< दानि 9 >

1 दारा — बिन — 'अख़्सूयरस जो मादियों की नसल से था, और कसदियों की ममलुकत पर बादशाह मुक़र्रर हुआ, उसके पहले साल में,
ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಆದ ದಾರ್ಯಾವೆಷನ ಆಳ್ವಿಕೆಯ ಪ್ರಥಮ ವರ್ಷದಲ್ಲಿ ಬಾಬಿಲೋನ್ ರಾಜ್ಯದ ಮೇಲೆ ಅಧಿಕಾರಿಯಾಗಿದ್ದಾಗ,
2 या'नी उसकी सल्तनत के पहले साल में, मैं दानीएल, ने किताबों में उन बरसों का हिसाब समझा, जिनके ज़रिए' ख़ुदावन्द का कलाम यरमियाह नबी पर नाज़िल हुआ कि येरूशलेम की बर्बादी पर सत्तर बरस पूरे गुज़रेंगे।
ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.
3 और मैने ख़ुदावन्द ख़ुदा की तरफ़ रुख़ किया, और मैं मिन्नत और मुनाजात करके और रोज़ा रखकर और टाट ओढ़कर और राख पर बैठकर उसका तालिब हुआ।
ಆದ್ದರಿಂದ ನಾನು ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದುಕೊಂಡು, ಪ್ರಾರ್ಥನೆಗಳಿಂದ ಮತ್ತು ವಿಜ್ಞಾಪನೆಗಳಿಂದ ಕರ್ತರಾದ ದೇವರ ಕಡೆಗೆ ನನ್ನ ಮುಖವನ್ನು ತಿರುಗಿಸಿದೆನು.
4 और मैने ख़ुदावन्द अपने ख़ुदा से दुआ की और इक़रार किया और कहा, कि “ऐ ख़ुदावन्द अज़ीम और मुहीब ख़ुदा तू अपने फ़रमाबरदार मुहब्बत रखनेवालों के लिए अपने 'अहद — ओ — रहम को क़ायम रखता है;
ನಾನು ನನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥಿಸಿ, ಅರಿಕೆಮಾಡಿದೆನು: “ಕರ್ತನೇ, ಮಹೋನ್ನತ ಮತ್ತು ಅದ್ಭುತ ದೇವರೇ, ನಿಮ್ಮನ್ನು ಪ್ರೀತಿಮಾಡಿ, ನಿಮ್ಮ ಆಜ್ಞೆಗಳನ್ನು ಕೈಗೊಂಡು ನಡೆಯುವವರಿಗೆ ಒಡಂಬಡಿಕೆಯ ಪ್ರೀತಿಯನ್ನೂ ಇಟ್ಟು ನೆರವೇರಿಸುವವರೇ,
5 हम ने गुनाह किया, हम बरगश्ता हुए, हम ने शरारत की, हम ने बग़ावत की बल्कि हम ने तेरे हुक्मों और तौर तरीक़े को तर्क किया है;
ನಾವು ಪಾಪಮಾಡಿದ್ದೇವೆ ಮತ್ತು ಅಕ್ರಮಗಳನ್ನು ಮಾಡಿದ್ದೇವೆ. ಕೆಟ್ಟವರಾಗಿ ನಡೆದಿದ್ದೇವೆ ಮತ್ತು ತಿರುಗಿಬಿದ್ದಿದ್ದೇವೆ. ನಿಮ್ಮ ಕಟ್ಟಳೆಗಳನ್ನು ಮತ್ತು ನ್ಯಾಯಗಳನ್ನು ತೊರೆದುಬಿಟ್ಟಿದ್ದೇವೆ.
6 और हम तेरे ख़िदमतगुज़ार नबियों के फ़रमाबरदार नहीं हुए, जिन्होंने तेरा नाम लेकर हमारे बादशाहों और हाकिमों से और हमारे बाप — दादा और मुल्क के सब लोगों से कलाम किया।
ನಿಮ್ಮ ಹೆಸರಿನಲ್ಲಿ ನಮ್ಮ ಅರಸರಿಗೂ, ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ ದೇಶದ ಎಲ್ಲಾ ಜನರಿಗೂ ಮಾತನಾಡಿದ ನಿಮ್ಮ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡಲಿಲ್ಲ.
7 ऐ ख़ुदावन्द, सदाक़त तेरे लिए है और रूस्वाई हमारे लिए, जैसे अब यहूदाह के लोगों और येरूशलेम के बाशिन्दों और दूर — ओ — नज़दीक के तमाम बनी — इस्राईल के लिए है, जिनको तूने तमाम मुमालिक में हाँक दिया क्यूँकि उन्होंने तेरे ख़िलाफ़ गुनाह किया।
“ಕರ್ತದೇವರೇ, ನೀವು ನೀತಿವಂತರು, ಆದರೆ ನಾವು ಈ ದಿನ ಬಹಳ ಲಜ್ಜೆಗೆಟ್ಟವರು. ಯೆಹೂದ್ಯರು ಹಾಗು ಯೆರೂಸಲೇಮಿನ ನಿವಾಸಿಗಳು ಈಗಾಗಲೇ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ಚದರಿಹೋಗಿದ್ದಾರೆ. ದೂರದ ದೇಶಗಳಿಗೂ, ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಆ ಎಲ್ಲಾ ಇಸ್ರಾಯೇಲರು ನಾಚಿಕೆಗೆ ಈಡಾಗಿದ್ದಾರೆ.
8 ऐ ख़ुदावन्द, मायूसी हमारे लिए है; हमारे बादशाहों, हमारे उमरा और हमारे बाप — दादा के लिए, क्यूँकि हम तेरे गुनहगार हुए।
ಯೆಹೋವ ದೇವರೇ, ನಮ್ಮ ಅರಸರಿಗೂ ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ, ನಮಗೂ ನಾಚಿಕೆಯಾಗಿದೆ. ಏಕೆಂದರೆ ನಿಮಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ.
9 ख़ुदावन्द हमारा ख़ुदा रहीम — ओ — ग़फू़र है, अगरचे हमने उससे बग़ावत की।
ನಾವು ಆತನಿಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದರೂ, ನಮ್ಮ ಕರ್ತದೇವರು ಕರುಣೆಯುಳ್ಳವರೂ ಕ್ಷಮಿಸುವವರೂ ಆಗಿದ್ದಾರೆ.
10 हम ख़ुदावन्द अपने ख़ुदा की आवाज़ के सुनने वाले नहीं हुए कि उसकी शरी'अत पर, जो उसने अपने ख़िदमतगुज़ार नबियों की मा'रिफ़त हमारे लिए मुक़र्रर की, 'अमल करें।
ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾಗಲಿಲ್ಲ, ಅವರು ತಮ್ಮ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ನೀಡಿದ ನಿಯಮಗಳನ್ನು ಪಾಲಿಸಲಿಲ್ಲ.
11 हाँ, तमाम बनी — इस्राईल ने तेरी शरी'अत को तोड़ा और ना फ़रमानी इख़्तियार की ताकि तेरी आवाज़ के फ़रमाबरदार न हों, इसलिए वह ला'नत और क़सम, जो ख़ुदा के ख़ादिम मूसा की तौरेत में लिखी हैं हम पर पूरी हुई, क्यूँकि हम उसके गुनहगार हुए।
ಎಲ್ಲಾ ಇಸ್ರಾಯೇಲರು ನಿಮ್ಮ ನಿಯಮವನ್ನು ಮೀರಿ ನಿಮಗೆ ವಿಧೇಯರಾಗದೇ ತೊಲಗಿ ಹೋದರು. “ಆದ್ದರಿಂದ ಶಾಪವೂ, ದೇವರ ಸೇವಕನಾದ ಮೋಶೆಯು ನಿಯಮದಲ್ಲಿ ಬರೆದ ನ್ಯಾಯ ತೀರ್ಪುಗಳೂ ಅವರಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ, ನಮ್ಮ ಮೇಲೆ ಸುರಿಯಲಾಗಿದೆ.
12 और उसने जो कुछ हमारे और हमारे क़ाज़ियों के ख़िलाफ़ जो हमारी 'अदालत करते थे फ़रमाया था, हम पर बलाए — 'अज़ीम लाकर साबित कर दिखाया, क्यूँकि जो कुछ येरूशलेम से किया गया वह तमाम जहान में' और कहीं नहीं हुआ।
ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.
13 जैसा मूसा की तौरेत में लिखा है, यह तमाम मुसीबत हम पर आई, तोभी हम ने अपने ख़ुदावन्द अपने ख़ुदा से इल्तिजा न की कि हम अपनी बदकिरदारी से बा'ज़ आते और तेरी सच्चाई को पहचानते।
ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಈ ಎಲ್ಲಾ ವಿನಾಶ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿಮ್ಮ ಸತ್ಯವನ್ನು ತಿಳಿದುಕೊಳ್ಳುವಂತೆ, ನಮ್ಮ ದೇವರಾದ ಯೆಹೋವ ದೇವರ ದಯೆಯನ್ನು ಬೇಡಿಕೊಳ್ಳಲಿಲ್ಲ.
14 इसलिए ख़ुदावन्द ने बला को निगाह में रखा और उसको हम पर अपने सब कामों में जो वह करता है सच्चा है, लेकिन हम उसकी आवाज़ के फरमाबरदार न हुए।
ನಮ್ಮ ದೇವರಾದ ಯೆಹೋವ ದೇವರು ತಾವು ಮಾಡುವ ಎಲ್ಲದರಲ್ಲಿಯೂ ನೀತಿವಂತರಾಗಿದ್ದುದರಿಂದ, ವಿನಾಶವನ್ನು ನಮ್ಮ ಮೇಲೆ ಬರಮಾಡಲು ಯೆಹೋವ ದೇವರು ಹಿಂಜರಿಯಲಿಲ್ಲ. ಆದರೂ ನಾವು ಅವರಿಗೆ ವಿಧೇಯರಾಗಲೇ ಇಲ್ಲ.
15 और अब, ऐ ख़ुदावन्द हमारे ख़ुदा जो ताक़तवर बाज़ू से अपने लोगों को मुल्क — ए — मिस्र से निकाल लाया, और अपने लिए नाम पैदा किया जैसा आज के दिन है, हमने गुनाह किया, हमने शरारत की।
“ಈಗ ನಮ್ಮ ಕರ್ತದೇವರೇ, ನಿಮ್ಮ ಭುಜಬಲವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟ್ ದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರು ಪಡೆದುಕೊಂಡವರೇ, ನಾವು ಪಾಪಮಾಡಿದ್ದೇವೆ, ನಾವು ಕೆಟ್ಟವರಾಗಿ ನಡೆದುಕೊಂಡಿದ್ದೇವೆ.
16 ऐ ख़ुदावन्द, मैं तेरी मिन्नत करता हूँ कि तू अपनी तमाम सदाक़त के मुताबिक़ अपने क़हर — ओ — ग़ज़ब को अपने शहर येरूशलेम, या'नी अपने कोह — ए — मुक़द्दस से ख़त्म कर, क्यूँकि हमारे गुनाहों और हमारे बाप — दादा की बदकिरदारी की वजह से येरूशलेम और तेरे लोग अपने सब आसपास वालों के नज़दीक जा — ए — मलामत हुए।
ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.
17 इसलिए अब ऐ हमारे ख़ुदा, अपने ख़ादिम की दुआ और इल्तिमास सुन, और अपने चेहरे को अपनी ही ख़ातिर अपने मक़दिस पर जो वीरान है जलवागर फ़रमा।
“ಈಗ, ನಮ್ಮ ದೇವರೇ, ಈ ನಿಮ್ಮ ಸೇವಕನ ಪ್ರಾರ್ಥನೆ ಮತ್ತು ವಿಜ್ಞಾಪನೆಗಳನ್ನು ಕೇಳಿರಿ. ಕರ್ತದೇವರೇ, ಹಾಳಾಗಿರುವ ನಿಮ್ಮ ಪರಿಶುದ್ಧ ಸ್ಥಳವನ್ನು ನಿಮ್ಮ ನಿಮಿತ್ತವಾಗಿ ಅನುಗ್ರಹದಿಂದ ನೋಡಿರಿ.
18 ऐ मेरे ख़ुदा, वीरानों को, और उस शहर को जो तेरे नाम से कहलाता है देख कि हम तेरे सामने अपनी रास्तबाज़ी पर नहीं बल्कि तेरी बेनिहायत रहमत पर भरोसा करके मुनाजात करते हैं।
ನನ್ನ ದೇವರೇ, ನೀವು ಕಿವಿಗೊಟ್ಟು ಕೇಳಿರಿ. ನಿಮ್ಮ ಕಣ್ಣುಗಳನ್ನು ತೆರೆದು ನಮ್ಮ ನಾಶವನ್ನೂ, ನಿಮ್ಮ ಹೆಸರಿನಿಂದ ಕರೆಯಲಾಗುವ ಈ ಹಾಳಾಗಿರುವ ಪಟ್ಟಣವನ್ನೂ ನೋಡಿರಿ. ಏಕೆಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿಮ್ಮ ಮಹಾ ಕರುಣೆಗಾಗಿಯೇ ನಮ್ಮ ವಿಜ್ಞಾಪನೆಗಳನ್ನು ನಿಮ್ಮ ಮುಂದೆ ಅರ್ಪಿಸುತ್ತೇವೆ.
19 ऐ ख़ुदावन्द, सुन, ऐ ख़ुदावन्द, मु'आफ़ फ़रमाए ख़ुदावन्द, सुन ले और कुछ कर; ऐ मेरे ख़ुदा, अपने नाम की ख़ातिर देर न कर, क्यूँकि तेरा शहर और तेरे लोग तेरे ही नाम से कहलाते हैं।”
ಕರ್ತದೇವರೇ ಕೇಳಿರಿ! ಕರ್ತದೇವರೇ ಕ್ಷಮಿಸಿರಿ! ಕರ್ತದೇವರೇ ಲಾಲಿಸಿರಿ ಮತ್ತು ಕಾರ್ಯವನ್ನು ಸಾಧಿಸಿರಿ! ನನ್ನ ದೇವರೇ, ನಿಮ್ಮ ನಿಮಿತ್ತವಾಗಿ ತಡಮಾಡಬೇಡಿರಿ. ಏಕೆಂದರೆ ನಿಮ್ಮ ಪಟ್ಟಣವೂ ನಿಮ್ಮ ಜನರೂ ನಿಮ್ಮ ಹೆಸರನ್ನು ಧರಿಸಿದ್ದಾರೆ.”
20 और जब मैं यह कहता और दुआ करता, और अपने और अपनी क़ौम इस्राईल के गुनाहों का इक़रार करता था, और ख़ुदावन्द अपने ख़ुदा के सामने अपने ख़ुदा के कोह — ए — मुक़द्दस के लिए मुनाजात कर रहा था;
ನಾನು ಮಾತಾಡುತ್ತಾ, ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ, ನನ್ನ ಜನರಾದ ಇಸ್ರಾಯೇಲರ ಪಾಪವನ್ನೂ ಅರಿಕೆಮಾಡುತ್ತಾ, ನನ್ನ ದೇವರಾದ ಯೆಹೋವ ದೇವರ ಮುಂದೆ ಅವರ ಪರಿಶುದ್ಧ ಪರ್ವತಕ್ಕೋಸ್ಕರವಾಗಿ, ವಿಜ್ಞಾಪಿಸುತ್ತಿರಲಾಗಿ,
21 हाँ, मैं दुआ में यह कह ही रहा था कि वही शख़्स जिबराईल जिसे मैने शुरू' में रोया में देखा था, हुक्म के मुताबिक़ तेज़ परवाज़ी करता हुआ आया, और शाम की क़ुर्बानी पेश करने के वक़्त के क़रीब मुझे छुआ।
ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು,
22 और उसने मुझे समझाया, और मुझ से बातें कीं और कहा, ऐ दानीएल, मैं अब इसलिए आया हूँ कि तुझे अक़्ल — ओ — समझ बख़्शूँ।
ನನಗೆ, “ದಾನಿಯೇಲನೇ, ನಿನಗೆ ವಿವೇಕವನ್ನೂ, ಬುದ್ಧಿಯನ್ನೂ ಕೊಡುವುದಕ್ಕೆ ಈಗ ನಾನು ಬಂದಿದ್ದೇನೆ.
23 तेरी मुनाजात के शुरू' ही में हुक्म जारी हुआ, और मैं आया हूँ कि तुझे बताऊँ, क्यूँकि तू बहुत 'अज़ीज़ है; इसलिए तू ग़ौर कर और ख्व़ाब को समझ ले।
ನೀನು ವಿಜ್ಞಾಪನೆ ಮಾಡಿದ ಕೂಡಲೇ ಉತ್ತರ ಸಿಕ್ಕಿತು. ಅದನ್ನು ನಿನಗೆ ತಿಳಿಸುವುದಕ್ಕೆ ನಾನು ಬಂದಿದ್ದೇನೆ. ಏಕೆಂದರೆ ನೀನು ಅತಿ ಪ್ರಿಯನಾಗಿರುವೆ. ಆದ್ದರಿಂದ ವಿಷಯವನ್ನು ಗ್ರಹಿಸಿಕೊಂಡು ದರ್ಶನವನ್ನು ತಿಳಿದುಕೋ.
24 “तेरे लोगों और तेरे मुक़द्दस शहर के लिए सत्तर हफ़्ते मुक़र्रर किए गए कि ख़ताकारी और गुनाह का ख़ातिमा हो जाए, बदकिरदारी का कफ़्फ़ारा दिया जाए, हमेशा रास्तबाज़ी क़ायम' हो, रोया — ओ — नबुव्वत पर मुहर हो और पाक तरीन मक़ाम मम्सूह किया जाए।
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
25 इसलिए तू मा'लूम कर और समझ ले कि येरूशलेम की बहाली और ता'मीर का हुक्म जारी होने से मम्सूह फ़रमाँरवाँ तक सात हफ़्ते और बासठ हफ़्ते होंगे; तब फिर बाज़ार ता'मीर किए जाएँगे और फ़सील बनाई जाएगी, मगर मुसीबत के दिनों में।
“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.
26 और बासठ हफ़्तों के बाद वह मम्सूह क़त्ल किया जाएगा, और उसका कुछ न रहेगा, और एक बादशाह आएगा जिसके लोग शहर और मक़दिस को बर्बाद करेंगे, और उसका अन्जाम गोया तूफ़ान के साथ होगा, और आख़िर तक लड़ाई रहेगी; बर्बादी मुक़र्रर हो चुकी है।
ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.
27 और वह एक हफ़्ते के लिए बहुतों से 'अहद क़ायम करेगा, और निस्फ़ हफ़्ते में ज़बीहे और हदिये मौकू़फ़ करेगा, और फ़सीलों पर उजाड़ने वाली मकरूहात रखी जाएँगी; यहाँ तक कि बर्बादी कमाल को पहुँच जाएगी, और वह बला जो मुक़र्रर की गई है उस उजाड़ने वाले पर वाके़' होगी।”
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು.

< दानि 9 >