< हितोपदेश 17 >
1 कलहले भरिएको घरमा भोज खानुभन्दा शान्तिसाथ रोटीको सुक्खा टुक्रा खानु उत्तम हो ।
ವಿವಾದದೊಂದಿಗೆ ತುಂಬಿದ ಔತಣದ ಮನೆಗಿಂತ, ಶಾಂತಿ ಸಮಾಧಾನದ ಒಣ ತುತ್ತು ಮೇಲು.
2 बुद्धिमान् नोकरले लाजमर्दो गरी काम गर्ने छोरोमाथि शासन जमाउँछ, र दाजुभाइ सरह नै पैतृक-सम्पत्ति पाउने छ ।
ನಾಚಿಕೆಪಡಿಸುವ ಮಗನ ಮೇಲೆ ಜಾಣನಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
3 चाँदी पगाल्न भाँडो र सुन खार्न आरन हुन्छ, तर परमप्रभुले नै हृदय जाँच गर्नुहुन्छ ।
ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.
4 खराब काम गर्नेले दुष्टको ओठमा ध्यान दिन्छ । झुट बोल्नेले विनाशक जिब्रोमा कान लगाउँछ ।
ಕೇಡು ಮಾಡುವವನು ಕೆಟ್ಟ ಮಾತುಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು.
5 गरिबलाई गिल्ला गर्नेले आफ्नो सृष्टिकर्ताको अपमान गर्छ, र अर्काको विपत्तिमा रमाउनेचाहिँ दण्डविना उम्कने छैन ।
ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು.
6 नाति-नातिनाहरू पाकाहरूका मुकुट हुन्, र बुबाआमाले तिनीहरूमा आदर ल्याउँछन् ।
ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆತಾಯಿಗಳೇ.
7 सिपालु बोलीवचन मूर्खलाई सुहाउँदैन । शासकको लागि झुट बोल्ने ओठ झन कति असुहाउँदो हुन्छ!
ಉತ್ತಮವಾದ ಪದಗಳು ಮೂರ್ಖನಿಗೆ ಸೂಕ್ತವಲ್ಲ; ಆಳುವವನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಆಯುಕ್ತವಲ್ಲವೇ.
8 घुस दिनेको लागि यो टुनाजस्तै हो । त्यो जहाँ गए तापनि सफल हुन्छ ।
ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ.
9 चित्त दुखाइलाई बेवास्ता गर्नेले प्रेमको खोजी गर्छ, तर विषयलाई दोहोर्याउनेले घनिष्ठ मित्रहरूमा फाटो ल्याउँछ ।
ದೋಷವನ್ನು ಕ್ಷಮಿಸುವವನು ಪ್ರೀತಿಯನ್ನು ಹುಡುಕುತ್ತಾನೆ; ಆದರೆ ದೋಷವನ್ನು ಎತ್ತಿ ಆಡುವವನು ಸ್ನೇಹಿತರಿಂದ ಪ್ರತ್ಯೇಕಗೊಳ್ಳುತ್ತಾನೆ.
10 मूर्खलाई सय कोर्रा प्रहार गर्नुभन्दा बरु समझशक्ति भएको व्यक्तिलाई एउटा हप्की काफी हुन्छ ।
ಬುದ್ಧಿಹೀನನ ಬೆನ್ನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟುತ್ತದೆ.
11 दुष्ट व्यक्तिले केवल विद्रोहको खोजी गर्दछ । त्यसैले त्यसको विरुद्धमा क्रुर दूत पठाइन्छ ।
ತಿರುಗಿ ಬೀಳುವವನು ಕೆಟ್ಟದ್ದಕ್ಕೇ ತವಕಪಡುತ್ತಾನೆ; ಆದಕಾರಣ ಮರಣ ದೂತರನ್ನು ಅವನ ವಿರುದ್ಧ ಕಳುಹಿಸಲಾಗುವದು.
12 मूर्खलाई त्यसको मूर्खतामा भेट्नुभन्दा बरु बच्चा खोसिएको भालुसित भेट गर्नु उत्तम हुन्छ ।
ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಸಂಧಿಸುವುದು ಮೇಲು.
13 जसले भलाइको साटो खराबी गर्छ, खराबीले त्यसको घर कहिल्यै छोड्ने छैन ।
ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆಯಿಂದ ಕೇಡು ತೊಲಗುವುದೇ ಇಲ್ಲ.
14 द्वन्द्वको सुरुआत सर्वत्र पानी फैलनुजस्तै हो । त्यसैले विवाद चर्किनुअगि नै त्यहाँबाट हिँडिहाल ।
ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು; ಆದಕಾರಣ ಆ ಕಲಹಕ್ಕೆ ಕೈಹಾಕುವುದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
15 दुष्ट मानिसलाई निर्दोष ठहराउने व्यक्ति र धर्मी मानिसलाई दण्ड दिने व्यक्ति दुवै नै परमप्रभुको लागि घृणित छन् ।
ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು, ನೀತಿವಂತರನ್ನು ಖಂಡಿಸುವವನೂ ಇವರಿಬ್ಬರೂ ಯೆಹೋವ ದೇವರಿಗೆ ಅಸಹ್ಯ.
16 बुद्धिको विषयमा सिक्न मूर्खले किन पैसा तिर्ने जब कि त्योसित यसलाई सिक्ने कुनै क्षमता नै छैन?
ಜ್ಞಾನವನ್ನು ಸಂಪಾದಿಸುವುದಕ್ಕೆ ಬುದ್ಧಿಹೀನನ ಕೈಯಲ್ಲಿ ಹಣ ಏಕೆ? ಅವನಿಗೆ ಕಲಿಯಲು ಮನಸ್ಸಿಲ್ಲವಲ್ಲ.
17 मित्रले हर समय प्रेम गरिरहन्छ, र दाजुभाइचाहिँ कष्टको समयको लागि जन्मेका हुन्छन् ।
ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ; ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ.
18 बेसमझको मानिसले वाचा बाँध्च, र आफ्नो छिमेकीको ऋणप्रति जिम्मेवार बन्छ ।
ಬುದ್ಧಿಹೀನನು ಕೈ ಕುಲುಕಿ ತನ್ನ ನೆರೆಯವನಿಗೆ ಜಾಮಿನನಾಗುತ್ತಾನೆ.
19 द्वन्द्वलाई प्रेम गर्नेले पापलाई प्रेम गर्छ । आफ्नो ढोकाको सङ्घार अति अग्लो बनाउनेले हड्डी भँचाउने छ ।
ಕಲಹವನ್ನು ಪ್ರೀತಿಮಾಡುವವನು ಪಾಪವನ್ನು ಪ್ರೀತಿಮಾಡುತ್ತಾನೆ; ತನ್ನ ಗೋಡೆಯನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಆಮಂತ್ರಿಸುತ್ತಾನೆ.
20 कुटिल हृदय भएको मानिसले कुनै असल कुरो पाउँदैन । छली जिब्रो भएको मानिस विपत्तिमा पर्छ ।
ವಕ್ರಹೃದಯವುಳ್ಳವನು ಸಮೃದ್ಧಿಯನ್ನು ಹೊಂದುವುದಿಲ್ಲ; ಮೋಸದ ನಾಲಿಗೆಯುಳ್ಳವನು ಹಾನಿಗೆ ಬೀಳುವನು.
21 जो मूर्खको बुबाआमा, तिनीहरूले आफैमा शोक ल्याउँछन्, र मूर्खको बुबामा कुनै आनन्द हुँदैन ।
ಬುದ್ಧಿಹೀನ ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವುದಿಲ್ಲ.
22 आनन्दित हृदय असल औषधी हो, तर टुटेको हृदयले हड्डीहरूलाई सुकाउँछ ।
ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
23 न्यायको मार्गलाई बङ्ग्याउन दुष्ट मानिसले गुप्त घुसलाई स्वीकार गर्छ ।
ನ್ಯಾಯದ ಮಾರ್ಗಗಳನ್ನು ತಿರುಗಿಸಿಬಿಡುವುದಕ್ಕೆ ದುಷ್ಟನು ಗುಪ್ತವಾಗಿ ಲಂಚವನ್ನು ತೆಗೆದುಕೊಳ್ಳುತ್ತಾನೆ.
24 समझशक्ति भएको व्यक्तिले बुद्धितिर आफ्नो मन लगाउँछ, तर मूर्खको आँखा पृथ्वीको कुनाकुनामा पुग्छ ।
ವಿವೇಕಿಯು ಜ್ಞಾನವನ್ನು ತನ್ನ ಮುಂದೆ ಇಟ್ಟುಕೊಳ್ಳುತ್ತಾನೆ. ಆದರೆ ಬುದ್ಧಿಹೀನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಅಲೆಯುವವು.
25 मूर्ख छोरो आफ्नो बुबाको लागि शोक हो, र त्यसलाई जन्माउने आमाको लागि तिक्तता हो ।
ಬುದ್ಧಿಹೀನನಾದ ಮಗನು ತನ್ನ ತಂದೆಗೆ ದುಃಖವೂ, ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
26 धर्मात्मालाई दण्ड दिनु कहिल्यै असल हुँदैन, न त निष्ठा भएका कुलीन मानिसहरूलाई कोर्रा लगाउनु असल हुन्छ ।
ನೀತಿವಂತನಿಗೆ ದಂಡ ವಿಧಿಸುವುದು ಒಳ್ಳೆಯದಲ್ಲದಿದ್ದರೆ, ಖಂಡಿತವಾಗಿಯೂ ಪ್ರಾಮಾಣಿಕ ಅಧಿಕಾರಿಗಳನ್ನು ಹೊಡೆಯುವುದು ಸರಿಯಲ್ಲ.
27 ज्ञान भएको व्यक्तिले थोरै वचन बोल्दछ, र समझशक्ति भएको व्यक्तिचाहिँ ठन्डा मिजासको हुन्छ ।
ಪರಿಜ್ಞಾನ ಹೊಂದಿರುವವನು ಮಿತವಾಗಿ ಮಾತನಾಡುತ್ತಾನೆ; ತಿಳುವಳಿಕೆಯನ್ನು ಹೊಂದಿರುವವನು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.
28 चुप लागेमा मूर्खलाई पनि बुद्धिमान् ठानिन्छ । त्यसले आफ्नो मुख बन्द गर्दा त्यसलाई विवेकी मानिन्छ ।
ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆನಿಸಿಕೊಳ್ಳುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿ ಎನಿಸಿಕೊಳ್ಳುವನು.