< मर्कूस 6 >
1 उहाँ त्यहाँबाट जानुभयो र आफ्नो गाउँमा आउनुभयो, अनि चेलाहरूले उहाँलाई पछ्याए ।
೧ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
2 जब विश्रामको दिन आयो उहाँले सभाघरमा सिकाउनुभयो । धेरैले उहाँको शिक्षा सुने र छक्क परे । तिनीहरूले भने, “यिनले यी शिक्षाहरू कहाँबाट पाए? यिनलाई कस्तो बुद्धि दिइएको रहेछ? यिनका हातले गरेका यी कस्ता अचम्मका कामहरू हुन्?”
೨ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ?
3 “के यिनी सिकर्मी होइनन् र? के यिनी मरियमका पुत्र अनि याकूब, योसेफ, यहूदा र सिमोनका दाजु होइनन् र? के यिनका बहिनीहरू हामीसित छैनन् र?” र तिनीहरू येशूद्वारा क्रुद्ध पारिए ।
೩ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.
4 येशूले तिनीहरूलाई भन्नुभयो, “एउटा अगमवक्ताको आफ्नो गाउँ, नातेदार र आफ्नो घर परिवारबाहेक कहीँ पनि अनादर हुँदैन ।”
೪ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು.
5 केही बिरामी मानिसहरूमा हात राखेर निको बनाउनुबाहेक त्यहाँ उहाँले कुनै शक्तिशाली कामहरू गर्न सक्नुभएन ।
೫ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.
6 तिनीहरूको अविश्वासले उहाँलाई अच्चम्मित तुल्यायो । अनि उहाँ गाउँहरूभरि शिक्षा दिँदै हिँड्नुभयो ।
೬ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.
7 उहाँले बाह्र जनालाई बोलाउनुभयो, र अशुद्ध आत्माहरूमाथि अधिकार दिनुभयो र दुई-दुई जना गरी तिनीहरूलाई पठाउनुभयो ।
೭ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,
8 र उहाँले यात्रामा एउटा लट्ठीबाहेक न रोटी न झोला र कम्मरमा पैसा नै बोक्न दिनुभयो ।
೮“ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ.
9 तर उहाँले चप्पल लगाउन र दुई ओटा दौरा नलगाउनलाई निर्देशन दिनुभयो ।
೯ಚಪ್ಪಲಿಗಳನ್ನು ಹಾಕಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ” ಎಂದು ಅಪ್ಪಣೆಕೊಟ್ಟನು.
10 उहाँले तिनीहरूलाई भन्नुभयो, “जब तिमीहरू कुनै घरभित्र पस्छौ, त्यो ठाउँ नछोडेसम्म त्यहीँ बस ।
೧೦ಇದಲ್ಲದೆ ಆತನು ಅವರಿಗೆ, “ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ.
11 यदि कुनै नगरले तिमीहरूलाई स्वागत गरेन भने त्यो ठाउँ छोड, र तिनीहरूका निम्ति गवाहीको रूपमा आफ्नो पैतालाको धुलो टकटकाइदिनू ।”
೧೧ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.
12 तिनीहरू त्यहाँबाट बाहिर गए र मानिसहरू आफ्नो पापबाट फर्केर आउनुपर्छ भनी घोषणा गरे ।
೧೨ಅವರು ಹೊರಟು ಹೋಗಿ ಜನರಿಗೆ, “ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕು” ಎಂದು ಸಾರಿ ಹೇಳಿದರು.
13 तिनीहरूले धेरै भूतहरू निकाले, धेरै बिरामीहरूलाई तेलले अभिषेक गरे र निको पारे ।
೧೩ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.
14 हेरोद राजाले यो सुने, किनभने येशूको नाउँ प्रसिद्ध भएको थियो । केहीले भनिरहेका थिए, “बप्तिस्मा-दिने यूहन्ना मृत्युबाट जीवित भई उठे । त्यसैले, यी आश्चर्यकर्महरू उहाँद्वारा हुँदै छन् ।”
೧೪ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.
15 अरूहरूले भने, “यिनी एलिया हुन्”, अझ हरूहरूले भने, “यिनी प्राचीन समयका एक जना अगमवक्ताहरूमध्ये एक हुन् ।”
೧೫ಕೆಲವರು, “ಇವನು ಎಲೀಯನೆಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ” ಹೇಳಿದರು.
16 तर जब हेरोदले यो सुने, तिनले भने, “यूहन्ना, जसको मैले टाउको कटाएको थिएँ, तिनी जीवित भई उठेछन्!”
೧೬ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು.
17 किनभने हेरोदले यूहन्नालाई हेरोदियास (तिनको भाइकी पत्नी) को कारण गिरफ्तार गर्न र कैदमा हाल्न लगाए, किनभने तिनले उनलाई विवाह गरेका थिए ।
೧೭ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.
18 किनभने यूहन्नाले हेरोदलाई भने, “आफ्नो भाइकी पत्नीलाई विवाह गर्न तिनलाई उचित छैन भनेका थिए ।”
೧೮ಇದರ ನಿಮಿತ್ತ ಯೋಹಾನನು ಹೆರೋದನಿಗೆ, “ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ” ಎಂದು ಹೇಳುತ್ತಿದ್ದನು.
19 तर हेरोदियासले वैरभाव राखेकि थिइन् र तिनलाई मार्न चाहन्थिन्, तर सकेकी थिइनन्,
೧೯ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.
20 किनभने हेरोद यूहन्नासित डराउँथे; तिनी धर्मी र पवित्र जन थिए भन्ने तिनलाई थाहा थियो, अनि हेरोदले उनलाई सुरक्षित राखे । तिनको प्रचार सुन्दा हेरोद अशन्त हुन्थे, तरै पनि खुसीसाथ सुन्थे ।
೨೦ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.
21 त्यसपछि एउटा उपयुक्त मौका मिल्यो । हेरोदले तिनको जन्म दिनमा आफ्ना भारदारहरू, कप्तानहरू र गालीलका अगुवाहरूलाई भोज दिए ।
೨೧ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,
22 हेरोदियासकी छोरी आफैँ आइन् र तिनीहरूको लागि नाचिन् अनि तिनले हेरोद र उनका पाहुनाहरूलाई प्रशन्न तुल्याइन् । राजाले त्यस केटीलाई भने, “तिमीलाई जे इच्छा लाग्छ सो माग, म तिमीलाई दिनेछु ।”
೨೨ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.
23 तिनले शपथ खएर भने, “तिमीले मसित जे माग्छौ, म तिमीलाई मेरो राज्यको आधा भागसम्म पनि दिनेछु ।”
೨೩ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.
24 तिनी बाहिर निस्किन् र आफ्नी आमालाई भनिन्, “म तिनीसित के मागौँ?” र तिनले भनिन्, “बप्तिस्मा-दिने यूहन्नाको शिर ।”
೨೪ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು.
25 तिनी तुरुन्तै राजाकहाँ आइन् र यसो भन्दै मागिन्, “मलाई झट्टै बप्तिस्मा-दिने यूहन्नाको शिर थालीमा दिनुहोस् भन्ने म चाहन्छु ।”
೨೫ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು.
26 राजा निकै दुःखित भए, तर आफ्ना पाहुनाहरू र शपथको कारण राजाले तिनको बिन्ती इन्कार गर्न सकेनन् ।
೨೬ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.
27 त्यसैले, राजाले आफ्ना रक्षकहरूमध्ये एक जना सिपाहीलाई यूहन्नाको शिर ल्याउने आदेश दिएर पठाए । सुरक्षाकर्मी गए र झ्यालखानामा उनको टाउको काटे ।
೨೭ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು;
28 सिपाहीले थालमा उनको टाउको ल्याए र ती केटीलाई दिए, र ती केटीले आफ्नी आमालाई दिइन् ।
೨೮ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು.
29 त्यो सुनेर यूहन्नाका चेलाहरू आए, र उनको लासलाई चिहानमा राखे ।
೨೯ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.
30 अनि प्रेरितहरू येशूको वरिपरि भेला भए, र तिनीहरूले गरेका र सिकाएका सबै कुरा उहाँलाई बताए ।
೩೦ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು.
31 उहाँले तिनीहरूलाई भन्नुभयो, “तिमीहरू आफैँ निर्जन स्थानमा आओ र केही समय आराम गर ।” किनभने धेरै जना आउने र जाने गरिरहेका थिए र तिनीहरूसँग खाना खाने समय पनि थिएन ।
೩೧ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.
32 त्यसैले, उहाँहरू डुङ्गा चढेर निर्जन स्थानतिर जानुभयो ।
೩೨ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು.
33 तर तिनीहरूले उहाँहरू गइरहेको देखे अनि उहाँहरूलाई चिने र तिनीहरू सबै नगरबाट दौडेर उहाँहरूभन्दा अगि नै त्यस ठाउँमा पुगे ।
೩೩ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು.
34 जब उहाँहरू समुयद्र तटमा आउनुभयो, उहाँले ठुलो भिड देख्नुभयो, र उहाँले तिनीहरूलाई टिठ्याउनुभयो, किनकि उनीहरू गोठालाविनाका भेडाहरूजस्तै थिए । अनि उहाँले धेरै कुरा सिकाउन थाल्नुभयो ।
೩೪ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.
35 जब ढिला भयो, उहाँका चेलाहरू उहाँकहाँ आए र भने “यो निर्जन स्थान हो र समय गइसकेको छ ।
೩೫ಅಷ್ಟರಲ್ಲಿ ಸಂಜೆ ಆಗಿದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು, “ಇದು ನಿರ್ಜನ ಸ್ಥಳ, ಈಗ ಹೊತ್ತು ಬಹಳವಾಯಿತು;
36 उनीहरूलाई पठाउनुहोस्, ताकि उनीहरू नजिकैको गाउँघरतिर जाऊन् र उनीहरूका निम्ति केही खानेकुराहरू किन्न सकून् ।”
೩೬ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ” ಎಂದು ಹೇಳಿದರು.
37 तर उहाँले जवाफ दिनुभयो र तिनीहरूलाई भन्नुभयो, “तिमीहरूले नै उनीहरूलाई केही खानेकुरा देओ ।” तिनीहरूले उहाँलाई भने, “के हामी दुई सय दिनारी वराबरको रोटी किन्न जाऊँ र उनीहरूलाई खान दिऊँ?”
೩೭ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು
38 उहाँले तिनीहरूलाई भन्नुभयो, “तिमीहरूसँग कतिवटा रोटी छन्? जाओ र हेर ।” जब तिनीहरूले पत्ता लगाए, तिनीहरूले भने, “पाँच रोटी र दुई माछा छन् ।”
೩೮ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಅಂದನು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ” ಅಂದರು.
39 उहाँले सबै मानिसलाई हरियो घाँसमाथि समूह-समूहमा मिलेर बस्ने आज्ञा गर्नुभयो ।
೩೯ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ,
40 उनीहरू सय र पचासको समूह- समूहमा बसे ।
೪೦ಜನರು ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು.
41 जब उहाँले पाँच रोटी र दुईवटा माछा लिनुभयो, स्वर्गतिर हेरर आशिष् दिनुभयो, र भाँच्नुभयो अनि त्यो भिडलाई बाँडिदिन चेलाहरूलाई दिनुभयो । अनि उहाँले दुईवटा माछा पनि सबै जनालाई बाँडिदिनुभयो ।
೪೧ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.
42 तृप्त नहुन्जेल उनीहरू सबै जनाले खाए ।
೪೨ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು.
43 तिनीहरूले बाह्र डालाभरी टुक्रा रोटीहरू बटुले र माछाका टुक्राहरू पनि बटुले ।
೪೩ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು.
44 त्यहाँ रोटी खानेहरू पाँच हजार जना थिए ।
೪೪ಊಟಮಾಡಿದವರು ಐದು ಸಾವಿರ ಮಂದಿ ಗಂಡಸರು.
45 उहाँका चेलाहरूलाई डुङ्गामा चढ्न लगाएर उहाँले भिडलाई पारिपट्टि बेथसेदातिर उहाँभन्दा अगि जना लगाउनुभयो ।
೪೫ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.
46 जब तिनीहरू गए, त्यसपछि उहाँ डाँडातिर प्रार्थना गर्न जानुभयो ।
೪೬ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.
47 साँझ पर्यो, र अब डुङ्गा समुद्रको बिचमा थियो, र उहाँ जमिनमा एकलै हुनुहुन्थ्यो ।
೪೭ಸಂಜೆಯಾದಾಗ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು.
48 तिनीहरूलाई डुङ्गा खियाउन गाह्रो भएको उहाँले देख्नुभयो, किनभने हावा उनीहरूको विपरीत दिशाबाट आइरहेको थियो । लगभग रातको चौथो पहरमा समुद्रमाथि हिँडेर उहाँ तिनीहरूकहाँ आउनुभयो, र तिनीहरूलाई उछिन्न चाहनुभयो ।
೪೮ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.
49 तर जब तिनीहरूले उहाँलाई समुद्रमाथि हिँडिरहनुभएको देखे, उहाँ भूत हुनुहन्थ्यो भनेर तिनीहरू चिच्च्याए,
೪೯ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು.
50 किनभने तिनीहरूले उहाँलाई देखे र भयभीत भए । अनि तुरुन्तै उहाँ तिनीहरूसँग बोल्नुभयो र तिनीहरूलाई भन्नुभयो, “साहसी होओ । म नै हुँ । नडराओ ।”
೫೦ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, “ಧೈರ್ಯವಾಗಿರಿ, ನಾನೇ, ಹೆದರಬೇಡಿರಿ” ಎಂದು ಹೇಳಿದನು.
51 उहाँ तिनीहरूसँगै डुङ्गामा चढ्नुभयो, र बतास चल्न छोड्यो । तिनीहरू पूर्ण रूपमा अचम्मित भए ।
೫೧ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು.
52 किनभने तिनीहरूले रोटीको अर्थ के हो भनी बुझेका थिएनन् । बरु तिनीहरूका हृदय कठोर पारिएको थियो ।
೫೨ಏಕೆಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಿರಲಿಲ್ಲ; ಅವರ ಹೃದಯವು ಕಠಿಣವಾಗಿತ್ತು.
53 जब उहाँहरू पारी तरे, उहाँहरू गनेसरेतमा आए, र डुङ्गालाई त्यहीँ अड्याए ।
೫೩ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪ್ರದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು.
54 जब उहाँहरू डुङ्गाबाट ओर्लनुभयो, तिनीहरूले उहाँलाई तुरुन्तै चिने ।
೫೪ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದು,
55 तिनीहरू सबै क्षेत्रमा गए, र उहाँ जहाँ-जहाँ आउँदै हुनुहुन्छ भनी तिनीहरूले सुने तिनीहरूले त्यहाँ-त्यहाँ बिरामीहरूलाई उहाँकहाँ ओछ्यानसँगै ल्याउन थाले ।
೫೫ಆ ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಹೋದರು.
56 जहाँ-जहाँ उहाँ गाउँहरूमा, सहरहरूमा, वा ग्रामीण ठाउँहरू भएर जानुहुन्थ्यो उनीहरूले बिरामीहरूलाई बजार क्षेत्रहरूमा राख्थे र उनीहरूले उहाँको कपडाको छेउ मात्र भए पनि छुन दिइयोस् भनी बिन्ती गर्थे । र जतिले छोए, तिनीहरू निको हुन्थे ।
೫೬ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.