< मर्कूस 1 >
1 यो परमेश्वरको पुत्र प्रभु येशू ख्रीष्टको सुसमाचारको सुरुवात हो ।
ದೇವಪುತ್ರರಾದ ಯೇಸುಕ್ರಿಸ್ತರ ಸುವಾರ್ತೆಯ ಆರಂಭ.
2 जसरी यशैया अगमवक्ताको पुस्तकमा लेखिएको छ, “हेर, म मेरा समाचारवाहकलाई तिम्रोअगि पठाउँदै छु, जसले तिम्रो बाटो तयार पार्नेछ ।”
ಪ್ರವಾದಿ ಯೆಶಾಯನ ಗ್ರಂಥದಲ್ಲಿ: “ಇಗೋ, ನಿನ್ನ ಮುಂದೆ ನಾನು ನನ್ನ ದೂತನನ್ನು ಕಳುಹಿಸುತ್ತೇನೆ, ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”
3 “उजाड-स्थानमा कोही बोलाउनेको आवाज, ‘परमप्रभुको बाटो तयार पार, उहाँका बाटाहरू सिधा बनाओ’ ।”
“‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವವನ ಸ್ವರವದೆ.”
4 यूहन्ना उजाड-स्थानमा बप्तिस्मा दिँदै र पाप-क्षमाको निम्ति पश्चात्तापको बप्तिस्माको प्रचार गर्दै आए ।
ಎಂದು ಬರೆದಿಟ್ಟ ಪ್ರಕಾರ, ಸ್ನಾನಿಕನಾದ ಯೋಹಾನನು ಅರಣ್ಯದಲ್ಲಿ ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು, ಸಾರುತ್ತಾ ಬಂದನು.
5 यहूदियाको पुरै इलाकाबाट र यरूशलेमका सबै मानिस तिनीकहाँ गए । तिनीहरूले आ-आफ्ना पापहरू स्वीकार गर्दै तिनीबाट यर्दन नदीमा बप्तिस्मा लिए ।
ಯೂದಾಯ ಪ್ರಾಂತದ ಎಲ್ಲಾ ಹಳ್ಳಿಗಳಿಂದ ಮತ್ತು ಯೆರೂಸಲೇಮ್ ನಗರದಿಂದ ಎಲ್ಲಾ ಜನರು ಅವನ ಬಳಿಗೆ ಬರುತ್ತಿದ್ದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
6 यूहन्नाले ऊँटको रौँबाट बनेको लुगा लगाउँथे र कम्मरमा छालाको पेटी बाँध्थे र तिनले सलहहरू र वन मह खान्थे ।
ಯೋಹಾನನು ಒಂಟೆಯ ಕೂದಲಿನ ಉಡುಪನ್ನು ಧರಿಸಿ, ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
7 उनले प्रचार गरे र भने, “मपछि कोही आउँदै हुनुहुन्छ जो मभन्दा शक्तिशाली हुनुहन्छ, र म त उहाँको चप्पलको फित्ता फुकाल्न निहुरन योग्य पनि छैन ।
ಅವನು, “ನನಗಿಂತ ಶಕ್ತರೊಬ್ಬರು ನನ್ನ ನಂತರ ಬರುತ್ತಾರೆ, ಅವರ ಪಾದರಕ್ಷೆಗಳ ಪಟ್ಟಿಗಳನ್ನು ದಾಸನಂತೆ ಬಾಗಿ ಬಿಚ್ಚುವುದಕ್ಕೂ ನಾನು ಅರ್ಹನಲ್ಲ.
8 मैले तिमीहरूलाई पानीले बप्तिस्मा दिएँ, तर उहाँले तिमीहरूलाई पवित्र आत्माले बप्तिस्मा दिनुहुनेछ ।”
ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಅವರು ನಿಮಗೆ ಪವಿತ್ರಾತ್ಮರಲ್ಲಿಯೇ ದೀಕ್ಷಾಸ್ನಾನ ಮಾಡಿಸುವರು,” ಎಂದು ಘೋಷಿಸುತ್ತಿದ್ದನು.
9 ती दिनहरूमा यसो भयो, कि येशू गालीलको नासरतबाट आउनुभयो, र यूहन्नाद्वारा यर्दन नदीमा बप्तिस्मा लिनुभयो ।
ಹೀಗಿರುವಲ್ಲಿ, ಒಂದು ದಿನ ಯೇಸು ಗಲಿಲಾಯ ಪ್ರಾಂತದ ನಜರೇತ್ ಎಂಬ ಪಟ್ಟಣದಿಂದ ಬಂದು, ಯೊರ್ದನ್ ನದಿಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.
10 जसै येशू पानीबाट निस्कनुभयो, उहाँले स्वर्ग उघ्रिएको र पवित्र आत्मा ढुकुरजस्तै उहाँमाथि आइरहनुभएको देख्नुभयो ।
ಯೇಸು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಆಕಾಶವು ತೆರೆದು, ಪವಿತ್ರಾತ್ಮರು ಪಾರಿವಾಳದಂತೆ ತಮ್ಮ ಮೇಲೆ ಇಳಿದು ಬರುವುದನ್ನು ಕಂಡರು.
11 अनि स्वर्गबाट यस्तो आवाज आयो, “तिमी मेरा प्रिय पुत्र हौ । तिमीसँग म अति प्रसन्न छु ।”
ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.
12 त्यसपछि पवित्र आत्माले उहाँलाई उजाड-स्थानमा जान बाध्य गराउनुभयो ।
ಕೂಡಲೇ ಪವಿತ್ರಾತ್ಮ ದೇವರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.
13 उहाँ शैतानद्वारा परीक्षित हुँदै चालिस दिनसम्म उजाड-स्थानमा रहनुभयो । उहाँ जङ्गली जनावरहरूसँग रहनुभयो र स्वर्गदूतहरूले उहाँको सेवा गरे ।
ಯೇಸು ಅಲ್ಲಿ ನಲವತ್ತು ದಿನಗಳು, ಸೈತಾನನಿಂದ ಶೋಧನೆಗೆ ಒಳಗಾದರು. ಕಾಡುಮೃಗಗಳೊಡನೆ ಅರಣ್ಯದಲ್ಲಿ ಇದ್ದು, ದೇವದೂತರಿಂದ ಉಪಚಾರ ಪಡೆದರು.
14 अब यूहन्ना पक्राउ परेपछि परमेश्वरको सुसमाचार प्रचार गर्दै येशू गालीलमा आउनुभयो ।
ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು:
15 र भन्नुभयो, “समय पुरा भएको छ, र परमेश्वरको राज्य नजिकै छ । पश्चात्ताप गर र सुसमाचारमा विश्वास गर ।
“ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ,” ಎಂದು ಹೇಳಿದರು.
16 गालील समुद्र भएर जानुहुँदा उहाँले सिमोन र उनका भाइ अन्द्रियासलाई जाल हानिरहेको देख्नुभयो, किनभने तिनीहरू मछुवाहरू थिए ।
ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಸೀಮೋನನು ಮತ್ತು ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.
17 येशूले तिनीहरूलाई भन्नुभयो, “आओ, मेरो पछि लाग र म तिमीहरूलाई मानिसहरूका मछुवाहरू बनाउनेछु ।”
ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.
18 तुरुन्तै तिनीहरूले जालहरू छोडे र येशूको पछि लागे ।
ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
19 जसै येशू हिँडेर अलि अगाडि पुग्नुभयो, उहाँले जब्दियाका पुत्र याकूब र उनका भाइ यूहन्नालाई देख्नुभयो; तिनीहरू डुङ्गामा बसेर जालहरू मर्मत गरिरहेका थिए ।
ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಕಂಡರು. ಅವರು ತಮ್ಮ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
20 उहाँले तिनीहरूलाई बोलाउनुभयो, र तिनीहरूले तिनीहरूको पितालाई भाडाका नोकरहरूसँग डुङ्गामा नै छोडे, र तिनीहरू उहाँको पछि लागे ।
ಕೂಡಲೇ ಯೇಸು ಅವರನ್ನು ಕರೆಯಲು, ಅವರು ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
21 र उहाँहरू कफर्नहुममा आउनुभयो, अनि शबाथ-दिनमा येशू सभाघरमा जानुभयो र शिक्षा दिनुभयो ।
ಅವರು ಕಪೆರ್ನೌಮಿಗೆ ಹೋದರು, ಕೂಡಲೇ ಸಬ್ಬತ್ ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು.
22 तिनीहरू उहाँको शिक्षामा छक्क परे, किनकि उहाँले तिनीहरूलाई शास्त्रीहरूले जस्तो होइन, तर अधिकार भएको व्यक्तिले जस्तै सिकाइरहनुभएको थियो ।
ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಯೇಸು ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.
23 त्यस बेला सभाघरमा एक जना अशुद्ध आत्मा भएको मानिस थियो । त्यो चिच्च्यायो र
ಆ ಸಮಯದಲ್ಲಿ ಸಭಾಮಂದಿರದೊಳಗೆ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.
24 भन्यो, “हे नासरतका येशू, तपाईंसँग हाम्रो के सरोकार? के तपाईं हामीलाई नाश पार्न आउनुभएको हो? तपाईं को हुनुहुन्छ भनी म चिन्छु । तपाईं परमेश्वरका पवित्र जन हुनुहुन्छ ।”
ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.
25 येशूले भूतलाई हकार्नुभयो र भन्नुभयो, “चुप लाग्, र त्यसबाट निस्की आइज!”
ಆಗ ಯೇಸು, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದು ಗದರಿಸಿದರು.
26 अनि अशुद्ध आत्माले त्यसलाई पछार्यो, र त्यो अशुद्ध आत्मा ठुलो स्वरमा चिच्च्याउँदै त्यसबाट निस्कियो ।
ಅಶುದ್ಧಾತ್ಮವು ಅವನನ್ನು ಉಗ್ರವಾಗಿ ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂತು.
27 अनि सबै मानिस छक्क परेर एक आपसमा भन्न लागे, “यो के हो? अधिकारसहितको एउटा नयाँ शिक्षा! उहाँले अशुद्ध आत्माहरूलाई पनि आज्ञा गर्नुहुन्छ र तिनीहरूले उहाँको आज्ञा मान्छन्!”
ಜನರೆಲ್ಲರು ಇದನ್ನು ಕಂಡು ವಿಸ್ಮಯಗೊಂಡು, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ಅಶುದ್ಧಾತ್ಮಗಳಿಗೆ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
28 उहाँको बारेमा भएको समाचार तुरुन्तै गालीलका सबै क्षेत्रमा जताततै फैलियो ।
ಕೂಡಲೇ ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿನ ಪ್ರಾಂತದಲ್ಲೆಲ್ಲಾ ಹಬ್ಬಿತು.
29 सभाघरबाट बाहिर निस्कनुभएपछि उहाँहरू याकूब र यूहन्नासँगै सिमोन र अन्द्रियासको घरमा जानुभयो ।
ಅವರು ಸಭಾಮಂದಿರವನ್ನು ಬಿಟ್ಟ ಕೂಡಲೇ, ಯಾಕೋಬ ಯೋಹಾನರೊಡನೆ ಸೀಮೋನ ಅಂದ್ರೆಯರ ಮನೆಗೆ ಹೋದರು.
30 अब सिमोनकी सासू जरो आएर सुतिरहेकी थिइन् । तिनीहरूले तिनको विषयमा येशूलाई बताए ।
ಅಲ್ಲಿ ಸೀಮೋನನ ಅತ್ತೆಯು ಜ್ವರದಿಂದ ಮಲಗಿದ್ದಳು. ಕೂಡಲೇ ಅವರು ಆಕೆಯ ವಿಷಯವಾಗಿ ಯೇಸುವಿಗೆ ತಿಳಿಸಿದರು.
31 यसकारण, उहाँ आउनुभयो र तिनको हातमा समाएर तिनलाई उठाउनुभयो; जरोले तिनलाई छोडिहाल्यो, र तिनले उहाँहरूको सेवा गर्न थालिन् ।
ಯೇಸು ಆಕೆಯ ಬಳಿಗೆ ಬಂದು, ಕೈಹಿಡಿದು ಎಬ್ಬಿಸಿದರು. ಜ್ವರವು ಆಕೆಯನ್ನು ಬಿಟ್ಟುಹೋಯಿತು ಮತ್ತು ಆಕೆಯು ಅವರಿಗೆ ಉಪಚರಿಸಿದಳು.
32 त्यस साँझ घाम अस्ताएपछि तिनीहरूले भूत लागेका र बिरामी भएका सबैलाई उहाँकहाँ ल्याए ।
ಆ ಸಂಜೆ ಸೂರ್ಯಾಸ್ತವಾದ ಮೇಲೆ ಜನರು ಅಸ್ವಸ್ಥರಾದವರನ್ನು ಮತ್ತು ದೆವ್ವಪೀಡಿತರನ್ನು ಯೇಸುವಿನ ಬಳಿಗೆ ಕರೆತಂದರು.
33 सारा सहर नै त्यो घरको ढोकामा भेला भए ।
ಇಡೀ ಊರಿನವರು ಕೂಡಿ ಆ ಮನೆಯ ಬಾಗಿಲಿನ ಬಳಿ ಬಂದರು.
34 उहाँले विभिन्न प्रकारका रोगी र बिमारीहरूलाई निको पार्नुभयो र धेरै भूत निकाल्नुभयो, तर उहाँले भूतहरूलाई बोल्न दिनुभएन, किनकि तिनीहरूले उहाँलाई चिन्थे ।
ಯೇಸು ವಿವಿಧ ರೋಗಗಳಿಗೆ ಒಳಗಾದ ಅನೇಕರನ್ನು ಸ್ವಸ್ಥಪಡಿಸಿ, ಅನೇಕ ದೆವ್ವಗಳನ್ನು ಓಡಿಸಿದರು. ಆದರೆ ತಾನು ಯಾರೆಂದು ಆ ದೆವ್ವಗಳಿಗೆ ತಿಳಿದಿದ್ದರಿಂದ ಯೇಸು ಅವುಗಳಿಗೆ ಮಾತನಾಡಲು ಅನುಮತಿಸಲಿಲ್ಲ.
35 उहाँ बिहान सबेरै अँध्यारो हुँदा नै उठ्नुभयो; र उहाँ एकान्त ठाउँमा जानुभयो, र त्यहाँ प्रार्थना गर्नुभयो ।
ಬೆಳಗಾಗುವ ಮೊದಲೇ, ಇನ್ನೂ ಕತ್ತಲಿರುವಾಗ, ಯೇಸು ಎದ್ದು ಏಕಾಂತ ಸ್ಥಳಕ್ಕೆ ಹೊರಟುಹೋಗಿ, ಅಲ್ಲಿ ಪ್ರಾರ್ಥನೆ ಮಾಡುತ್ತಿದ್ದರು.
36 सिमोन र तिनीसँग भएकाहरूले उहाँलाई खोजे ।
ಆಗ ಸೀಮೋನನು ಮತ್ತು ಅವನ ಸಂಗಡಿಗರು ಯೇಸುವನ್ನು ಹುಡುಕಿಕೊಂಡು ಹೋದರು.
37 तिनीहरूले उहाँलाई भेट्टाए र भने, “सबैले तपाईंलाई खोजिरहेका छन् ।”
ಯೇಸುವನ್ನು ಕಂಡ ಮೇಲೆ, “ಎಲ್ಲರೂ ನಿಮ್ಮನ್ನು ಎದುರು ನೋಡುತ್ತಿದ್ದಾರೆ,” ಎಂದು ಹೇಳಿದರು.
38 उहाँले भन्नुभयो, “हामी कतै वरिपरि सहरहरूमा जाऔँ, ताकि मैले त्यहाँ पनि प्रचार गर्न सकूँ । त्यसैको लागि म यहाँ आएँ ।
ಯೇಸು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ. ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು. ನಾನು ಬಂದಿರುವುದು ಇದಕ್ಕಾಗಿಯೇ,” ಎಂದು ಹೇಳಿದರು.
39 उहाँ तिनीहरूको सभाघरमा प्रचार गर्दै र भूतहरू निकाल्दै सारा गालीलभरि जानुभयो ।
ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.
40 एक जना कुष्ठरोगी उहाँकहाँ आयो । त्यसले उहाँलाई बिन्ती गरिरहेको थियो; त्यसले घुँडा टेक्यो र उहाँलाई भन्यो, “यदि तपाईंले चाहनुभयो भने, तपाईंले मलाई शुद्ध गर्न सक्नुहुन्छ ।”
ಕುಷ್ಠರೋಗಿಯಾಗಿದ್ದ ಒಬ್ಬನು ಯೇಸುವಿನ ಬಳಿಗೆ ಬಂದು, ಮೊಣಕಾಲೂರಿ, “ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.
41 येशू दयाले भरिनुभयो र आफ्नो हात फैलाएर त्यसलाई छुनुभयो, अनि भन्नुभयो, “म चाहन्छु । तिमी शुद्ध होइजाऊ ।”
ಯೇಸು ಕನಿಕರಪಟ್ಟು, ತಮ್ಮ ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು.
42 तुरुन्तै कुष्ठ रोगले त्यसलाई छोड्यो र त्यो शुद्ध भयो ।
ತಕ್ಷಣವೇ ಕುಷ್ಠರೋಗವು ಹೋಗಿ ಅವನು ಶುದ್ಧನಾದನು.
43 येशूले त्यसलाई कडाइका साथ चेतावनी दिनुभयो र त्यसलाई पठाउनुभयो ।
ಯೇಸು ಅವನಿಗೆ, “ನೋಡು, ಇದನ್ನು ಯಾರಿಗೂ ಹೇಳಬೇಡ. ಆದರೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿ, ಮೋಶೆಯು ಆಜ್ಞಾಪಿಸಿದ್ದನ್ನು ಶುದ್ಧತ್ವಕ್ಕಾಗಿ ಸಮರ್ಪಿಸು ಇದು ಅವರಿಗೆ ಸಾಕ್ಷಿಯಾಗಿರಲಿ,” ಎಂದು ಅವನಿಗೆ ಕಟ್ಟುನಿಟ್ಟಾಗಿ ಎಚ್ಚರಿಸಿ, ಕೂಡಲೇ ಅವನನ್ನು ಕಳುಹಿಸಿಬಿಟ್ಟರು.
44 उहाँले त्यसलाई भन्नुभयो, “कसैलाई केही नभन, तर जाऊ र पुजारीकहाँ आफैँलाई देखाऊ र मोशाले आज्ञा गरेबमोजिम तिनीहरूलाई गवाहीको रूपमा तिम्रो शुद्धिकरणको निम्ति बलि चढाऊ ।”
45 तर त्यो व्यक्ति गयो र सबैलाई भन्न थाल्यो अनि कुरा यति धेरै फैलियो, कि येशू कुनै पनि सहरमा खुलमखुला जान सक्नुभएन । यसकारण, उहाँ एकान्त ठाउँहरूमा बस्नुभयो, र मानिसहरू उहाँकहाँ आए ।
ಆದರೆ ಅವನು ಹೋಗಿ ಈ ವಿಷಯವನ್ನು ಎಲ್ಲಾ ಕಡೆಗಳಲ್ಲಿ ಹಬ್ಬಿಸಿದನು. ಇದರ ಪರಿಣಾಮವಾಗಿ ಯೇಸು ಯಾವ ಊರೊಳಗೂ ಬಹಿರಂಗವಾಗಿ ಪ್ರವೇಶಿಸಲಾಗದೆ, ನಿರ್ಜನ ಪ್ರದೇಶಗಳಲ್ಲಿರುತ್ತಿದ್ದರು. ಆದರೂ ಜನರು ಎಲ್ಲಾ ಕಡೆಗಳಿಂದ ಯೇಸುವಿನ ಬಳಿಗೆ ಬರುತ್ತಿದ್ದರು.