< ఎస్తేరు 8 >
1 ౧ ఆ రోజు అహష్వేరోషు రాజు యూదుల శత్రువు హామాను ఇంటిని ఎస్తేరు రాణికి ఇచ్చేశాడు. మొర్దెకైతో తన బంధుత్వం గురించి ఎస్తేరు రాజుకు తెలియజేసింది.
೧ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್ ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದಳು.
2 ౨ అతడు రాజు సన్నిధికి వచ్చినప్పుడు రాజు హామాను చేతిలోనుండి తీసుకున్న తన ఉంగరాన్ని మొర్దెకైకి ఇచ్చాడు. ఎస్తేరు మొర్దెకైని హామాను ఇంటిపై అధికారిగా ఉంచింది.
೨ಆಗ ಅರಸನು ತಾನು ಹಾಮಾನನಿಗೆ ನೀಡಿದ್ದ ತನ್ನ ಮುದ್ರೆಯುಂಗುರವನ್ನು ಮೊರ್ದೆಕೈಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.
3 ౩ ఎస్తేరు రాజు పాదాలపై పడి విన్నపం చేస్తూ “అగగు వంశీకుడు హామాను చేసిన కీడును, అతడు యూదులకు విరోధంగా తలపెట్టిన కార్యాన్ని రద్దు చేయండి” అని కన్నీటితో అతణ్ణి వేడుకుంది.
೩ಎಸ್ತೇರಳು ಪುನಃ ಅರಸನನ್ನು ಮಾತನಾಡಿಸುವುದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು, ಅಳುತ್ತಾ, “ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ದುಷ್ಟ ಯೋಜನೆಗಳನ್ನು, ಅಪಾಯಗಳನ್ನು ನಿವಾರಿಸಬೇಕು” ಎಂದು ವಿಜ್ಞಾಪಿಸಿದಳು.
4 ౪ రాజు తన బంగారు రాజ దండాన్ని ఎస్తేరు వైపు చాపాడు.
೪ಅರಸನು ಸುವರ್ಣ ರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತಳು.
5 ౫ ఎస్తేరు రాజు ముందు నిలబడి “రాజైన మీకు అంగీకారం అయితే, మీ అనుగ్రహం నాపై ఉంటే, ఈ సంగతి మీకు సమంజసంగా అనిపిస్తే, నేనంటే మీకు ఇష్టమైతే, హమ్మెదాతా కొడుకు, అగగు వంశీకుడు అయిన హామాను రాయించిన శాసనాలు అమలు కాకుండా వాటి రద్దుకు ఆజ్ఞ ఇవ్వండి.
೫ಆಗ ಎಸ್ತೇರಳು ಅವನಿಗೆ, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮೆದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು.
6 ౬ నా స్వజనం మీదికి రాబోతున్న కీడును, నా వంశ నాశనాన్ని చూసి నేనెలా సహించ గలను” అని మనవి చేసింది.
೬ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?” ಎಂದು ಬಿನ್ನವಿಸಿದಳು.
7 ౭ అహష్వేరోషు రాజు రాణి అయిన ఎస్తేరుకు, మొర్దెకైకి ఇలా చెప్పాడు. “హామాను ఇంటిని ఎస్తేరుకు ఇచ్చాను. అతడు యూదులను హతమార్చడానికి ప్రయత్నించినందు వల్ల అతడు ఉరికొయ్య మీద వేలాడి చనిపోయాడు.
೭ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಮತ್ತು ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೆ ಹಾಕಿಸಿ, ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ, ಅರಸನ ಹೆಸರಿನಲ್ಲಿ ಬರೆಯಲ್ಪಟ್ಟು ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಲು ಬರುವುದಿಲ್ಲ.
8 ౮ అయితే రాజు పేరున రాసి రాజ ముద్రిక వేసిన శాసనాన్ని మానవ మాత్రుడెవరూ మార్చలేడు. కాబట్టి మీకిష్టమైనట్టు మీరు రాజునైన నా పేర యూదులకు అనుకూలంగా వేరొక శాసనం రాయించి రాజ ముద్రికతో ముద్రించండి.”
೮ಆದುದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವುದನ್ನು ಅರಸನ ಹೆಸರಿನಲ್ಲಿ ನೀವೂ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ” ಎಂದು ಹೇಳಿದನು.
9 ౯ సీవాను అనే మూడో నెలలో ఇరవై మూడో రోజున రాజుగారి లేఖికులను పిలిచారు. మొర్దెకై ఆజ్ఞాపించినట్టు యూదులకు, ఇండియా నుండి ఇతియోపియా వరకూ విస్తరించిన 127 సంస్థానాల్లోని అధిపతులకు, అధికారులకు, వివిధ సంస్థానాలకు వాటి లిపిలో, వాటి భాషల్లో శాసనాలు రాశారు.
೯ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.
10 ౧౦ మొర్దెకై అహష్వేరోషు పేర శాసనాలు రాయించి రాజముద్రికతో ముద్రించాడు. గుర్రాలపై, అంటే రాచకార్యాలకు వినియోగించే మేలు జాతి అశ్వాలపై అంచెలుగా ప్రయాణించే వార్తాహరులతో ఆ శాసనాలను పంపించాడు.
೧೦ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಆ ಪತ್ರಗಳಿಗೆ ರಾಜಮುದ್ರೆಯನ್ನು ಹಾಕಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದಂಥ, ಅರಸನ ಸೇವೆಗಾಗಿ ಉಪಯೋಗಿಸಲ್ಪಡುತ್ತಿದ್ದ ವೇಗವಾಗಿ ಓಡುವಂಥ ಕುದುರೆಗಳ ಮುಖಾಂತರ ಕಳುಹಿಸಿದನು.
11 ౧౧ “రాజైన అహష్వేరోషు సంస్థానాలన్నిటిలో ఒక్క రోజునే అంటే అదారు అనే పన్నెండో నెల పదమూడో తేదీన అన్ని పట్టణాల్లో నివసించే యూదులు సమకూడాలి. తమ ప్రాణాలు కాపాడుకొనేందుకు అన్ని చోట్లా తమకు విరోధులైన వారి సైనికులందరిని, బాలలను, స్త్రీలను కూడా, హతం చేసి, సర్వనాశనం చెయ్యాలి.
೧೧ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.
12 ౧౨ వారి సొత్తు అంతటినీ కొల్లగొట్టాలి, అని రాజు యూదులకు ఆజ్ఞాపించాడు” అని దానిలో రాశారు.
೧೨ತಮ್ಮ ಪ್ರಾಣರಕ್ಷಣೆಗಾಗಿ ಎದ್ದು, ತಮ್ಮ ವಿರುದ್ಧವಾಗಿ ಆಯುಧಗಳೊಡನೆ ನೆರೆದು ಬರುವ ಎಲ್ಲಾ ಜನಾಂಗಗಳವರನ್ನೂ, ಸಂಸ್ಥಾನಗಳವರನ್ನೂ, ಅವರ ಹೆಂಡತಿಯರು ಮಕ್ಕಳು ಸಹಿತವಾಗಿ ಕೊಂದು, ಸಂಹರಿಸಿ, ನಿರ್ನಾಮಗೊಳಿಸಬೇಕು.
13 ౧౩ ఈ శాసనాల ప్రతులు రాయించి అన్ని సంస్థానాల ప్రజానీకానికి పంపించాలని, యూదులు తమ శత్రువులపై పగ తీర్చుకొనేందుకు ఒకానొక రోజున సిద్ధంగా ఉండాలనీ ఆజ్ఞ జారీ అయింది.
೧೩ಅವರ ಸೊತ್ತನ್ನು ಸೂರೆಮಾಡಬೇಕು, ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು, ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೆ ಸಿದ್ಧರಾಗಿರಬೇಕು” ಎಂದು ಅಪ್ಪಣೆಮಾಡಿದ್ದನು.
14 ౧౪ రాచ కార్యాల కోసం వినియోగించే మేలుజాతి అశ్వాలపై అంచె వార్తాహరులు రాజాజ్ఞ పొంది అతివేగంగా బయలుదేరారు. ఆ తాకీదును షూషను కోటలో కూడా ఇచ్చారు.
೧೪ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ಅರಮನೆಯ ಸವಾರಿಕುದುರೆಗಳನ್ನು ಹತ್ತಿಕೊಂಡು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿ ಶೀಘ್ರವಾಗಿ ಹೊರಟರು.
15 ౧౫ అప్పుడు మొర్దెకై నేరేడు, తెలుపు వర్ణాలు గల రాజవస్త్రం, పెద్ద స్వర్ణ కిరీటం, శ్రేష్ఠమైన నారతో చేసిన ఊదా రంగు బట్టలు ధరించి రాజు సముఖం నుండి బయలుదేరాడు. ఈ కారణంగా షూషను నగరంలో సంబరం కలిగింది.
೧೫ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.
16 ౧౬ యూదులకు క్షేమం, సంతోషం, ఘనత కలిగాయి.
೧೬ಅಲ್ಲಿನ ಯೆಹೂದ್ಯರಿಗೆ ಸಂತೋಷ, ಗೌರವ, ಹರ್ಷಪ್ರಭಾವ ಮತ್ತು ತೇಜಸ್ಸುಳ್ಳವರಾದರು.
17 ౧౭ రాజు చేసిన తీర్మానం, అతని చట్టం అందిన ప్రతి సంస్థానంలో ప్రతి పట్టణంలో యూదులకు ఆనందం, సంతోషం కలిగాయి. వారంతా పండగ చేసుకున్నారు. అందరికీ యూదులంటే భయం వేసింది. కాబట్టి చాలామంది యూదులయ్యారు.
೧೭ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.