< जकरिया 1 >
1 दाराको शासनकालको दोस्रो वर्षको आठौँ महिनामा, अगमवक्ता इद्दोका नाति बेरेक्याहका छोरा जकरियाकहाँ परमप्रभुको यस्तो वचन आय।
೧ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು.
2 “परमप्रभु तिमीहरूका पिता-पुर्खाहरूसँग अत्यन्तै रिसाउनुभएको थियो!
೨ಅದೇನೆಂದರೆ, “ಯೆಹೋವನು ನಿಮ್ಮ ಪೂರ್ವಿಕರ ಮೇಲೆ ಬಹು ಕೋಪಗೊಂಡಿದ್ದಾನೆ.
3 तिनीहरूलाई भन्, ‘सेनाहरूका परमप्रभु यस्तो भन्नुहुन्छ: मतिरफर्क!- परमप्रभु घोषणा गर्नुहुन्छ- र म तिमीहरूतिर फर्कनेछु, सेनाहरूका परमप्रभु भन्नुहुन्छ ।
೩ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
4 तिमीहरूका पिता-पुर्खाहरूझैँ नहोओ जसलाई अगमवक्ताहरूले यस्तो भनेका थिए, “सेनाहरूका परमप्रभु यस्तो भन्नुहुन्छ: तिमीहरूका खराब मार्गहरू र दुष्ट कामहरूबाट फर्क!” तर तिनीहरूले सुनेनन् र मलाई ध्यान दिएनन् - परमप्रभु घोषणा गर्नुहुन्छ ।’”
೪ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.
5 तिमीहरूका पिता-पुर्खाहरू कहाँ छन्? अगमवक्ताहरू कहाँ छन्, के तिनीहरूयहाँ सधैँ रहन्छन्?
೫“ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?
6 तर मैले मेरा दास अगमवक्ताहरूलाई आज्ञा गरेका मेरा वचन र निर्णयहरूले के तिमीहरूका पिता-पुर्खाहरूलाई उछिनेकाछैनन् र? यसैकारण तिनीहरूले पाश्चाताप गरे र भने, ‘हाम्रा चाल र कामहरूअनुसारसुहाउँदो सेनाहरूका परमप्रभुले हामीसँग जस्तो व्यवहार गर्ने योजना गर्नुभयो, उहाँले हामीसित त्यस्तै गर्नुभएको छ ।’”
೬ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.
7 दाराको शासनकालको दोस्रो वर्षको एघारौँ महिनाको चौबिसौँ दिन, अर्थात् शेबातको महिनामा, अगमवक्ता इद्दोका नाति बेरेक्याहका छोरा जकरियाकहाँ परमप्रभुको यस्तो वचन आयो,
೭ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನಾದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂತು,
8 “मैले रातमा यस्तो देखेँ! एउटा मानिस रातो घोडामा सवार थिए, र तिनी बेँसीको असारे-फूलका रूखहरूका माझमा थिए, र उनको पछाडि रातो, रातो-खैरो, र सेतो घोडाहरू थिए ।”
೮“ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು.
9 मैले भनेँ, “परमप्रभु, यी कुराहरू के हुन्?” अनि मसँग बोलिरहेका स्वर्गदूतले मलाई भने, “यी कुराहरू के हुन्, म तिमीलाई देखाउनेछु ।”
೯ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.
10 ती असारे-फूलका रूखहरूबिचमा उभिरहेका मानिसले जवाफ दिए, “यी तिनै हुन् जसलाई परमप्रभुले पृथ्वीभरि घुमफिर गर्नको निम्ति पठाउनुभएको छ ।”
೧೦ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು.
11 असारे-फूलका रूखहरूकाबिचमा बसेका परमप्रभुका स्वर्गदूतलाई तिनीहरूले यस्तो जवाफ दिए, “हामी सारा पृथ्वीभरि धुमिरहेका छौँ । हेर्नुहोस्, सारा पृथ्वी शान्त र आराम गरिरहेको छ ।”
೧೧ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ, “ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ” ಎಂದು ಅರಿಕೆಮಾಡಿದರು.
12 अनि परमप्रभुका स्वर्गदूतले यस्तो जवाफ दिए, सेनाहरूका परमप्रभु, यरूशलेम र यहूदाका सहरहरूप्रति तपाईंले कहिलेसम्म दया देखाउनुहुनेछैन, जससँग तपाईं सत्तरी वर्षदेखि रिसाउनुभएको छ?”
೧೨ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,
13 मसँग कुरा गरेका स्वर्गदूतसँग परमप्रभुले असल शब्दहरू, सान्त्वनाका शब्दहरूमा बोल्नुभयो ।
೧೩ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.
14 यसैकारण मसँग कुरा गरेका स्वर्गदूतले मलाई भने, “उच्च सोरमा भन, ‘सेनाहरूका परमप्रभु यस्तो भन्नुहुन्छ: म यरूशलेम र सियोनको निम्ति अत्यन्तै डाही भएको छु!
೧೪ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.
15 सुख-चैनमा बसिरहेका जातिहरूसँग म धेरै रिसाएको छु । जब म तिनीहरूसँग थोरै मात्र रिसाएको थिएँ, तिनीहरूले विपत्तिलाई झन् खराब बनाइदिए ।
೧೫ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”
16 यसकारण सेनाहरूका परमप्रभु यस्तो भन्नुहुन्छ: म यरूशलेममा दयासाथ फर्केको छु । मेरो भवन त्यसभित्र निर्माण हुनेछ र यरूशलेममाथि नाप्ने डोरी तन्काइनेछ, सेनाहरूका परमप्रभु घोषणा गर्नुहुन्छ ।’
೧೬ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
17 उच्च सोरमा फेरि यस्तो भन, ‘सेनाहरूका परमप्रभु यस्तो भन्नुहुन्छ: मेरा सहरहरू फेरि असल कुराहरूले भरिएर पोखिनेछ, र परमप्रभुले फेरि सियोनलाई सान्त्वना दिनुहुनेछ र उहाँले फेरी यरूशलेमलाई चुन्नुहुनेछ ।’”
೧೭ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”
18 अनि मैले आफ्ना आँखाहरू माथि उठाएँ र चारओटा सीङ देखें!
೧೮ನಾನು ಕಣ್ಣೆತ್ತಿ ನೋಡಲು ಇಗೋ, ನಾಲ್ಕು ಕೊಂಬುಗಳು ಕಾಣಿಸಿದವು.
19 मसँग बोलिरहेका स्वर्गदूतसँग म बोलें, “यी के हुन्?” उनले जवाफ दिए, “यी ती सीङहरू हुन् जसले यहूदा, इस्राएल, र यरूशलेमलाई तितर-बितर पारे ।”
೧೯ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.
20 अनि परमप्रभुले मलाई चार जना कारीगरहरु देखाउनुभयो ।
೨೦ಅನಂತರ ಯೆಹೋವನು ನನಗೆ ನಾಲ್ಕು ಮಂದಿ ಕಮ್ಮಾರರನ್ನು ತೋರಿಸಿದನು.
21 मैले भनें, “यी मानिसहरू के गर्न आएका हुन्?” उनले जवाफ दिए, “यी ती सीङहरू हुन् जसले यहूदालाई तितर-बितर पारे ताकि कोही मानिसले पनि आफ्नो शिर उठाउन नसकोस् । तर ती कारीगरहरु तिनीहरूलाई त्रासित गर्न, र यहूदालाई तितर-बितर गर्नको निम्ति त्यसको विरुद्ध सीङ उठाएका जातिहरूका सीङहरूलाई पराजित गर्न आएका हुन् ।”
೨೧ಆಗ ನಾನು, “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಲು ಅವನು, “ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದುರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದುರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡುವುದಕ್ಕೆ ಬಂದಿದ್ದಾರೆ” ಎಂದು ಹೇಳಿದನು.