< ପ୍ରଥମ ରାଜାବଳୀ 10 >

1 ଏଥିଉତ୍ତାରେ ଶିବା ଦେଶର ରାଣୀ ସଦାପ୍ରଭୁଙ୍କ ନାମ ସମ୍ବନ୍ଧରେ ଶଲୋମନଙ୍କର ସୁଖ୍ୟାତି ଶୁଣି ନିଗୂଢ଼ ପ୍ରଶ୍ନ ଦ୍ୱାରା ତାଙ୍କୁ ପରୀକ୍ଷା କରିବା ପାଇଁ ଆସିଲେ।
ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.
2 ସେ ସୁଗନ୍ଧି ଦ୍ରବ୍ୟ ଓ ଅତି ପ୍ରଚୁର ସ୍ୱର୍ଣ୍ଣ ଓ ମଣିବାହକ ଉଷ୍ଟ୍ରଗଣ ସଙ୍ଗେ ନେଇ ମହାସମାରୋହରେ ଯିରୂଶାଲମକୁ ଆସିଲା; ପୁଣି, ସେ ଶଲୋମନଙ୍କ ନିକଟକୁ ଆସି ଆପଣା ମନରେ ଯାହା ଯାହା ଥିଲା, ସେସବୁ ବିଷୟରେ ତାଙ୍କ ସଙ୍ଗେ କଥାବାର୍ତ୍ତା କଲେ।
ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.
3 ତହିଁରେ ଶଲୋମନ ତାହାର ସମସ୍ତ ପ୍ରଶ୍ନର ଉତ୍ତର ଦେଲେ; ରାଜାଙ୍କର ବୋଧଗମ୍ୟ କୌଣସି ବିଷୟ ନ ଥିଲା, ସେ ତାହାକୁ ସବୁ କହିଲେ।
ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೂ ಉತ್ತರಕೊಟ್ಟನು. ಅವುಗಳಲ್ಲಿ ಸೊಲೊಮೋನನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದರಿಂದ ಅವನು ಅವೆಲ್ಲವುಗಳಿಗೆ ಉತ್ತರಕೊಟ್ಟನು.
4 ପୁଣି, ଶିବାର ରାଣୀ ଶଲୋମନଙ୍କର ସମସ୍ତ ଜ୍ଞାନ, ତାଙ୍କର ନିର୍ମିତ ଗୃହ,
ಶೆಬೆದ ರಾಣಿಯು ಸೊಲೊಮೋನನ ಎಲ್ಲಾ ಜ್ಞಾನ, ಅವನು ಕಟ್ಟಿಸಿದ ಅರಮನೆ,
5 ତାଙ୍କର ମେଜର ଖାଦ୍ୟଦ୍ରବ୍ୟ, ତାଙ୍କର ଭୃତ୍ୟମାନଙ୍କ ଆସନ, ତାଙ୍କ ମନ୍ତ୍ରୀମାନଙ୍କ ସେବା, ସେମାନଙ୍କ ବସ୍ତ୍ର, ପାନପାତ୍ରବାହକଗଣ ଓ ସେ ସଦାପ୍ରଭୁଙ୍କ ଗୃହରେ କିପରି ଭାବେ ହୋମବଳି ଉତ୍ସର୍ଗ କଲେ, ଏହିସବୁ ଦେଖି ସେ ହତଜ୍ଞାନ ହେଲା।
ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.
6 ତହୁଁ ସେ ରାଜାଙ୍କୁ କହିଲେ, “ମୁଁ ଆପଣା ଦେଶରେ ଥାଇ ଆପଣଙ୍କ କାର୍ଯ୍ୟ ଓ ଆପଣଙ୍କ ଜ୍ଞାନ ବିଷୟରେ ଯେଉଁ ସମ୍ବାଦ ପାଇଥିଲି, ତାହା ସତ୍ୟ।
ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನು, ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.
7 ତଥାପି ମୁଁ ଆସି ଆପଣା ଚକ୍ଷୁରେ ନ ଦେଖିବା ଯାଏ ସେ କଥା ବିଶ୍ୱାସ ନ କଲି; ଆଉ ଦେଖନ୍ତୁ, ଅର୍ଦ୍ଧେକ ମୋତେ କୁହାଯାଇ ନ ଥିଲା; ମୁଁ ଯେଉଁ ସୁଖ୍ୟାତି ଶୁଣିଲି, ତଦପେକ୍ଷା ଆପଣଙ୍କ ଜ୍ଞାନ ଓ ଐଶ୍ୱର୍ଯ୍ୟ ଅଧିକ।
ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ. ಈಗ ಇಲ್ಲಿ ಬಂದು ನೋಡಿದರೆ ನಿನ್ನ ಜ್ಞಾನವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ. ಜನರು ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.
8 ଆପଣଙ୍କ ଲୋକମାନେ ଧନ୍ୟ, ଆପଣଙ୍କ ଏହି ଦାସମାନେ ଧନ୍ୟ, ସେମାନେ ନିତ୍ୟ ଆପଣଙ୍କ ସମ୍ମୁଖରେ ଛିଡ଼ା ହୋଇ ଆପଣଙ୍କ ଜ୍ଞାନର କଥା ଶୁଣନ୍ତି।
ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು.
9 ସଦାପ୍ରଭୁ ଆପଣଙ୍କ ପରମେଶ୍ୱର ଧନ୍ୟ, ସେ ଆପଣଙ୍କୁ ଇସ୍ରାଏଲର ସିଂହାସନରେ ଉପବିଷ୍ଟ କରାଇବା ପାଇଁ ଆପଣଙ୍କ ପ୍ରତି ସନ୍ତୁଷ୍ଟ ହେଲେ; ସଦାପ୍ରଭୁ ଇସ୍ରାଏଲକୁ ସଦାକାଳ ପ୍ରେମ କରନ୍ତି, ଏହେତୁ ବିଚାର ଓ ନ୍ୟାୟ କରିବାକୁ ଆପଣଙ୍କୁ ରାଜା କଲେ।”
ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.
10 ଏଉତ୍ତାରେ ସେ ରାଜାଙ୍କୁ ଏକ ଶହ କୋଡ଼ିଏ ତାଳନ୍ତ ସୁନା, ଆଉ ଅତି ପ୍ରଚୁର ସୁଗନ୍ଧି ଦ୍ରବ୍ୟ ଓ ମଣି ଦେଲା; ଶିବାର ରାଣୀ ଶଲୋମନ ରାଜାଙ୍କୁ ଯେତେ ସୁଗନ୍ଧି ଦ୍ରବ୍ୟ ଦେଲା, ସେତେ ବହୁଳ ପରିମାଣରେ ଆଉ କେବେ ଆସି ନାହିଁ।
೧೦ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ.
11 ଆଉ ହୂରମ୍‍ର ଯେଉଁ ଯେଉଁ ଜାହାଜରେ ଓଫୀରରୁ ସୁନା ଆସିଲା, ସେହି ସବୁରେ ମଧ୍ୟ ଓଫୀରରୁ ଅତି ପ୍ରଚୁର ଚନ୍ଦନ କାଷ୍ଠ ଓ ମଣି ଆସିଲା।
೧೧ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ಮತ್ತು ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು.
12 ସେହି ଚନ୍ଦନ କାଷ୍ଠରେ ରାଜା ସଦାପ୍ରଭୁଙ୍କ ଗୃହ ଓ ରାଜଗୃହ ପାଇଁ ସ୍ତମ୍ଭ ଓ ଗାୟକମାନଙ୍କ ନିମନ୍ତେ ବୀଣା ଓ ନେବଲ ନିର୍ମାଣ କଲେ; ଏରୂପ ଚନ୍ଦନ କାଷ୍ଠ ଆଜି ପର୍ଯ୍ୟନ୍ତ କେବେ ଆସି ନାହିଁ କି ଦେଖାଯାଇ ନାହିଁ।
೧೨ಅರಸನು ಸುಗಂಧದ ಮರದಿಂದ ಯೆಹೋವನ ಆಲಯ ಮತ್ತು ಅರಮನೆ ಇವುಗಳಿಗೆ ಸ್ತಂಭಗಳನ್ನು, ಗಾಯಕರಿಗೋಸ್ಕರ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಆಗ ಬಂದಷ್ಟು ಸುಗಂಧದ ಮರವು ಇಂದಿನ ವರೆಗೂ ಆ ದೇಶಕ್ಕೆ ಬರಲಿಲ್ಲ ಮತ್ತು ಕಾಣಲಿಲ್ಲ.
13 ଶିବାର ରାଣୀ ଯାହା ଯାହା ମାଗିଲା, ତାହାର ମନୋବାଞ୍ଛାନୁସାରେ ଶଲୋମନ ରାଜା ତାହାସବୁ ତାହାକୁ ଦେଲେ, ତାହା ଛଡ଼ା ଶଲୋମନ ରାଜଯୋଗ୍ୟ ଦାନାନୁସାରେ ତାହାକୁ ଦେଲେ। ଏଉତ୍ତାରେ ରାଣୀ ଓ ତାହାର ଦାସମାନେ ଫେରି ଆପଣା ଦେଶକୁ ଗଲେ।
೧೩ಅರಸನಾದ ಸೊಲೊಮೋನನು ಶೆಬೆದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ ಆಕೆಯು ಕೇಳಿದವುಗಳೆಲ್ಲವನ್ನು ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು.
14 ବର୍ଷକ ମଧ୍ୟରେ ଶଲୋମନଙ୍କ ନିକଟକୁ ଛଅ ଶହ ଛଷଠି ତାଳନ୍ତ ପରିମିତ ସୁବର୍ଣ୍ଣ ଆସେ।
೧೪ಸೊಲೊಮೋನನಿಗೆ ಒಂದು ವರ್ಷದಲ್ಲಿ ಆರುನೂರ ಅರುವತ್ತಾರು ತಲಾಂತು ಬಂಗಾರ ದೊರಕುತ್ತಿತ್ತು.
15 ଏହାଛଡ଼ା ପାଇକରମାନେ ଆଣିଲେ, ପୁଣି, ବଣିକମାନଙ୍କ ବ୍ୟବସାୟରୁ ଓ ମିଶ୍ରିତ ଗୋଷ୍ଠୀୟମାନଙ୍କ ସମସ୍ତ ରାଜାଠାରୁ ଓ ଦେଶାଧ୍ୟକ୍ଷମାନଙ୍କଠାରୁ ସୁବର୍ଣ୍ଣ ଆସିଲା।
೧೫ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.
16 ତହିଁରେ ଶଲୋମନ ରାଜା ପିଟାସୁନାରେ ଦୁଇ ଶହ ବଡ଼ ଢାଲ ପ୍ରସ୍ତୁତ କଲେ; ପ୍ରତ୍ୟେକ ଢାଲରେ ଛଅ ଶହ ଶେକଲ ସୁନା ଲାଗିଲା।
೧೬ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರ ಹಿಡಿಯಿತು.
17 ଆଉ ସେ ପିଟାସୁନାରେ ତିନି ଶହ ଢାଲ ପ୍ରସ୍ତୁତ କଲେ; ପ୍ରତ୍ୟେକ ଢାଲରେ ତିନି ମିନାସ୍ ସୁନା ଲାଗିଲା; ଆଉ ରାଜା ଲିବାନୋନ-ଅରଣ୍ୟ ଗୃହରେ ତାହାସବୁ ରଖିଲେ।
೧೭ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ನೂರೈವತ್ತು ತೊಲಾ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.
18 ଆହୁରି ରାଜା ହସ୍ତୀଦନ୍ତର ଗୋଟିଏ ବୃହତ ସିଂହାସନ ନିର୍ମାଣ କରି ଅତ୍ୟୁତ୍ତମ ସୁବର୍ଣ୍ଣରେ ମଡ଼ାଇଲେ।
೧೮ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದಕ್ಕೆ ಚೊಕ್ಕ ಬಂಗಾರದ ತಗಡನ್ನು ಹೊದಿಸಿದನು
19 ସେହି ସିଂହାସନର ଛଅ ପାବଚ୍ଛ ଥିଲା, ସେହି ସିଂହାସନ ଉପରି ଭାଗର ପଛଆଡ଼ ଗୋଲାକାର ଥିଲା ଓ ଆସନର ଦୁଇ ପାର୍ଶ୍ୱରେ ଦୁଇ ହସ୍ତାବଲମ୍ବନ ଥିଲା ଓ ସେହି ହସ୍ତାବଲମ୍ବନ ନିକଟରେ ଦୁଇ ସିଂହମୂର୍ତ୍ତି ଛିଡ଼ା ହୋଇଥିଲେ।
೧೯ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳು, ಅವುಗಳ ಹತ್ತಿರ ಎರಡು ಸಿಂಹಗಳು ಇದ್ದವು.
20 ଆଉ ସେହି ଛଅ ପାବଚ୍ଛ ଉପରେ ଦୁଇପାଖେ ବାର ସିଂହମୂର୍ତ୍ତି ଛିଡ଼ା ହୋଇଥିଲେ; ଏରୂପ ସିଂହାସନ କୌଣସି ରାଜ୍ୟରେ ପ୍ରସ୍ତୁତ ହୋଇ ନ ଥିଲା।
೨೦ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
21 ଶଲୋମନ ରାଜାଙ୍କର ପାନପାତ୍ରସବୁ ସୁନାର ଥିଲା ଓ ଲିବାନୋନ-ଅରଣ୍ୟ ଗୃହର ସମସ୍ତ ପାତ୍ର ସୁଦ୍ଧା ସୁବର୍ଣ୍ଣର ଥିଲା; ରୂପାର କିଛି ନ ଥିଲା; ଶଲୋମନଙ୍କ ସମୟରେ ରୂପା କିଛି ବୋଲି ଗଣା ନୋହିଲା।
೨೧ಅರಸನಾದ ಸೊಲೊಮೋನನ ಪಾನಪಾತ್ರೆಗಳು, ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿದ್ದ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆ ಇರಲಿಲ್ಲವಾದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.
22 କାରଣ, ସମୁଦ୍ରରେ ହୂରମ୍‍ର ଜାହାଜ ସଙ୍ଗେ ରାଜାଙ୍କର ତର୍ଶୀଶଗାମୀ ଜାହାଜ ଥିଲା; ସେହି ତର୍ଶୀଶର ଜାହାଜମାନ ତିନି ବର୍ଷରେ ଥରେ ସୁନା ଓ ରୂପା, ହସ୍ତୀଦନ୍ତ, ବାନର ଓ ମୟୂର ନେଇ ଆସନ୍ତି।
೨೨ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.
23 ଏହିରୂପେ ଶଲୋମନ ରାଜା ଐଶ୍ୱର୍ଯ୍ୟରେ ଓ ଜ୍ଞାନରେ ପୃଥିବୀସ୍ଥ ସମସ୍ତ ରାଜାଙ୍କୁ ବଳିଗଲେ।
೨೩ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.
24 ଆଉ ପରମେଶ୍ୱର ଶଲୋମନଙ୍କର ହୃଦୟରେ ଯେଉଁ ଜ୍ଞାନ ଦେଇଥିଲେ, ତାଙ୍କର ସେହି ଜ୍ଞାନର କଥା ଶୁଣିବାକୁ ପୃଥିବୀସ୍ଥ ସମସ୍ତେ ତାଙ୍କର ସାକ୍ଷାତ କରିବାକୁ ଚାହିଁଲେ।
೨೪ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.
25 ପୁଣି, ପ୍ରତ୍ୟେକ ଲୋକ ନିରୂପଣାନୁସାରେ ବର୍ଷକୁ ବର୍ଷ ଆପଣା ଆପଣା ଭେଟି ରୂପେ ରୂପାପାତ୍ର, ସୁନାପାତ୍ର, ବସ୍ତ୍ର, ଅସ୍ତ୍ରଶସ୍ତ୍ର, ସୁଗନ୍ଧି ଦ୍ରବ୍ୟ, ଅଶ୍ୱ ଓ ଖଚର ଆଣିଲେ।
೨೫ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.
26 ଆଉ ଶଲୋମନ ରଥ ଓ ଅଶ୍ୱାରୋହୀମାନଙ୍କୁ ସଂଗ୍ରହ କଲେ; ତାଙ୍କର ଏକ ହଜାର ଚାରି ଶହ ରଥ ଓ ବାର ହଜାର ଅଶ୍ୱାରୋହୀ ଥିଲେ, ସେମାନଙ୍କୁ ସେ ରଥ-ନଗରମାନରେ ଓ ରାଜାଙ୍କ ନିକଟରେ ଯିରୂଶାଲମରେ ରଖିଲେ।
೨೬ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.
27 ପୁଣି, ରାଜା ଯିରୂଶାଲମରେ ରୂପାକୁ ପଥର ପରି ଓ ବାହୁଲ୍ୟ ହେତୁରୁ ଏରସ କାଷ୍ଠକୁ ତଳଭୂମିସ୍ଥ ଡିମ୍ବିରିବୃକ୍ଷ ପରି କଲେ।
೨೭ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು.
28 ଆଉ ଶଲୋମନଙ୍କର ଅଶ୍ୱସବୁ ମିସରରୁ ଅଣାଗଲା; ରାଜାଙ୍କର ବଣିକମାନେ ପ୍ରତ୍ୟେକ ପଲର ମୂଲ୍ୟ ଦେଇ ପଲ ପଲ କରି ପାଇଲେ।
೨೮ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಲೆ ಕೊಂಡುಕೊಂಡು ಬರುತ್ತಿದ್ದರು.
29 ଏହିରୂପେ ସେମାନଙ୍କ ଦ୍ୱାରା ହିତ୍ତୀୟ ଓ ଅରାମୀୟ ସମସ୍ତ ରାଜାଙ୍କ ନିମନ୍ତେ ହିଁ ସେସବୁ ଅଣାଗଲା; ପୁଣି, ମିସରର ଏକ ଏକ ରଥ ଛଅ ଶହ ଶେକଲ ରୌପ୍ୟ ମୁଦ୍ରାରେ ଓ ଏକ ଏକ ଅଶ୍ୱ ଏକ ଶହ ପଚାଶ ଶେକଲ ରୌପ୍ୟ ମୁଦ୍ରାରେ ଆସିଲା ଓ ଗଲା।
೨೯ಐಗುಪ್ತದೇಶದಿಂದ ರಥಗಳನ್ನೂ ಮತ್ತು ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ, ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಮಾರಾಟವಾಗುತ್ತಿದ್ದವು.

< ପ୍ରଥମ ରାଜାବଳୀ 10 >