< आमू 9 >
1 मैंने ख़ुदावन्द को मज़बह के पास खड़े देखा, और उसने फ़रमाया: “सुतूनों के सिर पर मार, ताकि आस्ताने हिल जाएँ; और उन सबके सिरों पर उनको पारा — पारा कर दे, और उनके बक़िये को मैं तलवार से क़त्ल करूँगा; उनमें से एक भी भाग न सकेगा, उनमें से एक भी बच न निकलेगा।
೧ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.
2 अगर वह पाताल में घुस जाएँ, तो मेरा हाथ वहाँ से उनको खींच निकालेगा; और अगर आसमान पर चढ़ जाएँ, तो मैं वहाँ से उनको उतार लाऊँगा (Sheol )
೨ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು. (Sheol )
3 अगर वह कोह — ए — कर्मिल की चोटी पर जा छिपें, तो मैं उनको वहाँ से ढूंड निकालूँगा; और अगर समन्दर की तह में मेरी नज़र से ग़ायब हो जाए तो मैं वहाँ साँप को हुक्म करूँगा और वह उनको काटेगा।
೩ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು.
4 और अगर दुश्मन उनको ग़ुलाम करके ले जाएँ, तो वहाँ तलवार को हुक्म करूँगा, और वह उनको क़त्ल करेगी; और मैं उनकी भलाई के लिए नहीं, बल्कि बुराई के लिए उन पर निगाह रखूँगा।”
೪ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”
5 क्यूँकि ख़ुदावन्द रब्ब — उल — अफ़वाज वह है कि अगर ज़मीन को छू दे तो वह गुदाज़ हो जाए, और उसकी सब मा'मूरी मातम करे; वह बिल्कुल दरिया-ए-नील की तरह उठे और रोद — ए — मिस्र की तरह फिर सुकड़ जाए।
೫ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಐಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ.
6 वही आसमान पर अपने बालाख़ाने ता'मीर करता है, उसी ने ज़मीन पर अपने गुम्बद की बुनियाद रख्खी है; वह समन्दर के पानी को बुलाकर इस ज़मीन पर फैला देता है; उसी का नाम ख़ुदावन्द है।
೬ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ.
7 ख़ुदावन्द फ़रमाता है, ऐ बनी — इस्राईल, क्या तुम मेरे लिए अहल — ए — कूश की औलाद की तरह नहीं हो? क्या मैं इस्राईल को मुल्क — ए — मिस्र से, और फ़िलिस्तियों को कफ़तूर से, और अरामियों को क़ीर से नहीं निकाल लाया हूँ?
೭ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಫ್ತೋರಿನಿಂದ ಅರಾಮ್ಯರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ?
8 देखो, ख़ुदावन्द ख़ुदा की आँखें इस गुनाहगार मम्लुकत पर लगी हैं, ख़ुदावन्द फ़रमाता है, मैं उसे इस ज़मीन से हलाक — ओ — बर्बाद कर दूँगा, मगर या'क़ूब के घराने को बिल्कुल हलाक न करूँगा।
೮ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ, ಮತ್ತು ಅದನ್ನು ಭೂಮಂಡಲದೊಳಗಿಂದ ನಾಶಮಾಡುವನು, ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡನು” ಇದು ಯೆಹೋವನ ನುಡಿ.
9 क्यूँकि देखो, मैं हुक्म करूँगा और बनी — इस्राईल को सब क़ौमों में जैसे छलनी से छानते हैं, छानूँगा और एक दाना भी ज़मीन पर गिरने न पाएगा।
೯“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.
10 मेरी उम्मत के सब गुनहगार लोग जो कहते हैं कि 'हम पर न पीछे से आफ़त आएगी न आगे से,' तलवार से मारे जाएँगे।
೧೦ನಮ್ಮನ್ನು ಆಪತ್ತು ಹಿಂದಟದು; ನಮ್ಮನ್ನು ತಡೆಯುವುದಿಲ್ಲ, ಎನ್ನುವ ನನ್ನ ಜನರಲ್ಲಿರುವ ಸಮಸ್ತ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.
11 मैं उस रोज़ दाऊद के गिरे हुए घर को खड़ा करके, उसके रख़नों को बंद करूँगा; और उसके खंडर की मरम्मत करके, उसे पहले की तरह ता'मीर करूँगा;
೧೧“ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
12 ताकि वह अदोम के बक़िये और उन सब क़ौमों पर जो मेरे नाम से कहलाती हैं क़ाबिज़ हो उसको वुक़ू' में लाने वाला ख़ुदावन्द फ़रमाता है।
೧೨ನನ್ನ ಜನರು ಎದೋಮಿನ ಉಳಿದ ಭಾಗವನ್ನು, ಯೆಹೋವನ ಪ್ರಜೆ ಎನ್ನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಿಲ್ಲಿಸಿ ಮೊದಲಿದ್ದಂತೆ ಅದನ್ನು ತಿರುಗಿ ಕಟ್ಟಿಸುವೆನು” ಎಂಬುದಾಗಿ ಯೆಹೋವನು ನುಡಿದಿದ್ದಾನೆ.
13 देखो, वह दिन आते हैं, ख़ुदावन्द फ़रमाता है, जोतने वाला काटने वाले को, और अंगूर कुचलने वाला बोने वाले को जा लेगा; और पहाड़ों से नई मय टपकेगी, और सब टीले गुदाज़ होंगे।
೧೩ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.
14 और मैं बनी — इस्राईल, अपने लोगों को ग़ुलामी से वापस लाऊँगा; वह उजड़े शहरों को ता'मीर करके उनमें क़याम करेंगे और बाग़ लगाकर उनकी मय पिएँगे। वह बाग़ लगाएँगे और उनके फल खाएँगे।
೧೪ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.
15 क्यूँकि मैं उनको उनके मुल्क में क़ायम करूँगा और वह फिर कभी अपने वतन से जो मैने उनको बख़्शा है, निकाले न जाएँगे, ख़ुदावन्द तेरा ख़ुदा फ़रमाता है।
೧೫ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.