< ଆୟୁବ 36 >

1 ଇଲୀହୂ ଆହୁରି କହିଲା,
ಎಲೀಹು ಮುಂದುವರಿದು ಹೇಳಿದ್ದೇನೆಂದರೆ:
2 “ଟିକିଏ ସମ୍ଭାଳ, ମୁଁ ତୁମ୍ଭକୁ ଜଣାଇବି; କାରଣ ପରମେଶ୍ୱରଙ୍କ ପକ୍ଷରେ ମୋହର ଆହୁରି କିଛି କହିବାର ଅଛି।
“ನನ್ನನ್ನು ಸ್ವಲ್ಪ ತಾಳಿಕೋ, ನಾನು ನಿನಗೆ ತೋರಿಸಿಕೊಡುತ್ತೇನೆ. ಏಕೆಂದರೆ ದೇವರ ಪರವಾಗಿ ಇನ್ನೂ ಹೇಳತಕ್ಕ ಮಾತುಗಳು ಇವೆ.
3 ମୁଁ ଦୂରରୁ ଆପଣା ଜ୍ଞାନ ଆଣିବି ଓ ଆପଣା ସୃଷ୍ଟିକର୍ତ୍ତାଙ୍କର ଧାର୍ମିକତା ପ୍ରତିପନ୍ନ କରିବି;
ನಾನು ನನ್ನ ತಿಳುವಳಿಕೆಯನ್ನು ದೂರದಿಂದ ಪಡೆದುಕೊಳ್ಳುತ್ತೇನೆ. ನನ್ನ ಸೃಷ್ಟಿಕರ್ತ ನ್ಯಾಯವಂತರು ಎಂದು ನಿರೂಪಿಸುವೆನು.
4 କାରଣ ପ୍ରକୃତରେ ମୋହର କଥା ମିଥ୍ୟା ନୁହେଁ। ଜ୍ଞାନରେ ସିଦ୍ଧ ଜଣେ ତୁମ୍ଭ ସଙ୍ଗେ ଅଛି।
ನಿಜವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದ ಒಬ್ಬನಾಗಿ ನಾನು ನಿನ್ನ ಬಳಿಯಲ್ಲಿಯೇ ಇದ್ದೇನೆ.
5 ଦେଖ, ପରମେଶ୍ୱର ପରାକ୍ରମୀ ଓ କାହାକୁ ତୁଚ୍ଛ କରନ୍ତି ନାହିଁ; ସେ ବୁଦ୍ଧିବଳରେ ପରାକ୍ରମୀ ଅଟନ୍ତି।
“ನೋಡು, ದೇವರು ಸರ್ವಶಕ್ತರು, ಆದರೂ ಯಾರನ್ನೂ ತಿರಸ್ಕಾರ ಮಾಡುವುದಿಲ್ಲ. ಶಕ್ತಿವಂತರಾದ ದೇವರು ತಮ್ಮ ಉದ್ದೇಶದಲ್ಲಿ ದೃಢವಾಗಿದ್ದಾರೆ.
6 ସେ ଦୁଷ୍ଟର ପ୍ରାଣ ରକ୍ଷା କରନ୍ତି ନାହିଁ; ମାତ୍ର ଦୁଃଖଗ୍ରସ୍ତମାନଙ୍କୁ ନ୍ୟାୟ ପ୍ରଦାନ କରନ୍ତି।
ದುಷ್ಟರು ಬಹುಕಾಲ ಬಾಳಲು ದೇವರು ಅನುಮತಿಸುವುದಿಲ್ಲ; ಆದರೆ ದೇವರು ಬಾಧೆಪಡುವವರಿಗೆ ಅವರ ಹಕ್ಕುಗಳನ್ನು ಕೊಡುತ್ತಾರೆ.
7 ସେ ଧାର୍ମିକମାନଙ୍କଠାରୁ ଆପଣା ଦୃଷ୍ଟି ଫେରାନ୍ତି ନାହିଁ; ମାତ୍ର ସେ ସିଂହାସନୋପବିଷ୍ଟ ରାଜାଗଣ ସଙ୍ଗରେ ସଦାକାଳ ସେମାନଙ୍କୁ ସ୍ଥାପନ କରନ୍ତି ଓ ସେମାନେ ଉନ୍ନତ ହୁଅନ୍ତି।
ದೇವರು ನೀತಿವಂತರಿಂದ ತಮ್ಮ ಕಣ್ಣುಗಳನ್ನು ತೊಲಗಿಸುವುದಿಲ್ಲ; ದೇವರು ನೀತಿವಂತರನ್ನು ಅರಸುಗಳ ಸಂಗಡ ಸಿಂಹಾಸನದಲ್ಲಿ ಕುಳ್ಳಿರಿಸುವರು; ಹೌದು, ದೇವರು ಅವರನ್ನು ಎಂದೆಂದಿಗೂ ಉನ್ನತಕ್ಕೇರಿಸುವರು.
8 ପୁଣି, ଯଦି ସେମାନେ ଜଞ୍ଜିରରେ ବନ୍ଧାଯାʼନ୍ତି ଓ ଦୁଃଖରୂପ ରଜ୍ଜୁରେ ଧରାଯାʼନ୍ତି,
ಒಂದು ವೇಳೆ ಜನರು ಸಂಕಟದ ಸಂಕೋಲೆಗಳಿಂದ ಬಂಧಿತರಾಗಿ, ಬಾಧೆಯ ಹಗ್ಗಗಳಿಂದ ಹಿಡಿಯಲಾಗಿದ್ದರೆ,
9 ତେବେ ସେ ସେମାନଙ୍କର କ୍ରିୟା, ସେମାନଙ୍କର ଅପରାଧ ଓ ସେମାନଙ୍କର ଗର୍ବାଚରଣ ସେମାନଙ୍କୁ ଦେଖାନ୍ତି।
ದೇವರು ಅವರ ಕೃತ್ಯವನ್ನೂ ಸೊಕ್ಕಿನ ದ್ರೋಹಗಳನ್ನೂ ಅವರಿಗೆ ಹೇಳುವರು.
10 ମଧ୍ୟ ଶିକ୍ଷା ପ୍ରତି ସେ ସେମାନଙ୍କ କର୍ଣ୍ଣ ମୁକ୍ତ କରନ୍ତି ଓ ଅଧର୍ମରୁ ଫେରିବା ପାଇଁ ସେମାନଙ୍କୁ ଆଜ୍ଞା ଦିଅନ୍ତି।
ದೇವರು ಅವರ ಕಿವಿಯನ್ನು ತಿದ್ದುವಿಕೆಗಾಗಿ ತೆರೆದು, ಜನರು ದುಷ್ಟತನವನ್ನು ಬಿಟ್ಟು ತಿರುಗಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುವರು.
11 ଯଦି ସେମାନେ ଶୁଣି ତାହାଙ୍କର ସେବା କରିବେ, ତେବେ ସେମାନେ ସମୃଦ୍ଧିରେ ଆପଣା ଆପଣା ଦିନ ଓ ସୁଖରେ ଆପଣା ଆପଣା ବର୍ଷ କ୍ଷେପଣ କରିବେ।
ಒಂದು ವೇಳೆ, ಜನರು ವಿಧೇಯರಾಗಿ ದೇವರನ್ನು ಸೇವಿಸಿದರೆ, ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿ ಕಳೆಯುವರು. ತಮ್ಮ ವರ್ಷಗಳನ್ನು ಸಂತೃಪ್ತಿಯಲ್ಲಿಯೂ ಪೂರೈಸುವರು.
12 ମାତ୍ର ସେମାନେ ନ ଶୁଣିଲେ, ଖଡ୍ଗରେ ବିନଷ୍ଟ ହେବେ ଓ ଜ୍ଞାନବର୍ଜ୍ଜିତ ହୋଇ ମରିବେ।
ಅವರು ವಿಧೇಯರಾಗದಿದ್ದರೆ, ಸಂಕಟದ ಸಾಗರದಲ್ಲಿ ಸಾಗಿಹೋಗುವರು; ತಿಳುವಳಿಕೆಯಿಲ್ಲದ ಬಾಳನ್ನು ಬಾಳುವರು.
13 ମାତ୍ର ଅନ୍ତଃକରଣରେ ଅଧାର୍ମିକ ଲୋକମାନେ କ୍ରୋଧ ସଞ୍ଚୟ କରନ୍ତି; ସେ ସେମାନଙ୍କୁ ବାନ୍ଧିଲେ, ସେମାନେ ସାହାଯ୍ୟ ପାଇଁ ଡାକ ପକାନ୍ତି ନାହିଁ।
“ಹೃದಯದಲ್ಲಿ ಭಕ್ತಿಹೀನರಾಗಿರುವವರು ಕೋಪವನ್ನು ಕೂಡಿಸುವರು; ದೇವರು ಅವರನ್ನು ಬಂಧಿಸಿದರೂ, ಅವರು ದೇವರಿಗೆ ಮೊರೆ ಇಡುವುದಿಲ್ಲ.
14 ସେମାନେ ଯୌବନ କାଳରେ ମରନ୍ତି ଓ ଅଶୁଚି ଲୋକମାନଙ୍କ ମଧ୍ୟରେ ସେମାନଙ୍କ ଜୀବନ ବିନଷ୍ଟ ହୁଏ।
ಅವರು ತಮ್ಮ ಯೌವನದಲ್ಲಿ, ಪುರುಷಗಾಮಿಗಳ ಮಂದಿರದಲ್ಲಿ ಗತಿಸಿಹೋಗುವರು.
15 ସେ ଦୁଃଖୀଲୋକକୁ ତାହାର ଦୁଃଖ ଦ୍ୱାରା ଉଦ୍ଧାର କରନ୍ତି ଓ ଉପଦ୍ରବ ଦ୍ୱାରା ସେମାନଙ୍କର କର୍ଣ୍ଣ ମୁକ୍ତ କରନ୍ତି।
ಶ್ರಮೆ ಪಡುವವರನ್ನು ದೇವರು ಅವರ ಶ್ರಮೆಯ ಮೂಲಕವೇ ಬಿಡುಗಡೆ ಮಾಡುವರು; ದೇವರು ಅವರ ಹಿಂಸೆಯ ಮೂಲಕವೇ ಅವರೊಂದಿಗೆ ಮಾತನಾಡುವರು.
16 ସେ ତୁମ୍ଭକୁ ହିଁ ଦୁଃଖରୁ ବାହାର କରି ସଙ୍କୀର୍ଣ୍ଣତାରହିତ ପ୍ରଶସ୍ତ ସ୍ଥାନକୁ ନେଇଯାଆନ୍ତେ; ଓ ତୁମ୍ଭ ମେଜ ଉପରେ ସଜ୍ଜିତ ଦ୍ରବ୍ୟ ମେଦପୂର୍ଣ୍ଣ ହୁଅନ୍ତା।
“ದೇವರು ನಿನ್ನನ್ನು ಇಕ್ಕಟ್ಟಿನೊಳಗಿಂದ ಬಿಡಿಸುವರು; ಇಕ್ಕಟ್ಟಿಲ್ಲದ ವಿಶಾಲ ಸ್ಥಳವು ನಿನಗೆ ದೊರೆಯುವುದು; ನಿನ್ನ ಆದರಣೆಗಾಗಿ ನಿನ್ನ ಮೇಜು ಉತ್ತಮ ಆಹಾರಗಳಿಂದ ತುಂಬಿರುವುದು.
17 ମାତ୍ର ତୁମ୍ଭେ ଦୁଷ୍ଟର ବିଚାରରେ ପୂର୍ଣ୍ଣ ଅଛ; ବିଚାର ଓ ଶାସ୍ତି ତୁମ୍ଭକୁ ଧରିଅଛି।
ಆದರೆ ಈಗ ನೀನು ದುಷ್ಟರಿಗೆ ಬರಬೇಕಾದ ತೀರ್ಪಿನಿಂದ ತುಂಬಿರುವೆ. ನ್ಯಾಯವಿಚಾರಣೆಯೂ, ತೀರ್ಪೂ ನಿನ್ನನ್ನು ಹಿಡಿದಿರುತ್ತವೆ.
18 କୋପ ଅଛି, ଯେପରି ତୁମ୍ଭେ ଆପଣା ପ୍ରଚୁରତା ଦ୍ୱାରା ଭ୍ରାନ୍ତ ନ ହୁଅ; କିଅବା ପ୍ରାୟଶ୍ଚିତ୍ତର ମହତ୍ତ୍ୱ ତୁମ୍ଭକୁ ନ ଭୁଲାଏ, ଏଥିପାଇଁ ସାବଧାନ।
ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು; ದೊಡ್ಡ ಲಂಚತನವು ನಿನ್ನನ್ನು ವಂಚಿಸಬಾರದು.
19 ତୁମ୍ଭେ ଯେପରି ଦୁଃଖଗ୍ରସ୍ତ ନୋହିବ, ଏଥିପାଇଁ ତୁମ୍ଭର ଧନ ଓ ବଳର ସମସ୍ତ ପ୍ରତାପ କି ପ୍ରଚୁର ହେବ?
ನಿನ್ನ ಐಶ್ವರ್ಯವೂ, ಶಕ್ತಿಸಾಮರ್ಥ್ಯವೂ ಕಷ್ಟಾನುಭವವಿಲ್ಲದೆ ಸಾಗಿಸಲು ಸಾಧ್ಯವೇ?
20 ଯେଉଁ ରାତ୍ରିରେ ଗୋଷ୍ଠୀୟମାନେ ସ୍ୱ ସ୍ୱ ସ୍ଥାନରେ ଉଚ୍ଛିନ୍ନ ହୁଅନ୍ତି, ସେହି ରାତ୍ରି ବାଞ୍ଛା କର ନାହିଁ।
ಜನರನ್ನು ಅವರ ಮನೆಗಳಿಂದ ಎಳೆದುಕೊಂಡು ಹೋಗುವುದಕ್ಕೆ ರಾತ್ರಿಯನ್ನು ಬಯಸಬೇಡ.
21 ସାବଧାନ, ଅଧର୍ମକୁ ଆଦର କର ନାହିଁ; କାରଣ ତୁମ୍ଭେ ଦୁଃଖଭୋଗ ଅପେକ୍ଷା ଏହା ହିଁ ମନୋନୀତ କରିଅଛ।
ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನೀನು ಕಷ್ಟಕ್ಕಿಂತಲೂ ಕೇಡನ್ನು ಆರಿಸಿಕೊಂಡಿದ್ದೀ.
22 ଦେଖ, ପରମେଶ୍ୱର ଆପଣା ପରାକ୍ରମରେ ଉଚ୍ଚ ଭାବରେ କାର୍ଯ୍ୟ କରନ୍ତି; ତାହାଙ୍କ ପରି ଶିକ୍ଷକ କିଏ ଅଛି?
“ದೇವರು ತಮ್ಮ ಶಕ್ತಿಯಲ್ಲಿ ಉನ್ನತರಾಗಿದ್ದಾರೆ. ದೇವರಂಥ ಬೋಧಕರು ಯಾರಿದ್ದಾರೆ?
23 କିଏ ତାହାଙ୍କର ଗନ୍ତବ୍ୟ ପଥ ନିରୂପଣ କରିଅଛି? ଅବା କିଏ କହିପାରେ, ‘ତୁମ୍ଭେ ଅଧର୍ମ କରିଅଛ?’
ದೇವರ ಮಾರ್ಗವನ್ನು ದೇವರಿಗೆ ನೇಮಿಸಿದವರ‍್ಯಾರು? ‘ನೀವು ಮಾಡಿರುವುದು ಅನ್ಯಾಯ,’ ಎಂದು ದೇವರಿಗೆ ಹೇಳುವವರು ಯಾರು?
24 ତାହାଙ୍କ କାର୍ଯ୍ୟର ମାହାତ୍ମ୍ୟ ପ୍ରକାଶ କରିବାକୁ ସ୍ମରଣ କର, ଲୋକମାନେ ତହିଁର କୀର୍ତ୍ତନ କରିଅଛନ୍ତି।
ಮನುಷ್ಯರು ಹೊಗಳಿ ಹಾಡುವ ಹಾಡುಗಳಿಂದ, ದೇವರ ಕೃತ್ಯಗಳನ್ನು ಉನ್ನತಪಡಿಸಲು ನೆನಸಿಕೋ.
25 ସମସ୍ତ ଲୋକ ତହିଁ ପ୍ରତି ନିରୀକ୍ଷଣ କରିଅଛନ୍ତି, ମନୁଷ୍ୟ ଦୂରରୁ ତାହା ଦେଖେ।
ಎಲ್ಲಾ ಮನುಷ್ಯರು ದೇವರ ಕೃತ್ಯಗಳನ್ನು ಕಂಡಿದ್ದಾರೆ; ಹೌದು, ಮನುಷ್ಯರು ದೂರದಿಂದ ನೋಡುತ್ತಾರೆ.
26 ଦେଖ, ପରମେଶ୍ୱର ମହାନ ଓ ଆମ୍ଭେମାନେ ତାହାଙ୍କୁ ଜାଣୁ ନାହୁଁ; ତାହାଙ୍କ ବର୍ଷର ସଂଖ୍ୟା ଅନନୁସନ୍ଧେୟ।
ದೇವರು ಮಹೋನ್ನತರು; ದೇವರು ನಮ್ಮ ಅರಿವಿಗೆ ನಿಲುಕರು. ದೇವರ ವರ್ಷಗಳು ಅಸಂಖ್ಯಾತವಾಗಿವೆ.
27 କାରଣ ସେ ଜଳବିନ୍ଦୁସବୁ ଆକର୍ଷଣ କରନ୍ତି, ତାହା ବୃଷ୍ଟି ରୂପେ ତାହାଙ୍କ ବାଷ୍ପରୁ ପଡ଼େ।
“ದೇವರು ನೀರಿನ ಹನಿಗಳನ್ನು ಕೂಡಿಸಿದಾಗ, ಮಂಜಿನಿಂದ ತಿಳಿಮಳೆ ಸುರಿಯುತ್ತವೆ.
28 ଆକାଶ ତାହା ଢାଳି ଦିଏ ଓ ମନୁଷ୍ୟ ଉପରେ ତାହା ବହୁଳ ରୂପେ ବର୍ଷେ।
ಮೋಡಗಳು ಮಳೆಗರೆಯುತ್ತವೆ. ಮನುಷ್ಯರ ಮೇಲೆ ಸಮೃದ್ಧಿಯಾಗಿ ಚಿಮುಕಿಸುತ್ತವೆ.
29 ମେଘମାଳର ପ୍ରସାରଣ ଓ ତାହାଙ୍କ ଚନ୍ଦ୍ରାତପର ଗର୍ଜ୍ଜନ କି କେହି ବୁଝିପାରେ?
ಮೋಡಗಳ ವಿಸ್ತೀರ್ಣತೆಯನ್ನೂ, ದೇವರ ಗುಡಾರದಿಂದ ಗುಡುಗುವುದನ್ನೂ ಗ್ರಹಿಸಿಕೊಳ್ಳುವವರು ಯಾರು?
30 ଦେଖ, ସେ ଆପଣା ଚତୁର୍ଦ୍ଦିଗରେ ନିଜ ଦୀପ୍ତି ବିସ୍ତାର କରନ୍ତି; ପୁଣି, ସେ ସମୁଦ୍ରର ତଳଭାଗ ଆବୃତ କରନ୍ତି।
ಇಗೋ, ದೇವರು ಮಿಂಚನ್ನು ತಮ್ಮ ಸುತ್ತಲು ಚದರಿಸುತ್ತಾರೆ. ಸಮುದ್ರದ ಆಳವನ್ನು ಸಹ ಆವರಿಸುತ್ತಾರೆ.
31 କାରଣ ସେ ଏସବୁ ଦ୍ୱାରା ଗୋଷ୍ଠୀବର୍ଗର ଶାସନ କରନ୍ତି; ସେ ବହୁଳ ପରିମାଣରେ ଆହାର ଦିଅନ୍ତି।
ಈ ರೀತಿಯಾಗಿ ದೇವರು ದೇಶಗಳನ್ನು ಆಳುತ್ತಾರೆ ಸಮೃದ್ಧಿಯಾಗಿ ದೇವರು ಆಹಾರ ಕೊಡುತ್ತಾರೆ.
32 ସେ ବିଜୁଳିରେ ଆପଣା ହସ୍ତ ଆଚ୍ଛାଦନ କରନ୍ତି ଓ ଲକ୍ଷ୍ୟ ସ୍ଥଳ ଆଘାତ କରିବାକୁ ଆଜ୍ଞା ଦିଅନ୍ତି।
ದೇವರು ತಮ್ಮ ಕೈಯಲ್ಲಿ ಮಿಂಚನ್ನು ಹಿಡಿದುಕೊಂಡು, ಅದನ್ನು ಗುರಿಮುಟ್ಟುವಂತೆ ಆಜ್ಞಾಪಿಸುತ್ತಾರೆ.
33 ତହିଁର ଶବ୍ଦ ତାହାଙ୍କ ବିଷୟରେ ପରିଚୟ ଦିଏ, ପଶୁପଲ ମଧ୍ୟ ଆଗାମୀ ତୋଫାନ ବିଷୟ ଜଣାନ୍ତି।
ಬಿರುಗಾಳಿಯು ಬರುತ್ತಿದೆ ಎಂದು ದೇವರ ಸಿಡಿಲು ತಿಳಿಸುತ್ತದೆ; ದನಕರುಗಳು ಸಹ ದೇವರ ಆಗಮನವನ್ನು ತಿಳಿಸುತ್ತವೆ.

< ଆୟୁବ 36 >