< मत्ती 22 >

1 तिनीहरूसँग यसो भन्दै येशू दृष्‍टान्तमा बोल्नुभयो,
ಯೇಸು ಪುನಃ ಸಾಮ್ಯಗಳ ಮೂಲಕ ಅವರ ಕೂಡ ಮಾತನಾಡುತ್ತಾ:
2 “स्वर्गको राज्य एउटा यस्तो राजाजस्तो हो, जसले आफ्नो छोराको निम्ति विवाह भोजको तयारी गरे ।
“ಪರಲೋಕ ರಾಜ್ಯವು ಮಗನ ಮದುವೆ ಮಾಡಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
3 उनले भोजमा आउनको निम्ति निम्त्याइएकाहरूलाई बोलाउन आफ्ना नोकरहरू पठाए, तर तिनीहरू आउन मानेनन् ।
ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ಆದರೆ ಅವರು ಬರಲು ಒಪ್ಪಲಿಲ್ಲ.
4 फेरि राजाले यसो भन्दै आफ्ना अरू नोकरहरू पठाए, ‘ती निम्त्याइएकाहरूलाई यसो भन्‍नू, ‘मैले मेरो भोज तयार पारेको छु । मेरा गोरुहरू र मोटा पशुहरू मारिएका छन्, र सबै कुरा तयार छन् । विवाहको भोजमा आओ ।’
“ಅವನು ಪುನಃ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ, ‘ಇಗೋ ಔತಣವು ಸಿದ್ಧವಾಗಿದೆ. ಶ್ರೇಷ್ಠ ಔತಣ ಮಾಡಿಸಿದ್ದೇನೆ: ಎಲ್ಲವೂ ಸಿದ್ಧವಾಗಿವೆ. ಮದುವೆಗೆ ಬನ್ನಿರಿ ಎಂದು ಆಹ್ವಾನಿತರಿಗೆ ಹೇಳಿರಿ,’ ಎಂದನು.
5 तर तिनीहरूले केही वास्ता नै गरेनन्, र एउटा आफ्नो खेतबारी, र अर्को आफ्नो व्यवसायतिर लाग्यो ।
“ಆದರೆ ಅವರು ಅದನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟು ಹೋದರು.
6 अरूहरूले चाहिँ राजाका नोकरहरूलाई पक्रे; तिनीहरूसँग लाजमर्दो व्यवहार गरे, र तिनीहरूलाई मारे ।
ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನಪಡಿಸಿ, ಅವರನ್ನು ಕೊಂದುಹಾಕಿದರು.
7 तर राजा रिसाए । उनले आफ्ना सेनाहरू पठाए; ती हत्याराहरूलाई मारे, र तिनीहरूको सहर जलाइदिए ।
ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
8 त्यसपछि उनले आफ्ना नोकरहरूलाई भने, ‘विवाहको निम्ति सबै तयार छन्, तर जसलाई निम्त्याइएको थियो तिनीहरू योग्यका थिएनन् ।
“ತರುವಾಯ ಅವನು ತನ್ನ ಸೇವಕರಿಗೆ, ‘ಮದುವೆಯ ಔತಣ ಸಿದ್ಧವಾಗಿದೆ, ಆದರೆ ಆಹ್ವಾನಿತರು ಸಿದ್ಧರಾಗಿರಲಿಲ್ಲ.
9 त्यसैले, तिमीहरू सडकहरूमा जाओ र तिमीहरूले सक्‍ने जति सबै मानिसलाई विवाह भोजमा सहभागी हुन बोलाओ ।’
ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು.
10 ती नोकरहरू सडकहरूमा गए र तिनीहरूले भेट्टाए जति असल र खराब दुवै थरीका मानिसलाई एकसाथ भेला गरे । त्यसैले, विवाहको घर पाहुनाहरूले भरियो ।
ಆಗ ಆ ಸೇವಕರು ಮುಖ್ಯ ಬೀದಿಗಳಿಗೆ ಹೋಗಿ ತಾವು ಕಂಡ ಕೆಟ್ಟವರನ್ನೂ ಒಳ್ಳೆಯವರನ್ನೂ ಕರೆತಂದರು. ಹೀಗೆ ಮದುವೆ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.
11 तर जब राजा पाहुनाहरूलाई हेर्न भनी भित्र आए, त्यहाँ एक जना मानिस विवाहको पोशाक नलगाईकन भोजमा आएको उनले देखे ।
“ಅನಂತರ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದಾಗ, ಅಲ್ಲಿ ಮದುವೆಯ ವಸ್ತ್ರವಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಕಂಡನು.
12 राजाले उसलाई भने, ‘मित्र, विवाहको पोशाक नलगाईकन तिमी यहाँ भित्र कसरी आयौ?’ अनि त्यस व्यक्‍तिले केही बोल्न सकेन ।
ಅರಸನು ಆ ಮನುಷ್ಯನಿಗೆ, ‘ಸ್ನೇಹಿತನೇ, ಮದುವೆಯ ವಸ್ತ್ರವಿಲ್ಲದೆ ನೀನು ಒಳಗೆ ಹೇಗೆ ಬಂದೆ?’ ಎಂದು ಕೇಳಲು ಅವನು ಸುಮ್ಮನಿದ್ದನು.
13 त्यसपछि राजाले आफ्ना नोकरहरूलाई भने, ‘यस मानिसका हात र खुट्टा बाँध, र यसलाई बाहिरी अन्धकारमा फालिदेओ, जहाँ रुवाबासी र दाह्रा किटाइ हुनेछ ।’
“ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು.
14 किनकि बोलाइएकहरू धेरै छन्, तर चुनिएकाहरू थोरै छन् ।”
“ಹೀಗೆಯೇ ಆಹ್ವಾನಿತರಾದವರು ಅನೇಕರು, ಆದರೆ ಆಯ್ಕೆಯಾದವರು ಕೆಲವರು ಮಾತ್ರ,” ಎಂದನು.
15 त्यसपछि फरिसीहरू त्यहाँबाट गए, र येशूले भन्‍नुभएको कुरामा उहाँलाई नै कसरी जालमा पार्ने भन्‍ने बारेमा योजना बनाए ।
ಆಗ ಫರಿಸಾಯರು ಹೊರಟುಹೋಗಿ ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
16 त्यसपछि तिनीहरूले आफ्ना चेलाहरू र हेरोदी दलका केही मानिसहरूलाई उहाँकहाँ पठाए । तिनीहरूले येशूलाई भने, “गुरुज्यू, हामीलाई थाहा छ, कि तपाईं सत्य हुनुहुन्छ, र तपाईंले परमेश्‍वरको मार्गलाई सत्यतामा सिकाउनुहुन्छ । तपाईं कसले के सोच्छ भन्‍ने कुरालाई वास्ता गर्नुहुन्‍न, र मानिसहरूका बिचमा तपाईंले पक्षपात गर्नुहुन्‍न ।
ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.
17 त्यसैले, हामीलाई भन्‍नुहोस्, कि तपाईं के भन्‍नुहुन्छ? कैसरलाई कर तिर्नु उचित हो कि होइन?”
ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ? ನಿಮ್ಮ ಅಭಿಪ್ರಾಯವೇನು? ನಮಗೆ ಹೇಳು,” ಎಂದರು.
18 तर येशूले तिनीहरूको दुष्‍टता थाहा पाउनुभयो, र भन्‍नुभयो, “पाखण्डी हो, “तिमीहरू मलाई किन जाँच्दछौ?
ಯೇಸು ಅವರ ಕುಯುಕ್ತಿಯನ್ನು ತಿಳಿದುಕೊಂಡು, “ಕಪಟಿಗಳೇ, ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ?
19 कर तिर्ने सिक्‍का मलाई देखाओ ।” त्यसपछि तिनीहरूले उहाँकहाँ एक दिनार ल्याए ।
ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ,” ಎಂದರು. ಆಗ ಅವರು ಒಂದು ನಾಣ್ಯವನ್ನು ತಂದು ಕೊಟ್ಟರು.
20 येशूले तिनीहरूलाई भन्‍नुभयो, “यी कसका नाम र छाप हुन्?”
ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಇದರ ಮೇಲಿರುವ ಲಿಪಿ ಯಾರದು?” ಎಂದು ಕೇಳಿದರು.
21 तिनीहरूले उहाँलाई भने, “कैसरको ।” त्यसपछि येशूले तिनीहरूलाई भन्‍नुभयो, “त्यसो भए, जे कैसरका हुन्, ती कैसरलाई देओ, र जे परमेश्‍वरका हुन्, ती परमेश्‍वरलाई देओ ।”
ಅದಕ್ಕೆ ಅವರು, “ಕೈಸರನದು,” ಎಂದರು. ಆಗ ಯೇಸು, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ,” ಎಂದರು.
22 जब तिनीहरूले यो सुने, तिनीहरू छक्‍क परे । त्यसपछि तिनीहरू उहाँबाट अलग्गिएर त्यहाँबाट गए ।
ಅವರು ಇದನ್ನು ಕೇಳಿ ಆಶ್ಚರ್ಯಪಟ್ಟು, ಯೇಸುವನ್ನು ಬಿಟ್ಟು ಹೊರಟು ಹೋದರು.
23 त्यही दिनमा केही सदुकीहरू उहाँकहाँ आए, जसले पुनरुत्थान हुँदैन भनेर भन्दथे । तिनीहरूले उहाँलाई सोधे,
ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಯೇಸುವಿನ ಬಳಿಗೆ ಬಂದು,
24 “गुरुज्यू, मोशाले भनेका थिए, ‘यदि कुनै पुरुष बालक नजन्माईकन मर्‍यो भने, उसको भाइले त्यसकी पत्‍नीलाई विवाह गर्नुपर्छ र आफ्ना दाजुको निम्ति सन्तान जन्माउनुपर्छ ।
“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ವಿಧವೆಯನ್ನು ಮದುವೆಯಾಗಿ ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
25 तिनीहरू सात जना दाजुभाइ थिए । पहिलोले विवाह गर्‍यो । कुनै पनि सन्तान नभईकन उसले आफ्नी पत्‍नी आफ्नो भाइलाई छोड्यो ।
ಹೀಗಿರಲಾಗಿ ನಮ್ಮಲ್ಲಿ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಮಾಡಿಕೊಂಡು ಸತ್ತನು. ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು.
26 त्यसपछि दोस्रो भाइले त्यस्तै गर्‍यो, त्यसपछि तेस्रोले, र सातौँ भाइसम्म यस्तै हुँदै गयो ।
ಅದರಂತೆಯೇ ಎರಡನೆಯವನು ಮತ್ತು ಮೂರನೆಯವನು ಹೀಗೆ ಏಳನೆಯವನವರೆಗೂ ಸಂಭವಿಸಿತು.
27 तिनीहरू सबै मरेपछि त्यो स्‍त्री पनि मरी ।
ಕಡೆಯದಾಗಿ, ಆ ಸ್ತ್ರೀಯೂ ಸತ್ತಳು.
28 अब पुनरुत्थानमा ती सात दाजुभाइमध्ये त्यो स्‍त्री कुन चाहिँको पत्‍नी हुन्छे? किनकि तिनीहरू सबैले ऊसँग विवाह गरिसकेका छन् ।”
ಆದ್ದರಿಂದ, ಪುನರುತ್ಥಾನದ ಜೀವನದಲ್ಲಿ, ಆ ಏಳುಮಂದಿಯಲ್ಲಿ ಆಕೆ ಯಾರಿಗೆ ಹೆಂಡತಿಯಾಗಿರುವಳು? ಏಕೆಂದರೆ ಅವರೆಲ್ಲರೂ ಆಕೆಯನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದು ಕೇಳಿದರು.
29 तर येशूले तिनीहरूलाई जवाफ दिनुभयो र भन्‍नुभयो, “तिमीहरू भुलमा परेका छौ, किनभने तिमीहरू धर्मशास्‍त्र वा परमेश्‍वरको शक्‍तिलाई जान्दैनौ ।
ಅದಕ್ಕೆ ಯೇಸು ಉತ್ತರವಾಗಿ, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದೀರಿ.
30 किनकि पुनरुत्थानमा तिनीहरू न त विवाह गर्दछन्, न त तिनीहरूलाई विवाहको निम्ति दिइन्छ । बरु, तिनीहरू स्वर्गमा हुने दूतहरूजस्तै हुन्छन् ।
ಏಕೆಂದರೆ ಪುನರುತ್ಥಾನದ ಜೀವನದಲ್ಲಿ ಅವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
31 तर मृतकहरूको पुनरुत्थानको बारेमा परमेश्‍वरद्वारा यसरी तिमीहरूलाई भनिएको के तिमीहरूले पढेका छैनौ,
ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ,
32 ‘म अब्राहामका परमेश्‍वर, इसहाकका परमेश्‍वर र याकूबका परमेश्‍वर हुँ?’ परमेश्‍वर मृतकहरूको परमेश्‍वर हुनुहुन्‍न, तर उहाँ जीवितहरूका परमेश्‍वर हुनुहुन्छ ।”
‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು.
33 जब भिडले यो सुन्यो, तिनीहरू उहाँको शिक्षामा छक्‍क परे ।
ಜನಸಮೂಹದವರು ಇದನ್ನು ಕೇಳಿದಾಗ, ಯೇಸುವಿನ ಬೋಧನೆಗೆ ವಿಸ್ಮಯಗೊಂಡರು.
34 तर येशूले सदुकीहरूलाई चुप पार्नुभएको जब फरिसीहरूले सुने, तिनीहरू भेला भए ।
ಯೇಸು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿದಾಗ ಅವರು ಯೇಸುವಿನ ಬಳಿಗೆ ಬಂದರು.
35 तिनीहरूमध्येका एक जना व्यवस्थाका गुरुले उहाँको जाँच गर्दै एउटा प्रश्‍न सोधे,
ಅವರಲ್ಲಿ ಮೋಶೆಯ ನಿಯಮ ಬೋಧಕನಾಗಿದ್ದ ಒಬ್ಬನು, ಯೇಸುವನ್ನು ಪರೀಕ್ಷಿಸುವುದಕ್ಕಾಗಿ,
36 “गुरुज्यू, व्यवस्थामा सबैभन्दा महान् आज्ञाचाहिँ कुन हो?”
“ಬೋಧಕರೇ, ನಿಯಮದಲ್ಲಿ ಅತ್ಯಂತ ಮಹಾ ಆಜ್ಞೆ ಯಾವುದು?” ಎಂದು ಪ್ರಶ್ನಿಸಿದನು.
37 येशूले उनलाई भन्‍नुभयो, “तैँले परमप्रभु आफ्ना परमेश्‍वरलाई आफ्नो सारा हृदयले, आफ्नो सारा प्राणले र आफ्नो सारा समझले प्रेम गर्नू ।
ಯೇಸು ಅವನಿಗೆ, “‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’
38 योचाहिँ पहिलो र महान् आज्ञा हो ।
ಇದೇ ಅತ್ಯಂತ ಮಹಾ ಆಜ್ಞೆಯೂ ಮೊದಲನೆಯ ಆಜ್ಞೆಯೂ ಆಗಿದೆ.
39 अनि दोस्रो आज्ञा पनि यस्तै छ– ‘तैँले आफ्नो छिमेकीलाई आफैँलाई झैँ प्रेम गर्नू ।’
ಇದರಂತೆಯೇ ಇರುವ ಎರಡನೆಯ ಆಜ್ಞೆಯು: ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
40 सारा व्यवस्था र अगमवक्‍ताहरू यी दुईवटा आज्ञामाथि आधारित छन् ।”
ಇಡೀ ನಿಯಮವೂ ಪ್ರವಾದಿಗಳ ಗ್ರಂಥಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ,” ಎಂದರು.
41 फरिसीहरू एकै ठाउँमा जम्मा भएको बेलामा येशूले तिनीहरूलाई एउटा प्रश्‍न सोध्‍नुभयो ।
ಫರಿಸಾಯರು ಕೂಡಿಬಂದಿದ್ದಾಗ ಯೇಸು ಅವರಿಗೆ,
42 उहाँले भन्‍नुभयो, “तिमीहरू ख्रीष्‍टको बारेमा के विचार गर्दछौ? ख्रीष्‍ट कसका पुत्र हुन्?” तिनीहरूले उहाँलाई भने, “दाऊदका पुत्र ।”
“ಕ್ರಿಸ್ತನ ವಿಷಯವಾಗಿ ನಿಮ್ಮ ಅಭಿಪ್ರಾಯವೇನು? ಆತನು ಯಾರ ಪುತ್ರನು?” ಎಂದು ಕೇಳಿದ್ದಕ್ಕೆ ಅವರು ಯೇಸುವಿಗೆ, “ದಾವೀದನ ಪುತ್ರನು,” ಎಂದರು.
43 येशूले तिनीहरूलाई भन्‍नुभयो, “त्यसो भए, दाऊद पवित्र आत्माले भरिँदा तिनले किन उहाँलाई यसरी प्रभु भनी पुकारे,
“ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ, ‘ಕರ್ತನು’ ಎಂದು ಕರೆದು,
44 ‘परमप्रभुले मेरा प्रभुलाई भन्‍नुभयो, “जबसम्म मैले तिम्रा शत्रुहरूलाई तिम्रो पाउदान बनाउँदिन, तबसम्म तिमी मेरो दाहिने हातपट्टि बस ।’?”
“‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು,”’ ಎಂದು ಹೇಳಿದನಲ್ಲವೇ?
45 यदि दाऊदले ख्रीष्‍टलाई ‘प्रभु’ भन्दछन् भने, उनी कसरी दाऊदका पुत्र हुन सक्छन् त?”
ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವುದಾದರೆ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದನು.
46 तिनीहरू कसैले पनि जवाफमा एउटा शब्द पनि बोल्न सकेन, र त्यस दिनपछि उहाँलाई कसैले पनि अरू प्रश्‍नहरू सोध्‍ने साहस गरेन ।
ಅದಕ್ಕೆ ಯಾರೂ ಒಂದು ಮಾತನ್ನು ಸಹ ಯೇಸುವಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರಿಗೂ ಧೈರ್ಯ ಬರಲಿಲ್ಲ.

< मत्ती 22 >