< हिज़ि 15 >
1 और ख़ुदावन्द का कलाम मुझ पर नाज़िल हुआ:
೧ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 कि 'ऐ आदमज़ाद, क्या ताक की लकड़ी और दरख़्तों की लकड़ी से, या'नी शाख़ — ए — अंगूर जंगल के दरख़्तों से कुछ बेहतर है?
೨“ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?
3 क्या उसकी लकड़ी कोई लेता है कि उससे कुछ बनाए, या लोग उसकी खूंटियाँ बना लेते हैं कि उन पर बर्तन लटकाएँ?
೩ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
4 देख, वह आग में ईन्धन के लिए डाली जाती है, जब आग उसके दोनों सिरों को खा गई और बीच के हिस्से को भसम कर चुकी, तो क्या वह किसी काम की है?
೪ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ.
5 देख, जब वह सही थी तो किसी काम की न थी, और जब आग से जल गई तो किस काम की है?
೫ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?”
6 फिर ख़ुदावन्द ख़ुदा यूँ फ़रमाता है: जिस तरह मैंने जंगल के दरख़्तों में से अंगूर के दरख़्त को आग का ईन्धन बनाया, उसी तरह येरूशलेम के बाशिन्दों को बनाऊँगा।
೬ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ.
7 और मेरा चेहरा उनके ख़िलाफ़ होगा, वह आग से निकल भागेंगे पर आग उनको भसम करेगी; और जब मेरा चेहरा उनके ख़िलाफ़ होगा, तो तुम जानोगे कि ख़ुदावन्द मैं हूँ।
೭ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
8 और मैं मुल्क को उजाड़ डालूँगा, इसलिए कि उन्होंने बड़ी बेवफ़ाई की है, ख़ुदावन्द ख़ुदा फ़रमाता है।
೮ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.