< यर्म 14 >
1 ख़ुदावन्द का कलाम जो ख़ुश्कसाली के बारे में यरमियाह पर नाज़िल हुआ
ಕ್ಷಾಮವನ್ನು ಕುರಿತು ಯೆರೆಮೀಯನಿಗೆ ಉಂಟಾದ ಯೆಹೋವ ದೇವರ ವಾಕ್ಯವು:
2 “यहूदाह मातम करता है और उसके फाटकों पर उदासी छाई है, वह मातमी लिबास में ख़ाक पर बैठे हैं; और येरूशलेम का नाला बलन्द हुआ है।
“ಯೆಹೂದವು ದುಃಖಪಡುತ್ತದೆ. ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, ಯೆರೂಸಲೇಮಿನ ಕೂಗು ಏರಿ ಬಂತು.
3 उनके हाकिम अपने अदना लोगों को पानी के लिए भेजते हैं; वह चश्मों तक जाते हैं पर पानी नहीं पाते, और ख़ाली घड़े लिए लौट आते हैं, वह शर्मिन्दा — ओ — पशेमान होकर अपने सिर ढाँपते हैं।
ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.
4 चूँकि मुल्क में बारिश न हुई, इसलिए ज़मीन फट गई और किसान सरासीमा हुए, वह अपने सिर छिपाते हैं।
ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.
5 चुनाँचे हिरनी मैदान में बच्चा देकर उसे छोड़ देती है क्यूँकि घास नहीं मिलती।
ಹೌದು, ಜಿಂಕೆಯು ಸಹ ಹೊಲದಲ್ಲಿ ಹುಲ್ಲು ಇಲ್ಲದ್ದರಿಂದ, ತನ್ನ ಮರಿಯನ್ನು ಹಾಕಿ, ಬಿಟ್ಟು ಬಿಡುತ್ತದೆ.
6 और गोरख़र ऊँची जगहों पर खड़े होकर गीदड़ों की तरह हाँफते हैं उनकी आँखे रह जाती हैं, क्यूँकि घास नहीं है।
ಕಾಡುಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು, ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ. ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.”
7 'अगरचे हमारी बदकिरदारी हम पर गवाही देती है, तो भी ऐ ख़ुदावन्द अपने नाम की ख़ातिर कुछ कर; क्यूँकि हमारी नाफ़रमानी बहुत है, हम तेरे ख़ताकार हैं।
ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.
8 ऐ इस्राईल की उम्मीद, मुसीबत के वक़्त उसके बचानेवाले, तू क्यूँ मुल्क में परदेसी की तरह बना, और उस मुसाफ़िर की तरह जो रात काटने के लिए डेरा डाले?
ಓ ಇಸ್ರಾಯೇಲಿನ ನಿರೀಕ್ಷೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವವರೇ, ನೀನು ಏಕೆ ದೇಶದಲ್ಲಿ ಅನ್ಯನ ಹಾಗೆಯೂ, ರಾತ್ರಿ ಕಳೆಯುವುದಕ್ಕೆ ಇಳಿದುಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?
9 तू क्यूँ इंसान की तरह हक्का — बक्का है, और उस बहादुर की तरह जो रिहाई नहीं दे सकता? बहर — हाल, ऐ ख़ुदावन्द, तू तो हमारे बीच है और हम तेरे नाम से कहलाते हैं; तू हमको मत छोड़।”
ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವ ದೇವರೇ, ನೀವು ನಮ್ಮ ಮಧ್ಯದಲ್ಲಿರುತ್ತೀರಿ, ನಾವು ನಿಮ್ಮ ಹೆಸರನ್ನು ಹೊಂದಿದ್ದೇವೆ, ನಮ್ಮನ್ನು ಕೈಬಿಡಬೇಡಿರಿ.
10 ख़ुदावन्द इन लोगों से यूँ फ़रमाता है कि “इन्होंने गुमराही को यूँ दोस्त रख्खा है और अपने पाँव को नहीं रोका, इसलिए ख़ुदावन्द इनको क़ुबूल नहीं करता; अब वह इनकी बदकिरदारी याद करेगा और इनके गुनाह की सज़ा देगा।”
ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”
11 और ख़ुदावन्द ने मुझे फ़रमाया, इन लोगों के लिए दु'आ — ए — ख़ैर न कर।
ಆಗ ಯೆಹೋವ ದೇವರು ನನಗೆ, “ಈ ಜನರಿಗೋಸ್ಕರ ಒಳ್ಳೆಯದಕ್ಕಾಗಿ ಪ್ರಾರ್ಥನೆ ಮಾಡಬೇಡ.
12 क्यूँकि जब यह रोज़ा रख्खें तो मैं इनकी फ़रियाद न सुनूँगा और जब सोख़्तनी क़ुर्बानी और हदिया पेश करें तो क़ुबूल न करूँगा, बल्कि मैं तलवार और काल और वबा से इनको हलाक करूँगा।
ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.
13 तब मैंने कहा, 'आह, ऐ ख़ुदावन्द ख़ुदा, देख, अम्बिया उनसे कहते हैं, तुम तलवार न देखोगे, और तुम में काल न पड़ेगा; बल्कि मैं इस मक़ाम में तुम को हक़ीक़ी सलामती बख्शूँगा।
ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ, ಪ್ರವಾದಿಗಳು ಅವರಿಗೆ: ‘ನೀವು ಖಡ್ಗವನ್ನು ನೋಡುವುದಿಲ್ಲ. ನಿಮಗೆ ಕ್ಷಾಮವು ಬಾರದು. ಆದರೆ ಯೆಹೋವ ದೇವರು ನಿಮಗೆ ಈ ಸ್ಥಳದಲ್ಲಿ ಸ್ಥಿರಸಮಾಧಾನ ಕೊಡುತ್ತಾರೆ,’ ಎಂದು ಹೇಳುತ್ತಾರೆ,” ಎಂದೆನು.
14 तब ख़ुदावन्द ने मुझे फ़रमाया कि अम्बिया मेरा नाम लेकर झूटी नबुव्वत करते हैं; मैंने न उनको भेजा और न हुक्म दिया और न उनसे कलाम किया, वह झूठा ख़्वाब और झूठा 'इल्म — ए — ग़ैब और बतालत और अपने दिलों की मक्कारी, नबुव्वत की सूरत में तुम पर ज़ाहिर करते हैं।
ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
15 इसलिए ख़ुदावन्द यूँ फ़रमाता है कि वह नबी जिनको मैंने नहीं भेजा, जो मेरा नाम लेकर नबुव्वत करते और कहते हैं कि तलवार और काल इस मुल्क में न आएँगे, वह तलवार और काल ही से हलाक होंगे।
ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
16 और जिन लोगों से वह नबुव्वत करते हैं, तो काल और तलवार की वजह से येरूशलेम के गलियों में फेंक दिए जाएँगे; उनको और उनकी बीवियों और उनके बेटों और उनकी बेटियों को दफ़्न करने वाला कोई न होगा। मैं उनकी बुराई उन पर उँडेल दूँगा।
ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ.
17 “और तू उनसे यूँ कहना: 'मेरी आँखें रात दिन आँसू बहाएँ और हरगिज़ न थमें, क्यूँके मेरी कुँवारी दुख़्तर — ए — क़ौम ख़श्तगी और ज़र्ब — ए — शदीद से शिकस्ता है।
“ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. “‘ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ. ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ಏಟಿನಿಂದಲೂ, ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ.
18 अगर मैं बाहर मैदान में जाऊँ, तो वहाँ तलवार के मक़्तूल हैं; और अगर मैं शहर में दाख़िल होऊँ, तो वहाँ काल के मारे हैं! हाँ, नबी और काहिन दोनों एक ऐसे मुल्क को जाएँगे, जिसे वह नहीं जानते।”
ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’”
19 क्या तूने यहूदाह को बिल्कुल रद्द कर दिया? क्या तेरी जान को सिय्यून से नफ़रत है? तूने हमको क्यूँ मारा और हमारे लिए शिफ़ा नहीं? सलामती का इन्तिज़ार था, लेकिन कुछ फ़ायदा न हुआ; और शिफ़ा के वक़्त का, लेकिन देखो, दहशत!
ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.
20 ऐ ख़ुदावन्द, हम अपनी शरारत और अपने बाप — दादा की बदकिरदारी का इक़रार करते हैं; क्यूँकि हम ने तेरा गुनाह किया है।
ಯೆಹೋವ ದೇವರೇ, ನಮ್ಮ ದುಷ್ಟತನವನ್ನೂ, ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ, ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವಲ್ಲಾ.
21 अपने नाम की ख़ातिर रद्द न कर, और अपने जलाल के तख़्त की तहक़ीर न कर; याद फ़रमा और हम से रिश्ता — ए — 'अहद को न तोड़।
ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರಿ.
22 क़ौमों के बुतों में कोई है जो मेंह बरसा सके? या आसमान बरिश पर क़ादिर हैं? ऐ ख़ुदावन्द हमारे ख़ुदा, क्या वह तू ही नहीं है? इसलिए हम तुझ ही पर उम्मीद रख्खेंगे, क्यूँकि तू ही ने यह सब काम किए हैं।
ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.