< हितोपदेश 28 >
1 कसैले नलखेट्दा पनि दुष्ट मानिसहरू भाग्छन्, तर धर्मी मानिसहरू जवान सिंहझैँ निर्भीक हुन्छन् ।
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
2 देशको अधर्मको कारण त्यहाँ धेरै शासकहरू हुन्छन्, तर समझशक्ति र ज्ञान भएको मानिसले अमनचैन कायम राख्ने छ ।
ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ. ಆದರೆ ಒಳನೋಟ ಹಾಗು ತಿಳುವಳಿಕೆಯ ನಾಯಕನಿಂದಲೇ ದೇಶವು ಸುಸ್ಥಿರವಾಗುವುದು.
3 एउटा गरिब मानिसमाथि थिचोमिचो गर्ने अर्को गरिब मानिस अन्न सखाप पार्ने मुसलधारे वर्षाजस्तो हो ।
ಬಡವರನ್ನು ಹಿಂಸಿಸುವ ಅಧಿಕಾರಿಯು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
4 व्यवस्था त्याग्नेहरूले दुष्ट मानिसहरूको प्रशंसा गर्छन्, तर व्यवस्था पालन गर्नेहरू तिनीहरूको विरुद्धमा लड्छन् ।
ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ.
5 खराब मानिसले न्यायलाई बुझ्दैन, तर परमप्रभुको खोजी गर्नेहरूले हरेक कुरो बुझ्दछ ।
ನ್ಯಾಯವನ್ನು ದುಷ್ಟರು ಗ್ರಹಿಸುವುದಿಲ್ಲ; ಆದರೆ ಯೆಹೋವ ದೇವರನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
6 आफ्ना मार्गहरूमा टेडो हुने धनी मानिसभन्दा आफ्नो निष्ठामा हिँड्ने गरिब मानिस उत्तम हुन्छ ।
ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರವಾಗಿರುವವನಿಗಿಂತ ನಿರ್ದೋಷಿಯಾಗಿ ನಡೆಯುವ ದರಿದ್ರನು ಶ್ರೇಷ್ಠನು.
7 व्यवस्था पालन गर्ने छोरो समझदार हुन्छ, तर घिचावाको सङ्गत गर्नेले चाहिँ आफ्नो बुबालाई लज्जित तुल्याउँछ ।
ವಿವೇಚನೆಯ ಮಗನು ದೇವರ ಶಿಕ್ಷಣವನ್ನು ಕೈಗೊಳ್ಳುವನು. ಆದರೆ ಹೊಟ್ಟೆಬಾಕರ ಸಂಗಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
8 धेरै ब्याज लगाएर आफ्नो सम्पत्ति बढाउने मानिसको धनलाई अर्कैले कुम्ल्याउँछ र त्यसले गरिबहरूमाथि दया देखाउँछ ।
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.
9 कसैले व्यवस्था सुन्नबाट आफ्नो कान तर्कायो भने त्यसको प्रार्थना पनि घृणित हुन्छ ।
ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.
10 सोझाहरूलाई खराब मार्गमा लैजाने जो कोही पनि आफूले खनेको खाल्डोमा जाकिने छ, तर खोटरहित मानिसले असल पैतृक-सम्पत्ति पाउने छ ।
ಪ್ರಾಮಾಣಿಕರನ್ನು ದುರ್ಮಾರ್ಗದಲ್ಲಿ ದಾರಿತಪ್ಪಿಸುವವನು, ತಾನೇ ತೋಡಿದ ಗುಂಡಿಯಲ್ಲಿ ಬೀಳುವನು. ನಿರ್ದೋಷಿಗಳಾದರೋ ಒಳ್ಳೆಯ ಸೊತ್ತನ್ನು ಪಡೆಯುವರು.
11 धनी मानिस आफ्नै दृष्टिमा बुद्धिमान् होला, तर समझशक्ति भएको गरिब मानिसले त्यसलाई पत्ता लगाउने छ ।
ಐಶ್ವರ್ಯವಂತನು ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾಗಿದ್ದಾನೆ. ಆದರೆ ವಿವೇಚನೆಯುಳ್ಳ ಬಡವನು ಅವನ ವಂಚನೆಯನ್ನು ನೋಡಬಲ್ಲನು.
12 धर्मीहरू विजय हुँदा ठुलो महिमा हुन्छ, तर दुष्टहरूको उदय हुँदा मानिसहरू लुक्न थाल्छन् ।
ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ.
13 आफ्ना पापहरू लुकाउनेको उन्नति हुने छैन, तर तिनलाई स्वीकार गरी त्याग्नेलाई कृपा देखाइने छ ।
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.
14 सधैँ आदरसाथ जिउने आशिषित् हुने छ, तर आफ्नो हृदयलाई कठोर बनाउनेचाहिँ कष्टमा पर्ने छ ।
ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
15 गर्जने सिंह वा झम्टने भालुझैँ मानिसहरूमाथि शासन गर्ने दुष्ट शासक हुन्छ ।
ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.
16 समझशक्ति कमी भएको शासक क्रुर हुन्छ, तर बेइमानीलाई घृणा गर्नेचाहिँको आयु लामो हुन्छ ।
ಗ್ರಹಿಕೆಯಿಲ್ಲದ ಅಧಿಕಾರಿಯು ಮಹಾ ಸುಲಿಗೆಗಾರನು. ಆದರೆ ಲೋಭವನ್ನು ಹಗೆಮಾಡುವವನು ದೀರ್ಘಾಯುಷ್ಯನು.
17 कसैको रगत बगाएकोले मानिस दोषी छ भने त्यसको मृत्यु नभएसम्म त्यो भगुवा हुने छ र कसैले त्यसलाई सहायता गर्ने छैन ।
ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.
18 निष्ठासहित हिँड्ने सुरक्षित हुने छ, तर टेडो चाल भएको मानिस अकस्मात् पतन हुने छ ।
ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು. ವಕ್ರಮಾರ್ಗಿಯು ತಟ್ಟನೆ ಬೀಳುವನು.
19 आफ्नो खेतबारी खनजोत गर्नेको प्रशस्त अन्न हुने छ, तर बेकम्मा कोसिसको पछि लाग्नेचाहिँ दरिद्रताले भरिने छ ।
ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು. ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವುದು.
20 विश्वासयोग्य मानिसले धेरै आशिष्हरू पाउने छ, तर झट्टै धनी हुनेचाहिँ दण्डविना उम्कने छैन ।
ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ.
21 पक्षपात गर्नु राम्रो होइन, तरै पनि एक टुक्रा रोटीको लागि मानिसले गलत काम गर्छ ।
ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹ ಮಾಡುವನು.
22 कन्जुस मानिस धनको पछि लाग्छ, तर दरिद्रता त्यसमाथि आइपर्ने छ भनी त्यसलाई थाहै हुँदैन ।
ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.
23 फुर्क्याउने जिब्रो भएकोले भन्दा अनुशासनमा राख्नेले नै पछि बढी निगाह पाउँछ ।
ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ, ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
24 आफ्ना बुबा र आमालाई लुटेर “त्यो पाप होइन” भनी बताउने मानिस बर्बादी ल्याउनेको मित्र हुन्छ ।
ತನ್ನ ತಂದೆಯಾನ್ನಾಗಲಿ, ತಾಯಿಯನ್ನಾಗಲಿ ದೋಚಿಕೊಂಡು, “ಇದು ದೋಷವಲ್ಲ,” ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
25 लोभी मानिसले द्वन्द्व निम्त्याउँछ, तर परमप्रभुमा भरोसा गर्नेको उन्नति हुने छ ।
ದುರಾಶೆಯುಳ್ಳವನು ಕಲಹವನ್ನೆಬ್ಬಿಸುವನು; ಯೆಹೋವ ದೇವರಲ್ಲಿ ಭರವಸವಿಡುವವನು ಪುಷ್ಟನಾಗುವನು.
26 आफ्नै हृदयमा भरोसा गर्ने मानिस मूर्ख हो, तर बुद्धिमा चल्नेचाहिँ खतराबाट टाढै बस्छ ।
ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.
27 गरिबलाई दिनेलाई कुनै कुराको अभाव हुँदैन, तर तिनीहरूप्रति आँखा चिम्लनेले धेरै श्राप पाउने छ ।
ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.
28 दुष्टहरूको उदय हुँदा मानिसहरू लुक्छन्, तर तिनीहरू नष्ट हुँदा धर्मीहरूको वृद्धि हुन्छ ।
ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ, ಆದರೆ ಅವರು ನಾಶವಾದಾಗ ನೀತಿವಂತರು ವೃದ್ಧಿಯಾಗುತ್ತಾರೆ.