< प्रेरिताः 13 >

1 अपरञ्च बर्णब्बाः, शिमोन् यं निग्रं वदन्ति, कुरीनीयलूकियो हेरोदा राज्ञा सह कृतविद्यााभ्यासो मिनहेम्, शौलश्चैते ये कियन्तो जना भविष्यद्वादिन उपदेष्टारश्चान्तियखियानगरस्थमण्डल्याम् आसन्,
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
2 ते यदोपवासं कृत्वेश्वरम् असेवन्त तस्मिन् समये पवित्र आत्मा कथितवान् अहं यस्मिन् कर्म्मणि बर्णब्बाशैलौ नियुक्तवान् तत्कर्म्म कर्त्तुं तौ पृथक् कुरुत।
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
3 ततस्तैरुपवासप्रार्थनयोः कृतयोः सतोस्ते तयो र्गात्रयो र्हस्तार्पणं कृत्वा तौ व्यसृजन्।
ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
4 ततः परं तौ पवित्रेणात्मना प्रेरितौ सन्तौ सिलूकियानगरम् उपस्थाय समुद्रपथेन कुप्रोपद्वीपम् अगच्छतां।
ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.
5 ततः सालामीनगरम् उपस्थाय तत्र यिहूदीयानां भजनभवनानि गत्वेश्वरस्य कथां प्राचारयतां; योहनपि तत्सहचरोऽभवत्।
ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.
6 इत्थं ते तस्योपद्वीपस्य सर्व्वत्र भ्रमन्तः पाफनगरम् उपस्थिताः; तत्र सुविवेचकेन सर्जियपौलनाम्ना तद्देशाधिपतिना सह भविष्यद्वादिनो वेशधारी बर्यीशुनामा यो मायावी यिहूदी आसीत् तं साक्षात् प्राप्तवतः।
ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.
7 तद्देशाधिप ईश्वरस्य कथां श्रोतुं वाञ्छन् पौलबर्णब्बौ न्यमन्त्रयत्।
ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.
8 किन्त्विलुमा यं मायाविनं वदन्ति स देशाधिपतिं धर्म्ममार्गाद् बहिर्भूतं कर्त्तुम् अयतत।
ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.
9 तस्मात् शोलोऽर्थात् पौलः पवित्रेणात्मना परिपूर्णः सन् तं मायाविनं प्रत्यनन्यदृष्टिं कृत्वाकथयत्,
ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ,
10 हे नरकिन् धर्म्मद्वेषिन् कौटिल्यदुष्कर्म्मपरिपूर्ण, त्वं किं प्रभोः सत्यपथस्य विपर्य्ययकरणात् कदापि न निवर्त्तिष्यसे?
೧೦ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?
11 अधुना परमेश्वरस्तव समुचितं करिष्यति तेन कतिपयदिनानि त्वम् अन्धः सन् सूर्य्यमपि न द्रक्ष्यसि। तत्क्षणाद् रात्रिवद् अन्धकारस्तस्य दृष्टिम् आच्छादितवान्; तस्मात् तस्य हस्तं धर्त्तुं स लोकमन्विच्छन् इतस्ततो भ्रमणं कृतवान्।
೧೧ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.
12 एनां घटनां दृष्ट्वा स देशाधिपतिः प्रभूपदेशाद् विस्मित्य विश्वासं कृतवान्।
೧೨ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.
13 तदनन्तरं पौलस्तत्सङ्गिनौ च पाफनगरात् प्रोतं चालयित्वा पम्फुलियादेशस्य पर्गीनगरम् अगच्छन् किन्तु योहन् तयोः समीपाद् एत्य यिरूशालमं प्रत्यागच्छत्।
೧೩ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.
14 पश्चात् तौ पर्गीतो यात्रां कृत्वा पिसिदियादेशस्य आन्तियखियानगरम् उपस्थाय विश्रामवारे भजनभवनं प्रविश्य समुपाविशतां।
೧೪ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
15 व्यवस्थाभविष्यद्वाक्ययोः पठितयोः सतो र्हे भ्रातरौ लोकान् प्रति युवयोः काचिद् उपदेशकथा यद्यस्ति तर्हि तां वदतं तौ प्रति तस्य भजनभवनस्याधिपतयः कथाम् एतां कथयित्वा प्रैषयन्।
೧೫ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.
16 अतः पौल उत्तिष्ठन् हस्तेन सङ्केतं कुर्व्वन् कथितवान् हे इस्रायेलीयमनुष्या ईश्वरपरायणाः सर्व्वे लोका यूयम् अवधद्धं।
೧೬ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ;
17 एतेषामिस्रायेल्लोकानाम् ईश्वरोऽस्माकं पूर्व्वपरुषान् मनोनीतान् कत्वा गृहीतवान् ततो मिसरि देशे प्रवसनकाले तेषामुन्नतिं कृत्वा तस्मात् स्वीयबाहुबलेन तान् बहिः कृत्वा समानयत्।
೧೭“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.
18 चत्वारिंशद्वत्सरान् यावच्च महाप्रान्तरे तेषां भरणं कृत्वा
೧೮ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,
19 किनान्देशान्तर्व्वर्त्तीणि सप्तराज्यानि नाशयित्वा गुटिकापातेन तेषु सर्व्वदेशेषु तेभ्योऽधिकारं दत्तवान्।
೧೯ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.
20 पञ्चाशदधिकचतुःशतेषु वत्सरेषु गतेषु च शिमूयेल्भविष्यद्वादिपर्य्यन्तं तेषामुपरि विचारयितृन् नियुक्तवान्।
೨೦ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.
21 तैश्च राज्ञि प्रार्थिते, ईश्वरो बिन्यामीनो वंशजातस्य कीशः पुत्रं शौलं चत्वारिंशद्वर्षपर्य्यन्तं तेषामुपरि राजानं कृतवान्।
೨೧ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು.
22 पश्चात् तं पदच्युतं कृत्वा यो मदिष्टक्रियाः सर्व्वाः करिष्यति तादृशं मम मनोभिमतम् एकं जनं यिशयः पुत्रं दायूदं प्राप्तवान् इदं प्रमाणं यस्मिन् दायूदि स दत्तवान् तं दायूदं तेषामुपरि राजत्वं कर्त्तुम् उत्पादितवान।
೨೨ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.
23 तस्य स्वप्रतिश्रुतस्य वाक्यस्यानुसारेण इस्रायेल्लोकानां निमित्तं तेषां मनुष्याणां वंशाद् ईश्वर एकं यीशुं (त्रातारम्) उदपादयत्।
೨೩“ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.
24 तस्य प्रकाशनात् पूर्व्वं योहन् इस्रायेल्लोकानां सन्निधौ मनःपरावर्त्तनरूपं मज्जनं प्राचारयत्।
೨೪ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.
25 यस्य च कर्म्मणोे भारं प्रप्तवान् योहन् तन् निष्पादयन् एतां कथां कथितवान्, यूयं मां कं जनं जानीथ? अहम् अभिषिक्तत्राता नहि, किन्तु पश्यत यस्य पादयोः पादुकयो र्बन्धने मोचयितुमपि योग्यो न भवामि तादृश एको जनो मम पश्चाद् उपतिष्ठति।
೨೫ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
26 हे इब्राहीमो वंशजाता भ्रातरो हे ईश्वरभीताः सर्व्वलोका युष्मान् प्रति परित्राणस्य कथैषा प्रेरिता।
೨೬“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.
27 यिरूशालम्निवासिनस्तेषाम् अधिपतयश्च तस्य यीशोः परिचयं न प्राप्य प्रतिविश्रामवारं पठ्यमानानां भविष्यद्वादिकथानाम् अभिप्रायम् अबुद्ध्वा च तस्य वधेन ताः कथाः सफला अकुर्व्वन्।
೨೭ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
28 प्राणहननस्य कमपि हेतुम् अप्राप्यापि पीलातस्य निकटे तस्य वधं प्रार्थयन्त।
೨೮ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
29 तस्मिन् याः कथा लिखिताः सन्ति तदनुसारेण कर्म्म सम्पाद्य तं क्रुशाद् अवतार्य्य श्मशाने शायितवन्तः।
೨೯ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
30 किन्त्वीश्वरः श्मशानात् तमुदस्थापयत्,
೩೦“ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
31 पुनश्च गालीलप्रदेशाद् यिरूशालमनगरं तेन सार्द्धं ये लोका आगच्छन् स बहुदिनानि तेभ्यो दर्शनं दत्तवान्, अतस्त इदानीं लोकान् प्रति तस्य साक्षिणः सन्ति।
೩೧ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
32 अस्माकं पूर्व्वपुरुषाणां समक्षम् ईश्वरो यस्मिन् प्रतिज्ञातवान् यथा, त्वं मे पुत्रोसि चाद्य त्वां समुत्थापितवानहम्।
೩೨“ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;
33 इदं यद्वचनं द्वितीयगीते लिखितमास्ते तद् यीशोरुत्थानेन तेषां सन्ताना ये वयम् अस्माकं सन्निधौ तेन प्रत्यक्षी कृतं, युष्मान् इमं सुसंवादं ज्ञापयामि।
೩೩‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.
34 परमेश्वरेण श्मशानाद् उत्थापितं तदीयं शरीरं कदापि न क्षेष्यते, एतस्मिन् स स्वयं कथितवान् यथा दायूदं प्रति प्रतिज्ञातो यो वरस्तमहं तुभ्यं दास्यामि।
೩೪“ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.
35 एतदन्यस्मिन् गीतेऽपि कथितवान्। स्वकीयं पुण्यवन्तं त्वं क्षयितुं न च दास्यसि।
೩೫ಅದಕ್ಕೆ ಅನುಸಾರವಾಗಿ ಆತನು; ‘ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು’ ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ.
36 दायूदा ईश्वराभिमतसेवायै निजायुषि व्ययिते सति स महानिद्रां प्राप्य निजैः पूर्व्वपुरुषैः सह मिलितः सन् अक्षीयत;
೩೬“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.
37 किन्तु यमीश्वरः श्मशानाद् उदस्थापयत् स नाक्षीयत।
೩೭ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುವು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.
38 अतो हे भ्रातरः, अनेन जनेन पापमोचनं भवतीति युष्मान् प्रति प्रचारितम् आस्ते।
೩೮“ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.
39 फलतो मूसाव्यवस्थया यूयं येभ्यो दोषेभ्यो मुक्ता भवितुं न शक्ष्यथ तेभ्यः सर्व्वदोषेभ्य एतस्मिन् जने विश्वासिनः सर्व्वे मुक्ता भविष्यन्तीति युष्माभि र्ज्ञायतां।
೩೯ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
40 अपरञ्च। अवज्ञाकारिणो लोकाश्चक्षुरुन्मील्य पश्यत। तथैवासम्भवं ज्ञात्वा स्यात यूयं विलज्जिताः। यतो युष्मासु तिष्ठत्सु करिष्ये कर्म्म तादृशं। येनैव तस्य वृत्तान्ते युष्मभ्यं कथितेऽपि हि। यूयं न तन्तु वृत्तान्तं प्रत्येष्यथ कदाचन॥
೪೦ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;
41 येयं कथा भविष्यद्वादिनां ग्रन्थेषु लिखितास्ते सावधाना भवत स कथा यथा युष्मान् प्रति न घटते।
೪೧“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.
42 यिहूदीयभजनभवनान् निर्गतयोस्तयो र्भिन्नदेशीयै र्वक्ष्यमाणा प्रार्थना कृता, आगामिनि विश्रामवारेऽपि कथेयम् अस्मान् प्रति प्रचारिता भवत्विति।
೪೨ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.
43 सभाया भङ्गे सति बहवो यिहूदीयलोका यिहूदीयमतग्राहिणो भक्तलोकाश्च बर्णब्बापौलयोः पश्चाद् आगच्छन्, तेन तौ तैः सह नानाकथाः कथयित्वेश्वरानुग्रहाश्रये स्थातुं तान् प्रावर्त्तयतां।
೪೩ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
44 परविश्रामवारे नगरस्य प्रायेण सर्व्वे लाका ईश्वरीयां कथां श्रोतुं मिलिताः,
೪೪ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು.
45 किन्तु यिहूदीयलोका जननिवहं विलोक्य ईर्ष्यया परिपूर्णाः सन्तो विपरीतकथाकथनेनेश्वरनिन्दया च पौलेनोक्तां कथां खण्डयितुं चेष्टितवन्तः।
೪೫ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.
46 ततः पौैलबर्णब्बावक्षोभौ कथितवन्तौ प्रथमं युष्माकं सन्निधावीश्वरीयकथायाः प्रचारणम् उचितमासीत् किन्तुं तदग्राह्यत्वकरणेन यूयं स्वान् अनन्तायुषोऽयोग्यान् दर्शयथ, एतत्कारणाद् वयम् अन्यदेशीयलोकानां समीपं गच्छामः। (aiōnios g166)
೪೬ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ. (aiōnios g166)
47 प्रभुरस्मान् इत्थम् आदिष्टवान् यथा, यावच्च जगतः सीमां लोकानां त्राणकारणात्। मयान्यदेशमध्ये त्वं स्थापितो भूः प्रदीपवत्॥
೪೭ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.
48 तदा कथामीदृशीं श्रुत्वा भिन्नदेशीया आह्लादिताः सन्तः प्रभोः कथां धन्यां धन्याम् अवदन्, यावन्तो लोकाश्च परमायुः प्राप्तिनिमित्तं निरूपिता आसन् तेे व्यश्वसन्। (aiōnios g166)
೪೮ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. (aiōnios g166)
49 इत्थं प्रभोः कथा सर्व्वेदेशं व्याप्नोत्।
೪೯ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು.
50 किन्तु यिहूदीया नगरस्य प्रधानपुरुषान् सम्मान्याः कथिपया भक्ता योषितश्च कुप्रवृत्तिं ग्राहयित्वा पौलबर्णब्बौ ताडयित्वा तस्मात् प्रदेशाद् दूरीकृतवन्तः।
೫೦ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.
51 अतः कारणात् तौ निजपदधूलीस्तेषां प्रातिकूल्येन पातयित्वेेकनियं नगरं गतौ।
೫೧ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.
52 ततः शिष्यगण आनन्देन पवित्रेणात्मना च परिपूर्णोभवत्।
೫೨ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.

< प्रेरिताः 13 >