< యెషయా~ గ్రంథము 36 >

1 హిజ్కియా రాజు పరిపాలన 14 వ సంవత్సరంలో అష్షూరురాజు సన్హెరీబు యూదా దేశంలో సరిహద్దు గోడలు ఉన్న పట్టణాలన్నిటిపై దండెత్తి వాటిని ఆక్రమించాడు.
ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದೊಳಗೆ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
2 తరువాత అతడు రబ్షాకేను లాకీషు పట్టణం నుండి యెరూషలేములో ఉన్న హిజ్కియా రాజు పైకి పెద్ద సైన్యాన్ని ఇచ్చి పంపాడు. అతడు చాకిరేవు దారిలో ఉన్న మెరక కొలను కాలవ దగ్గరికి వచ్చాడు.
ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬುವವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಅಗಸರ ಹೊಲದ ಕಡೆಯಿಂದ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.
3 అప్పుడు హిల్కీయా కొడుకు, రాజు గృహనిర్వాహకుడు ఎల్యాకీము, శాస్త్రి షెబ్నా, రాజ్యం దస్తావేజుల అధికారి, ఆసాపు కొడుకు యోవాహు వారి దగ్గరికి వెళ్ళారు.
ಆ ಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಬಂದರು.
4 అప్పుడు రబ్షాకే వారితో ఇలా అన్నాడు. “హిజ్కియాతో ఈ మాట చెప్పండి, మహారాజైన అష్షూరురాజు నన్నిలా చెప్పమన్నాడు, దేనిపైన నువ్వు నమ్మకం పెట్టుకున్నావు?
ರಬ್ಷಾಕೆಯು ಅವರಿಗೆ, “ನೀವು ಹೋಗಿ, ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ, ‘ಈ ನಿನ್ನ ಭರವಸೆಗೆ ಯಾವ ಆಧಾರವುಂಟು?
5 యుద్ధం విషయంలో నీ ఆలోచన, నీ బలం వ్యర్ధం. ఎవరి భరోసాతో నా మీద తిరగబడుతున్నావు?
ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿ ಮಾತೇ ಎಂದು ನಾನು ಹೇಳಬಲ್ಲೆ, ನೀನು ಯಾರನ್ನು ನಂಬಿಕೊಂಡು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದೀ?’
6 నలిగిపోయిన గడ్డిపరక లాంటి ఐగుప్తుపై ఆధారపడుతున్నావు గదా! ఎవరైనా దాని మీద ఆనుకుంటే అది అతని చేతికి గుచ్చుకుంటుంది. ఐగుప్తు రాజు ఫరో కూడా అలాంటివాడే.
“‘ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು.
7 మా దేవుడైన యెహోవాను నమ్ముకుంటున్నాం అని అంటారా? ఆ యెహోవా ఉన్నత స్థలాలను, బలిపీఠాలనే కదా హిజ్కియా పడగొట్టి యెరూషలేములో ఉన్న ఈ బలిపీఠం దగ్గర మాత్రమే మీరు పూజలు చేయాలి అని యూదావారికి, యెరూషలేము వారికి ఆజ్ఞ ఇచ్చింది?
ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!
8 కాబట్టి నా యజమాని అయిన అష్షూరు రాజుతో పందెం వెయ్యి. రెండు వేల గుర్రాలకు సరిపడిన రౌతులు నీ దగ్గర ఉంటే చెప్పు, నేను వాటిని నీకిస్తాను.
“ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?
9 నా యజమాని సేవకుల్లో తక్కువ వాడైన ఒక్క అధిపతిని నువ్వు ఎదిరించగలవా? రథాలను, రౌతులను పంపుతాడని ఐగుప్తురాజు మీద ఆశ పెట్టుకున్నావా?
“ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.
10 ౧౦ అయినా యెహోవా అనుమతి లేకుండానే ఈ దేశాన్ని నాశనం చేయడానికి నేను వచ్చాననుకున్నావా? లేదు, ఈ దేశం పైకి దండెత్తి దీన్ని నాశనం చేయమని యెహోవాయే నాకు ఆజ్ఞాపించాడు.”
೧೦ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳು ಮಾಡಿಬಿಡು’ ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎನ್ನುವ ಅರಸನ ಮಾತುಗಳನ್ನು ತಿಳಿಸಿರಿ” ಎಂದು ಹೇಳಿದನು.
11 ౧౧ అప్పుడు ఎల్యాకీము, షెబ్నా, యోవాహులు రబ్షాకేతో “మేము నీ దాసులం. మాకు సిరియా భాష తెలుసు కాబట్టి దయచేసి ఆ భాషలో మాట్లాడు. ప్రాకారం మీద ఉన్న ప్రజలకు అర్థమయ్యేలా యూదుల భాషలో మాట్లాడవద్దు” అని అన్నారు.
೧೧ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.
12 ౧౨ అయితే రబ్షాకే “ఈ మాటలు చెప్పడానికేనా, నా యజమాని నన్ను నీ యజమాని దగ్గరకీ నీ దగ్గరకీ పంపింది? నీతో కలిసి తమ స్వంత మలాన్ని తిని, తమ మూత్రాన్ని తాగబోతున్న ప్రాకారం మీద ఉన్న వారి దగ్గరకి కూడా పంపాడు కదా” అన్నాడు.
೧೨ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಈ ಮಾತುಗಳನ್ನು ಹೇಳುವುದಕ್ಕೆ ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನ್ನ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.
13 ౧౩ యూదుల భాషతో అతడు బిగ్గరగా ఇలా అన్నాడు. “మహారాజైన అష్షూరు రాజు చెబుతున్న మాటలు వినండి.
೧೩ಆಮೇಲೆ ರಬ್ಷಾಕೆಯು ಎದ್ದು ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.
14 ౧౪ హిజ్కియా చేతిలో మోసపోకండి. మిమ్మల్ని విడిపించడానికి అతని శక్తి సరిపోదు.
೧೪ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸ ಹೋಗಬೇಡಿರಿ. ಅವನು ನಿಮ್ಮನ್ನು ಬಿಡಿಸಲಾರನು.’
15 ౧౫ ‘యెహోవా మనలను విడిపిస్తాడు, ఈ పట్టణం అష్షూరు రాజు చేతిలో చిక్కదు’ అని చెబుతూ హిజ్కియా మిమ్మల్ని నమ్మిస్తున్నాడు.
೧೫ಹಿಜ್ಕೀಯನು ನಿಮಗೆ, ‘ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’” ಎಂಬುದಾಗಿ ಹೇಳಿದರೆ,
16 ౧౬ హిజ్కియా చెప్పిన ఆ మాట మీరు అంగీకరించవద్దు. అష్షూరు రాజు చెబుతున్నదేమిటంటే, మీరు బయటికి వచ్చి, నాతో సంధి చేసుకోండి. అప్పుడు మీలో ప్రతి ఒక్కరూ తన ద్రాక్ష, అంజూరు చెట్ల పండ్లు తింటూ తన బావిలో నీళ్లు తాగుతూ ఉంటారు.
೧೬ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.
17 ౧౭ ఆ తరవాత నేను వచ్చి మీ దేశంలాంటి దేశానికి, అంటే గోదుమలు, ద్రాక్షరసం దొరికే దేశానికి, ఆహారం, ద్రాక్షచెట్లు ఉన్న దేశానికి మిమ్మల్ని తీసుకుపోతాను. యెహోవా మిమ్మల్ని విడిపిస్తాడని చెప్పి హిజ్కియా మిమ్మల్ని మోసం చేస్తున్నాడు.
೧೭ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.”
18 ౧౮ వివిధ ప్రజల దేవుళ్ళలో ఎవరైనా తన దేశాన్ని అష్షూరు రాజు చేతిలో నుండి విడిపించాడా? హమాతు దేవుళ్ళేమయ్యారు?
೧೮“ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?
19 ౧౯ అర్పాదు దేవుళ్ళేమయ్యారు? సెపర్వయీము దేవుళ్ళేమయ్యారు? షోమ్రోను దేశపు దేవుడు నా చేతిలో నుండి షోమ్రోనును విడిపించాడా?
೧೯ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಯಿಂದ ತಪ್ಪಿಸಿದವೋ?
20 ౨౦ ఈ దేవుళ్ళలో ఎవరైనా తన దేశాన్ని నా చేతిలో నుండి విడిపించి ఉంటేనే కదా యెహోవా యెరూషలేమును విడిపిస్తాడు అనుకోడానికి?” అన్నాడు.
೨೦ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು.
21 ౨౧ అయితే అతనికి జవాబు చెప్పవద్దని రాజు ఆజ్ఞాపించడం వలన వారు బదులు పలకలేదు.
೨೧ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು, ಏನು ಹೇಳಲಿಲ್ಲ.
22 ౨౨ రాజ గృహనిర్వాహకుడు, హిల్కీయా కొడుకు అయిన ఎల్యాకీము, శాస్త్రి షెబ్నా, రాజ్యందస్తావేజుల మీద అధికారి, ఆసాపు కొడుకు యోవాహు తమ బట్టలు చింపుకుని హిజ్కియా దగ్గరికి వచ్చి రబ్షాకే పలికిన మాటలన్నిటినీ తెలియజేశారు.
೨೨ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.

< యెషయా~ గ్రంథము 36 >