< 2 तवा 30 >

1 और हिज़क़ियाह ने सारे इस्राईल और यहूदाह को कहला भेजा, और इफ़्राईम और मनस्सी के पास भी ख़त लिख भेजे कि वह ख़ुदावन्द के घर में येरूशलेम को, ख़ुदावन्द इस्राईल के ख़ुदा के लिए 'ईद — ए — फ़सह करने को आएँ;
ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು.
2 क्यूँकि बादशाह और सरदारों और येरूशलेम की सारी जमा'अत ने दूसरे महीने में 'ईद — ए — फ़सह मनाने की सलाह कर लिया था।
ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು.
3 क्यूँकि वह उस वक़्त उसे इसलिए नहीं मना सके कि काहिनों ने काफ़ी ता'दाद में अपने आपको पाक नहीं किया था, और लोग भी येरूशलेम में इकट्ठे नहीं हुए थे।
ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು.
4 यह बात बादशाह और सारी जमा'अत की नज़र में अच्छी थी।
ಈ ಕಾರ್ಯವು ಅರಸನಿಗೂ ಸಮಸ್ತ ಜನರಿಗೂ ಸ್ಪಷ್ಟವಾಯಿತು.
5 इसलिए उन्होंने हुक्म जारी किया कि बैरसबा' से दान तक सारे इस्राईल में 'ऐलान किया जाए कि लोग येरूशलेम में आकर ख़ुदावन्द इस्राईल के ख़ुदा के लिए 'ईद — ए — फ़सह करें, क्यूँकि उन्होंने ऐसी बड़ी तादाद में उसको नहीं मनाया था जैसे लिखा है।
ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.
6 इसलिए बादशाह के क़ासिद और उसके सरदारों से ख़त लेकर बादशाह के हुक्म के मुताबिक़ सारे इस्राईल और यहूदाह में फिरे, और कहते गए, “ऐ बनी — इस्राईल! अब्रहाम और इस्हाक़ और इस्राईल के ख़ुदावन्द ख़ुदा की तरफ़ दोबारा फिर जाओ, ताकि वह तुम्हारे बाक़ी लोगों की तरफ़ जो असूर के बादशाहों के हाथ से बच रहे हैं, फिर मुतवज्जिह हों।
ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ, “ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು.
7 और तुम अपने बाप — दादा और अपने भाइयों की तरह मत हो, जिन्होंने ख़ुदावन्द अपने बाप — दादा के ख़ुदा की नाफ़रमानी की, यहाँ तक कि उसने उनको छोड़ दिया कि बर्बाद हो जाएँ, जैसा तुम देखते हो।
ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
8 तब तुम अपने बाप — दादा की तरह मग़रूर न बनो, बल्कि ख़ुदावन्द के ताबे' हो जाओ और उसके मक़दिस में आओ, जिसे उसने हमेशा के लिए पाक किया है, और ख़ुदावन्द अपने ख़ुदा की इबादत करो ताकि उसका क़हर — ए — शदीद तुम पर से टल जाए।
ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.
9 क्यूँकि अगर तुम ख़ुदावन्द की तरफ़ दोबारा मुड़ो, तो तुम्हारे भाई और तुम्हारे बेटे अपने ग़ुलाम करने वालों की नज़र में क़ाबिल — ए — रहम ठहरेंगे और इस मुल्क में फिर आएँगे, क्यूँकि ख़ुदावन्द तुम्हारा ख़ुदा ग़फ़ूर — ओ — रहीम है, और अगर तुम उसकी तरफ़ फिरो तो वह तुम से अपना मुँह फेर न लेगा।”
ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ,” ಎಂದು ಹೇಳಿದರು.
10 इसलिए क़ासिद इफ़्राईम और मनस्सी के मुल्क में शहर — ब — शहर होते हुए ज़बूलून तक गए, पर उन्होंने उनका मज़ाक़ किया और उनको ठठ्ठों में उड़ाया।
ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
11 फिर भी आशर और मनस्सी और ज़बूलून में से कुछ लोगों ने फ़िरोतनी की और येरूशलेम को आए।
ಆದರೂ ಆಶೇರ್, ಮನಸ್ಸೆ, ಜೆಬುಲೂನ್, ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
12 और यहूदाह पर भी ख़ुदावन्द का हाथ था कि उनको यकदिल बना दे, ताकि वह ख़ुदावन्द के कलाम के मुताबिक़ बादशाह और सरदारों के हुक्म पर 'अमल करें।
ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.
13 इसलिए बहुत से लोग येरूशलेम में जमा' हुए कि दूसरे महीने में फ़तीरी रोटी की 'ईद करें; यूँ बहुत बड़ी जमा'अत हो गई।
ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು.
14 वह उठे और उन मज़बहों को जो येरूशलेम में थे और ख़ुशबू की सब कु़र्बानगाहों को दूर किया, और उनकी क़िद्रून न के नाले में डाल दिया।
ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.
15 फिर दूसरे महीने की चौदहवीं तारीख़ को उन्होंने फ़सह को ज़बह किया, और काहिनों और लावियों ने शर्मिन्दा होकर अपने आपको पाक किया और ख़ुदावन्द के घर में सोख़्तनी क़ुर्बानियाँ लाए।
ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು.
16 वह अपने दस्तूर पर मर्द — ए — ख़ुदा मूसा की शरी'अत के मुताबिक़ अपनी अपनी जगह खड़े हुए, और काहिनों ने लावियों के हाथ से ख़ून लेकर छिड़का।
ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
17 क्यूँकि जमा'अत में बहुत से लोग ऐसे थे जिन्होंने अपने आपको पाक नहीं किया था, इसलिए यह काम लावियों के सुपुर्द हुआ कि वह सब नापाक शख़्सों के लिए फ़सह के बर्रों को ज़बह करें, ताकि वह ख़ुदावन्द के लिए पाक हों।
ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು.
18 क्यूँकि इफ़्राईम और मनस्सी और इश्कार और ज़बूलून में से बहुत से लोगों ने अपने आपको पाक नहीं किया था, तो भी उन्होंने फ़सह को जिस तरह लिखा है उस तरह से न खाया, क्यूँकि हिज़क़ियाह ने उनके लिए यह दुआ की थी, कि ख़ुदावन्द जो नेक है, हर एक को
ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವರಲ್ಲಿ ಅನೇಕರು ತಮ್ಮನ್ನು ಶುದ್ಧಮಾಡಿಕೊಳ್ಳದೆ ಮೋಶೆಯ ನಿಯಮಕ್ಕೆ ವಿರುದ್ಧ ರೀತಿಯಿಂದ ಪಸ್ಕದ ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿ, “ಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ,
19 जिसने ख़ुदावन्द ख़ुदा अपने बाप — दादा के ख़ुदा की तलब में दिल लगाया है मु'आफ़ करे, अगर वह मक़दिस की तहारत के मुताबिक़ पाक न हुआ हो।
ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.
20 और ख़ुदावन्द ने हिज़क़ियाह की सुनी और लोगों को शिफ़ा दी।
ಯೆಹೋವ ದೇವರು ಹಿಜ್ಕೀಯನ ಮಾತನ್ನು ಕೇಳಿ, ಜನರನ್ನು ಸ್ವಸ್ಥಮಾಡಿದರು.
21 और जो बनी — इस्राईल येरूशलेम में हाज़िर थे, उन्होंने बड़ी ख़ुशी से सात दिन तक 'ईद — ए — फ़तीर मनाई, और लावी और काहिन बलन्द आवाज़ के बाजों के साथ ख़ुदावन्द के सामने गा गाकर हर दिन ख़ुदावन्द की हम्द करते रहे।
ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.
22 और हिज़क़ियाह ने सब लावियों से जो ख़ुदावन्द की ख़िदमत में माहिर थे, तसल्लीबख़्श बातें कीं। इसलिए वह 'ईद के सातों दिन तक खाते और सलामती के ज़बीहों की क़ुर्बानियाँ पेश करते और ख़ुदावन्द अपने बाप दादा के ख़ुदा के सामने इक़रार करते रहे।
ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.
23 फिर सारी जमा'अत ने और सात दिन मानने की सलाह की, और ख़ुशी से और सात दिन माने।
ಅಲ್ಲದೆ ಕೂಟವೆಲ್ಲಾ ಇನ್ನೂ ಏಳು ದಿವಸಗಳ ಕಾಲ ಹಬ್ಬವನ್ನು ಆಚರಿಸಬೇಕೆಂದು ತಿರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು.
24 क्यूँकि शाह — ए — यहूदाह हिज़क़ियाह ने जमा'अत को क़ुर्बानियों के लिए एक हज़ार बछड़े और सात हज़ार भेड़ें 'इनायत कीं, और सरदारों ने जमा'अत को एक हज़ार बछड़े और दस हज़ार भेड़ें दीं, और बहुत से काहिनों ने अपने आपको पाक किया।
ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು.
25 और यहूदाह की सारी जमा'अत ने काहिनों और लावियों समेत और उस सारी जमा'अत ने जो इस्राईल में से आई थी, और उन परदेसियों ने जो इस्राईल के मुल्क से आए थे, और जो यहूदाह में रहते थे ख़ुशी मनाई।
ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
26 इसलिए येरूशलेम में बड़ी ख़ुशी हुई, क्यूँकि शाह — ए — इस्राईल सुलेमान बिन दाऊद के ज़माने से येरूशलेम में ऐसा नहीं हुआ था।
ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ.
27 तब लावी काहिनों ने उठ कर लोगों को बरकत दी, और उनकी सुनी गई, और उनकी दुआ उसके पाक मकान, आसमान तक पहुँची।
ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.

< 2 तवा 30 >