< సంఖ్యాకాండము 19 >
1 ౧ యెహోవా మోషే అహరోనులతో,
ಯೆಹೋವ ದೇವರು ಮೋಶೆ ಹಾಗೂ ಆರೋನನ ಸಂಗಡ ಮಾತನಾಡಿ,
2 ౨ “యెహోవా ఆజ్ఞాపించిన ధర్మశాస్త్ర విధి ఏదంటే, ఇశ్రాయేలీయులు కళంకం లేనిదీ, మచ్చ లేనిదీ, ఎప్పుడూ కాడి మోయ్యని ఎర్ర ఆవును నీ దగ్గరికి తీసుకురావాలని వారితో చెప్పు.
“ಯೆಹೋವ ದೇವರಾದ ನಾನು ಆಜ್ಞಾಪಿಸಿದ ನಿಯಮದ ಕಟ್ಟಳೆ ಏನೆಂದರೆ, ಎಂದೂ ನೊಗವನ್ನು ಹೊರದಂಥ, ಮಚ್ಚೆ ಇಲ್ಲದಂಥ ಮತ್ತು ಕಳಂಕವಿಲ್ಲದ ಕೆಂದಾಕಳನ್ನು ನಿಮಗೆ ತಂದು ಕೊಡುವಂತೆ ಇಸ್ರಾಯೇಲರಿಗೆ ಹೇಳು.
3 ౩ మీరు యాజకుడైన ఎలియాజరుకు దాన్ని అప్పగించాలి. ఒకడు పాళెం బయటికి దాన్ని తోలుకెళ్ళి అతని ఎదుట దాన్ని వధించాలి.
ನೀವು ಅದನ್ನು ಯಾಜಕನಾದ ಎಲಿಯಾಜರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ತನ್ನ ಮುಂದೆ ವಧೆಮಾಡಿಸಬೇಕು.
4 ౪ యాజకుడైన ఎలియాజరు దాని రక్తం కొంచెం వేలితో తీసి, సన్నిధి గుడారం ఎదుట ఆ రక్తాన్ని ఏడుసార్లు చిమ్మాలి.
ಯಾಜಕನಾದ ಎಲಿಯಾಜರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ಅದನ್ನು ಏಳು ಸಾರಿ ದೇವದರ್ಶನ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು.
5 ౫ అతని కళ్ళ ఎదుట ఒకడు ఆ ఆవును కాల్చాలి. దాని చర్మం, మాంసం, రక్తం, పేడతో సహా కాల్చెయ్యాలి.
ಹಸುವನ್ನು ಅವನ ಎದುರಿನಲ್ಲಿಯೇ ಸುಡಿಸಬೇಕು. ಅದರ ತೊಗಲನ್ನೂ ಮಾಂಸವನ್ನೂ ರಕ್ತವನ್ನೂ ಮತ್ತು ಅದರ ಸಗಣಿಯ ಕೂಡ ಸುಡಬೇಕು.
6 ౬ ఇంకా ఆ యాజకుడు దేవదారు కర్ర, హిస్సోపు, ఎర్రరంగు నూలు తీసుకుని, ఆ ఆవును కాలుస్తున్న మంటల్లో వాటిని వెయ్యాలి.
ಯಾಜಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಹಸುವಿನ ದಹನದಲ್ಲಿ ಹಾಕಬೇಕು.
7 ౭ అప్పుడు ఆ యాజకుడు తన బట్టలు ఉతుకుకుని, నీళ్లతో తలస్నానం చేసిన తరువాత పాలెంలో ప్రవేశించి సాయంకాలం వరకూ అశుద్ధుడుగా ఉంటాడు.
ಆಗ ಯಾಜಕನು ತನ್ನ ವಸ್ತ್ರಗಳನ್ನು ತೊಳೆದುಕೊಂಡು, ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಗೆ ಬರಬಹುದು. ಆದರೂ ಯಾಜಕನು ಸಂಜೆಯವರೆಗೂ ಅಶುದ್ಧನಾಗಿರುವನು.
8 ౮ దాన్ని కాల్చినవాడు నీళ్లతో తన బట్టలు ఉతుకుకుని నీళ్లతో తలస్నానం చేసి సాయంకాలం వరకూ అశుద్ధుడుగా ఉంటాడు.
ಅದನ್ನು ಸುಡುವವನು ತನ್ನ ವಸ್ತ್ರಗಳನ್ನು ನೀರಿನಲ್ಲಿ ತೊಳೆದುಕೊಂಡು, ಸ್ನಾನಮಾಡಬೇಕು. ಅವನೂ ಸಹ ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.
9 ౯ ఇంకా శుద్ధుడైనవాడు ఒకడు ఆ ఆవు బూడిదను పోగు చేసి పాలెం బయట ఒక శుద్ధమైన స్థలంలో పెట్టాలి. ఆ బూడిదను ఇశ్రాయేలీయుల సమాజం కోసం భద్రం చెయ్యాలి. ఆ బూడిద పాపపరిహారార్ధ అర్పణ నుంచి వచ్చింది గనక, పాపం నుంచి శుద్ధీకరణ కోసం వారు ఆ బూడిదను నీళ్ళతో కలుపుతారు.
“ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ, ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಆದ್ದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು.
10 ౧౦ ఆ ఆవు బూడిదను పోగు చేసిన వాడు తన బట్టలు ఉతుక్కుని, సాయంకాలం వరకూ అశుద్ధుడుగా ఉంటాడు. ఇది ఇశ్రాయేలీయులకూ, వారిల్లో నివాసం ఉంటున్న పరదేశులకూ శాశ్వతమైన శాసనం.
ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು, ಸಂಜೆಯವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಶಾಶ್ವತ ಕಟ್ಟಳೆಯಾಗಿದೆ.
11 ౧౧ మానవ శవాన్ని ముట్టుకున్నవాడు ఏడు రోజులు అశుద్ధుడుగా ఉంటాడు.
“ಮನುಷ್ಯನ ಶವವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರುವನು.
12 ౧౨ అతడు మూడో రోజు ఆ నీళ్ళతో పాపశుద్ధి చేసుకుని, ఏడో రోజు శుద్ధుడౌతాడు. అయితే అతడు మూడో రోజు పాపశుద్ధి చేసుకోకపోతే ఏడో రోజు శుద్ధుడు కాడు.
ಅವನು ಇದರಿಂದ ಮೂರನೆಯ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿಕೊಂಡು ಏಳನೆಯ ದಿವಸದಲ್ಲಿ ಶುದ್ಧನಾಗಬೇಕು. ಆದರೆ ಅವನು ಮೂರನೆಯ ದಿವಸದಲ್ಲಿ ತನ್ನನ್ನು ಶುದ್ಧಮಾಡಿಕೊಳ್ಳದಿದ್ದರೆ, ಏಳನೆಯ ದಿವಸದಲ್ಲಿ ಶುದ್ಧನಾಗಲಾರನು.
13 ౧౩ మనిషి శవాన్ని ముట్టుకున్నవాడు ఆ విధంగా పాపశుద్ధి చేసుకోకపోతే అతడు యెహోవా మందిరాన్ని అపవిత్రం చేసినవాడౌతాడు. పాపపరిహార జలం అతని మీద చల్ల లేదు గనక ఆ వ్యక్తిని ఇశ్రాయేలీయుల్లో లేకుండా చెయ్యాలి. అతడు అశుద్ధుడుగానే ఉండిపోతాడు. అతని అశుద్ధత అతని మీద ఉంటుంది.
ಸತ್ತ ಮನುಷ್ಯನ ಶವವನ್ನು ಮುಟ್ಟಿ, ಶುದ್ಧಮಾಡಿಕೊಳ್ಳದವನು ಯೆಹೋವ ದೇವರ ಗುಡಾರವನ್ನು ಅಪವಿತ್ರಪಡಿಸುತ್ತಾನೆ, ಅಂಥವನನ್ನು ಇಸ್ರಾಯೇಲಿನವರೊಳಗಿಂದ ತೆಗೆದುಹಾಕಬೇಕು, ಶುದ್ಧೀಕರಣದ ನೀರು ಅವನ ಮೇಲೆ ಚಿಮುಕಿಸದ ಕಾರಣ ಅವನು ಅಶುದ್ಧನಾಗಿದ್ದಾನೆ. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.
14 ౧౪ ఎవరైనా ఒక గుడారంలో చనిపోతే, దాని గురించిన చట్టం ఇది. ఆ గుడారంలో ప్రవేశించే ప్రతివాడూ, ఆ గుడారంలో ఉన్నవారూ ఏడు రోజులు అశుద్ధంగా ఉంటారు.
“ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತರೆ, ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ, ಡೇರೆಯಲ್ಲಿರುವವರೆಲ್ಲರೂ ಏಳು ದಿವಸಗಳವರೆಗೆ ಅಶುದ್ಧರಾಗಿರುವರು.
15 ౧౫ మూత వేయకుండా తెరచి ఉన్న పాత్రలన్నీ అశుద్ధం ఔతాయి.
ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರುವುವು.
16 ౧౬ గుడారం బయట కత్తితో నరికిన వాడినైనా, శవాన్నైనా, మనిషి ఎముకనైనా, సమాధినైనా ముట్టుకున్నవాడు ఏడు రోజులు అశుద్ధుడుగా ఉంటాడు.
“ಇದಲ್ಲದೆ ಬಯಲಿನಲ್ಲಿ ಖಡ್ಗದಿಂದ ಹತನಾದ ವ್ಯಕ್ತಿಯನ್ನು ಮುಟ್ಟಿದವರೂ ಅಥವಾ ಬೇರೆ ಯಾವ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬನ್ನಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರೆಲ್ಲರೂ ಏಳು ದಿವಸ ಅಪವಿತ್ರರಾಗಿರುವರು.
17 ౧౭ అశుద్ధుడైన వ్యక్తి కోసం, పాప పరిహారార్థమైన కాలిన బూడిద కొంచెం తీసుకుని ఒక కూజాలో ఉన్న మంచినీళ్ళతో కలపాలి.
“ಅಪವಿತ್ರನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯನ್ನು ತೆಗೆದುಕೊಂಡು, ಒಂದು ಪಾತ್ರೆಯೊಳಗಿಟ್ಟು, ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು.
18 ౧౮ తరువాత ఒక శుద్ధుడు హిస్సోపు తీసుకుని ఆ నీళ్ళల్లో ముంచి, ఆ గుడారం మీద, దానిలోని ఉపకరణాలు అన్నిటి మీదా, అక్కడున్న మనుషుల మీదా చల్లాలి. ఎముకనుగాని, కత్తితో నరికిన వాణ్ణి గాని, శవాన్నిగాని, సమాధినిగాని ముట్టుకున్న వాడి మీద కూడా దాన్ని చల్లాలి.
ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಆ ಡೇರೆಯ ಮೇಲೆಯೂ, ಸಮಸ್ತ ಸಲಕರಣೆಗಳ ಮೇಲೆಯೂ, ಅದರಲ್ಲಿರುವ ಜನರ ಮೇಲೆಯೂ ಚಿಮುಕಿಸಬೇಕು. ಹಾಗೆಯೇ ಎಲುಬನ್ನಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರ ಮೇಲೆಯೂ ಚಿಮುಕಿಸಬೇಕು.
19 ౧౯ మూడో రోజు, ఏడో రోజూ, శుద్ధుడు అశుద్ధుని మీద దాన్ని చల్లాలి. ఏడో రోజు అతడు పాపశుద్ధి చేసుకుని, తన బట్టలు ఉతుక్కుని నీళ్లతో స్నానం చేసి, సాయంకాలానికి శుద్ధుడౌతాడు.
ಪವಿತ್ರನಾದವನು ಅಪವಿತ್ರನಾದವನ ಮೇಲೆ ಮೂರನೆಯ ದಿವಸದಲ್ಲಿಯೂ, ಏಳನೆಯ ದಿವಸದಲ್ಲಿಯೂ ಅದನ್ನು ಚಿಮುಕಿಸಲಿ. ಏಳನೆಯ ದಿವಸದಲ್ಲಿ ಅವನು ತನ್ನನ್ನು ಪವಿತ್ರ ಮಾಡಿಕೊಂಡು, ತನ್ನ ವಸ್ತ್ರಗಳನ್ನು ತೊಳೆದುಕೊಂಡು, ನೀರಿನಲ್ಲಿ ಸ್ನಾನ ಮಾಡಲಿ. ಹೀಗೆ ಸಂಜೆಯಲ್ಲಿ ಪವಿತ್ರನಾಗುವನು.
20 ౨౦ ఎవరైనా అశుద్ధుడుగానే ఉండి పాపశుద్ధి చేసుకోడానికి నిరాకరిస్తే, అతడు యెహోవా పరిశుద్ధ స్థలాన్ని అశుద్ధం చేశాడు గనక అలాంటి వాణ్ణి సమాజంలో లేకుండా చేయాలి. పాపపరిహార జలం అతని మీద చల్ల లేదు గనక అతడు అశుద్ధుడుగానే ఉంటాడు.
ಆದರೆ ಅಪವಿತ್ರನಾಗಿದ್ದು, ತನ್ನನ್ನು ಶುದ್ಧಪಡಿಸಿಕೊಳ್ಳದವನು ಸಭೆಯ ಮಧ್ಯದಿಂದ ತೆಗೆದುಹಾಕಬೇಕು ಏಕೆಂದರೆ ಅವನು ಯೆಹೋವ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ. ನೀರು ಅವನ ಮೇಲೆ ಚಿಮಿಕಿಸಿಕೊಳ್ಳದ ಕಾರಣ ಅವನು ಅಪವಿತ್ರನೇ.
21 ౨౧ ఈ పరిస్థితులకు సంబంధించిన శాశ్వతమైన శాసనం ఏదంటే-పాపపరిహార జలం చల్లేవాడు తన బట్టలు ఉతుక్కోవాలి. పాపపరిహార జలం ముట్టుకున్నవాడు సాయంకాలం వరకూ అశుద్ధుడుగా ఉంటాడు. అశుద్ధుడు ముట్టుకున్నదంతా అశుద్ధం
ಇದು ಅವರಿಗೆ ಶಾಶ್ವತ ಕಟ್ಟಳೆಯಾಗಿರಬೇಕು. “ಶುದ್ಧೀಕರಣದ ನೀರನ್ನು ಚಿಮುಕಿಸುವವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಂಜೆಯವರೆಗೆ ಅಪವಿತ್ರನಾಗಿರುವನು.
22 ౨౨ దాన్ని ముట్టుకున్న వారిందరూ సాయంకాలం వరకూ అశుద్ధులుగా ఉంటారు.”
ಇದಲ್ಲದೆ ಅಪವಿತ್ರನಾದವನು ಮುಟ್ಟುವಂಥಾದ್ದೆಲ್ಲ ಅಪವಿತ್ರವಾಗುವುದು, ಅವನನ್ನು ಮುಟ್ಟಿದವನು ಸಂಜೆಯವರೆಗೆ ಅಪವಿತ್ರನಾಗಿರುವನು,” ಎಂದು ಹೇಳಿದರು.