< यर्म 34 >

1 जब शाह — ए — बाबुल नबूकदनज़र और उसकी तमाम फ़ौज और इस ज़मीन की तमाम सल्तनतें जो उसकी फरमाँरवाई में थीं, और सब क़ौमें येरूशलेम और उसकी सब बस्तियों के ख़िलाफ़ जंग कर रही थीं, तब ख़ुदावन्द का यह कलाम यरमियाह नबी पर नाज़िल हुआ
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ:
2 कि ख़ुदावन्द इस्राईल का ख़ुदा, यूँ फ़रमाता है कि: जा और शाह — ए — यहूदाह सिदक़ियाह से कह दे, 'ख़ुदावन्द यूँ फ़रमाता है कि: देख, मैं इस शहर को शाह — ए — बाबुल के हवाले कर दूंगा, और वह इसे आग से जलाएगा;
“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು.
3 और तू उसके हाथ से न बचेगा, बल्कि ज़रूर पकड़ा जाएगा और उसके हवाले किया जाएगा; और तेरी आँखें शाह — ए — बाबुल की आँखों को देखेंगी और वह सामने तुझ से बातें करेगा, और तू बाबुल को जाएगा।
ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ.
4 तो भी, ऐ शाह — ए — यहूदाह सिदक़ियाह, ख़ुदावन्द का कलाम सुन; तेरे बारे में ख़ुदावन्द यूँ फ़रमाता है कि: तू तलवार से क़त्ल न किया जाएगा।
“‘ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವ ದೇವರ ವಾಗ್ದಾನವನ್ನು ಕೇಳು. ನಿನ್ನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಖಡ್ಗದಿಂದ ಸಾಯುವುದಿಲ್ಲ.
5 तू अम्न की हालत में मरेगा और जिस तरह तेरे बाप — दादा या'नी तुझ से पहले बादशाहों के लिए ख़ुशबू जलाते थे, उसी तरह तेरे लिए भी जलाएँगे, और तुझ पर नौहा करेंगे और कहेंगे, हाय, आक़ा! “क्यूँकि मैंने यह बात कही है, ख़ुदावन्द फ़रमाता है।”
ನೀನು ಶಾಂತಿಯುತವಾಗಿ ಸಾಯುವೆ. ನಿನಗಿಂತ ಮೊದಲು ಆಳಿದ ನಿನ್ನ ಪಿತೃಗಳಾದ ಅರಸರನ್ನು ಗೌರವಿಸಲು ಬೆಂಕಿಯನ್ನು ಹೊತ್ತಿಸಿದ ಪ್ರಕಾರ ನಿನಗೂ ಹಾಕುವರು. “ಅಯ್ಯೋ, ಒಡೆಯನೇ,” ಎಂದು ಹೇಳಿ ನಿನಗೋಸ್ಕರ ಗೋಳಾಡುವರು. ನಾನೇ ಈ ವಾಗ್ದಾನವನ್ನು ಮಾಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.’”
6 तब यरमियाह नबी ने यह सब बातें शाह — ए — यहूदाह सिदक़ियाह से येरूशलेम में कहीं,
ಆಗ ಪ್ರವಾದಿಯಾದ ಯೆರೆಮೀಯನು ಈ ವಾಕ್ಯಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.
7 जब कि शाह — ए — बाबुल की फ़ौज येरूशलेम और यहूदाह के शहरों से जो बच रहे थे, या'नी लकीस और 'अज़ीक़ाह से लड़ रही थी; क्यूँकि यहूदाह के शहरों में से यही हसीन शहर बाक़ी थे।
ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಎಂದರೆ, ಲಾಕೀಷಿಗೂ ಅಜೇಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿದನು. ಏಕೆಂದರೆ ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ಮಾತ್ರ ನಿಂತಿದ್ದವು.
8 वह कलाम जो ख़ुदावन्द की तरफ़ से यरमियाह पर नाज़िल हुआ, जब सिदक़ियाह बादशाह ने येरूशलेम के सब लोगों से 'अहद — ओ — पैमान किया कि आज़ादी का 'ऐलान किया जाए।
ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು.
9 कि हर एक अपने ग़ुलाम को और अपनी लौंडी को, जो 'इब्रानी मर्द या 'औरत हो, आज़ाद कर दे कि कोई अपने यहूदी भाई से ग़ुलामी न कराए।
ಪ್ರತಿಯೊಬ್ಬರೂ ತಮ್ಮ ಗಂಡು ಮತ್ತು ಹೆಣ್ಣು ಹಿಬ್ರಿಯ ಗುಲಾಮರನ್ನು ಇಬ್ಬರನ್ನೂ ಮುಕ್ತಗೊಳಿಸಬೇಕು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಬಂಧನದಲ್ಲಿ ಇಟ್ಟುಕೊಳ್ಳಲಿಲ್ಲ.
10 और जब सब हाकिम और सब लोगों ने जो इस 'अहद में शामिल थे, सुना कि हर एक को लाज़िम है कि अपने ग़ुलाम और अपनी लौंडी को आज़ाद करे और फिर उनसे ग़ुलामी न कराए, तो उन्होंने इता'अत की और उनको आज़ाद कर दिया।
ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡರು. ಇನ್ನು ಮುಂದೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಳ್ಳುವುದಿಲ್ಲ ಎಂದು ಅವರು ಒಪ್ಪಿದರು ಮತ್ತು ಅವರನ್ನು ಬಿಡುಗಡೆ ಮಾಡಿದರು.
11 लेकिन उसके बाद वह फिर गए और उन ग़ुलामों और लौंडियों को जिनको उन्होंने आज़ाद कर दिया था, फिर वापस ले आए और उनको ताबे' करके ग़ुलाम और लौंडियाँ बना लिया।
ಆದರೆ ನಂತರ ಅವರು ತಮ್ಮ ಮನಸ್ಸನ್ನು ಬದಲಾಯಿಸಿದರು ಮತ್ತು ಅವರು ಬಿಡುಗಡೆ ಮಾಡಿದ ಗುಲಾಮರನ್ನು ಮರಳಿ ತೆಗೆದುಕೊಂಡು ಅವರನ್ನು ಮತ್ತೆ ಗುಲಾಮರನ್ನಾಗಿ ಮಾಡಿದರು.
12 इसलिए ख़ुदावन्द की तरफ़ से यह कलाम यरमियाह पर नाज़िल हुआ:
ಆದ್ದರಿಂದ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾಗಿ:
13 कि ख़ुदावन्द, इस्राईल का ख़ुदा यूँ फ़रमाता है कि: मैंने तुम्हारे बाप — दादा से, जिस दिन मैं उनको मुल्क — ए — मिस्र से और ग़ुलामी के घर से निकाल लाया, यह 'अहद बाँधा,
“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ದಾಸರ ದೇಶದೊಳಗಿಂದ ಹೊರಗೆ ತಂದ ದಿವಸದಲ್ಲಿ ಅವರ ಸಂಗಡ ಒಡಂಬಡಿಕೆ ಮಾಡಿ,
14 कि 'तुम में से हर एक अपने 'इब्रानी भाई को जो उसके हाथ बेचा गया हो, सात बरस के आख़िर में या'नी जब वह छ: बरस तक ख़िदमत कर चुके, तो आज़ाद कर दे; लेकिन तुम्हारे बाप — दादा ने मेरी न सुनी और कान न लगाया।
‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’ ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ.
15 और आज ही के दिन तुम रूजू' लाए, और वही किया जो मेरी नज़र में भला है कि हर एक ने अपने पड़ोसी को आज़ादी का मुज़दा दिया; और तुम ने उस घर में जो मेरे नाम से कहलाता है, मेरे सामने 'अहद बाँधा;
ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ, ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದ ಮಾಡಿಕೊಂಡಿರಿ.
16 लेकिन तुम ने नाफ़रमान हो कर मेरे नाम को नापाक किया, और हर एक ने अपने ग़ुलाम को और अपनी लौंडी को, जिनको तुमने आज़ाद करके उनकी मर्ज़ी पर छोड़ दिया था, फिर पकड़कर ताबे' किया कि तुम्हारे लिए ग़ुलाम और लौंडियाँ हों।
ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.
17 “इसलिए ख़ुदावन्द यूँ फ़रमाता है कि: तुम ने मेरी न सुनी कि हर एक अपने भाई और अपने पड़ोसी को आज़ादी का मुज़दा सुनाए, देखो, ख़ुदावन्द फ़रमाता है, मैं तुम को तलवार और वबा और काल के लिए आज़ादी का मुज़दा देता हूँ और मैं ऐसा करूँगा कि तुम इस ज़मीन की सब ममलुकतों में धक्के खाते फिरोगे।
“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.
18 और मैं उन आदमियों को जिन्होंने मुझसे 'अहदशिकनी की और उस 'अहद की बातें, जो उन्होंने मेरे सामने बाँधा है पूरी नहीं कीं, जब बछड़े को दो टुकड़े किया और उन दो टुकड़ों के बीच से होकर गुज़रे;
ನನ್ನ ಒಡಂಬಡಿಕೆಯನ್ನು ಮೀರಿದ ಮನುಷ್ಯರನ್ನೂ, ಕರುವನ್ನೂ ಎರಡು ಭಾಗಮಾಡಿ, ಅದರ ತುಂಡುಗಳ ನಡುವೆ ದಾಟಿ ಹೋಗಿ, ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನ್ನೂ,
19 या'नी यहूदाह के और येरूशलेम के हाकिम और ख़्वाजासरा और काहिन और मुल्क के सब लोग जो बछड़े के टुकड़ों के बीच से होकर गुज़रे;
ಯೆಹೂದದ ಪ್ರಧಾನರನ್ನೂ, ಯೆರೂಸಲೇಮಿನ ಪ್ರಧಾನರನ್ನೂ, ಕಂಚುಕಿಯರನ್ನೂ, ಯಾಜಕರನ್ನೂ, ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ,
20 हाँ, मैं उनको उनके मुख़ालिफ़ों और जानी दुश्मनों के हवाले करूँगा, और उनकी लाशें हवाई परिन्दों और ज़मीन के दरिन्दों की ख़ुराक होंगी।
ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು.
21 और मैं शाह — ए — यहूदाह सिदक़ियाह को और उसके हाकिम को, उनके मुख़ालिफ़ों और जानी दुश्मनों और शाह — ए — बाबुल की फ़ौज के, जो तुम को छोड़कर चली गई, हवाले कर दूँगा।
“ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ, ನಿಮ್ಮನ್ನು ಬಿಟ್ಟುಹೋಗಿರುವ ಬಾಬಿಲೋನಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.
22 देखो, मैं हुक्म करूँगा ख़ुदावन्द फ़रमाता है और उनको फिर इस शहर की तरफ़ वापस लाऊँगा, और वह इससे लड़ेंगे और फ़तह करके आग से जलाएँगे; और मैं यहूदाह के शहरों को वीरान कर दूँगा कि ग़ैरआबाद हों।”
ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”

< यर्म 34 >