< ద్వితీయోపదేశకాండమ 2 >

1 అప్పుడు యెహోవా నాతో చెప్పిన విధంగా మనం తిరిగి ఎర్రసముద్రం దారిలో ఎడారి గుండా చాలా రోజులు శేయీరు కొండ చుట్టూ తిరిగాం.
ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.
2 యెహోవా నాకు ఇలా చెప్పాడు. “మీరు ఈ కొండ చుట్టూ తిరిగింది చాలు,
ಆ ಮೇಲೆ ಯೆಹೋವನು ನನಗೆ,
3 ఉత్తరం వైపుకు వెళ్ళండి. నువ్వు ప్రజలతో ఇలా చెప్పు.
“ನೀವು ಈ ಬೆಟ್ಟದ ಸೀಮೆಯನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿರಿ.
4 ‘శేయీరులో నివసించే ఏశావు సంతానమైన మీ సోదరుల సరిహద్దులు దాటి వెళ్లబోతున్నారు, వారు మీకు భయపడతారు. కాబట్టి మీరు జాగ్రత్తగా ఉండండి.
ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.
5 వారితో కలహం పెట్టుకోవద్దు. ఎందుకంటే ఏశావుకు శేయీరును స్వాస్థ్యంగా ఇచ్చింది నేనే. వారి భూమిలోనిది ఒక్క అడుగైనా మీకియ్యను.
ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.
6 మీరు డబ్బులిచ్చి వారి దగ్గర ఆహారం కొని తినవచ్చు. డబ్బులిచ్చి నీళ్లు కొని తాగవచ్చు.’
ನೀವು ಅಲ್ಲಿ ಹಣವನ್ನು ಕೊಟ್ಟು ಆಹಾರಪದಾರ್ಥಗಳನ್ನು ತಿನ್ನಬೇಕು; ನೀರನ್ನು ಕೊಂಡುಕೊಂಡು ಕುಡಿಯಬೇಕು.
7 ఎందుకంటే మీ చేతి పని అంతటినీ మీ యెహోవా దేవుడు ఆశీర్వదించాడు. ఈ గొప్ప ఎడారిలో నువ్వు ఈ నలభై సంవత్సరాలు తిరిగిన సంగతి ఆయనకు తెలుసు. ఆయన మీకు తోడుగా ఉన్నాడు, మీకేమీ తక్కువ కాదు.”
ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.
8 అప్పుడు శేయీరులో నివసించే ఏశావు సంతానమైన మన సోదరులను విడిచి, ఏలతు, ఎసోన్గెబెరు, అరాబా దారిలో మనం ప్రయాణించాం.
ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರಿಗೆ ಗೊತ್ತಾಗದಂತೆ ಎಚ್ಚರಿಕೆಯಿಂದ ಅರಾಬದ ಮಾರ್ಗವನ್ನು ಬಿಟ್ಟು ಏಲತ್ ಮತ್ತು ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.
9 మనం తిరిగి మోయాబు ఎడారి మార్గంలో వెళుతుండగా యెహోవా నాతో ఇలా అన్నాడు. “మోయాబీయులను బాధ పెట్టవద్దు. వారితో యుద్ధం చేయొద్దు. లోతు సంతానానికి ఆర్ దేశాన్ని స్వాస్థ్యంగా ఇచ్చాను. వారి భూమిలో దేనినీ నీ స్వంతానికి ఇవ్వను.”
ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.
10 ౧౦ గతంలో ఏమీయులు ఆ ప్రాంతాల్లో ఉండేవారు. వారు అనాకీయుల్లాగా పొడవైనవారు, బలవంతులైన గొప్ప ప్రజ. అనాకీయుల్లాగా వారిని కూడా “రెఫాయీయులు” అని పిలిచారు.
೧೦ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ಯರಂತೆ ಎತ್ತರವಾದ ಪುರುಷರಾಗಿದ್ದರು.
11 ౧౧ మోయాబీయులు వారికి “ఏమీయులు” పేరు పెట్టారు.
೧೧ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ.
12 ౧౨ పూర్వకాలంలో హోరీయులు శేయీరులో నివసించారు. ఇశ్రాయేలీయులు యెహోవా తమకిచ్చిన స్వాస్థ్యమైన దేశంలో చేసినట్టు ఏశావు సంతానం హోరీయుల దేశాన్ని స్వాధీనం చేసుకుని వారిని చంపి వారి దేశంలో నివసించారు.
೧೨ಹೋರಿಯರು ಸಹ ಪೂರ್ವಕಾಲದಲ್ಲಿ ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.
13 ౧౩ “ఇప్పుడు మీరు లేచి జెరెదు వాగు దాటండి” అని యెహోవా ఆజ్ఞాపించగా మనం జెరెదు వాగు దాటాం.
೧೩ಆಗ ನಾನು, “ಎದ್ದು ಜೆರೆದ್ ಹಳ್ಳವನ್ನು ದಾಟಿರಿ” ಎಂದು ಹೇಳಲು ನಾವು ಜೆರೆದ್ ಹಳ್ಳವನ್ನು ದಾಟಿದೆವು.
14 ౧౪ మనం కాదేషు బర్నేయ నుండి బయలుదేరి జెరెదు వాగు దాటే వరకూ మనం ప్రయాణించిన కాలం 38 సంవత్సరాలు. యెహోవా వారితో శపథం చేసినట్టు అప్పటికి ఆ తరంలో యుద్ధం చేయగల మనుషులందరూ గతించిపోయారు.
೧೪ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.
15 ౧౫ అంతే కాదు, వారు గతించే వరకూ ఆ తరం వారిని చంపడానికి యెహోవా హస్తం వారికి విరోధంగా ఉంది.
೧೫ಯೆಹೋವನ ಹಸ್ತವು ಅವರಿಗೆ ವಿರುದ್ಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.
16 ౧౬ ఈ విధంగా సైనికులైన వారంతా చనిపోయి గతించిన తరువాత యెహోవా నాకు ఇలా చెప్పాడు,
೧೬ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು.
17 ౧౭ “ఈ రోజు నువ్వు మోయాబుకు సరిహద్దుగా ఉన్న ఆర్ దేశాన్ని దాటబోతున్నావు.
೧೭ಆಗ ಯೆಹೋವನು ನನ್ನೊಂದಿಗೆ ಮಾತನಾಡಿ ನನಗೆ,
18 ౧౮ అమ్మోనీయుల పక్కగా వెళ్ళేటప్పుడు వారిని బాధించవద్దు.
೧೮“ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ.
19 ౧౯ వారితో యుద్ధం చేయొద్దు. ఎందుకంటే లోతు సంతానానికి దాన్ని స్వాస్థ్యంగా ఇచ్చాను. కాబట్టి వారి దేశంలో భూమిని నీకు ఏ మాత్రం ఇవ్వను.”
೧೯ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”
20 ౨౦ దాన్ని కూడా రెఫాయీయుల దేశం అని పిలిచారు. పూర్వం రెఫాయీయులు అందులో నివసించారు. అమ్మోనీయులు వారిని “జంజుమీయులు” అనేవారు.
೨೦ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ.
21 ౨౧ వారు అనాకీయుల్లాగా పొడవైన వారు, బలవంతులైన గొప్ప ప్రజలు. అయితే యెహోవా అమ్మోనీయుల ఎదుట నుండి వారిని వెళ్లగొట్టడం వలన అమ్మోనీయులు వారి దేశాన్ని స్వాధీనం చేసుకుని అక్కడ నివసించారు.
೨೧ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.
22 ౨౨ ఆయన శేయీరులో నివసించే ఏశావు సంతానం కోసం వారి ఎదుట నుండి హోరీయులను నశింపజేశాడు కాబట్టి వారు హోరీయుల దేశాన్ని స్వాధీనం చేసుకుని ఈ రోజు వరకూ అక్కడ నివసిస్తున్నారు.
೨೨ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,
23 ౨౩ గాజా వరకూ ఉన్న గ్రామాల్లో నివసించిన ఆవీయులను కఫ్తోరు నుండి వచ్చిన కఫ్తోరీయులు నాశనం చేసి అక్కడ నివసించారు.
೨೩ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು.
24 ౨౪ “మీరు బయలుదేరి అర్నోను లోయ దాటండి. ఇదిగో అమోరీయుడు, హెష్బోను రాజు అయిన సీహోనునూ అతని దేశాన్నీ మీ చేతికి అప్పగించాను. అతనితో యుద్ధం చేసి దాన్ని ఆక్రమించుకోండి.
೨೪“ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.
25 ౨౫ ఈ రోజు ఆకాశం కింద ఉన్న జాతుల ప్రజలందరికీ నువ్వంటే భయం పుట్టించడం మొదలు పెడుతున్నాను. వారు మీ గురించిన సమాచారం విని నీ ఎదుట వణకి, కలవరపడతారు” అని యెహోవా నాతో చెప్పాడు.
೨೫ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.
26 ౨౬ అప్పుడు నేను కెదేమోతు ఎడారిలో నుండి హెష్బోను రాజు సీహోను దగ్గరికి దూతలను పంపి
೨೬ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,
27 ౨౭ “మమ్మల్ని నీ దేశం గుండా వెళ్ళనివ్వు. కుడి, ఎడమలకు తిరగకుండా దారిలోనే నడిచిపోతాము.
೨೭“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.
28 ౨౮ నా దగ్గర సొమ్ము తీసుకుని తినడానికి ఆహార పదార్థాలు, తాగడానికి నీరు ఇవ్వు.
೨೮ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ.
29 ౨౯ శేయీరులో ఏశావు సంతానమూ ఆర్ లో మోయాబీయులూ నాకు చేసినట్టు, మా దేవుడు యెహోవా మాకిస్తున్న దేశానికి వెళ్ళడానికి యొర్దాను నది దాటేవరకూ కాలి నడకతోనే మమ్మల్ని వెళ్లనివ్వు” అని శాంతికరమైన మాటలు పలికించాను.
೨೯ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.
30 ౩౦ అయితే హెష్బోను రాజు సీహోను మనం తన దేశం గుండా వెళ్లడానికి ఒప్పుకోలేదు. ఎందుకంటే ఈ రోజు జరిగినట్టుగా మన చేతికి అతణ్ణి అప్పగించడం కోసం మీ యెహోవా దేవుడు అతని మనస్సును కఠినపరచి అతని హృదయాన్ని బండబారిపోయేలా చేశాడు.
೩೦ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.
31 ౩౧ అప్పుడు యెహోవా “చూడు, సీహోనును అతని దేశాన్ని నీకు అప్పగిస్తున్నాను. అతని దేశాన్ని స్వాధీనం చేసుకోవడం మొదలు పెట్టు” అని నాతో చెప్పాడు.
೩೧ತರುವಾಯ ಯೆಹೋವನು ನನಗೆ, “ಈಗ ನಾನು ಸೀಹೋನನನ್ನೂ ಮತ್ತು ಅವನ ದೇಶವನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಮಾಡಿರಿ” ಎಂದು ಹೇಳಿದನು.
32 ౩౨ సీహోనూ అతని ప్రజలంతా యాహసులో మనతో యుద్ధం చేయడానికి వచ్చారు.
೩೨ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು.
33 ౩౩ మన యెహోవా దేవుడు అతణ్ణి మనకప్పగించాడు కాబట్టి మనం అతన్నీ అతని కొడుకులనూ అతని ప్రజలందరినీ చంపివేశాం.
೩೩ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು.
34 ౩౪ అప్పుడున్న అతని పట్టణాలనూ, వాటిలోని స్త్రీ పురుషులనూ పిల్లలనూ ఏదీ మిగలకుండా నాశనం చేశాం.
೩೪ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನು ಮತ್ತು ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.
35 ౩౫ కేవలం పశువులనూ ఆ పట్టణాల ఆస్తినీ దోచుకున్నాం.
೩೫ಪಶುಗಳನ್ನು ಮಾತ್ರ ಉಳಿಸಿ ನಮ್ಮ ಸ್ವಂತಕ್ಕಾಗಿ ತೆಗೆದುಕೊಂಡು ಊರುಗಳನ್ನು ಸೂರೆಮಾಡಿಬಿಟ್ಟೆವು.
36 ౩౬ అర్నోను ఏటిలోయ ఒడ్డున ఉన్న అరోయేరు, ఆ లోయలో ఉన్న పట్టణం మొదలుపెట్టి గిలాదు వరకూ మనకు లొంగిపోని పట్టణం ఒక్కటి కూడా లేదు. మన దేవుడు అన్నిటినీ మనకి అప్పగించాడు.
೩೬ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.
37 ౩౭ అయితే అమ్మోనీయుల దేశానికైనా, యబ్బోకు నది లోయలోని ఏ ప్రాంతానికైనా ఆ కొండప్రాంతంలోని పట్టణాలకైనా మన యెహోవా దేవుడు వెళ్ళవద్దని చెప్పిన మరే స్థలానికైనా మీరు వెళ్ళలేదు.
೩೭ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು.

< ద్వితీయోపదేశకాండమ 2 >