< ପ୍ରକାଶିତ 7 >

1 ତାହାପରେ ମୁଁ ଦେଖିଲି, ପୃଥିବୀ କି ସମୁଦ୍ର କି କୌଣସି ଗଛ ଉପରେ ଯେପରି ବାୟୁ ନ ବହେ, ଏଥିନିମନ୍ତେ ପୃଥିବୀର ଚାରି କୋଣରେ ଚାରି ଜଣ ଦୂତ ଠିଆ ହୋଇ ପୃଥିବୀର ଚାରି ବାୟୁକୁ ଅଟକାଇ ଧରିଅଛନ୍ତି।
ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.
2 ପୁଣି, ମୁଁ ଆଉ ଜଣେ ଦୂତଙ୍କୁ ପୂର୍ବଦିଗରୁ ଉଠି ଆସିବାର ଦେଖିଲି; ତାହାଙ୍କ ହସ୍ତରେ ଜୀବିତ ଈଶ୍ବରଙ୍କର ମୁଦ୍ରା ଥିଲା। ପୃଥିବୀ ଓ ସମୁଦ୍ରର କ୍ଷତି କରିବା ନିମନ୍ତେ କ୍ଷମତା ପାଇଥିବା ସେହି ଚାରି ଦୂତଙ୍କୁ ସେ ଉଚ୍ଚସ୍ୱରରେ ଡାକି କହିଲେ,
ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,
3 ଆମ୍ଭେମାନେ ଆପଣାମାନଙ୍କ ଈଶ୍ବରଙ୍କର ଦାସମାନଙ୍କ କପାଳରେ ମୁଦ୍ରାଙ୍କନ ଦେବା ପର୍ଯ୍ୟନ୍ତ ତୁମ୍ଭେମାନେ ପୃଥିବୀ କିଅବା ସମୁଦ୍ର କିଅବା ଗଛଗୁଡ଼ିକର କ୍ଷତି କର ନାହିଁ।
“ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
4 ତାହା ପରେ ମୁଦ୍ରାଙ୍କିତ ଲୋକମାନଙ୍କର ସଂଖ୍ୟା ମୁଁ ଶୁଣିଲି, ଇସ୍ରାଏଲ ସନ୍ତାନମାନଙ୍କ ସମସ୍ତ ବଂଶ ମଧ୍ୟରୁ ଏକ ଲକ୍ଷ ଚଉରାଳିଶ ହଜାର ଲୋକ ମୁଦ୍ରାଙ୍କିତ ହେଲେ,
ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.
5 ଯିହୂଦା ବଂଶରୁ ବାର ହଜାର, ରୂବେନ ବଂଶରୁ ବାର ହଜାର, ଗାଦ ବଂଶରୁ ବାର ହଜାର,
ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದ್ ಕುಲದವರಲ್ಲಿ ಹನ್ನೆರಡು ಸಾವಿರ,
6 ଆଶେର ବଂଶରୁ ବାର ହଜାର, ନପ୍ତାଲି ବଂଶରୁ ବାର ହଜାର, ମନଃଶି ବଂଶରୁ ବାର ହଜାର,
ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ,
7 ଶିମିୟୋନ ବଂଶରୁ ବାର ହଜାର, ଲେବୀ ବଂଶରୁ ବାର ହଜାର, ଇସାଖାର ବଂଶରୁ ବାର ହଜାର,
ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ,
8 ସବୂଲୂନ ବଂଶରୁ ବାର ହଜାର, ଯୋଷେଫ ବଂଶରୁ ବାର ହଜାର, ବିନ୍ୟାମୀନ୍ ବଂଶରୁ ବାର ହଜାର।
ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು.
9 ଏହାପରେ ମୁଁ ଦୃଷ୍ଟିପାତ କଲି, ଆଉ ଦେଖ, ସର୍ବଜାତୀୟ, ସର୍ବଗୋଷ୍ଠୀୟ, ସର୍ବବଂଶୀୟ ଓ ସର୍ବଭାଷାବାଦୀ ଅଗଣ୍ୟ ଏକ ମହାଜନତା ଶୁକ୍ଳ ବସ୍ତ୍ର ପରିହିତ ହୋଇ ଓ ଖଜୁରୀ ଡାଳଗୁଡ଼ିକ ହସ୍ତରେ ଧରି ସିଂହାସନ ଓ ମେଷଶାବକଙ୍କ ସମ୍ମୁଖରେ ଦଣ୍ଡାୟମାନ ହୋଇଅଛନ୍ତି;
ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.
10 ସେମାନେ ଉଚ୍ଚସ୍ୱରରେ କହୁଅଛନ୍ତି, “ପରିତ୍ରାଣ, ସିଂହାସନ ଉପବିଷ୍ଟ ଆମ୍ଭମାନଙ୍କ ଈଶ୍ବରଙ୍କର, ଓ ମେଷଶାବକଙ୍କର କାର୍ଯ୍ୟ।”
೧೦ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.
11 ପୁଣି, ସମସ୍ତ ଦୂତ ସିଂହାସନ, ପ୍ରାଚୀନବର୍ଗ ଓ ଚାରି ପ୍ରାଣୀଙ୍କ ଚତୁର୍ଦ୍ଦିଗରେ ଉଭା ହୋଇଅଛନ୍ତି ଆଉ ସିଂହାସନ ସମ୍ମୁଖରେ ଉବୁଡ଼ ହୋଇପଡ଼ି ଈଶ୍ବରଙ୍କୁ ପ୍ରଣାମ କରି କହୁଅଛନ୍ତି,
೧೧ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,
12 “ଆମେନ୍; ପ୍ରଶଂସା, ଗୌରବ, ଜ୍ଞାନ, ଧନ୍ୟବାଦ, ସମ୍ଭ୍ରମ, ପରାକ୍ରମ ଓ ଶକ୍ତି ଯୁଗେ ଯୁଗେ ଆମ୍ଭମାନଙ୍କ ଈଶ୍ବରଙ୍କର, ଆମେନ୍‍।” (aiōn g165)
೧೨“ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. (aiōn g165)
13 ପୁଣି, ପ୍ରାଚୀନମାନଙ୍କ ମଧ୍ୟରୁ ଜଣେ ମୋତେ ପଚାରିଲେ, ଧଳା ବସ୍ତ୍ର ପରିହିତ ଏହି ଲୋକମାନେ କିଏ ଓ ସେମାନେ କେଉଁଠାରୁ ଆସିଅଛନ୍ତି?
೧೩ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು.
14 ମୁଁ ତାହାଙ୍କୁ କହିଲି, ହେ ମୋହର ପ୍ରଭୁ, ଆପଣ ହିଁ ତାହା ଜାଣନ୍ତି। ସେଥିରେ ସେ ମୋତେ କହିଲେ, ଏମାନେ ମହାକ୍ଲେଶରୁ ବାହାରି ଆସିଅଛନ୍ତି ଓ ମେଷଶାବକଙ୍କ ବଳୀକୃତ ରକ୍ତରେ ଆପଣା ଆପଣା ବସ୍ତ୍ର ଧୋଇ ଶୁକ୍ଳବର୍ଣ୍ଣ କରିଅଛନ୍ତି।
೧೪ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.
15 ସେଥିପାଇଁ, “ସେମାନେ ଈଶ୍ବରଙ୍କ ସିଂହାସନ ସମ୍ମୁଖରେ ଥାଇ, ଦିବାରାତ୍ର ତାହାଙ୍କ ମନ୍ଦିରରେ ତାହାଙ୍କର ଉପାସନା କରନ୍ତି,” “ପୁଣି, ସିଂହାସନ ଉପବିଷ୍ଟ ବ୍ୟକ୍ତି ସେମାନଙ୍କର ଆଶ୍ରୟ-ସ୍ୱରୂପ ହେବେ।
೧೫ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.
16 ସେମାନଙ୍କର ଆଉ କେବେ ହେଁ କ୍ଷୁଧା କି ତୃଷା ହେବ ନାହିଁ,” “ପୁଣି, ସୂର୍ଯ୍ୟ କିଅବା କୌଣସି ଉତ୍ତାପ ସେମାନଙ୍କୁ ଆଘାତ କରିବ ନାହିଁ,
೧೬ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.
17 କାରଣ ସିଂହାସନ ମଧ୍ୟସ୍ଥିତ ମେଷଶାବକ ସେମାନଙ୍କର ପ୍ରତିପାଳକ ହେବେ ଓ ଜୀବନଦାୟକ ନିର୍ଝର ନିକଟରେ ସେମାନଙ୍କୁ କଢ଼ାଇ ନେବେ,” “ପୁଣି, ଈଶ୍ବର ସେମାନଙ୍କ ଚକ୍ଷୁରୁ ସମସ୍ତ ଲୋତକ ପୋଛିଦେବେ।”
೧೭ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.

< ପ୍ରକାଶିତ 7 >