< यसा 32 >

1 देख एक बादशाह सदाक़त से सल्तनत करेगा और शहज़ादे 'अदालत से हुक्मरानी करेंगे।
ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
2 और एक शख़्स ऑधी से पनाहगाह की तरह होगा, और तूफ़ान से छिपने की जगह; और ख़ुश्क ज़मीन में पानी की नदियों की तरह और मान्दिगी की ज़मीन में बड़ी चट्टान के साये की तरह होगा
ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.
3 उस वक़्त देखनेवालों की आँखें धुन्धली न होंगी, और सुननेवालों के कान सुनने वाले होंगे।
ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.
4 जल्दबाज़ का दिल इरफ़ान हासिल करेगा, और लुकनती की ज़बान साफ़ बोलने में मुस्त'इद होगी।
ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು.
5 तब बेवक़ूफ़ बा — मुरव्वत न कहलाएगा और बख़ील को कोई सखी न कहेगा।
ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸಿಕೊಳ್ಳನು.
6 क्यूँकि बेवक़ूफ़ हिमाक़त की बातें करेगा और उसका दिल बदी का मंसूबा बाँधेगा कि बेदीनी करे और ख़ुदावन्द के ख़िलाफ़ दरोग़गोई करे और भूके के पेट को ख़ाली करे और प्यासे को पानी से महरूम रख्खे
ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
7 और बख़ील के हथियार ज़बून हैं; वह बुरे मंसूबे बाँधा करता है ताकि झूटी बातों से ग़रीब को और मोहताज को, जब कि वह हक़ बयान करता हो, हलाक करे।
ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
8 लेकिन साहब — ए — मुरव्वत सख़ावत की बातें सोचता है, और वह सख़ावत के कामों में साबित क़दम रहेगा।
ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.
9 ऐ 'औरतों तुम जो आराम में हो, उठो मेरी आवाज़ सुनो; ऐ बे परवा बेटियो, मेरी बातों पर कान लगाओ।
ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ!
10 ऐ बे परवाह 'औरतो, साल से कुछ ज़्यादा 'अर्से में तुम बेआराम हो जाओगी; क्यूँकि अंगूर की फ़स्ल जाती रहेगी फल जमा' करने की नौबत न आयेगी।
೧೦ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.
11 ऐ 'औरतों तुम जो आराम में हो थरथराओ, ऐ बेपर्वाओ मुज़्तरिब हो कपड़े उतार कर बरहना हो जाओ, कमर पर टाट बाँधो।
೧೧ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
12 वह दिल पज़ीर खेतों और मेवादार ताकों के लिए छाती पीटेंगी।
೧೨ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಾಗಿ ಎದುರುನೋಡಿರಿ.
13 मेरे लोगों की सर ज़मीन में काँटे और झाड़ियाँ होंगी बल्कि ख़ुशवक़्त शहर के तमाम ख़ुश घरों में भी।
೧೩ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.
14 क्यूँकि क़स्र ख़ाली हो जाएगा, और आबाद शहर तर्क किया जाएगा; 'ओफल और दीद बानी का बुर्ज हमेशा तक मांद बनकर गोख़रों की आरामगाहें और गल्लों की चरागाहें होंगे।
೧೪ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.
15 ता वक़्त ये कि आलम — ए — बाला से हम पर रूह नाज़िल न हो और वीरान शादाब मैदान न बने, और शादाब मैदान जंगल न गिना जाए।
೧೫ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.
16 तब वीरान में 'अद्ल बसेगा और सदाक़त शादाब मैदान में रहा करेगी।
೧೬ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.
17 और सदाक़त का अंजाम सुलह होगा, और सदाक़त का फल हमेशा आराम — ओ — इत्मीनान होगा
೧೭ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.
18 और मेरे लोग सलामती के मकानों में और बेख़तर घरों में, और आसूदगी और आसाइश के काशानों में रहेंगे।
೧೮ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
19 लेकिन जंगल की बर्बादी के वक़्त ओले पड़ेंगे औए शहर बिलकुल पस्त हो जायेगा।
೧೯ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.
20 तुम ख़ुशनसीब हो, जो सब नहरों के आसपास बोते हो और बैलों और गधों को उधर ले जाते हो।
೨೦ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ!

< यसा 32 >