< यसा 22 >

1 ख़्वाब की वादी के बारे में नबुव्वत अब तुम को क्या हुआ कि तुम सब के सब कोठों पर चढ़ गए?
ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?
2 ऐ पुर शोर और ग़ौग़ाई शहर ऐ शादमान बस्ती तेरे मक़तूल न तलवार से क़त्ल हुए और न लड़ाई में मारे गए।
ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ.
3 तेरे सब सरदार इकट्ठे भाग निकले, उनको तीर अन्दाज़ों ने ग़ुलाम कर लिया; जितने तुझ में पाए गए सब के सब, बल्कि वह भी जो दूर से भाग गए थे ग़ुलाम किए गए हैं।
ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ; ದೂರದಿಂದ ಓಡುತ್ತಾ ಶತ್ರುವಿಗೆ ಸಿಕ್ಕಿದ ನಿನ್ನ ಜನರೆಲ್ಲರೊಂದಿಗೆ ಕಟ್ಟುಬಿದ್ದಿದ್ದಾರೆ.
4 इसीलिए मैंने कहा, मेरी तरफ़ मत देखो, क्यूँकि मैं ज़ार — ज़ार रोऊँगा मेरी तसल्ली की फ़िक्र मत करो, क्यूँकि मेरी दुख़्तर — ए — क़ौम बर्बाद हो गई।
ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.
5 क्यूँकि ख़ुदावन्द रब्ब — उल — अफ़वाज की तरफ़ से ख़्वाब की वादी में, यह दुख और पामाली ओ — बेक़रारी और दीवारों को गिराने और पहाड़ों तक फ़रियाद पहुँचाने का दिन है।
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.
6 क्यूँकि ऐलाम ने जंगी रथों और सवारों के साथ तरकश उठा लिया और क़ीर ने सिपर का ग़िलाफ़ उतार दिया।
ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆಗೆದರು.
7 और यूँ हुआ कि तेरी बेहतरीन वादियाँ जंगली रथों से मा'मूर हो गईं और सवारों ने फाटक पर सफ़आराई की;
ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿದವು, ರಾಹುತರು ಬಾಗಿಲಿನ ಹತ್ತಿರ ವ್ಯೂಹಕಟ್ಟಿದರು.”
8 और यहूदाह का नक़ाब उतारा गया। और तू अब दश्त — ए — महल के सिलाहख़ाने पर निगाह करता है,
ಅವನು ಯೆಹೂದದ ರಕ್ಷಣೆಯ ಮುಸುಕನ್ನು ತೆಗೆದಿದ್ದಾನೆ. ಆ ದಿನದಲ್ಲಿ (ಲೆಬನೋನಿನ) ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ.
9 और तुम ने दाऊद के शहर के रख़ने देखे कि बेशुमार हैं; और तुम ने नीचे के हौज़ में पानी जमा' किया।
ದಾವೀದನ ಪಟ್ಟಣದ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.
10 और तुम ने येरूशलेम के घरों को गिना और उनको गिराया ताकि शहर पनाह को मज़बूत करो,
೧೦ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ.
11 और तुम ने पुराने हौज़ के पानी के लिए दोनों दीवारों के बीच एक और हौज़ बनाया; लेकिन तुम ने उसके पानी पर निगाह न की और उसकी तरफ़ जिसने पहले से उसकी तदबीर की मुतवज्जह न हुए।
೧೧ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ; ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.
12 और उस वक़्त ख़ुदावन्द रब्ब — उल — अफ़वाज ने रोने और मातम करने, और सिर मुन्डाने और टाट से कमर बाँधने का हुक्म दिया था;
೧೨ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.
13 लेकिन देखो, ख़ुशी और शादमानी, गाय बैल को ज़बह करना और भेड़ — बकरी को हलाल करना और गोश्त ख़्वारी — ओ — मयनोशी कि आओ खाएँ और पियें क्यूँकि कल तो हम मरेंगे।
೧೩ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.
14 और रब्ब — उल — अफ़्वाज ने मेरे कान में कहा, कि तुम्हारी इस बदकिरदारी का कफ़्फ़ारा तुम्हारे मरने तक भी न हो सकेगा यह ख़ुदावन्द रब्ब — उल — अफ़वाज का फ़रमान है।
೧೪ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ.
15 ख़ुदावन्द रब्ब — उल — अफ़वाज यह फ़रमाता है कि उस ख़ज़ान्ची शबनाह के पास जो महल पर मु'अय्यन है, जा और कह:
೧೫ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, “ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ,
16 तू यहाँ क्या करता है? और तेरा यहाँ कौन है कि तू यहाँ अपने लिए क़ब्र तराश्ता है? बुलन्दी पर अपनी क़ब्र तराश्ता है और चट्टान में अपने लिए घर खुदवाता है।
೧೬‘ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು? ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿದಿ ಅಲ್ಲವೇ?’”
17 देख, ऐ ज़बरदस्त, ख़ुदावन्द तुझ को ज़ोर से दूर फेंक देगा; वह यक़ीनन तुझे पकड़ रख्खेगा।
೧೭ಇಗೋ, ಬಲಿಷ್ಠ ಮನುಷ್ಯನಾದ ನಿನ್ನನ್ನು ಯೆಹೋವನು ಎಸೆಯುವನು, ನಿನ್ನನ್ನು ಕೆಳಗೆ ಎಸೆಯುವನು, ನಿನ್ನನ್ನು ಗಟ್ಟಿಯಾಗಿ ಹಿಡಿಯುವನು.
18 वह बेशक तुझ को गेंद की तरह घुमा — घुमाकर बड़े मुल्क में उछालेगा; वहाँ तू मरेगा और तेरी हश्मत के रथ वहीं रहेंगे, ऐ अपने आक़ा के घर की रुस्वाई।
೧೮ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು; ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು.
19 और मैं तुझे तेरे मन्सब से बरतरफ़ करूँगा, हाँ वह तुझे तेरी जगह से खींच उतारेगा।
೧೯ಯೆಹೋವನಾದ ನಾನು, “ನಿನ್ನನ್ನು ಉದ್ಯೋಗದಿಂದ ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು.
20 और उस रोज़ यूँ होगा कि मैं अपने बन्दे इलियाक़ीम — बिन — ख़िलक़ियाह को बुलाऊँगा,
೨೦ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆಯುವೆನು.
21 और मैं तेरा ख़िल'अत उसे पहनाऊँगा और तेरा पटका उस पर कसूँगा, और तेरी हुकूमत उसके हाथ में हवाले कर दूँगा; और वह अहल — ए — येरूशलेम का और बनी यहूदाह का बाप होगा।
೨೧ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.
22 और मैं दाऊद के घर की कुंजी उसके कन्धे पर रख्खूँगा, तब वह खोलेगा और कोई बन्द न करेगा; और वह बन्द करेगा और कोई न खोलेगा।
೨೨ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.
23 और मैं उसको खूँटी की तरह मज़बूत जगह में मुहकम करूँगा, और वह अपने बाप के घराने के लिए जलाली तख़्त होगा।
೨೩ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ವಂಶದವರಿಗೆ ವೈಭವವುಳ್ಳ ಸಿಂಹಾಸನವಾಗಿರುವನು.
24 और उसके बाप के ख़ान्दान की सारी हशमत या'नी आल — ओ — औलाद और सब छोटे — बड़े बर्तन प्यालों से लेकर क़राबों तक सबको उसी से मन्सूब करेंगे।
೨೪ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ವೈಭವವನ್ನು ಅವರು ಆ ದಿನದಲ್ಲಿ ಅವನಿಗೆ ವಹಿಸುವರು” ಎಂಬುದೇ.
25 रब्ब — उल — अफ़वाज फ़रमाता है, उस वक़्त वह खूँटी जो मज़बूत जगह में लगाई गई थी हिलाई जाएगी, और वह काटी जाएगी और गिर जाएगी, और उस पर का बोझ गिर पड़ेगा; क्यूँकि ख़ुदावन्द ने यूँ फ़रमाया है।
೨೫ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ.

< यसा 22 >