< 2 समु 19 >

1 और योआब को बताया गया कि “देख बादशाह अबीसलोम के लिए नौहा और मातम कर रहा है।”
ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.
2 इसलिए तमाम लोगों के लिए उस दिन की फ़तह मातम से बदल गई क्यूँकि लोगों ने उस दिन यह कहते सुना कि “बादशाह अपने बेटे के लिए दुखी है।”
ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು.
3 इसलिए वह लोग उस दिन चोरी से शहर में घुसे जैसे वह लोग जो लड़ाई से भागते हैं शर्म के मारे चोरी चोरी चलते हैं।
ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು.
4 और बादशाह ने अपना मुँह ढाँक लिया और बादशाह ऊँची आवाज़ से चिल्लाने लगा कि “हाय मेरे बेटे अबीसलोम! हाय अबीसलोम मेरे बेटे! मेरे बेटे।”
ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.
5 तब योआब घर में बादशाह के पास जाकर कहने लगा कि “तूने आज अपने सब ख़ादिमों को शर्मिन्दा किया, जिन्होंने आज के दिन तेरी जान और तेरे बेटों और तेरी बेटियों की जानें और तेरी बीवियों की जानें और तेरी बाँदियों की जानें बचायीं।
ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.
6 क्यूँकि तू अपने 'अदावत रखने वालों को प्यार करता है, और अपने दोस्तों से 'अदावत रखता है, इसलिए कि तूने आज के दिन ज़ाहिर कर दिया कि सरदार और ख़ादिम तेरे नज़दीक बेक़द्र हैं, क्यूँकि आज के दिन मैं देखता हूँ कि अगर अबीसलोम जीता रहता और हम सब मर जाते, तो तू बहुत ख़ुश होता।
ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ, ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೆ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.
7 इसलिए उठ बाहर निकल और अपने ख़ादिमों से तसल्ली बख़्श बातें कर क्यूँकि मैं ख़ुदावन्द की क़सम खाता हूँ कि अगर तू बाहर न जाए तो आज रात को एक आदमी भी तेरे साथ न रहेगा और यह तेरे लिए उन सब आफतों से बदतर होगा जो तेरी नौजवानी से लेकर अब तक तुझ पर आई है।”
ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು.
8 तब बादशाह उठकर फाटक में जा बैठा और सब लोगों को बताया गया कि देखो बादशाह फाटक में बैठा है, तब सब लोग बादशाह के सामने आए और इस्राईली अपने अपने डेरे को भाग गये थे।
ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.
9 और इस्राईल के क़बीलों के सब लोगों में झगड़ा था और वह कहते थे कि “बादशाह ने हमारे दुश्मनों के हाथ से और फ़िलिस्तियों के हाथ से बचाया और अब वह अबीसलोम के सामने से मुल्क छोड़ कर भाग गया।
ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.
10 और अबीसलोम जिसे हमने मसह करके अपना हाकिम बनाया था, लड़ाई में मर गया है इसलिए तुम अब बादशाह को वापस लाने की बात क्यों नहीं करते?”
೧೦ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತನಾಡಿಕೊಂಡರು.
11 तब दाऊद बादशाह ने सदूक़ और अबीयातर काहिनों को कहला भेजा कि “यहूदाह के बुज़ुर्गों से कहो कि तुम बादशाह को उसके महल में पहुँचाने के लिए सबसे पीछे क्यों होते हो जिस हाल कि सारे इस्राईल की बात उसे उसके महल में पहुँचाने के बारे में बादशाह तक पहुँची है।
೧೧ಇಸ್ರಾಯೇಲರು ಈ ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ?
12 तुम तो मेरे भाई और मेरी हड्डी हो फिर तुम बादशाह को वापस ले जाने के लिए सबसे पीछे क्यों हो?
೧೨ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ’ ಎಂದು ಹೇಳಿರಿ.
13 और 'अमासा से कहना क्या तू मेरी हड्डी और गोश्त नहीं? इसलिए अगर तू योआब की जगह मेरे सामने हमेशा के लिए लश्कर का सरदार न हो तो ख़ुदा मुझसे ऐसा ही बल्कि इससे भी ज़्यादा करे।”
೧೩ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.
14 और उसने सब बनी यहूदाह का दिल एक आदमी के दिल की तरह माएल कर लिया चुनाँचे उन्होंने बादशाह को पैग़ाम भेजा कि “तू अपने सब ख़ादिमों को साथ लेकर लौट आ।”
೧೪ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.
15 इसलिए बादशाह लौट कर यरदन पर आया और सब बनी यहूदाह ज़िल्जाल को गये कि बादशाह का इस्तक़बाल करें और उसे यरदन के पार ले आयें।
೧೫ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.
16 और जीरा के बेटे बिनयमीनी सिम'ई ने जो बहूरीम का था जल्दी की और बनी यहूदाह के साथ दाऊद बादशाह के इस्तक़बाल को आया।
೧೬ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.
17 और उसके साथ एक हज़ार बिनयमीनी जवान थे और साऊल के घराने का ख़ादिम ज़ीबा अपने पन्दरह बेटों और बीस नौकरों समेत आया और बादशाह के सामने यरदन के पार उतरे।
೧೭ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು
18 और एक कश्ती पार गई कि बादशाह के घराने को ले आये और जो काम उसे मुनासिब मा'लूम हो उसे करे और ज़ीरा का बेटा सिम'ई बादशाह के सामने जैसे ही वह यरदन पार हुआ औंधा हो कर गिरा।
೧೮ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,
19 और बादशाह से कहने लगा कि मेरा मालिक मेरी तरफ़ गुनाह मंसूब न करे और जिस दिन मेरा मालिक बादशाह येरूशलेम से निकला उस दिन जो कुछ तेरे ख़ादिम ने बद मिज़ाजी से किया उसे ऐसा याद न रख कि बादशाह उसको अपने दिल में रख्खे।
೧೯“ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.
20 क्यूँकि तेरा बन्दा यह जानता है कि “मैंने गुनाह किया है और देख आज के दिन मैं ही यूसुफ़ के घराने में से पहले आया हूँ कि अपने मालिक बादशाह का इस्तक़बाल करूँ।
೨೦ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.
21 और ज़रोयाह के बेटे अबीशै ने जवाब, दिया क्या सिम'ई इस वजह से मारा न जाए कि उसने ख़ुदावन्द के ममसूह पर ला'नत की?”
೨೧ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.
22 दाऊद ने कहा, “ऐ ज़रोयाह के बेटो! मुझे तुमसे क्या काम कि तुम आज के दिन मेरे मुखालिफ़ हुए हो? क्या इस्राईल में से कोई आदमी आज के दिन क़त्ल किया जाए? क्या मैं यह नहीं जानता कि मैं आज के दिन इस्राईल का बादशाह हूँ?”
೨೨ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು” ಎಂದು ನುಡಿದನು.
23 और बादशाह ने सिम'ई से कहा, तू मारा नहीं जाएगा “और बादशाह ने उससे क़सम खाई।
೨೩ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣದಂಡನೆ ಆಗುವುದಿಲ್ಲ” ಎಂದು ಪ್ರಮಾಣಮಾಡಿ ಹೇಳಿದನು.
24 फिर साऊल का बेटा मिफ़ीबोसत बादशाह के इस्तक़बाल को आया, उसने बादशाह के चले जाने के दिन से लेकर उसे सलामत घर आजाने के दिन तक न तो अपने पाँव पर पट्टियाँ बाँधी और न अपनी दाढ़ी कतरवाई और न अपने कपड़े धुलवाए थे।
೨೪ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
25 और ऐसा हुआ कि जब वह येरूशलेम में बादशाह से मिलने आया तो बादशाह ने उससे कहा, ऐ मिफ़ीबोसत तू मेरे साथ क्यों नहीं गया था?”
೨೫ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?” ಎಂದು ಕೇಳಿದನು.
26 उसने जवाब दिया, ऐ मेरे मालिक बादशाह मेरे नौकर ने मुझसे दग़ा की क्यूँकि तेरे ख़ादिम ने कहा था कि मैं अपने लिए गधे पर जीन कसूँगा ताकि मैं सवार हो कर बादशाह के साथ जाऊँ इसलिए कि तेरा ख़ादिम लंगड़ा है।
೨೬ಅವನು, “ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ ‘ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು’ ಎಂದು ಆಜ್ಞಾಪಿಸಿದೆನು.
27 तब उसने मेरे मालिक बादशाह के सामने तेरे ख़ादिम पर इल्ज़ाम लगाया, लेकिन मेरा मालिक बादशाह तू ख़ुदावन्द के फ़रिश्ता की तरह है, इसलिए जो कुछ तुझे अच्छा मा'लूम हो वह कर।
೨೭ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.
28 क्यूँकि मेरे बाप का सारा घराना, मेरे मालिक बादशाह के आगे मुर्दों के तरह था तो भी तूने अपने ख़ादिम को उन लोगों के बीच बिठाया जो तेरे दस्तरख़्वान पर खाते थे तब क्या अब भी मेरा कोई हक़ है कि मैं बादशाह के आगे फिर फ़रयाद करूँ?
೨೮ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.
29 बादशाह ने उनसे कहा, “तू अपनी बातें क्यों बयान करता जाता है? मैं कहता हूँ कि तू और ज़ीबा दोनों उस ज़मीन को आपस में बाँट लो।”
೨೯ಆಗ ಅರಸನು ಅವನಿಗೆ, “ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು” ಎಂದು ಹೇಳಿದನು.
30 और मिफ़ीबोसत ने बादशाह से कहा, “वही सब ले ले इसलिए कि मेरा मालिक बादशाह अपने घर में फिर सलामत आ गया है।”
೩೦ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು.
31 और बरज़िली जिल'आदी रजिलीम से आया और बादशाह के साथ यरदन पार गया ताकि उसे यरदन के पार पहुँचाये।
೩೧ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು.
32 और यह बरज़िली बहुत ही उम्र दराज़ आदमी या'नी अस्सी बरस का था, उसने बादशाह को जब तक वह मेहनायम में रहा ख़ुराक पहुँचाई थी इसलिए कि वह बहुत बड़ा आदमी था।
೩೨ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.
33 तब बादशाह ने बरज़िली से कहा कि “तू मेरे साथ चल और मैं येरूशलेम में अपने साथ तेरी परवरिश करूँगा।”
೩೩ಅರಸನು ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ” ಎಂದನು.
34 और बरज़िली ने बादशाह को जवाब दिया कि “मेरी ज़िन्दगी के दिन ही कितने हैं जो मैं बादशाह के साथ येरूशलेम को जाऊँ?
೩೪ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ
35 आज मैं अस्सी बरस का हूँ, क्या मैं भले और बुरे में फ़र्क कर सकता हूँ? क्या तेरा बन्दा जो कुछ खाता पीता है उसका मज़ा जान सकता है? क्या मैं गाने वालों और गाने वालियों की फिर आवाज़ सुन सकता हूँ? तब तेरा बन्दा अपने बादशाह पर क्यों बोझ हो?
೩೫ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?
36 तेरा बन्दा सिर्फ़ यरदन के पार तक बादशाह के साथ जाना चाहता है, इसलिए बादशाह मुझे ऐसा बड़ा बदला क्यूँ दे?
೩೬ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?
37 अपने बन्दा को लौट जाने दे ताकि मैं अपने शहर में अपने बाप और माँ की क़ब्र के पास मरूँ लेकिन देख तेरा बन्दा किम्हाम हाज़िर है, वह मेरे मालिक बादशाह के साथ पार जाए और जो कुछ तुझे अच्छा मा'लूम दे उससे कर।”
೩೭ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು.
38 तब बादशाह ने कहा, “किम्हाम मेरे साथ पार चलेगा और जो कुछ तुझे अच्छा मा'लूम हो वही मैं उसके साथ करूँगा और जो कुछ तू चाहेगा मैं तेरे लिए वही करूँगा।”
೩೮ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ” ಎಂದು ಹೇಳಿದನು.
39 और सब लोग यरदन के पार हो गये और बादशाह भी पार हुआ, फिर बादशाह ने बरज़िली को चूमा और उसे दुआ दी और वह अपनी जगह को लौट गया।
೩೯ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.
40 तब बादशाह जिलजाल को रवाना हुआ और किम्हाम उसके साथ चला और यहूदाह के सब लोग और इस्राईल के लोगों में से भी आधे बादशाह को पार लाये।
೪೦ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು.
41 तब इस्राईल के सब लोग बादशाह के पास आकर उससे कहने लगे कि “हमारे भाई बनी यहूदाह तुझे क्यूँ चोरी से ले आए और बादशाह को और उसके घराने को और दाऊद के साथ जितने थे उनको यरदन के पार से लाये?”
೪೧ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.
42 तब सब बनी यहूदाह ने बनी इस्राईल को जवाब दिया, “इसलिए कि बादशाह का हमारे साथ नज़दीक का रिश्ता है, तब तुम इस बात की वजह से नाराज़ क्यों हुए? क्या हमने बादशाह के दाम का कुछ खा लिया है या उसने हमको कुछ इन'आम दिया है?”
೪೨ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, “ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?” ಎಂದು ಉತ್ತರ ಕೊಟ್ಟರು.
43 फिर बनी इस्राईल ने बनी यहूदाह को जवाब दिया कि “बादशाह में हमारे दस हिस्से हैं और हमारा हक़ भी दाऊद पर तुम से ज़्यादा है तब तुमने क्यों हमारी हिक़ारत की, कि बादशाह को लौटा लाने में पहले हमसे सलाह नहीं ली?” और बनी यहूदाह की बातें बनी इस्राईल की बातों से ज़्यादा सख्त़ थीं।
೪೩ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.

< 2 समु 19 >