< लूकः 17 >
1 इतः परं यीशुः शिष्यान् उवाच, विघ्नैरवश्यम् आगन्तव्यं किन्तु विघ्ना येन घटिष्यन्ते तस्य दुर्गति र्भविष्यति।
೧ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?
2 एतेषां क्षुद्रप्राणिनाम् एकस्यापि विघ्नजननात् कण्ठबद्धपेषणीकस्य तस्य सागरागाधजले मज्जनं भद्रं।
೨ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.
3 यूयं स्वेषु सावधानास्तिष्ठत; तव भ्राता यदि तव किञ्चिद् अपराध्यति तर्हि तं तर्जय, तेन यदि मनः परिवर्त्तयति तर्हि तं क्षमस्व।
೩ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.
4 पुनरेकदिनमध्ये यदि स तव सप्तकृत्वोऽपराध्यति किन्तु सप्तकृत्व आगत्य मनः परिवर्त्य मयापराद्धम् इति वदति तर्हि तं क्षमस्व।
೪ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
5 तदा प्रेरिताः प्रभुम् अवदन् अस्माकं विश्वासं वर्द्धय।
೫ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು,
6 प्रभुरुवाच, यदि युष्माकं सर्षपैकप्रमाणो विश्वासोस्ति तर्हि त्वं समूलमुत्पाटितो भूत्वा समुद्रे रोपितो भव कथायाम् एतस्याम् एतदुडुम्बराय कथितायां स युष्माकमाज्ञावहो भविष्यति।
೬ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.
7 अपरं स्वदासे हलं वाहयित्वा वा पशून् चारयित्वा क्षेत्राद् आगते सति तं वदति, एहि भोक्तुमुपविश, युष्माकम् एतादृशः कोस्ति?
೭“ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?
8 वरञ्च पूर्व्वं मम खाद्यमासाद्य यावद् भुञ्जे पिवामि च तावद् बद्धकटिः परिचर पश्चात् त्वमपि भोक्ष्यसे पास्यसि च कथामीदृशीं किं न वक्ष्यति?
೮ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.
9 तेन दासेन प्रभोराज्ञानुरूपे कर्म्मणि कृते प्रभुः किं तस्मिन् बाधितो जातः? नेत्थं बुध्यते मया।
೯ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ.
10 इत्थं निरूपितेषु सर्व्वकर्म्मसु कृतेषु सत्मु यूयमपीदं वाक्यं वदथ, वयम् अनुपकारिणो दासा अस्माभिर्यद्यत्कर्त्तव्यं तन्मात्रमेव कृतं।
೧೦ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.
11 स यिरूशालमि यात्रां कुर्व्वन् शोमिरोण्गालील्प्रदेशमध्येन गच्छति,
೧೧ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.
12 एतर्हि कुत्रचिद् ग्रामे प्रवेशमात्रे दशकुष्ठिनस्तं साक्षात् कृत्वा
೧೨ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು,
13 दूरे तिष्ठनत उच्चै र्वक्तुमारेभिरे, हे प्रभो यीशो दयस्वास्मान्।
೧೩“ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು.
14 ततः स तान् दृष्ट्वा जगाद, यूयं याजकानां समीपे स्वान् दर्शयत, ततस्ते गच्छन्तो रोगात् परिष्कृताः।
೧೪ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
15 तदा तेषामेकः स्वं स्वस्थं दृष्ट्वा प्रोच्चैरीश्वरं धन्यं वदन् व्याघुट्यायातो यीशो र्गुणाननुवदन् तच्चरणाधोभूमौ पपात;
೧೫ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು,
೧೬ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.
17 तदा यीशुरवदत्, दशजनाः किं न परिष्कृताः? तह्यन्ये नवजनाः कुत्र?
೧೭ಯೇಸು ಇದನ್ನು ನೋಡಿ, “ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ?
18 ईश्वरं धन्यं वदन्तम् एनं विदेशिनं विना कोप्यन्यो न प्राप्यत।
೧೮ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ,
19 तदा स तमुवाच, त्वमुत्थाय याहि विश्वासस्ते त्वां स्वस्थं कृतवान्।
೧೯ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು.
20 अथ कदेश्वरस्य राजत्वं भविष्यतीति फिरूशिभिः पृष्टे स प्रत्युवाच, ईश्वरस्य राजत्वम् ऐश्वर्य्यदर्शनेन न भविष्यति।
೨೦ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.
21 अत एतस्मिन् पश्य तस्मिन् वा पश्य, इति वाक्यं लोका वक्तुं न शक्ष्यन्ति, ईश्वरस्य राजत्वं युष्माकम् अन्तरेवास्ते।
೨೧‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು.
22 ततः स शिष्यान् जगाद, यदा युष्माभि र्मनुजसुतस्य दिनमेकं द्रष्टुम् वाञ्छिष्यते किन्तु न दर्शिष्यते, ईदृक्काल आयाति।
೨೨ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.
23 तदात्र पश्य वा तत्र पश्येति वाक्यं लोका वक्ष्यन्ति, किन्तु तेषां पश्चात् मा यात, मानुगच्छत च।
೨೩ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.
24 यतस्तडिद् यथाकाशैकदिश्युदिय तदन्यामपि दिशं व्याप्य प्रकाशते तद्वत् निजदिने मनुजसूनुः प्रकाशिष्यते।
೨೪ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
25 किन्तु तत्पूर्व्वं तेनानेकानि दुःखानि भोक्तव्यान्येतद्वर्त्तमानलोकैश्च सोऽवज्ञातव्यः।
೨೫ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.
26 नोहस्य विद्यमानकाले यथाभवत् मनुष्यसूनोः कालेपि तथा भविष्यति।
೨೬ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು.
27 यावत्कालं नोहो महापोतं नारोहद् आप्लाविवार्य्येत्य सर्व्वं नानाशयच्च तावत्कालं यथा लोका अभुञ्जतापिवन् व्यवहन् व्यवाहयंश्च;
೨೭ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.
28 इत्थं लोटो वर्त्तमानकालेपि यथा लोका भोजनपानक्रयविक्रयरोपणगृहनिर्म्माणकर्म्मसु प्रावर्त्तन्त,
೨೮ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
29 किन्तु यदा लोट् सिदोमो निर्जगाम तदा नभसः सगन्धकाग्निवृष्टि र्भूत्वा सर्व्वं व्यनाशयत्
೨೯ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.
30 तद्वन् मानवपुत्रप्रकाशदिनेपि भविष्यति।
೩೦ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿನದಲ್ಲಿ ಅದೇ ರೀತಿಯಾಗಿ ಇರುವುದು.
31 तदा यदि कश्चिद् गृहोपरि तिष्ठति तर्हि स गृहमध्यात् किमपि द्रव्यमानेतुम् अवरुह्य नैतु; यश्च क्षेत्रे तिष्ठति सोपि व्याघुट्य नायातु।
೩೧ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.
೩೨ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.
33 यः प्राणान् रक्षितुं चेष्टिष्यते स प्राणान् हारयिष्यति यस्तु प्राणान् हारयिष्यति सएव प्राणान् रक्षिष्यति।
೩೩ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.
34 युष्मानहं वच्मि तस्यां रात्रौ शय्यैकगतयो र्लोकयोरेको धारिष्यते परस्त्यक्ष्यते।
೩೪ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು.
35 स्त्रियौ युगपत् पेषणीं व्यावर्त्तयिष्यतस्तयोरेका धारिष्यते परात्यक्ष्यते।
೩೫ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.”
36 पुरुषौ क्षेत्रे स्थास्यतस्तयोरेको धारिष्यते परस्त्यक्ष्यते।
೩೬“ಹೊಲದಲ್ಲಿ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು” ಅಂದನು.
37 तदा ते पप्रच्छुः, हे प्रभो कुत्रेत्थं भविष्यति? ततः स उवाच, यत्र शवस्तिष्ठति तत्र गृध्रा मिलन्ति।
೩೭ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.