< दानि 2 >

1 और नबूकदनज़र ने अपनी सल्तनत के दूसरे साल में ऐसे ख़्वाब देखे जिनसे उसका दिल घबरा गया और उसकी नींद जाती रही।
ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.
2 तब बादशाह ने हुक्म दिया कि फ़ालगीरों और नजूमियों और जादूगरों और कसदियों को बुलाएँ कि बादशाह के ख़्वाब उसे बताएँ। चुनाँचे वह आए और बादशाह के सामने खड़े हुए।
ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.
3 और बादशाह ने उनसे कहा, कि “मैने एक ख़्वाब देखा है, और उस ख़्वाब को दरियाफ़्त करने के लिए मेरी जान बेताब है।”
ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು.
4 तब कसदियों ने बादशाह के सामने अरामी ज़बान में 'अर्ज़ किया, कि ऐ बादशाह, हमेशा तक जीता रह! अपने ख़ादिमों से ख़्वाब बयान कर, और हम उसकी ता'बीर करेंगे।
ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.
5 बादशाह ने कसदियों को जवाब दिया, 'मैं तो ये हुक्म दे चुका हूँ कि अगर तुम ख़्वाब न बताओ और उसकी ता'बीर न करो, तो टुकड़े टुकड़े किए जाओगे और तुम्हारे घर मज़बले हो जाएँगे।
ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು.
6 लेकिन अगर ख़्वाब और उसकी ता'बीर बताओ, तो मुझ से इन'आम और बदला और बड़ी 'इज़्ज़त हासिल करोगे; इसलिए ख़्वाब और उसकी ता'बीर मुझ से बयान करो।
ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು.
7 उन्होंने फिर 'अर्ज़ किया, कि “बादशाह अपने ख़ादिमों से ख़्वाब बयान करे, तो हम उसकी ता'बीर करेंगे।”
ಪಂಡಿತರು ಉತ್ತರವಾಗಿ, “ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು” ಎಂಬ ಉತ್ತರವನ್ನೇ ಪುನಃ ಕೊಟ್ಟರು.
8 बादशाह ने जवाब दिया, कि “मैं खू़ब जानता हूँ कि तुम टालना चाहते हो, क्यूँकि तुम जानते हो कि मैं हुक्म दे चुका हूँ।
ಅದಕ್ಕೆ ರಾಜನು, “ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ಮರಣದಂಡನೆಯ ನಿಯಮವೇ ನಿಮಗೆ ಗತಿಯಾಗುವುದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡುತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು.
9 लेकिन अगर तुम मुझ को ख़्वाब न बताओगे, तो तुम्हारे लिए एक ही हुक्म है, क्यूँकि तुम ने झूट और बहाने की बातें बनाई ताकि मेरे सामने बयान करो कि वक़्त टल जाए; इसलिए ख़्वाब बताओ तो मैं जानूँ कि तुम उसकी ता'बीर भी बयान कर सकते हो।”
ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.
10 कसदियों ने बादशाह से 'अर्ज़ किया, कि “इस ज़मीन पर ऐसा तो कोई भी नहीं जो बादशाह की बात बता सके, और न कोई बादशाह या अमीर या हाकिम ऐसा हुआ है जिसने कभी ऐसा सवाल किसी फ़ालगीर या नजूमी या कसदी से किया हो।
೧೦ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.
11 और जो बात बादशाह तलब करता है, निहायत मुश्किल है, और मा'बूदों के सिवा जिनकी सुकूनत इंसान के साथ नहीं, बादशाह के सामने कोई उसको बयान नहीं कर सकता।”
೧೧ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು” ಎಂದು ಉತ್ತರಕೊಟ್ಟರು.
12 इसलिए बादशाह ग़ज़बनाक और सख़्त ग़ुस्सा हुआ और उसने हुक्म किया कि बाबुल के तमाम हकीमों को हलाक करें।
೧೨ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.
13 तब यह हुक्म जगह जगह पहुँचा कि हकीम क़त्ल किए जाएँ, तब दानीएल और उसके साथियों को भी ढूँडने लगे कि उनको क़त्ल करें।
೧೩ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ, ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು.
14 तब दानीएल ने बादशाह के जिलौदारों के सरदार अरयूक को, जो बाबुल के हकीमों को क़त्ल करने को निकला था, खै़रमन्दी और 'अक़्ल से जवाब दिया।
೧೪ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ, ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತನಾಡಿ,
15 उसने बादशाह के जिलौदारों के सरदार अरयूक से पूछा, “बादशाह ने ऐसा सख़्त हुक्म क्यूँ जारी किया?” तब अरयूक ने दानीएल से इसकी हक़ीक़त बताई।
೧೫“ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?” ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.
16 और दानीएल ने अन्दर जाकर बादशाह से 'अर्ज़ किया कि मुझे मुहलत मिले, तो मैं बादशाह के सामने ता'बीर बयान करूँगा।
೧೬ಆ ಮೇಲೆ ದಾನಿಯೇಲನು ಅರಮನೆಗೆ ಬಂದು, “ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು” ಎಂದು ಅರಿಕೆ ಮಾಡಿದನು.
17 तब दानीएल ने अपने घर जाकर हननियाह और मीसाएल और 'अज़रियाह अपने साथियों को ख़बर दी,
೧೭ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ,
18 ताकि वह इस राज़ के बारे में आसमान के ख़ुदा से रहमत तलब करें कि दानीएल और उसके साथी बाबुल के बाक़ी हकीमों के साथ हलाक न हों।
೧೮“ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.
19 फिर रात को ख़्वाब में दानीएल पर वह राज़ खुल गया, और उसने आसमान के ख़ुदा को मुबारक कहा।
೧೯ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,
20 दानीएल ने कहा: “ख़ुदा का नाम हमेशा तक मुबारक हो, क्यूँकि हिकमत और कु़दरत उसी की है।
೨೦“ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ! ಜ್ಞಾನ ತ್ರಾಣಗಳು ಆತನವುಗಳೇ.
21 वही वक़्तों और ज़मानों को तब्दील करता है, वही बादशाहों को मा'जू़ल और क़ायम करता है, वही हकीमों को हिकमत और अक़्लमन्दों को 'इल्म इनायत करता है।
೨೧ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.
22 वही गहरी और छुपी चीज़ों को ज़ाहिर करता है, और जो कुछ अँधेरे में है उसे जानता है और नूर उसी के साथ है।
೨೨ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.
23 मैं तेरा शुक्र करता हूँ और तेरी 'इबा'दत करता हूँ ऐ मेरे बाप — दादा के ख़ुदा, जिसने मुझे हिकमत और कु़दरत बख़्शी और जो कुछ हम ने तुझ से माँगा तू ने मुझ पर ज़ाहिर किया, क्यूँकि तू ने बादशाह का मुआ'मिला हम पर ज़ाहिर किया है।”
೨೩ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.
24 तब दानीएल अरयूक के पास गया, जो बादशाह की तरफ़ से बाबुल के हकीमों के क़त्ल पर मुक़र्रर हुआ था, और उस से यूँ कहा, कि “बाबुल के हकीमों को हलाक न कर, मुझे बादशाह के सामने ले चल, मैं बादशाह को ता'बीर बता दूँगा।”
೨೪ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, “ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು” ಎಂದು ಹೇಳಿದನು.
25 तब अरयूक दानीएल को जल्दी से बादशाह के सामने ले गया और 'अर्ज़ किया, कि “मुझे यहूदाह के ग़ुलामों में एक शख़्स मिल गया है, जो बादशाह को ता'बीर बता देगा।”
೨೫ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಬಳಿಗೆ ಶೀಘ್ರವಾಗಿ ಕರೆದುಕೊಂಡು ಹೋಗಿ, “ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ” ಎಂದು ಅರಿಕೆಮಾಡಿದನು.
26 बादशाह ने दानीएल से जिसका लक़ब बेल्तशज़र था पूछा, क्या तू उस ख़्वाब को जो मैने देखा, और उसकी ता'बीर को मुझ से बयान कर सकता है?
೨೬ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು.
27 दानीएल ने बादशाह के सामने 'अर्ज़ किया, कि वह राज़ जो बादशाह ने पूछा, हुक्मा और नजूमी और जादूगर और फ़ालगीर बादशाह को बता नहीं सकते।
೨೭ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು.
28 लेकिन आसमान पर एक ख़ुदा है जो राज़ की बातें ज़ाहिर करता है, और उसने नबूकदनज़र बादशाह पर ज़ाहिर किया है कि आख़िरी दिनों में क्या होने को आएगा; तेरा ख़्वाब और तेरे दिमाग़ी ख़्याल जो तू ने अपने पलंग पर देखे यह हैं:
೨೮ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.
29 ऐ बादशाह, तू अपने पलंग पर लेटा हुआ ख़्याल करने लगा कि आइन्दा को क्या होगा, तब वह जो राज़ों का खोलने वाला है, तुझ पर ज़ाहिर करता है कि क्या कुछ होगा।
೨೯“ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ.
30 लेकिन इस राज़ के मुझ पर ज़ाहिर होने की वजह यह नहीं कि मुझ में किसी और ज़ी हयात से ज़्यादा हिकमत है, बल्कि यह कि इसकी ता'बीर बादशाह से बयान की जाए और तू अपने दिल के ख़्यालात को पहचाने।
೩೦ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ.
31 ऐ बादशाह, तू ने एक बड़ी मूरत देखी; वह बड़ी मूरत जिसकी रौनक़ बेनिहायत थी, तेरे सामने खड़ी हुई और उसकी सूरत हैबतनाक थी।
೩೧“ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು.
32 उस मूरत का सिर ख़ालिस सोने का था, उसका सीना और उसके बाज़ू चाँदी के, उसका शिकम और उसकी राने तॉम्बे की थीं;
೩೨ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ,
33 उसकी टाँगे लोहे की, और उसके पाँव कुछ लोहे के और कुछ मिट्टी के थे।
೩೩ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು.
34 तू उसे देखता रहा, यहाँ तक कि एक पत्थर हाथ लगाए बगै़र ही काटा गया, और उस मूरत के पाँव पर जो लोहे और मिट्टी के थे लगा और उनको टुकड़े — टुकड़े कर दिया।
೩೪“ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.
35 तब लोहा और मिट्टी और ताँम्बा और चाँदी और सोना, टुकड़े टुकड़े किए गए और ताबिस्तानी खलीहान के भूसे की तरह हुए, और हवा उनको उड़ा ले गई, यहाँ तक कि उनका पता न मिला; और वह पत्थर जिसने उस मूरत को तोड़ा, एक बड़ा पहाड़ बन गया और सारी ज़मीन में फैल गया।
೩೫ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.
36 “वह ख़्वाब यह है; और उसकी ता'बीर बादशाह के सामने बयान करता हूँ।
೩೬“ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ.
37 ऐ बादशाह, तू शहनशाह है, जिसको आसमान के ख़ुदा ने बादशाही और — तवानाई और कु़दरत — ओ — शौकत बख़्शी है।
೩೭ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.
38 और जहाँ कहीं बनी आदम रहा करते हैं, उसने मैदान के जानवर और हवा के परिन्दे तेरे हवाले करके तुझ को उन सब का हाकिम बनाया है; वह सोने का सिर तू ही है।
೩೮ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.
39 और तेरे बाद एक और सल्तनत खड़ी होगी, जो तुझ से छोटी होगी और उसके बाद एक और सल्तनत ताम्बे की जो पूरी ज़मीन पर हुकूमत करेगी।
೩೯“ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು.
40 और चौथी सल्तनत लोहे की तरह मज़बूत होगी, और जिस तरह लोहा तोड़ डालता है और सब चीज़ों पर ग़ालिब आता है; हाँ, जिस तरह लोहा सब चीज़ों को टुकड़े — टुकड़े करता और कुचलता है उसी तरह वह टुकड़े — टुकड़े करेगी और कुचल डालेगी।
೪೦“ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು.
41 और जो तू ने देखा कि उसके पाँव और उँगलियाँ, कुछ तो कुम्हार की मिट्टी की और कुछ लोहे की थी; इसलिए उस सल्तनत में फ़ूट होगी, मगर जैसा तू ने देखा कि उसमें लोहा मिट्टी से मिला हुआ था, उसमें लोहे की मज़बूती होगी।
೪೧“ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು.
42 और चूँकि पाँव की उँगलियाँ कुछ लोहे की और कुछ मिट्टी की थीं, इसलिए सल्तनत कुछ मज़बूत और कुछ कमज़ोर होगी।
೪೨ಕಾಲ್ಬೆರಳುಗಳ ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು.
43 और जैसा तूने देखा कि लोहा मिट्टी से मिला हुआ था, वह बनी आदम से मिले हुए होंगे, लेकिन जैसे लोहा मिट्टी से मेल नहीं खाता वैसे ही वह भी आपस में मेल न खाएँगे।
೪೩ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ಆ ರಾಜ್ಯಾಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ.
44 और उन बादशाहों के दिनों में आसमान का ख़ुदा एक सल्तनत खड़ा करेगा, जो हमेशा बर्बाद न होगी और उसकी हुकूमत किसी दूसरी क़ौम के हवाले न की जाएगी, बल्कि वह इन तमाम हुकूमतों को टुकड़े — टुकड़े और बर्बाद करेगी, और वही हमेशा तक क़ायम रहेगी।
೪೪“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
45 जैसा तू ने देखा कि वह पत्थर हाथ लगाए बगै़र ही पहाड़ से काटा गया, और उसने लोहे और ताँम्बे और मिट्टी और चाँदी और सोने को टुकड़े — टुकड़े किया; ख़ुदा त'आला ने बादशाह को वह कुछ दिखाया जो आगे को होने वाला हैं, और यह ख़्वाब यक़ीनी है और उसकी ता'बीर यक़ीनी।”
೪೫ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.
46 तब नबूकदनज़र बादशाह ने मुँह के बल गिर कर दानीएल को सिज्दा किया, और हुक्म दिया कि उसे हदिया दें और उसके सामने ख़ुशबू जलाएँ।
೪೬ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, “ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು” ಎಂದು ಆಜ್ಞಾಪಿಸಿದನು.
47 बादशाह ने दानीएल से कहा, “हक़ीक़त में तेरा ख़ुदा मा'बूदों का मा'बूद और बादशाहों का ख़ुदावन्द और राज़ों का खोलने वाला है, क्यूँकि तू इस राज़ को खोल सका।”
೪೭ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.
48 तब बादशाह ने दानीएल को सरफ़राज़ किया, और उसे बहुत से बड़े — बड़े तोहफ़े 'अता किए; और उसको बाबुल के तमाम सूबों पर इख़्तियार दिया, और बाबुल के तमाम हकीमों पर हुक्मरानी 'इनायत की।
೪೮ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.
49 तब दानीएल ने बादशाह से दरख़्वास्त की और उसने सदरक मीसक और 'अबदनजू को बाबुल के सूबे की ज़िम्मेदारी पर मुक़र्रर किया, लेकिन दानीएल बादशाह के दरबार में रहा।
೪೯ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.

< दानि 2 >