< न्यायकर्ताहरू 3 >
1 यति बेला इस्राएलको अर्थात् कनानमा लडिएका कुनै पनि युद्धको अनुभव नभएका इस्राएलका हरेक व्यक्तिको जाँच गर्नलाई परमप्रभुले यी जातिहरूलाई छोडिदिनुभयो ।
ಕಾನಾನ್ ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲರನ್ನು ಪರೀಕ್ಷಿಸುವುದಕ್ಕೂ,
2 (युद्धको विषयमा पहिले जानकरी नभएका इस्राएलीहरूका नयाँ पुस्तालाई त्यसबारे सिकाउन उहाँले यसो गर्नुभयो ।)
ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲಿನ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವುದಕ್ಕೂ ಯೆಹೋವ ದೇವರು ಉಳಿಸಿದ ಜನಾಂಗಗಳು ಯಾವುವೆಂದರೆ:
3 ती जातिहरू यी नै हुन्: पलिश्तीहरूका पाँच राजाहरू, सबै कनानीहरू, सीदोनीहरू, र लेबनानका पर्वतहरूमा बाल-हर्मोनदेखि हमात-पाससम्म बस्ने हिव्वीहरू ।
ಐದು ಮಂದಿ ಫಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಸೀದೋನ್ಯರೂ ಬಾಳ್ ಹೆರ್ಮೋನ್ ಬೆಟ್ಟದಿಂದ ಪ್ರಾರಂಭಿಸಿ ಹಮಾತಿನ ಪ್ರದೇಶದವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾಗಿರುವ ಹಿವ್ವಿಯರು ಇವರೇ.
4 इस्राएलको जाँच गर्न, अनि परमप्रभुले मोशाद्वारा तिनीहरूका पुर्खाहरूलाई दिनुभएका आज्ञाहरू तिनीहरूले पालन गर्छन् कि गर्दैनन् भनेर निश्चित रूपमा थाहा पाउनलाई यी जातिहरूलाई छोडिएको थियो ।
ತಾವು ಮೋಶೆಯ ಮುಖಾಂತರವಾಗಿ ಇಸ್ರಾಯೇಲರ ಪಿತೃಗಳಿಗೆ ಆಜ್ಞಾಪಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೇಳುವರೋ ಇಲ್ಲವೋ ಎಂದು ಪರೀಕ್ಷಿಸುವುದಕ್ಕೆ ಯೆಹೋವ ದೇವರು ಅವರನ್ನು ಉಳಿಸಿಬಿಟ್ಟರು.
5 यसैले इस्राएलका मानिसहरू कनानीहरू, हित्तीहरू, एमोरीहरू, परिज्जीहरू, हिव्वीहरू, र यबूसीहरूसँगै बसोबास गरे ।
ಇಸ್ರಾಯೇಲರು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು,
6 तिनीहरूका छोरीहरूलाई उनीहरूले आफ्ना पत्नीहरू बनाएर ल्याए, र उनीहरूका आफ्ना छोरीहरू तिनीहरूका छोराहरूलाई दिए र तिनीहरूका उनीहरूका देवताहरूका सेवा गरे ।
ಅವರ ಪುತ್ರಿಯರನ್ನು ತಾವು ಹೆಂಡತಿಯರನ್ನಾಗಿ ತೆಗೆದುಕೊಂಡು, ತಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆ ಮಾಡಿಕೊಟ್ಟು, ಅವರ ದೇವರುಗಳನ್ನು ಸೇವಿಸಿದರು.
7 परमप्रभुको नजरमा जे कुरा दुष्ट थियो, इस्राएलका मानिसहरूले त्यही गरे र परमप्रभु आफ्ना परमेश्वरलाई बिर्से । तिनीहरूले बाल देवताहरू र अशेरा देवीहरूका पुजा गरे ।
ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತು, ಬಾಳನನ್ನೂ ಅಶೇರನನ್ನೂ ಸೇವಿಸಿದರು.
8 यसकारण इस्राएलको विरुद्ध परमप्रभुको क्रोध आगोझैं दन्कियो, र उहाँले तिनीहरूलाई अराम नाहारैमका राजा कूशन-रिशातैमको हातमा बेचिदिनुभयो । इस्राएलका मानिसहरूले आठ वर्षसम्म कूशन-रिशातैमको सेवा गरे ।
ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡು, ಅವರನ್ನು ಅರಾಮ್ ನಹರೈಮ್ದ ಅರಸನಾದ ಕೂಷನ್ ರಿಷಾತಯಿಮನ ಕೈಗೆ ಮಾರಿಬಿಟ್ಟರು. ಇಸ್ರಾಯೇಲರು ಕೂಷನ್ರಿಷಾತಯಿಮ್ ಎಂಬವನಿಗೆ ಎಂಟು ವರ್ಷ ಗುಲಾಮರಾಗಿದ್ದರು.
9 जब इस्राएलका मानिसहरूले परमप्रभुलाई पुकारे, इस्राएलका मानिसहरूलाई सहायता गर्ने र तिनीहरूलाई बचाउने कोही एक जनालाई परमप्रभुले खडा गर्नुभयोः उनी कनाजका छोरा ओत्निएल (कालेबका भाइ) थिए ।
ತರುವಾಯ ಇಸ್ರಾಯೇಲರು ಯೆಹೋವ ದೇವರನ್ನು ಕೂಗುವಾಗ, ಯೆಹೋವ ದೇವರು ಇಸ್ರಾಯೇಲರಿಗೆ ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ, ಕಾಲೇಬನ ತಮ್ಮನಾದ ಕೆನಾಜನ ಮಗ ಒತ್ನಿಯೇಲನನ್ನು ಎಬ್ಬಿಸಿದರು.
10 परमप्रभुको आत्माले उनलाई शक्ति दिनुभयो, र उनले इस्राएलको न्याय गरे र उनी युद्धमा गए । परमप्रभुले उनलाई अरामका राजा कूशन-रिशातैममाथि विजय दिनुभयो । ओत्निएलका हातले नै कूशन-रिशातैमलाई परास्त गरे ।
ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.
11 देशमा चालिस वर्षसम्म शान्ति भयो । त्यसपछि कनजका छोरा ओत्निएलको मृत्यु भयो ।
ದೇಶವು ನಾಲ್ವತ್ತು ವರ್ಷದವರೆಗೆ ವಿಶ್ರಾಂತಿಯಿಂದಿತ್ತು. ತರುವಾಯ ಕೆನಾಜನ ಮಗ ಒತ್ನಿಯೇಲನು ಮರಣಹೊಂದಿದನು.
12 त्यसपछि, इस्राएलीहरूले परमप्रभुको दृष्टिमा जे कुरा खराब थियो, फेरि त्यही गरे, र परमप्रभुले मोआबका राजा एग्लोनलाई इस्राएलीहरूमाथि अधिकार गर्न दिनुभयो ।
ಇಸ್ರಾಯೇಲರು ಯೆಹೋವ ದೇವರ ಮುಂದೆ ತಿರುಗಿ ಕೆಟ್ಟದ್ದನ್ನೇ ಮಾಡಿದರು. ಅವರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನೇ ಮಾಡಿದ್ದರಿಂದ, ಯೆಹೋವ ದೇವರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲಪಡಿಸಿದರು.
13 एग्लोन अम्मोनीहरू र अमालेकीहरूसँग मिले र तिनीहरू गए र इस्राएललाई हराए, अनि खजूरका रूखहरूको सहरमाथि अधिकार गरे ।
ಅವನು ಅಮ್ಮೋನನ ಮತ್ತು ಅಮಾಲೇಕ್ಯರನ್ನು ಕೂಡಿಸಿಕೊಂಡು ಬಂದು, ಇಸ್ರಾಯೇಲರನ್ನು ಹೊಡೆದು, ಖರ್ಜೂರ ಗಿಡಗಳಿರುವ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
14 इस्राएलका मानिसहरूले अठार वर्षसम्म मोआबका राजा एग्लोनको सेवा गरे ।
ಇಸ್ರಾಯೇಲರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರ್ಷ ಸೇವಿಸಿದರು.
15 जब इस्राएलका मानिसहरूले परमप्रभुको पुकारा गरे, तिनीहरूलाई सहायता गर्नलाई परमप्रभुले कोही एक जना बेन्यामिनी गेराका छोरा देब्रे हात चलाउने मानिस एहूदलाई खडा गर्नुभयो । इस्राएलका मानिसहरूले उनको साथमा मोआबका राजा एग्लोनकहाँ कर पठाए ।
ಆದರೆ ಇಸ್ರಾಯೇಲರು ಯೆಹೋವ ದೇವರನ್ನು ಕೂಗಿದಾಗ, ಯೆಹೋವ ದೇವರು ಅವರಿಗೆ ಬೆನ್ಯಾಮೀನನಾದ ಗೇರನ ಮಗ ಏಹೂದನನ್ನು ರಕ್ಷಿಸುವುದಕ್ಕೆ ಎಬ್ಬಿಸಿದರು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲರು ಮೋವಾಬಿನ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.
16 एहूदले आफ्नो निम्ति एक हात लामो दुई धारे तरवार बनाए । त्यो तिनले आफ्नो दाहिने जाँघमा आफ्नो लुगाभित्र बाँधे ।
ಏಹೂದನು ಇಬ್ಬಾಯಿಯುಳ್ಳ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿಕೊಂಡು, ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು,
17 तिनले मोआबका राजा एग्लोनलाई त्यो कर तिरे । (एग्लोन धेरै मोटो मानिस थिए ।)
ಕಾಣಿಕೆಯನ್ನು ಮೋವಾಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ದಪ್ಪ ಮನುಷ್ಯನಾಗಿದ್ದನು.
18 एहूदले कर तिरिसकेपछि, ती ल्याउनेहरूसँगै उनी फर्के ।
ಏಹೂದನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ, ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿಬಿಟ್ಟು,
19 गिलगालको नजिक कुँदेर बनाएका मुर्तिहरूको ठाउँमा जसै एहूद पुगे, उनी फर्के र फिर्ता गए, र भने, “मेरा राजा, तपाईंको निम्ति मसँग एउटा गुप्त सन्देश छ ।” एग्लोनले भने, “शान्त होओ!” यसैले उनको सेवा गर्ने सबैले त्यो कोठा छोडेर बाहिर गए ।
ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಕ್ಕೆ ತಿರುಗಿ, ಅವನ ಬಳಿಗೆ ಬಂದು, “ಅರಸನೇ, ನಿನ್ನ ಸಂಗಡ ಹೇಳಬೇಕಾದ ರಹಸ್ಯವಾದ ಒಂದು ಮಾತು ಇದೆ,” ಎಂದನು. ಅವನು, “ನಿಶ್ಶಬ್ದ,” ಎಂದು ಹೇಳಿದಾಗ, ಅವನ ಬಳಿಯಲ್ಲಿ ನಿಂತಿದ್ದವರೆಲ್ಲರು ಅವನನ್ನು ಬಿಟ್ಟು ಹೊರಗೆ ಹೋದರು.
20 एहूद तिनीकहाँ आए । राजाचाहिं माथिल्लो शीतल कक्षमा एक्लै बसिरहेका थिए । एहूदले भने, “मसँग तपाईंको निम्ति परमेश्वरको एउटा सन्देश छ ।” राजा आफ्नो ठाउँबाट उठे ।
ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ, ಏಹೂದನು ಅವನ ಬಳಿಗೆ ಪ್ರವೇಶಿಸಿ, “ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗಿದೆ,” ಎಂದನು. ಅವನು ತನ್ನ ಸಿಂಹಾಸನದಿಂದ ಎದ್ದನು.
21 एहूदले आफ्नो देब्रे हातले आफ्नो दाहिने जाँघबाट तरवार झिके, र त्यो तिनले राजाको शरीरमा रोपिदिए ।
ಏಹೂದನು ತನ್ನ ಎಡಗೈಯನ್ನು ಚಾಚಿ, ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿಯನ್ನು ತೆಗೆದುಕೊಂಡು, ಅವನ ಹೊಟ್ಟೆಯಲ್ಲಿ ತಿವಿದನು.
22 त्यो तरवार बींडसितै छिर्यो । उनको पछिल्तिरबाट त्यो तरवारको टुप्पो निस्कियो र बोसोले त्यसलाई ढाक्यो, अनि एहूदले उनको पेटबाट त्यो तरवार झिकेनन् ।
ಅದು ಅಲಗಿನ ಸಂಗಡ ಹಿಡಿ ಸಮೇತ ಅವನ ಹೊಟ್ಟೆಯಲ್ಲಿ ಹೊಕ್ಕು, ಕಿತ್ತು ತೆಗೆಯಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು. ಅದರಿಂದ ಮಲವು ಹೊರಟಿತು.
23 त्यसपछि एहूद कौसीमा निस्के र माथिल्लो कक्षका आफू पछाडिका ढोकाहरू थुनिदिए र ताल्चा लगाइदिए ।
ಆಗ ಏಹೂದನು ಕೊಠಡಿಯ ಬಾಗಿಲನ್ನು ತನ್ನ ಹಿಂಭಾಗದಲ್ಲಿ ಮುಚ್ಚಿ, ಬೀಗವನ್ನು ಹಾಕಿ, ದ್ವಾರಾಂಗಳದಿಂದ ಹೊರಟುಹೋದನು.
24 एहूद गइसकेपछि, राजाका सेवकहरू आए । तिनीहरूले माथिल्लो कक्षका ढोकाहरूमा ताल्चा लागेको देखे । यसैले तिनीहरूले विचार गरे, “पक्कै पनि उहाँ माथिल्लो शीतल कक्षमा दिसा गरिरहनुभएको होला ।”
ಅವನು ಹೋದ ತರುವಾಯ, ಕೊಠಡಿಯ ಸೇವಕರು ಬಾಗಿಲು ಮುಚ್ಚಿರುವುದನ್ನು ಕಂಡು, “ಅರಸನು ನಿಶ್ಚಯವಾಗಿ ತನ್ನ ತಂಪಾದ ಕೋಣೆಯಲ್ಲಿ ವಿಸರ್ಜನೆಗಾಗಿ ಹೋಗಿರಬೇಕು,” ಎಂದುಕೊಂಡರು.
25 राजाले माथिल्लो कक्षका ढोकाहरू नखोलेपछि, आफ्नो जिम्मेवारी पुरा नगरेकोझैं तिनीहरूलाई महसुस भएको हुनाले तिनीहरूलाई चिन्ता भयो । यसैले तिनीहरूले साँचो लिए र ढोकाहरू खोले, र आफ्ना मालिकलाई भुइँमा मृत अवस्थामा ढलेको देखे ।
ಅವರು ತಮಗೆ ಬೇಸರವಾಗುವ ಮಟ್ಟಿಗೂ ಕಾದಿದ್ದರು. ಆದರೆ, ಅವನು ಕೊಠಡಿ ಬಾಗಿಲನ್ನು ತೆರೆಯದೆ ಇದ್ದುದರಿಂದ, ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆದರು. ಅವರ ಪ್ರಭುವು ನೆಲದ ಮೇಲೆ ಮರಣಹೊಂದಿದ್ದನು.
26 अब के गर्ने भनेर सेवकहरू कुरिरहेका बेला, एहूद भागेर कुँदेर बनाइएका मुर्तिहरू भएका ठाउँभन्दा पर पुगे, र उनी सीरामा भागे ।
ಅವರು ಆಲಸ್ಯ ಮಾಡುತ್ತಿರುವಾಗ, ಏಹೂದನು ತಪ್ಪಿಸಿಕೊಂಡು ವಿಗ್ರಹಗಳನ್ನು ದಾಟಿ, ಸೇಯೀರಾತನ್ನು ಸೇರಿ ತಪ್ಪಿಸಿಕೊಂಡನು.
27 जब उनी आइपुगे, उनले एफ्राइमको पहाडी देशमा तुरही फुके । त्यसपछि इस्राएलका मानिसहरू उनीसँगै पहाडहरूबाट तल ओर्ले, र उनले तिनीहरूलाई नेतृत्व गरे ।
ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.
28 उनले तिनीहरूलाई भने, “मेरो पछि लाग, किनकि परमप्रभुले तिमीहरूका शत्रु मोआबीहरूलाई परास्त गर्न लाग्नुभएको छ ।” तिनीहरू उनको पछि लागे र तिनीहरूले मोआबीहरूबाट यर्दनका जँघारहरू लिए, र तिनीहरूले कसैलाई पनि त्यो नदी तर्न दिएनन् ।
ಅವರಿಗೆ, “ನೀವು ನನ್ನ ಹಿಂದೆ ಬನ್ನಿರಿ. ಏಕೆಂದರೆ ಯೆಹೋವ ದೇವರು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು. ಅವರು ಅವನ ಹಿಂದೆ ಬಂದು, ಮೋವಾಬ್ಯರಿಗೆ ಎದುರಾದ ಯೊರ್ದನ್ ನದಿ ರೇವುಗಳನ್ನು ಹಿಡಿದು, ಒಬ್ಬರನ್ನಾದರೂ ದಾಟಗೊಡದೆ,
29 त्यस बेला तिनीहरूले मोआबका दश हजार मानिसहरूलाई मरे, र तिनीहरू सबै बलिया र सक्षम मानिसहरू थिए । एउटा पनि उम्केन ।
ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಪುಷ್ಟರೂ, ಪರಾಕ್ರಮಿಗಳೂ ಆಗಿದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ.
30 यसैले त्यस दिन मोआब इस्राएलको शासनको अधीनमा आयो, र देशमा असी वर्षसम्म शान्ति भयो ।
ಹೀಗೆ ಆ ದಿವಸದಲ್ಲಿ ಮೋವಾಬ್ ಇಸ್ರಾಯೇಲರ ಆಳಿಕೆಗೆ ಅಧೀನವಾಗಿತ್ತು. ದೇಶವು ಎಂಬತ್ತು ವರ್ಷ ವಿಶ್ರಾಂತಿಗೊಂಡಿತು.
31 एहूदपछि अनातका छोरा शमगर अर्का न्यायकर्ता भए जसले पाल्तु पशु धपाउने लौरोले पलिश्तीहरूका छ सय मानिसहरूलाई मरे । उनले इस्राएललाई खतराबाट पनि छुट्कारा दिए ।
ಏಹೂದನ ತರುವಾಯ ಅನಾತನ ಮಗ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರುನೂರು ಜನರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲರನ್ನು ರಕ್ಷಿಸಿದನು.