< लुका 20 >
1 येशूले मन्दिरमा मानिसहरूलाई शिक्षा दिइरहनुहुँदा र सुसमाचार प्रचार गरिरहनुहुँदा, अगुवाहरूसहित मुख्य पुजारीहरू र शास्त्रीहरू येशूकहाँ आए ।
ಆ ದಿವಸಗಳಲ್ಲಿ ಒಂದು ದಿನ ಯೇಸು ದೇವಾಲಯದ ಅಂಗಳದಲ್ಲಿ ಜನರಿಗೆ ಬೋಧಿಸುತ್ತಾ, ಸುವಾರ್ತೆಯನ್ನು ಸಾರುತ್ತಿದ್ದರು. ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೊಂದಿಗೆ ಅವರ ಬಳಿಗೆ ಬಂದು
2 तिनीहरूले उहाँलाई भने, “हामीलाई बताऊ, कुन अधिकारद्वारा तिमी यी कामहरू गर्छौ? अथवा कसले तिमीलाई यो अधिकार दियो?”
ಯೇಸುವಿಗೆ, “ನೀವು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀರಿ? ನಿಮಗೆ ಈ ಅಧಿಕಾರವನ್ನು ಕೊಟ್ಟವರು ಯಾರು? ನಮಗೆ ಹೇಳಿ,” ಎಂದರು.
3 उहाँले जवाफ दिएर भन्नुभयो, “म पनि तिमीहरूलाई एउटा प्रश्न सोध्छु ।
ಅದಕ್ಕೆ ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ.
4 यूहन्नाको बप्तिस्माको बारेमा मलाई बताओ । यो स्वर्गबाट थियो कि मानिसहरूबाट?”
ಯೋಹಾನನಿಗೆ ದೀಕ್ಷಾಸ್ನಾನವನ್ನು ಕೊಡುವ ಅಧಿಕಾರ ಪರಲೋಕದಿಂದ ಬಂದದ್ದೋ ಇಲ್ಲವೇ ಮನುಷ್ಯರಿಂದಲೋ?” ಎಂದು ಕೇಳಿದರು.
5 उनीहरूले आपसमा भने, “यदि हामीले स्वर्गबाट भन्यौँ भने उसले यसो भन्ला ‘त्यसो भए तिमीहरूले उनलाई किन विश्वास गरेनौ?’
ಆಗ ಅವರು ತಮ್ಮೊಳಗೆ, “‘ಪರಲೋಕದಿಂದ’ ಎಂದು ನಾವು ಹೇಳಿದರೆ ಆತನು, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.
6 तर यदि हामीले मानिसबाट हो भन्यौँ भने, ‘सबै मानिसले हामीलाई ढुङ्गाले हान्नेछन्, किनभने उनीहरूले यूहन्नालाई अगमवक्ता हो भनी विश्वास गरेका छन्’ ।”
‘ಮನುಷ್ಯರಿಂದ ಬಂತು,’ ಎಂದು ನಾವು ಹೇಳಿದರೆ, ಜನರೆಲ್ಲಾ ನಮಗೆ ಕಲ್ಲೆಸೆಯುವರು. ಏಕೆಂದರೆ ಯೋಹಾನನು ಒಬ್ಬ ಪ್ರವಾದಿಯೆಂದು ಅವರು ಒಪ್ಪಿದ್ದಾರೆ,” ಎಂದು ಆಲೋಚಿಸಿ,
7 यसकारण तिनीहरूले यसो भनेर उत्तर दिए, “त्यो कहाँबाट भयो भनी हामीलाई थाहा छैन ।”
“ಅದು ಎಲ್ಲಿಂದಲೋ ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು.
8 येशूले तिनीहरूले भन्नुभयो, “म पनि तिमीहरूलाई मैले कुन अधिकारले यी कामहरू गर्छु भनी बताउँदिनँ ।”
ಆಗ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.
9 उहाँले मानिसहरूलाई यो दृष्टान्त भन्नुभयो, “एक जना मानिसले दाखबारी लगाएर कामदारहरूलाई जिम्मा दिएर आफू लामो समयको लागि अर्को देशमा गए ।
ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದರು: “ಒಬ್ಬನು ದ್ರಾಕ್ಷಿಯ ತೋಟವನ್ನು ನೆಟ್ಟು, ಅದನ್ನು ರೈತರಿಗೆ ಗೇಣಿಗೆ ಕೊಟ್ಟು, ದೀರ್ಘಕಾಲ ದೂರದೇಶಕ್ಕೆ ಪ್ರವಾಸಹೋದನು.
10 तोकिएको समयमा तिनीहरूले आफ्नो हिस्साको फल दिऊन् भनी तिनले आफ्नो एक जना नोकरलाई ती कामदारहरूकहाँ पठाए । तर ती कामदारहरूले त्यसलाई पिटेर रित्तो हात पठाइदिए ।
ಫಲದ ಕಾಲ ಬಂದಾಗ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷಿತೋಟದ ಫಲವನ್ನು ಕೊಡುವಂತೆ ತನ್ನ ಸೇವಕನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಆ ಗೇಣಿಗೆದಾರರು ಅವನನ್ನು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.
11 तिनले अझै अर्को नोकरलाई पठाए, तर तिनीहरूले त्यसलाई पनि पिटेर बेइज्जत गरी रित्तै हात पठाए ।
ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ಅವರು ಎರಡನೆಯವನನ್ನೂ ಸಹ ಹೊಡೆದು, ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
12 तिनले तेस्रो नोकरलाई पनि पठाए, तर तिनीहरूले त्यसलाई पनि घाइते बनाएर निकाली दिए ।
ಆ ಯಜಮಾನನು ಮೂರನೆಯವನನ್ನು ಕಳುಹಿಸಿದನು. ಆಗ ಅವರು ಅವನನ್ನೂ ಗಾಯಪಡಿಸಿ ಹೊರಗೆ ಹಾಕಿದರು.
13 त्यसकारण, दाखबारीका मालिकले भने, ‘अब म के गरूँ? म आफ्नो प्यारो छोरालाई पठाउनेछु सायद उसलाई त तिनीहरूले आदर गर्लान् कि ।’
“ಆಗ ದ್ರಾಕ್ಷಿಯ ತೋಟದ ಯಜಮಾನನು, ‘ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿಸುವೆನು, ಬಹುಶಃ ಅವರು ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡನು.
14 तर कामदारहरूले उसलाई देखेर आपसमा कुरा गरे, ‘यो त हकवाला हो । हामी यसलाई मारौँ र सम्पत्तिको हक हाम्रो हुनेछ ।’
“ಆದರೆ ಗೇಣಿಗೆದಾರರು ಅವನನ್ನು ಕಂಡಾಗ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.
15 अनि तिनीहरूले उसलाई दाखबारीको बाहिर लगेर मारे । अब दाखबारीका मालिकले तिनीहरूलाई के गर्लान्?
ಹಾಗೆಯೇ, ಅವರು ಅವನನ್ನು ದ್ರಾಕ್ಷಿತೋಟದ ಹೊರಗೆ ಹಾಕಿ ಕೊಂದರು. “ಹೀಗಿರಲಾಗಿ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು?
16 उनी आएर ती कामदारहरूलाई मार्नेछन् र दाखाबरी अरूहरूलाई दिनेछन् ।” यो सुनेर तिनीहरूले भने, “यस्तो कहिल्यै नहोस्!”
ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು.
17 तर येशूले तिनीहरूलाई हेर्नुभयो र भन्नुभयो, “यो धर्मशास्त्रको भनाइको अर्थ के हो, ‘जुन ढुङ्गालाई भवन निर्माण गर्नेहरूले इन्कार गरे त्यही नै कुने-ढुङ्गो बन्यो?’
ಆಗ ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ, “‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಪವಿತ್ರ ವೇದದಲ್ಲಿ ಬರೆದಿರುವುದರ ಅರ್ಥ ಏನು?
18 त्यस ढुङ्गामाथि खस्ने हरेक चकनाचुर हुनेछ, तर जसमाथि त्यो खस्छ त्यसले त्यसलाई धुलोपिठो पार्नेछ ।”
ಆ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.
19 त्यसकारण, शास्त्री र मुख्य पुजारीहरूले त्यति नै बेला उहाँलाई पक्रन खोजे । किनकि तिनीहरूलाई थाहा भयो कि उहाँले यो दृष्टान्त तिनीहरूकै विरुद्धमा भन्नुभएको थियो । तर तिनीहरू मानिसहरूसँग डराउँथे ।
ಅದೇ ಗಳಿಗೆಯಲ್ಲಿ ನಿಯಮ ಬೋಧಕರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸುವುದಕ್ಕೆ ಹವಣಿಸಿದರು. ಏಕೆಂದರೆ ಯೇಸು ತಮಗೆ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದ್ದಾರೆಂದು ಅವರು ತಿಳಿದುಕೊಂಡರು. ಆದರೂ ಅವರು ಜನರಿಗೆ ಭಯಪಟ್ಟರು.
20 तिनीहरूले मौका हेर्न लागे र येशूले भन्नुभएको कुरामा केही गलत साबित भए उहाँलाई फसाएर अधिकारीहरूको हातमा सुम्पिदिने नियतले तिनीहरूले धर्मी भई टोपल्ने जासुसहरूलाई उहाँकहाँ पठाए ।
ಅವರು ಯೇಸುವನ್ನು ಹೊಂಚಿ ನೋಡುತ್ತಾ, ಮಾತಿನಲ್ಲಿ ಅವರನ್ನು ಸಿಕ್ಕಿಸುವಂತೆ ಅಧಿಪತಿಗೂ ಅಧಿಕಾರಕ್ಕೂ ಒಪ್ಪಿಸಿಕೊಡಲು, ನೀತಿವಂತರೆಂದು ನಟಿಸುವ ಗೂಢಚಾರರನ್ನು ಕಳುಹಿಸಿದರು.
21 उनीहरूले उहाँलाई सोधे, “गुरुज्यू, हामी जान्दछौँ कि तपाईं ठिक बोल्नुहुन्छ र ठिक सिकाउनुहुन्छ र कसैको पक्षपात गर्नुहुन्न तर परमेश्वरको मार्गको सत्यता सिकाउनुहुन्छ ।
ಅವರು ಯೇಸುವಿಗೆ, “ಗುರುವೇ, ನೀವು ಮುಖ ದಾಕ್ಷಿಣ್ಯವಿಲ್ಲದೆ ಸರಿಯಾಗಿ ಬೋಧಿಸುತ್ತೀರಿ ಮತ್ತು ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವರಾಗಿದ್ದೀರೆಂದು ನಾವು ಬಲ್ಲೆವು.
22 हामीले कैसरलाई कर तिर्नु उचित छ कि छैन?”
ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ನಮಗೆ ಮೋಶೆಯ ನಿಯಮಕ್ಕೆ ಅನುಸಾರವಾದದ್ದೋ?” ಎಂದು ಕೇಳಿದರು.
23 येशूले उनीहरूको धूर्त्याइँलाई बुझेर भन्नुभयो,
ಆದರೆ ಯೇಸು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ,
24 “मलाई एउटा सिक्का देखाओ, यसमा कसको नाम र चित्र खोपिएको छ?” उनीहरूले भने, “कैसरको ।”
“ಒಂದು ಬೆಳ್ಳಿ ನಾಣ್ಯವನ್ನು ತೋರಿಸಿರಿ. ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಅವರನ್ನು ಕೇಳಲು ಅವರು, “ಕೈಸರನದು,” ಎಂದರು.
25 उहाँले उनीहरूलाई भन्नुभयो, “त्यसो भए जे कैसर को हो, कैसरलाई देओ र जे परमेश्वरको हो परमेश्वरलाई देओ ।”
ಆಗ ಯೇಸು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೂ ದೇವರದ್ದನ್ನು ದೇವರಿಗೂ ಕೊಡಿರಿ,” ಎಂದರು.
26 मानिसहरूको सामुन्ने उहाँले बोल्नुभएका कुरामा शास्त्री र मुख्य पुजारीहरूले उहाँलाई फसाउन सकेनन् । उहाँको जवाफमा उनीहरू छक्क परे र केही पनि भन्न सकेनन् ।
ಯೇಸು ಜನರ ಮುಂದೆ ಬಹಿರಂಗವಾಗಿ ಹೇಳಿದ ಮಾತಿನಲ್ಲಿ ಅವರು ತಪ್ಪು ಕಂಡುಹಿಡಿಯಲಾರದೆ ಹೋದರು. ಯೇಸುವಿನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಾದರು.
27 त्यसपछि मृतकहरूबाट पुनरुत्थान हुँदैन भन्ने सदूकीहरू उहाँकहाँ आए,
ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು, ಯೇಸುವಿನ ಬಳಿಗೆ ಬಂದು ಅವರಿಗೆ,
28 र उहाँलाई सोधे, “गुरुज्यू, मोशाले हामीलाई लेखिदिएका थिए, कि कुनै मानिसको विवाहित दाजु निसन्तान भयो भने भाइले त्यसकी पत्नीलाई विवाह गरी दाजुको लागि सन्तान खडा गरिदिनुपर्छ ।
“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಸಹೋದರನು ಅವನ ಪತ್ನಿಯನ್ನು ಮದುವೆಯಾಗಿ ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆ ನಮಗೆ ಬರೆದಿಟ್ಟಿದ್ದಾನೆ.
29 सात भाइ थिए । जेठोले एउटी पत्नी ल्यायो र निसन्तान मर्यो
ಹೀಗೆ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಆ ಸ್ತ್ರೀಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು.
30 अनि माहिलाले पनि त्यसलाई विवाह गर्यो र निसन्तान मर्यो ।
ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತನಾದನು.
31 साहिँलाले पनि त्यसलाई विवाह गर्यो अनि त्यसरी नै ती सातै जना निसन्तान मरे ।
ಮೂರನೆಯವನು ಆಕೆಯನ್ನು ಮದುವೆಯಾದನು, ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ನಿಧನರಾದರು.
32 पछिबाट त्यो स्त्री पनि मरी ।
ಕೊನೆಗೆ, ಆ ಸ್ತ್ರೀಯು ಸಹ ಮರಣಹೊಂದಿದಳು.
33 यसकारण, मृतकबाट पुनरुत्थान हुँदा त्यो स्त्री तिनीहरूमध्ये कसकी पत्नी हुनेछे? किनकि ती सातै जनाले त्यसलाई पत्नीको रूपमा लिएका थिए ।”
ಹಾಗಾದರೆ, ಪುನರುತ್ಥಾನದಲ್ಲಿ ಅವರು ಜೀವಂತವಾಗಿ ಎದ್ದಾಗ ಅವರಲ್ಲಿ ಆಕೆಯು ಯಾರ ಪತ್ನಿಯಾಗಿರುವಳು? ಏಕೆಂದರೆ ಏಳುಮಂದಿಯೂ ಅವಳನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದರು.
34 येशूले तिनीहरूलाई भन्नुभयो, “यस युगका मानिसहरू विवाह गर्छन् र विवाह गरेर पठाइन्छन् । (aiōn )
ಅದಕ್ಕೆ ಯೇಸು ಉತ್ತರವಾಗಿ, “ಈ ಲೋಕದ ಜನರು ಮದುವೆ ಮಾಡಿಕೊಳ್ಳುತ್ತಾರೆ. ಮದುವೆ ಮಾಡಿಕೊಡುತ್ತಾರೆ. (aiōn )
35 तर मृतकबाट जीवित भई उठ्न र अनन्त जीवन प्राप्त गर्न योग्य ठहरिनेहरूले न विवाह गर्दछन् न त विवाह गरेर पठाइन्छन् । (aiōn )
ಆದರೆ ಮುಂಬರುವ ಲೋಕದಲ್ಲಿ ಸತ್ತವರು ಪುನರುತ್ಥಾನವನ್ನು ಹೊಂದಿ, ಯೋಗ್ಯರೆಂದು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. (aiōn )
36 तिनीहरू फेरि मर्दैनन्, किनभने तिनीहरू स्वर्गदूत समान हुन् र पुनरुत्थानका सन्तान भएकाले परमेश्वरका सन्तान हुन् ।
ಅವರು ಇನ್ನೆಂದಿಗೂ ಸಾಯುವುದಿಲ್ಲ. ಏಕೆಂದರೆ ಅವರು ಪುನರುತ್ಥಾನದ ಮಕ್ಕಳೂ ದೇವದೂತರಿಗೆ ಸರಿಸಮಾನರೂ ಆಗಿರುವುದರಿಂದ, ಅವರು ದೇವರ ಮಕ್ಕಳಾಗಿದ್ದಾರೆ.
37 तर मृतकहरू जीवित भई उठ्नेछन् भन्नेकुरा मोशाले पनि पोथ्राको विवरणमा परमप्रभुलाई अब्राहामका परमेश्वर, इसहाकका परमेश्वर र याकूबका परमेश्वर भनेर पुकार्दा देखाइदिए ।
ಆದರೆ ಉರಿಯುವ ಪೊದೆಯ ಬಳಿ ಕರ್ತದೇವರು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು,’ ಎಂದು ತಿಳಿಸಿ ಸತ್ತವರು ಏಳುತ್ತಾರೆಂಬದನ್ನು ಮೋಶೆಗೆ ವ್ಯಕ್ತಪಡಿಸಿದ್ದಾರೆ.
38 उहाँ मृतकहरूका परमेश्वर हुनुहुन्न, तर जीवितहरूका परमेश्वर हुनुहुन्छ, किनकि सबै उहाँकै निम्ति जिउँछन् ।”
ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ. ಏಕೆಂದರೆ ಎಲ್ಲರೂ ಅವರಿಗಾಗಿ ಜೀವಿಸುತ್ತಾರೆ,” ಎಂದರು.
39 अनि शास्त्रीहरूमध्ये कुनै-कुनैले भने, “गुरुज्यू, तपाईंले सही जवाफ दिनुभयो ।”
ಆಗ ನಿಯಮ ಬೋಧಕರಲ್ಲಿ ಕೆಲವರು ಪ್ರತ್ಯುತ್ತರವಾಗಿ, “ಬೋಧಕರೇ, ನೀವು ಸರಿಯಾಗಿ ಹೇಳಿದಿರಿ,” ಎಂದರು.
40 उनीहरू कसैले पनि उहाँलाई फेरि प्रश्न सोध्ने आँट गरेनन् ।
ಯಾರೂ ಯೇಸುವಿಗೆ ಯಾವ ಪ್ರಶ್ನೆಯನ್ನು ಕೇಳುವುದಕ್ಕೂ ಧೈರ್ಯಗೊಳ್ಳಲಿಲ್ಲ.
41 येशूले उनीहरूलाई भन्नुभयो, “ख्रीष्ट दाऊदका पुत्र हुन् भनेर तिनीहरूले कसरी भन्दछन्?
ಯೇಸು ಅವರಿಗೆ, “ಕ್ರಿಸ್ತನು ದಾವೀದನ ಪುತ್ರನೆಂದು ಜನರು ಹೇಳುವುದು ಹೇಗೆ?
42 किनकि भजनको पुस्तकमा दाऊद आफैँले भन्दछन्, परमप्रभुले मेरा प्रभुलाई भन्नुभयो, ‘तिमी मेरो दाहिने हातपट्टि बस,
ದಾವೀದನು ತಾನೇ ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಹೇಳಿದ್ದಾನೆ: “‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು
43 जबसम्म म तिम्रा शत्रुहरूलाई तिम्रो पाउदान तुल्याउँदिनँ ।’
ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕುಳಿತುಕೊಂಡಿರು.”’
44 यसकारण, दाऊदले ख्रीष्टलाई प्रभु भन्दछन् भने फेरि उनी कसरी दाऊदका पुत्र भए?”
ಆದಕಾರಣ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರು,’ ಎಂದು ಕರೆಯುವಾಗ, ಅವರು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು.
45 सबै मानिसहरूले सुन्ने गरी उहाँले आफ्ना चेलाहरूलाई भन्नुभयो,
ಜನರೆಲ್ಲರೂ ಕೇಳುತ್ತಿದ್ದಾಗ ಯೇಸು ತಮ್ಮ ಶಿಷ್ಯರಿಗೆ,
46 “शास्त्रीहरूदेखि होसियार रहो जो लामा वस्त्रहरूमा सजिएर बजारमा अभिवादन गरिएको मन पराउँछन् अनि सभाघर र भोजहरूमा प्रमुख स्थान चाहन्छन् ।
“ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಬಯಸುವವರಾಗಿದ್ದಾರೆ;
47 तिनीहरूले विधवाहरूको घर हडप्छन् र लामो-लामो प्रार्थना गरेर देखाउँछन् । तिनीहरूले नै अझै ठुलो दण्ड पाउनेछन् ।”
ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.