< भजनसंग्रह 107 >

1 परमप्रभुलाई धन्यवाद देओ, किनकि उहाँ भलो हुनुहुन्छ र उहाँको करारको विश्‍वस्‍तता सदासर्वदा रहन्छ ।
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
2 परमप्रभुले उद्धार गर्नुभएकाहरू बोलून्, जसलाई उहाँले शत्रुहरूका हातबाट बचाउनुभएको छ ।
ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,
3 उहाँले तिनीहरूलाई विदेशी भूमिहरूबाट, पूर्वबाट र पश्‍चिमबाट, उत्तरबाट र दक्षिणबाट भेला पार्नुभएको छ ।
ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ, ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ.
4 तिनीहरू मरुभूमिको बाटोमा उजाडस्‍थानमा भौंतारिए र बस्‍नलाई कुनै सहर भेट्टाएनन् ।
ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ,
5 किनभने तिनीहरू भोकाएका र तिर्खाएका थिए, तिनीहरू थकाइले मूर्छित भए ।
ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.
6 तब तिनीहरूले आफ्‍ना कष्‍टमा परमप्रभुलाई पुकारा गरे र तिनीहरूका संकष्‍टबाट उहाँले तिनीहरूलाई बचाउनुभयो ।
ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು.
7 उहाँले तिनीहरूलाई सोझो बाटोमा लानुभयो ताकि तिनीहरू बस्‍नलाई एउटा सहरमा जान पाऊन् ।
ಜನವಿರುವ ಊರನ್ನು ಸೇರುವಂತೆ, ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು.
8 परमप्रभुको करारको विश्‍वस्‍तता र उहाँले मानवजातिको निम्ति गर्नुभएका अचम्मका कुराहरूका निम्ति मानिसहरूले उहाँको प्रशंसा गरून्!
ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
9 किनकि उहाँले तिर्खाएकाहरूको तिर्खा मेटाउनुहुन्छ र भोकाहरूका इच्छाहरूलाई उहाँले असल थोकहरूले पुरा गर्नुहुन्छ ।
ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.
10 कोही अँध्यारो र दुःखमा, कैदीहरू कष्‍ट र साङ्लाहरूमा बसे ।
೧೦ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.
11 तिनीहरूले परमेश्‍वरको वचन विरुद्धमा विद्रोह गरेको र सर्वोच्‍चको सल्‍लाहलाई इन्कार गरेको हुनाले यसो भएको थियो ।
೧೧ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,
12 उहाँले कठिनाइद्वारा तिनीहरूका हृदयलाई नम्र पार्नुभयो । तिनीहरूले ठेस खाए र तिनीहरूलाई उठ्न सहायता गर्ने कोही थिएन ।
೧೨ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು.
13 तब तिनीहरूले आफ्‍ना कष्‍टमा परमप्रभुलाई पुकारा गरे र तिनीहरूका संकष्‍टबाट उहाँले तिनीहरूलाई बाहिर ल्‍याउनुभयो ।
೧೩ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
14 उहाँले तिनीहरूलाई अन्धकार र दुःखबाट बाहिर निकाल्नुभयो र तिनीहरूका बन्धनहरू छिनाउनुभयो ।
೧೪ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.
15 परमप्रभुको करारको विश्‍वस्‍तता र उहाँले मानवजातिको निम्ति गर्नुभएका अचम्मका कुराहरूका निम्ति मानिसहरूले उहाँको प्रशंसा गरून्!
೧೫ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
16 किनकि उहाँले काँसाका ढोकाहरू फुटाउनुभएको छ र फलामका डण्डाहरू काट्नुभएको छ ।
೧೬ಆತನು ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ.
17 आफ्‍ना विद्रोही मार्गहरूमा तिनीहरू मूर्ख थिए र आफ्‍ना पापहरूका कारणले कष्‍टमा परे ।
೧೭ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.
18 तिनीहरूले कुनै खानेकुरा खाने इच्छा हराए र तिनीहरू मृत्युको ढोकाहरूका नजिक पुगे ।
೧೮ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.
19 तब आफ्‍ना कष्‍टमा तिनीहरूले परमप्रभुलाई पुकारा गरे र तिनीहरूका संकष्‍टबाट उहाँले तिनीहरूलाई बाहिर ल्‍याउनुभयो ।
೧೯ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
20 उहाँ आफ्नो वचन पठाउनुभयो र तिनीहरूलाई निको पार्नुभयो, अनि तिनीहरूका विनाशबाट उहाँले तिनीहरूलाई बचाउनुभयो ।
೨೦ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.
21 परमप्रभुको करारको विश्‍वस्‍तता र उहाँले मानवजातिको निम्ति गर्नुभएका अचम्मका कुराहरूका निम्ति मानिसहरूले उहाँको प्रशंसा गरून्!
೨೧ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
22 तिनीहरूले धन्यवादका बलिदानहरू चढाऊन् र गीतहरूले उहाँका कामहरू घोषणा गरून् ।
೨೨ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ, ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.
23 केहीले समुद्रमा यात्रा गर्छन् र समुद्रपारि व्यपार गर्छन् ।
೨೩ಹಡಗು ಹತ್ತಿ ಸಮುದ್ರ ಪ್ರಯಾಣ ಮಾಡುತ್ತಾ, ಮಹಾಜಲರಾಶಿಯಲ್ಲಿ ತಮ್ಮ ಉದ್ಯೋಗವನ್ನು ನಡೆಸುವವರು,
24 यिनीहरूले समुद्रमा परमप्रभुका कामहरू र उहाँका चमत्कारहरू देखे ।
೨೪ಯೆಹೋವನ ಮಹತ್ಕಾರ್ಯಗಳನ್ನೂ, ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
25 किनकि उहाँले आज्ञा दिनुभयो र समुद्रलाई नै छल्काउने आँधी चल्यो ।
೨೫ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರೆಗಳನ್ನು ಎಬ್ಬಿಸಿತು.
26 तिनीहरू माथि आकाशसम्म पुगे । तिनीहरू तल गहिराइहरूमा गए । तिनीहरूका जीवन संकष्‍टमा बिलेर गयो ।
೨೬ಜನರು ಆಕಾಶಕ್ಕೆ ಏರುತ್ತಲೂ, ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು.
27 तिनीहरू मद्यको मातेकाहरूझैं धरमराए र लडखडाए, र तिनीहरूका बुद्धि हरायो ।
೨೭ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ದಾಡುತ್ತಿದ್ದರು.
28 तब तिनीहरूले आफ्‍ना कष्‍टमा परमप्रभुलाई पुकारा गरे र तिनीहरूका संकष्‍टबाट उहाँले तिनीहरूलाई बाहिर ल्‍याउनुभयो ।
೨೮ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಹೊರತಂದನು.
29 उहाँले आँधीलाई शान्त पार्नुभयो र छालहरू शान्‍त भए ।
೨೯ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು.
30 तब तिनीहरू आनन्‍दित भए किनभने समुद्र शान्त भयो, र तिनीहरूले इच्‍छा गरेको बन्‍दरगाहमा उहाँले तिनीहरूलाई ल्याउनुभयो ।
೩೦ಸಮುದ್ರವು ಶಾಂತವಾದುದರಿಂದ, ಹಡಗಿನವರು ಸಂತೋಷಪಟ್ಟರು, ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು.
31 परमप्रभुको करारको विश्‍वस्‍तता र उहाँले मानवजातिको निम्ति गर्नुभएका अचम्मका कुराहरूका निम्ति मानिसहरूले उहाँको प्रशंसा गरून्!
೩೧ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.
32 तिनीहरूले उहाँलाई मानिसहरूको सभामा उच्‍च पारून् र धर्मगुरुहरूका सभामा उहँको प्रशंसा गरून् ।
೩೨ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; ಹಿರಿಯರ ಸಮೂಹದಲ್ಲಿ ಕೊಂಡಾಡಲಿ.
33 उहाँले नदीहरूलाई उजाडस्‍थानमा र पानीका मूलहरूलाई सुख्खा जमिनमा,
೩೩ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ,
34 र यसका मानिसहरूका दुष्‍टताको कारणले उर्बर भूमिलाई बाँझो ठाउँमा बद्लिनुहुन्‍छ ।
೩೪ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.
35 उहाँले उजाडस्‍थानलाई पानीको तलाउ र सुख्खा जमिनलाई पानीको मूलमा बद्लिनुहुन्‍छ ।
೩೫ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,
36 भोकाहरूलाई उहाँले त्यहाँ बसाल्नहुन्छ र तिनीहरूले बस्‍नलाई एउटा सहर बनाउँछन् ।
೩೬ಅಲ್ಲಿ ಹಸಿದವರನ್ನು ನೆಲೆಗೊಳಿಸಿದನು; ಅವರು ನೆಲೆಯಾಗಿ ವಾಸಿಸಲು ಪಟ್ಟಣವನ್ನು ಕಟ್ಟಿಕೊಂಡು,
37 खेतबारीमा बीउ छर्नलाई, दाखबारी लगाउनलाई र प्रशस्‍त उब्‍जनी ल्‍याउनलाई तिनीहरूले एउटा सहर बनाउँछन् ।
೩೭ಹೊಲಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಟ್ಟು, ಆದಾಯವನ್ನು ಕೂಡಿಸಿಕೊಂಡರು.
38 उहाँले तिनीहरूलाई आशिष्‌‌‌ दिनुहुन्छ, यसैले तिनीहरू असंख्या हुन्‍छन् । उहाँले तिनीहरूका गाईवस्तुको संख्या घट्न दिनुहुन्‍न ।
೩೮ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.
39 पीडादायी संकष्‍ट र दुःखले तिनीहरूको सङ्‍ख्‍या घट्‍यो र तल झारिए ।
೩೯ಅವರು ಕೇಡು ತೊಂದರೆಗಳಿಂದಲೂ, ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು.
40 उहाँले अगुवाहरूमाथि घृणा खन्याउनुहुन्छ र तिनीहरूलाई उजाडस्‍थानमा भौंतारिन लगाउनुहुन्छ, जहाँ कुनै बाटो हुँदैन ।
೪೦ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.
41 तर खाँचोमा परेकाहरूलाई उहाँले कष्‍टबाट सुरक्षा दिनुहुन्छ र बगाललाई झैं आफ्नो परिवारको वास्ता गर्नुहुन्छ ।
೪೧ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ, ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು.
42 सोझो मन भएकाहरूले यो देख्‍नेछन् र आनन्‍दि हुनेछन् । सबै दुष्‍टताले आफ्‍नो मुख बन्द गर्छ ।
೪೨ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು.
43 बुद्धिमान्‌हरूले यी कुराहरूमा ख्‍याल गर्नुपर्छ र परमप्रभुको करारको विश्‍वस्‍तताका कामहरूमा ध्‍यान गर्नुपर्छ ।
೪೩ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.

< भजनसंग्रह 107 >