊಂಡ ತಮ್ಮ ಗಿಲ್ಯಾದ್ ನಾಡಿಗೆ ಹೋದರು.
10 जब तिनीहरू कनानको भूमि यर्दनमा आए, रूबेनीहरू, गादीहरू र मनश्शेका आधा कुलहरूले यर्दन नजिकै निकै ठुलो र सजिलै देखिने वेदी बनाए ।
ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದಲ್ಲಿರುವ ಯೊರ್ದನ್ ನದಿ ಪ್ರಾಂತಕ್ಕೆ ಬಂದಾಗ, ಅಲ್ಲಿ ದೊಡ್ಡ ಬಲಿಪೀಠವನ್ನು ಕಟ್ಟಿದರು.
11 इस्राएलका मानिसहरूले यो सुने र भने, “हेर, रूबेन, गाद र मनश्शेका आधा कुलका मानिसहरूले इस्राएलका मानिसहरूको अधीनमा पर्ने यर्दन नजिकको प्रदेशको गलिलोथको कनानको भूमिको सामुन्ने वेदी निर्माण गरेका छन् ।”
ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲರು ದಾಟಿಬಂದ ಯೊರ್ದನ್ ನದಿ ಪ್ರಾಂತದಲ್ಲಿ ಬಲಿಪೀಠವನ್ನು ಕಟ್ಟಿದರೆಂಬ ಸುದ್ದಿ ಇಸ್ರಾಯೇಲರಿಗೆ ಮುಟ್ಟಿತು.
12 जब इस्राएलका मानिसहरूले यो कुरा सुने, इस्राएलका मानिसको सारा भेला तिनीहरू विरुद्ध युद्ध गर्न जान शीलोमा जान सँगै भेला भए ।
ಇಸ್ರಾಯೇಲರು ಅದನ್ನು ಕೇಳಿದಾಗ, ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಶೀಲೋವಿನಲ್ಲಿ ಕೂಡಿದರು.
13 त्यसपछि इस्राएलका मानिसहरूले गिलादको भूमिमा रूबेनीहरू, गादीहरू र मनश्शेका आधा कुलकहाँ समाचारवाहकहरू पठाए । तिनीहरूले एलाजारका छोरा पुजारी पीनहास,
ಅವರು ಗಿಲ್ಯಾದ್ ನಾಡಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಯಾಜಕ ಎಲಿಯಾಜರನ ಮಗ ಫೀನೆಹಾಸನನ್ನೂ
14 र इस्राएलको हरेक कुलबाट एक-एक जना गरी दस जना अगुवालाई तिनीसँगै पठाए र तिनीहरू सबै इस्राएलको कुलका परिवारको प्रमुख थिए ।
ಅವನ ಸಂಗಡ ಇಸ್ರಾಯೇಲಿನ ಗೋತ್ರದ ಪ್ರತಿಯೊಂದು ಗೋತ್ರದಿಂದ ಒಬ್ಬೊಬ್ಬನನ್ನು ಅಂದರೆ ಮುಖ್ಯಸ್ಥನ ಪ್ರಕಾರ ಹತ್ತು ಮಂದಿ ಪ್ರಧಾನರನ್ನೂ ಕಳುಹಿಸಿದರು.
15 तिनीहरू गिलादको मुलुकमा रूबेन, गाद र मनश्शेको आधा कुलकहाँ आए र तिनीहरूले तिनीहरूलाई भने,
ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,
16 “परमप्रभुका सारा समुदाय यसो भन्छ, 'परमप्रभुको विरुद्धमा आजको दिन आफ्नो निम्ति वेदी निर्माण गरेर परमप्रभुलाई पछ्याउनबाट तर्किएर इस्राएलका परमेश्वरको विरुद्ध तिमीहरूले कस्तो बेइमानी गरेको?
“ಯೆಹೋವ ದೇವರ ಸರ್ವ ಸಮೂಹವು ಹೇಳುವುದೇನೆಂದರೆ: ‘ನೀವು ಈ ಹೊತ್ತು ಯೆಹೋವ ದೇವರ ಕಡೆಗೆ ತಿರುಗದೆ, ಅವರಿಗೆ ವಿರೋಧವಾಗಿ ತಿರುಗಿಬೀಳುವ ಹಾಗೆ ನಿಮಗೆ ಒಂದು ಬಲಿಪೀಠವನ್ನು ಕಟ್ಟಿಕೊಂಡು, ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು?
17 के पोरको हाम्रो पाप पर्याप्त थिएन? तैपनि हामीले आफूलाई यसबाट अझै शुद्ध पारेका छैनौँ । त्यो पापको निम्ति परमप्रभुको समुदायमा विपत्ति आइपर्यो ।
ಪೆಯೋರದವರ ದುಷ್ಟತನವು ನಮಗೆ ಅಲ್ಪವೋ? ಯೆಹೋವ ದೇವರ ಜನರ ಮೇಲೆ ವ್ಯಾಧಿ ಬಂದಿದ್ದರೂ ಈ ದಿನದವರೆಗೂ ಆ ಪಾಪದಿಂದ ನಾವು ಶುದ್ಧವಾಗಲಿಲ್ಲ.
18 के तिमीहरू पनि अहिले नै परमप्रभुलाई पछ्याउनबाट तर्किनुपर्छ? यदि तिमीहरूले आज उहाँको विरुद्ध विद्रोह गर्यौ भने, उहाँ भोलि हामी इस्राएलको सबै समुदायसँग रिसाउनुहुने छ ।
ನೀವು ಈಗ ಯೆಹೋವ ದೇವರ ಕಡೆಯಿಂದ ತಿರುಗಿ ಹೋಗುತ್ತೀರಲ್ಲಾ? “‘ಈ ಹೊತ್ತು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬಿದ್ದರೆ, ನಾಳೆ ಅವರು ಇಸ್ರಾಯೇಲ್ ಜನಾಂಗದ ಮೇಲೆ ರೌದ್ರವುಳ್ಳವರಾಗುವರು.
19 यदि तिमीहरूको अधीनमा भएको भूमि अशुद्ध छ भने, तिमीहरू परमप्रभुको पवित्र वासस्थान खडा भएको भूमिमा नै तरेर आउनुपर्छ र हाम्रो माझमा नै भाग लिन आउनुपर्छ । परमप्रभुको विरुद्ध विद्रोह मात्र नगर, न त परमप्रभुको वेदीबाहेक अन्य वेदी निर्माण गरेर हाम्रो विरुद्धमा विद्रोह गर ।
ನೀವು ಸ್ವಾಧೀನಪಡಿಸುವ ನಾಡು ಅಶುದ್ಧವಾಗಿದ್ದರೆ, ಯೆಹೋವ ದೇವರ ಗುಡಾರವಿರುವ ಯೆಹೋವ ದೇವರ ನಾಡಿಗೆ ನೀವು ಬಂದು, ನಮ್ಮ ಮಧ್ಯದಲ್ಲಿ ಸೊತ್ತನ್ನು ತೆಗೆದುಕೊಳ್ಳಿರಿ. ಯೆಹೋವ ದೇವರ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವುದರಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿ ಬೀಳಬೇಡಿರಿ. ನಮಗೆ ವಿರೋಧವಾಗಿಯೂ ತಿರುಗಿ ಬೀಳಬೇಡಿರಿ.
20 के परमेश्वरलाई सुम्पेका थोकहरूको विषयमा जेरहको छोरो आकानले विश्वास तोडेनन्? के सबै इस्राएलका मानिसमाथि क्रोध परेन? त्यसको पापको निम्ति आफू मात्रै मरेन' ।”
ಜೆರಹನ ಮಗ ಆಕಾನನು ಅರ್ಪಿತವಾದ ವಸ್ತುಗಳನ್ನು ಕದ್ದು ಅಪರಾಧವೆಸಗಿದಾಗ ಯೆಹೋವ ದೇವರ ಕೋಪವು ಸಮಸ್ತ ಇಸ್ರಾಯೇಲ್ ಜನರ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಇತರರೂ ಸಾಯಬೇಕಾಯಿತು,’” ಎಂದು ಹೇಳಿದರು.
21 त्यसपछि रूबेन, गाद, र मनश्शेका आधा कुलले इस्राएलका कुलका प्रमुखहरूलाई जवाफ दिए,
ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರಿಗೆ ಉತ್ತರವಾಗಿ,
22 “हे सर्वशक्तिमान्, परमप्रभु परमेश्वर सर्वशक्तिमान्, हे परमप्रभु परमेश्वर! उहाँ जान्नुहुन्छ, इस्राएलले जानोस्! यदि यो विद्रोह वा विश्वास तोड्नलाई परमप्रभुको विरुद्धमा थियो भने,
“ದೇವಾದಿದೇವರಾದ ಯೆಹೋವ ದೇವರು ಇದಕ್ಕೆ ಸಾಕ್ಷಿ, ನಾವು ದೇವಾದಿದೇವರಾದ ಯೆಹೋವ ದೇವರಿಗೆ ವಿರುದ್ಧ ಪಾಪಮಾಡಿದವರಾಗಿದ್ದರೆ ಅಥವಾ ಅವಿಧೇಯರಾಗಿದ್ದರೆ, ಆ ದೇವರು ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.
23 परमप्रभुलाई पछ्याउनबाट आफै तर्कन यो वेदी बनाएका हौँ भने आज हामीलाई नछोड्नुहोस् ।
ನಾವು ಯೆಹೋವ ದೇವರ ಕಡೆಗೆ ತಿರುಗಿಕೊಂಡು ದಹನಬಲಿಗಳನ್ನಾದರೂ, ಧಾನ್ಯ ಸಮರ್ಪಣೆಯನ್ನಾದರೂ, ಸಮಾಧಾನದ ಸಮರ್ಪಣೆಗಳನ್ನಾದರೂ, ಅದರ ಮೇಲೆ ಅರ್ಪಿಸುವುದಕ್ಕೋಸ್ಕರ ಬಲಿಪೀಠವನ್ನು ನಮಗಾಗಿ ಕಟ್ಟಿದ್ದರೆ, ಯೆಹೋವ ದೇವರು ಅದನ್ನು ವಿಚಾರಿಸಲಿ.
24 यदि हामीले यो वेदी होमबलि, अन्नबलि वा मेलबलि चढाउनलाई निर्माण गरेका हौँ भने, परमप्रभुले हामीलाई यसको निम्ति मूल्य चुकाउन लगाउनुभएको होस् । होइन! हामीले आउँदो दिनमा तिमीहरूका सन्तानहरूले हाम्रा सन्तानहरूलाई यसो भन्लान् भन्ने डरले हामीले यसो गर्यौँ, 'परमप्रभु इस्राएलका परमेश्वरसँग तिमीहरूको के सरोकार?
“ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದೆವು. ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವ ದೇವರಲ್ಲಿ ನಿಮಗೇನು ಪಾಲಿದೆ?
25 किनभने परमप्रभुले तिमीहरू र हामीबिच यर्दनलाई सिमान बनाउनुभएको छ । तिमीहरू रूबेन र गादका मानिसहरू, तिमीहरूको परमप्रभुसँग कुनै सरोकार छैन ।'
ರೂಬೇನ್ಯರೇ, ಗಾದ್ಯರೇ ಯೆಹೋವ ದೇವರು ನಿಮಗೂ ನಮಗೂ ನಡುವೆ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದರಿಂದ ಯೆಹೋವ ದೇವರ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲ,’ ಎಂದು ಹೇಳಿ, ನಮ್ಮ ಮಕ್ಕಳನ್ನು ಯೆಹೋವ ದೇವರಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು.
26 त्यसैले तिमीहरूका सन्तानहरूले हाम्रा सन्तानहरूलाई परमप्रभुको आराधना गर्न छोड्न लगाउन सक्छन् । त्यसैले हामीले भन्यौ, 'एउटा वेदी बनाऔँ, न त कुनै होमबलि न त कुनै बलिदानको निम्ति,
“ಆದ್ದರಿಂದ, ‘ನಾವು ಸಿದ್ಧರಾಗಿ ಬಲಿಪೀಠವನ್ನು ಕಟ್ಟೋಣ ಎಂದು ಹೇಳಿದ ಕಾರಣ, ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕೆ ಅಲ್ಲ.’
27 तर हामीपछिका हाम्रा पुस्ताहरूका निम्ति हामीहरू र तिमीहरूबिच साक्षी हुनलाई, ताकि हामीले हाम्रा होमबलिहरू र हाम्रा मेलबलिसहित हामीले परमप्रभुको सेवा गर्न सकौँ, ताकि तिमीहरूका सन्तानहरूले हाम्रा सन्तानहरूलाई, “परमप्रभुमा तिमीहरूको कुनै हिस्सा छैन” भनी आउँदो समयमा कहिल्यै नभनून् ।'
ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ.
28 त्यसैले हामीले भन्यौँ, 'यदि भविष्यमा हामीलाई वा हाम्रा सन्तानहरूलाई यसो भनिएमा, हामीले भन्नेथियौँ, “हेर, यो वेदीको प्रतिरूप, जुन हाम्रा पुर्खाहरूले न त होमबलि, न त बलिदानहरूको निम्ति, तर हामीहरू र तिमीहरू बिच गवाही हुनको निम्ति बनाए ।”
“ಇದಲ್ಲದೆ ನಾವು, ‘ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತತಿಯವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ: ಯೆಹೋವ ದೇವರ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿರಿ, ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ. ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು.
29 हामी आज परमप्रभुको पवित्र वासस्थान सामु रहेको हाम्रो परमप्रभु परमेश्वरको वेदीभन्दा अर्को वेदी होमबलि वा अन्नबलि वा बलिदानको निम्ति निर्माण गरेर उहाँलाई पछ्याउन छोडेर परमप्रभुको विरुद्धमा विद्रोह गर्ने कुरा हामीबाट दूर होस्' ।”
“ಆದರೆ ನಮ್ಮ ದೇವರಾದ ಯೆಹೋವ ದೇವರ ಗುಡಾರದ ಮುಂದೆ ಇರುವ ಅವರ ಯಜ್ಞವೇದಿಯನ್ನು ಅಲ್ಲದೆ ನಾವು ದಹನಬಲಿ, ಧಾನ್ಯ ನೈವೇದ್ಯ ಮತ್ತು ಇತರ ಬಲಿಗೋಸ್ಕರವಾಗಿಯೂ ಮತ್ತೊಂದು ಬಲಿಪೀಠವನ್ನು ಕಟ್ಟಿ, ಯೆಹೋವ ದೇವರಿಗೆ ವಿರೋಧವಾಗಿ ವಿಮುಖರಾಗಿ ತಿರುಗಿಬೀಳುವುದು ನಮಗೆ ದೂರವಾಗಿರಲಿ,” ಎಂದರು.
30 जब पुजारी पीनहास र मानिसहरूका अगुवाहरू अर्थात् तिनीसँग भएका इस्राएलका कुलहरूका प्रमुखहरूले रूबेन, गाद र मनश्शेका मानिसहरूको कुरा सुने । यो तिनीहरूलाई नजरमा असल लाग्यो ।
ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರೂ ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರು ಹೇಳಿದ ಮಾತುಗಳನ್ನು ಕೇಳಿದಾಗ ಅವರಿಗೆ ಮೆಚ್ಚಿಕೆಯಾಯಿತು.
31 एलाजारका छोरा पुजारी पीनहासले रूबेन, गाद र मनश्शेका मानिसहरूलाई भने, “आज परमप्रभु हाम्रा माझमा हुनुहुन्छ भनी हामीले थाहा पायौँ, किनभने तिमीहरूले यो उहाँको विरुद्धमा विश्वासलाई तोडेका छैनौ । अहिले तिमीहरूले इस्राएलका मानिसरूलाई परमप्रभुको हातबाट छुटकारा दिएका छौ ।”
ಯಾಜಕನಾಗಿರುವ ಎಲಿಯಾಜರನ ಪುತ್ರ ಫೀನೆಹಾಸನು ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರಿಗೆ, “ನೀವು ಯೆಹೋವ ದೇವರಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಅವರು ನಮ್ಮ ಮಧ್ಯದಲ್ಲಿರುತ್ತಾರೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವ ದೇವರ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ,” ಎಂದನು.
32 त्यसपछि एलाजारका छोरा पीनहास र अगुवाहरू रूबेनीहरू, गादीहरूको गिलादको मुलुकबाट कनानको भू-भागमा इस्राएलका मानिसहरूकहाँ फर्के र तिनीहरूलाई यो समाचार ल्याए । तिनीहरूको प्रतिवेदन इस्राएलका मानिसहरूको नजरमा असल थियो ।
ಯಾಜಕನಾದ ಎಲಿಯಾಜರನ ಮಗ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್ ದೇಶದಲ್ಲಿರುವ ರೂಬೇನ್ಯರನ್ನೂ ಗಾದ್ಯರನ್ನೂ ಬಿಟ್ಟು ಕಾನಾನ್ ದೇಶದಲ್ಲಿರುವ ಇಸ್ರಾಯೇಲರ ಬಳಿಗೆ ತಿರುಗಿಬಂದು, ಅವರಿಗೆ ವರ್ತಮಾನವನ್ನು ತಿಳಿಸಿದರು.
33 इस्राएलका मानिसहरूले परमेश्वरको प्रशंसा गरे र रूबेनी र गादीहरूलाई तिनीहरू बसोबास गरेका ठाउँबाट नष्ट पार्नलाई तिनीहरूको विरुद्धमा युद्ध गर्नेबारे कुनै कुरा गरेनन् ।
ಆ ಮಾತನ್ನು ಇಸ್ರಾಯೇಲರು ಕೇಳಿ ಸಂತೋಷಪಟ್ಟು ದೇವರನ್ನು ಕೊಂಡಾಡಿದರು. ಆದ್ದರಿಂದ ಅವರು ರೂಬೇನ್ಯರೂ ಗಾದ್ಯರೂ ನಿವಾಸವಾಗಿದ್ದ ನಾಡಿನ ಮೇಲೆ ಯುದ್ಧಮಾಡಿ ಅವರನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು.
34 रूबेनीहरू र गादीहरूले त्यो वेदीलाई “साक्षी” नाउँ राखे, किनभने तिनीहरूले भने, “यो हामी र परमप्रभु नै परमेश्वर हुनुहन्छ भन्ने बिच साक्षी छ ।”
ರೂಬೇನ್ಯರೂ ಗಾದ್ಯರೂ ಆ ಬಲಿಪೀಠಕ್ಕೆ, “ನಮ್ಮ ನಡುವೆ ಯೆಹೋವ ದೇವರೇ ದೇವರಾಗಿದ್ದಾರೆ ಎಂಬುದಕ್ಕೆ ಸಾಕ್ಷಿ,” ಎಂದು ಹೆಸರಿಟ್ಟರು.