< 2 समु 18 >

1 और दाऊद ने उन लोगों को जो उसके साथ थे गिना और हज़ारों के और सैकड़ों के सरदार मुक़र्रर किए।
ದಾವೀದನು ತನ್ನ ಸಂಗಡದಲ್ಲಿದ್ದ ಜನರನ್ನು ಲೆಕ್ಕ ಮಾಡಿ, ಅವರ ಮೇಲೆ ಸಾವಿರ ಜನರಿಗೂ, ನೂರು ಜನರಿಗೂ ಅಧಿಪತಿಗಳನ್ನು ನೇಮಿಸಿದನು.
2 और दाऊद ने लोगों की एक तिहाई योआब के मातहत और एक तिहाई योआब के भाई अबीशै बिन ज़रोयाह के मातहत और तिहाई जाती इत्ती के मातहत करके उनको रवाना किया और बादशाह ने लोगों से कहा कि “मैं ख़ुद भी ज़रूर तुम्हारे साथ चलूँगा।”
ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು.
3 लेकिन लोगों ने कहा कि “तू नहीं जाने पायेगा क्यूँकि हम अगर भागें तो उनको कुछ हमारी परवा न होगी और अगर हम में से आधे मारे जायें तो भी उनको कुछ परवा न होगी लेकिन तू हम जैसे दस हज़ार के बराबर है इसलिए बेहतर यह है कि तू शहर में से हमारी मदद करने को तैयार रहे।”
ಆದರೆ ಸೈನಿಕರು ಅವನಿಗೆ, “ನೀನು ನಮ್ಮ ಸಂಗಡ ಬರಬೇಡ. ಏಕೆಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವುದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸಮನಾಗಿದ್ದೀ. ಈಗ ನೀನು ಊರಿನಲ್ಲಿದ್ದು, ನಮಗೆ ಸಹಾಯವಾಗಿರುವುದೇ ಉತ್ತಮ,” ಎಂದರು.
4 बादशाह ने उनसे कहा, “जो तुमको बेहतर मा'लूम होता है मैं वही करूँगा।” इसलिए बादशाह शहर के फाटक की एक तरफ़ खड़ा रहा और सब लोग सौ सौ और हज़ार हज़ार करके निकलने लगे।
ಆಗ ಅರಸನು ಅವರಿಗೆ, “ನಿಮಗೆ ಸರಿಕಾಣಿಸುವುದನ್ನು ಮಾಡುತ್ತೇನೆ,” ಎಂದನು. ಅರಸನು ಬಾಗಿಲ ಬಳಿಯಲ್ಲಿ ನಿಂತನು. ಸೈನಿಕರೆಲ್ಲಾ ನೂರು ನೂರಾಗಿಯೂ, ಸಾವಿರ ಸಾವಿರಗಳಾಗಿಯೂ ಹೊರಟರು.
5 और बादशाह ने योआब और अबीशै और इती को फ़रमाया कि “मेरी ख़ातिर उस जवान अबीसलोम के साथ नरमी से पेश आना।” जब बादशाह ने सब सरदारों को अबीसलोम के हक़ में नसीहत की तो सब लोगों ने सुना।
ಅರಸನು ಯೋವಾಬನಿಗೂ, ಅಬೀಷೈಯಿಗೂ, ಇತ್ತೈಗೂ ಆಜ್ಞಾಪಿಸಿ, “ನನಗೋಸ್ಕರ ಯುವಕನಾದ ಅಬ್ಷಾಲೋಮನೊಂದಿಗೆ ಮೃದುವಾಗಿ ವರ್ತಿಸಿರಿ,” ಎಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಟ ಆಜ್ಞೆಯನ್ನು ಸೈನಿಕರೆಲ್ಲರೂ ಕೇಳಿದರು.
6 इसलिए वह लोग निकल कर मैदान में इस्राईल के मुक़ाबिले को गये और इफ़्राईम के जंगल में हुई।
ಅನಂತರ ಸೈನಿಕರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು. ಯುದ್ಧವು ಎಫ್ರಾಯೀಮ್ ಅಡವಿಯಲ್ಲಿತ್ತು.
7 और वहाँ इस्राईल के लोगों ने दाऊद के ख़ादिमों से शिकस्त खाई और उस दिन ऐसी बड़ी खूँरेज़ी हुई कि बीस हज़ार आदमी मारे गए।
ಅಲ್ಲಿ ಇಸ್ರಾಯೇಲರು ದಾವೀದನ ಸೇವಕರ ಮುಂದೆ ಸಂಹಾರವಾದರು.
8 इसलिए कि उस दिन सारी बादशाहत में जंग थी और लोग इतने तलवार का लुक़मा नहीं बने जितने बन का शिकार हुए।
ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು. ಇಪ್ಪತ್ತು ಸಾವಿರ ಸೈನಿಕರು ಸತ್ತರು. ಅಲ್ಲಿನ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಸೈನಿಕರಲ್ಲಿ ಖಡ್ಗದಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.
9 और अचानक अबीसलोम दौड़ के दाऊद के ख़ादिमों के सामने आ गया और अबीसलोम अपने खच्चर पर सवार था और वह खच्चर एक बड़े बलूत के दरख़्त की घनी डालियों के नीचे से गया, इसलिए उसका सिर बलूत में अटक गया और वह आसमान और ज़मीन के बीच में लटका रह गया और वह खच्चर जो उसके रान तले था निकल गया।
ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.
10 किसी शख़्स ने यह देखा और योआब को ख़बर दी कि “मैंने अबीसलोम को बलूत के दरख्त़ में लटका हुआ देखा।”
ಅದನ್ನು ಒಬ್ಬನು ಕಂಡು ಯೋವಾಬನಿಗೆ, “ಅಬ್ಷಾಲೋಮನು ಒಂದು ಏಲಾ ಮರದಲ್ಲಿ ತೂಗಾಡುವುದನ್ನು ಕಂಡೆನು,” ಎಂದನು.
11 और योआब ने उस शख़्स से जिसने उसे ख़बर दी थी कहा, “तूने यह देखा फिर क्यों नहीं तूने उसे मार कर वहीं ज़मीन पर गिरा दिया? क्यूँकि मैं तुझे चाँदी के दस टुकड़े और कमर बंद देता।”
ಅದಕ್ಕೆ ಯೋವಾಬನು ತನಗೆ ಅದನ್ನು ತಿಳಿಸಿದವನಿಗೆ, “ನೀನು ಕಂಡು ಅವನನ್ನು ಏಕೆ ಕಡಿದು ನೆಲಕ್ಕೆ ಉರುಳಿಸಲಿಲ್ಲ? ನಾನು ನಿನಗೆ ಹತ್ತು ಬೆಳ್ಳಿ ನಾಣ್ಯಗಳನ್ನು, ಒಂದು ಬೆಳ್ಳಿ ನಡುಕಟ್ಟನ್ನು ಕೊಡುತ್ತಿದ್ದೆನು,” ಎಂದನು.
12 उस शख़्स ने योआब से कहा कि “अगर मुझे चाँदी के हज़ार टुकड़े भी मेरे हाथ में मिलते तो भी मैं बादशाह के बेटे पर हाथ न उठाता क्यूँकि बादशाह ने हमारे सुनते तुझे और अबीशै और इती को नसीहत की थी कि ख़बरदार कोई उस जवान अबीसलोम को न छुए।
ಆದರೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ, ನಾನು ಅರಸನ ಮಗನ ಮೇಲೆ ನನ್ನ ಕೈಚಾಚುವುದಿಲ್ಲ. ಏಕೆಂದರೆ, ‘ಅಬ್ಷಾಲೋಮನೆಂಬ ಯುವಕನೊಡನೆ ಸೌಮ್ಯದಿಂದ ನಡೆದು ಕಾಪಾಡಿರಿ,’ ಎಂದು ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಯನಿಗೂ, ಇತ್ತೈಗೂ ಸ್ಪಷ್ಟವಾಗಿ ಆಜ್ಞಾಪಿಸಿದ್ದನು.
13 वरना अगर मैं उसकी जान के साथ दग़ा खेलता और बादशाह से तो कोई बात छुपी भी नहीं तो तू ख़ुद भी किनारा कर लेता।”
ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಏಕೆ ಮೋಸಮಾಡಿಕೊಳ್ಳಬೇಕು. ಏಕೆಂದರೆ ಅರಸನಿಗೆ ಯಾವ ಕಾರ್ಯವೂ ಮರೆಯಾಗಿರುವುದಿಲ್ಲ. ನೀನೇ ನನಗೆ ವಿರೋಧವಾಗಿ ನಿಲ್ಲುವಿ,” ಎಂದನು.
14 तब योआब ने कहा, “मैं तेरे साथ यूँ ही ठहरा नहीं रह सकता।” फिर उसने तीन तीर हाथ में लिए और उनसे अबीसलोम के दिल को जो अभी बलूत के दरख्त़ के बीच ज़िन्दा ही था छेद डाला।
ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.
15 और दस जवानों ने जो योआब के सलह बरदार थे अबीसलोम को घेर कर उसे मारा और क़त्ल कर दिया।
ಆಗ ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯುವಕರು ಸುತ್ತಿಕೊಂಡು, ಅಬ್ಷಾಲೋಮನನ್ನು ಕೊಂದುಹಾಕಿದರು.
16 तब योआब ने नरसिंगा फूँका और लोग इस्राईलियों का पीछा करने से लौटे क्यूँकि योआब ने लोगों को रोक लिया।
ಆಗ ಯೋವಾಬನು ತುತೂರಿಯನ್ನು ಊದಿದ್ದರಿಂದ, ಸೈನಿಕರು ಇಸ್ರಾಯೇಲರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಏಕೆಂದರೆ ಯೋವಾಬನು ಜನರನ್ನು ತಡೆದನು.
17 और उन्होंने अबीसलोम को लेकर बन के उस बड़े गढ़े में डाल दिया और उस पर पत्थरों का एक बहुत बड़ा ढेर लगा दिया और सब इस्राईली अपने अपने डेरे को भाग गये।
ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.
18 और अबीसलोम ने अपने जीते जी एक लाट लेकर खड़ी कराई थी जो शाही वादी में है क्यूँकि उसने कहा, मेरे कोई बेटा नहीं जिससे मेरे नाम की यादगार रहे इसलिए उसने उस लाट को अपना नाम दिया। और वह आज तक अबीसलोम की यादगार कहलाती है।
ಅಬ್ಷಾಲೋಮನು ಜೀವದಿಂದಿರುವಾಗ, “ನನ್ನ ಹೆಸರನ್ನು ಜ್ಞಾಪಕಾರ್ಥವಾಗಿ ಉಳಿಸಲು ನನಗೆ ಮಗನಿಲ್ಲ,” ಎಂದು ಹೇಳಿ, ಅವನು ತಗ್ಗಿನಲ್ಲಿರುವ ಒಂದು ಕಲ್ಲಿನ ಸ್ತಂಭವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಈ ದಿನದವರೆಗೂ ಅಬ್ಷಾಲೋಮನ ಸ್ಮಾರಕಸ್ತಂಭ ಎಂದು ಕರೆಯಲಾಗುತ್ತದೆ.
19 तब सदूक़ के बेटे अख़ीमा'ज़ ने कहा कि “मुझे दौड़ कर बादशाह को ख़बर पहुँचाने दे कि ख़ुदावन्द ने उसके दुश्मनों से उसका बदला ले लिया।”
ಆಗ ಚಾದೋಕನ ಮಗ ಅಹೀಮಾಚನು, “ಯೆಹೋವ ದೇವರು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾರೆಂಬ ವರ್ತಮಾನವನ್ನು ಅರಸನಿಗೆ ತಿಳಿಸುವ ಹಾಗೆ, ನಾನು ಓಡಿ ಹೋಗುವೆನು,” ಎಂದನು.
20 लेकिन योआब ने उससे कहा कि आज के दिन तू कोई ख़बर न पहुँचा बल्कि दूसरे दिन ख़बर पहुँचा देना लेकिन आज तुझे कोई ख़बर नहीं ले जाना होगा इसलिए बादशाह का बेटा मर गया है।
ಆದರೆ ಯೋವಾಬನು ಅವನಿಗೆ, “ನೀನು ಈ ಹೊತ್ತು ವರ್ತಮಾನ ತೆಗೆದುಕೊಂಡು ಹೋಗಬೇಡ. ಮತ್ತೊಂದು ದಿವಸ ವರ್ತಮಾನ ತೆಗೆದುಕೊಂಡು ಹೋಗಬಹುದು. ಏಕೆಂದರೆ ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತೆಗೆದುಕೊಂಡು ಹೋಗಬೇಡ,” ಎಂದನು.
21 तब योआब ने कूशी से कहा कि जा कर जो कुछ तूने देखा है इसलिए बादशाह को जाकर बता दे। तब वह कूशी योआब को सज्दा करके दौड़ गया।
ಯೋವಾಬನು ಕೂಷ್ಯ ದೇಶವಾಸಿಯಾದ ಒಬ್ಬನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು,” ಎಂದನು. ಕೂಷ್ಯ ದೇಶವಾಸಿ ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು.
22 तब सदूक़ के बेटे अख़ीमा'ज़ ने फिर योआब से कहा, “चाहे कुछ ही हो तू मुझे भी उस कूशी के पीछे दौड़ जाने दे।” योआब ने कहा, “ऐ मेरे बेटे तू क्यूँ दौड़ जाना चाहता है जिस हाल कि इस ख़बर के बदले तुझे कोई इन'आम नहीं मिलेगा?”
ಆಗ ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, ಏನೇ ಆಗಲಿ, “ನಾನು ಕೂಷ್ಯ ದೇಶವಾಸಿ ಹಿಂದೆ ಓಡಿಹೋಗುವ ಹಾಗೆ ಅಪ್ಪಣೆಕೊಡಬೇಕು,” ಎಂದನು. ಅದಕ್ಕೆ ಯೋವಾಬನು, “ನನ್ನ ಮಗನೇ, ನೀನು ಏಕೆ ಹೋಗಲು ಬಯಸುತ್ತಿರುವೆ? ನಿನಗೆ ಪ್ರಶಸ್ತಿಯನ್ನು ತರುವ ಯಾವುದೇ ಸುದ್ದಿ ನಿನ್ನ ಬಳಿ ಇಲ್ಲ,” ಎಂದನು.
23 उसने कहा, चाहे कुछ ही हो मैं तो जाऊँगा “उसने कहा, दौड़ जा।” तब अख़ीमा'ज़ मैदान से होकर दौड़ गया और कूशी से आगे बढ़ गया।
ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.
24 और दाऊद दोनों फाटकों के दरमियान बैठा था और पहरे वाला फाटक की छत से होकर दीवार पर गया और क्या देखता है कि एक शख़्स अकेला दौड़ा आता है।
ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ, ಕಣ್ಣುಗಳನ್ನೆತ್ತಿ ನೋಡಲಾಗಿ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿಬರುವುದನ್ನು ಕಂಡನು.
25 उस पहरे वाले ने पुकार कर बादशाह को ख़बर दी, बादशाह ने फ़रमाया, “अगर वह अकेला है तो मुँह ज़बानी ख़बर लाता होगा।” और वह तेज़ आया और नज़दीक पहुँचा।
ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು, “ಅವನು ಒಬ್ಬನಾಗಿ ಬಂದರೆ, ಅವನ ಬಳಿ ಒಳ್ಳೆಯ ಸಮಾಚಾರ ಇರುವುದು,” ಎಂದನು. ಅವನು ಬಂದು ಸಮೀಪಿಸಿದನು.
26 और पहरे वाले ने एक और आदमी को देखा कि दौड़ा आता है, तब उस पहरे वाले ने दरबान को पुकार कर कहा कि “देख एक शख़्स और अकेला दौड़ा आता है।” बादशाह ने कहा, “वह भी ख़बर लाता होगा।”
ಕಾವಲುಗಾರನು ಬೇರೊಬ್ಬನು ಓಡಿಬರುವುದನ್ನು ಕಂಡು, ಬಾಗಿಲು ಕಾಯುವವನನ್ನು ಕರೆದು, “ಇಗೋ, ಮತ್ತೊಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ,” ಎಂದನು. ಅದಕ್ಕೆ ಅರಸನು, “ಅವನೂ ಸಹ ಒಳ್ಳೆಯ ಸಮಾಚಾರ ತೆಗೆದುಕೊಂಡು ಬರುತ್ತಾನೆ,” ಎಂದನು.
27 और पहरे वाले ने कहा, “मुझे अगले का दौड़ना सदूक़ के बेटे अख़ीमा'ज़ के दौड़ने की तरह मा'लूम देता है।” तब बादशाह ने कहा, “वह भला आदमी है और अच्छी ख़बर लाता होगा।”
ಕಾವಲುಗಾರನು, “ಮೊದಲನೆಯವನ ಓಟವು ಚಾದೋಕನ ಮಗ ಅಹೀಮಾಚನ ಓಟದ ಹಾಗೆ ಇರುವುದೆಂದು ನನಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಒಳ್ಳೆಯ ಸಮಾಚಾರ ತರುತ್ತಾನೆ,” ಎಂದನು.
28 और अख़ीमा'ज़ ने पुकार कर बादशाह से कहा, “ख़ैर है!” और बादशाह के आगे ज़मीन पर झुक कर सिज्दा किया और कहा कि “ख़ुदावन्द तेरा ख़ुदा मुबारक हो जिसने उन आदमियों को जिन्होंने मेरे मालिक बादशाह के ख़िलाफ़ हाथ उठाये थे क़ाबू में कर दिया है।”
ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು.
29 बादशाह ने पूछा क्या वह जवान अबीसलोम सलामत है? अख़ीमा'ज़ ने कहा कि “जब योआब ने बादशाह के ख़ादिम को या'नी मुझको जो तेरा ख़ादिम हूँ रवाना किया तो मैंने एक बड़ी हलचल तो देखी लेकिन मैं नहीं जानता कि वह क्या थी।”
ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.
30 तब बादशाह ने कहा, “एक तरफ़ हो जा और यहीं खड़ा रह।” इसलिए वह एक तरफ़ होकर चुप चाप खड़ा हो गया।
ಅರಸನು, “ನೀನು ಇತ್ತಲಾಗಿ ಬಂದು ನಿಲ್ಲು,” ಎಂದನು. ಅವನು ಅತ್ತಲಾಗಿ ಹೋಗಿ ನಿಂತನು. ಆಗ ಕೂಷ್ಯನು ಬಂದನು.
31 फिर वह कूशी आया और कूशी ने कहा, “मेरे मालिक बादशाह के लिए ख़बर है क्यूँकि ख़ुदावन्द ने आज के दिन उन सबसे जो तेरे ख़िलाफ़ उठे थे तेरा बदला लिया।”
ಕೂಷ್ಯನು, “ಅರಸನಾದ ನನ್ನ ಒಡೆಯನಿಗೆ ಶುಭವರ್ತಮಾನ ಉಂಟು, ಏನೆಂದರೆ ಯೆಹೋವ ದೇವರು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು, ಸಮಸ್ತರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾರೆ,” ಎಂದನು.
32 तब बादशाह ने कूशी से पूछा, “क्या वह जवान अबीसलोम सलामत है?” कूशी ने जवाब दिया कि “मेरे मालिक बादशाह के दुश्मन और जितने तुझे तकलीफ़ पहुँचाने को तेरे ख़िलाफ़ उठें वह उसी जवान की तरह हो जायें।”
ಅರಸನು ಕೂಷ್ಯನಿಗೆ, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದನು. ಕೂಷ್ಯನು ಉತ್ತರವಾಗಿ, “ಅರಸನಾದ ನನ್ನ ಒಡೆಯನ ಶತ್ರುಗಳು ಕೇಡು ಮಾಡುವಂತೆ ನಿನಗೆ ವಿರೋಧವಾಗಿ ಏಳುವ ಸಮಸ್ತರಿಗೂ, ಆ ಯುವಕನಿಗಾದ ಹಾಗೆಯೇ ಆಗಲಿ,” ಎಂದನು.
33 तब बादशाह बहुत बेचैन हो गया और उस कोठरी की तरफ़ जो फाटक के ऊपर थी रोता हुआ चला और चलते चलते यूँ कहता जाता था, “हाय मेरे बेटे अबीसलोम! मेरे बेटे! मेरे बेटे अबीसलोम! काश मैं तेरे बदले मर जाता! ऐ अबीसलोम! मेरे बेटे! मेरे बेटे।”
ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು.

< 2 समु 18 >