< यर्म 36 >
1 शाह — ए — यहूदाह यहूयक़ीम — बिन — यूसियाह के चौथे बरस में यह कलाम ख़ुदावन्द की तरफ़ से यरमियाह पर नाज़िल हुआ:
೧ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,
2 कि “किताब का एक तूमार ले और वह सब कलाम जो मैंने इस्राईल और यहूदाह और तमाम क़ौमों के ख़िलाफ़ तुझ से किया, उस दिन से लेकर जब से मैं तुझ से कलाम करने लगा, या'नी यूसियाह के दिन से आज के दिन तक उसमें लिख।
೨“ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.
3 शायद यहूदाह का घराना उस तमाम मुसीबत का हाल जो मैं उन पर लाने का इरादा रखता हूँ सुने, ताकि वह सब अपनी बुरे चाल चलन से बाज़ आएँ; और मैं उनकी बदकिरदारी और गुनाह को मु'आफ़ करूँ।”
೩ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು.
4 तब यरमियाह ने बारूक — बिन — नेयिरियाह को बुलाया, और बारूक ने ख़ुदावन्द का वह सब कलाम जो उसने यरमियाह से किया था, उसकी ज़बानी किताब के उस तूमार में लिखा।
೪ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.
5 और यरमियाह ने बारूक को हुक्म दिया और कहा, मैं तो मजबूर हूँ, मैं ख़ुदावन्द के घर में नहीं जा सकता;
೫ಮತ್ತು ಯೆರೆಮೀಯನು ಬಾರೂಕನಿಗೆ, “ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;
6 लेकिन तू जा और ख़ुदावन्द का वह कलाम जो तूने मेरे मुँह से इस तूमार में लिखा है, ख़ुदावन्द के घर में रोज़े के दिन लोगों को पढ़ कर सुना; और तमाम यहूदाह के लोगों को भी जो अपने शहरों से आए हों, तू वही कलाम पढ़ कर सुना।
೬ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.
7 शायद वह ख़ुदा के सामने मिन्नत करें और सब के सब अपनी बुरे चाल चलन से बाज़ आएँ, क्यूँकि ख़ुदावन्द का क़हर — ओ — ग़ज़ब जिसका उसने इन लोगों के ख़िलाफ़ 'ऐलान किया है, शदीद है।
೭ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.
8 और बारूक — बिन — नेयिरियाह ने सब कुछ जैसा यरमियाह नबी ने उसको फ़रमाया था वैसा ही किया, और ख़ुदावन्द के घर में ख़ुदावन्द का कलाम उस किताब से पढ़ कर सुनाया।
೮ನೇರೀಯನ ಮಗನಾದ ಬಾರೂಕನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಯೆಹೋವನ ಆಲಯದೊಳಗೆ ಓದಿ ಪ್ರವಾದಿಯಾದ ಯೆರೆಮೀಯನು ಆಜ್ಞಾಪಿಸಿದಂತೆ ಮಾಡಿದನು.
9 और शाह — ए — यहूदाह यहूयक़ीम — बिन — यूसियाह के पाँचवें बरस के नौवें महीने में यूँ हुआ कि येरूशलेम के सब लोगों ने और उन सब ने जो यहूदाह के शहरों से येरूशलेम में आए थे, ख़ुदावन्द के सामने रोज़े का 'ऐलान किया।
೯ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.
10 तब बारूक ने किताब से यरमियाह की बातें, ख़ुदावन्द के घर में जमरियाह — बिन — साफ़न मुन्शी की कोठरी में ऊपर के सहन के बीच, ख़ुदावन्द के घर के नये फाटक के मदख़ल पर सब लोगों के सामने पढ़ सुनाईं।
೧೦ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.
11 जब मीकायाह — बिन — जमरियाह — बिनसाफ़न ने ख़ुदावन्द का वह सब कलाम जो उस किताब में था सुना,
೧೧ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ, ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು.
12 तो वह उतर कर बादशाह के घर मुन्शी की कोठरी में गया, और सब हाकिम या'नी इलीसमा' मुन्शी, और दिलायाह बिन समयाह और इलनातन बिन अकबूर और जमरियाह बिन साफ़न और सिदक़ियाह — बिन — हननियाह, और सब हाकिम वहाँ बैठे थे।
೧೨ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.
13 तब मीकायाह ने वह सब बातें जो उसने सुनी थीं, जब बारूक किताब से पढ़ कर लोगों को सुनाता था, उनसे बयान कीं।
೧೩ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು,
14 और सब हाकिम ने यहूदी — बिन — नतनियाह — बिन — सलमियाह — बिन — कूशी को बारूक के पास यह कहकर भेजा, कि “वह तूमार जो तूने लोगों को पढ़कर सुनाया है, अपने हाथ में ले और चला आ।” तब बारूक — बिन — नेयिरियाह वह तूमार लेकर उनके पास आया।
೧೪ಸಕಲ ಪ್ರಧಾನರು ಬಾರೂಕನಿಗೆ, “ನೀನು ಜನರ ಮುಂದೆ ಓದಿದ ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ” ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿ ಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
15 और उन्होंने उसे कहा, कि “अब बैठ जा और हमको यह पढ़ कर सुना।” और बारूक ने उनको पढ़कर सुनाया।
೧೫ಅವರು ಅವನಿಗೆ, “ದಯಮಾಡಿ ಕುಳಿತುಕೊಂಡು ನಮ್ಮ ಮುಂದೆ ಓದು” ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು.
16 जब उन्होंने वह सब बातें सुनीं, तो डरकर एक दूसरे का मुँह ताकने लगे और बारूक से कहा कि “हम यक़ीनन यह सब बातें बादशाह से बयान करेंगे।”
೧೬ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, “ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.
17 और उन्होंने यह कह कर बारूक से पूछा, हम से कह कि तूने यह सब बातें उसकी ज़बानी क्यूँकर लिखीं?
೧೭ಮತ್ತು, “ನೀನು ಈ ಮಾತುಗಳನ್ನೆಲ್ಲಾ ಹೇಗೆ ಬರೆದಿ? ಅವನ ಬಾಯಿಂದ ಬಂದ ಹಾಗೆತಾನೇ? ದಯಮಾಡಿ ನಮಗೆ ತಿಳಿಸು” ಎಂದು ಅವನನ್ನು ಕೇಳಿದರು.
18 तब बारूक ने उनसे कहा, “वह यह सब बातें मुझे अपने मुँह से कहता गया और मैं स्याही से किताब में लिखता गया।”
೧೮ಬಾರೂಕನು ಅವರಿಗೆ, “ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಸಿಯಿಂದ ಈ ಪುಸ್ತಕದಲ್ಲಿ ಬರೆದೆನು” ಎಂದು ಉತ್ತರಕೊಟ್ಟನು.
19 तब हाकिम ने बारूक से कहा, “जा, अपने आपको और यरमियाह को छिपा, और कोई न जाने कि तुम कहाँ हो।”
೧೯ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು.
20 और वह बादशाह के पास सहन में गए, लेकिन उस तूमार को इलीसमा' मुन्शी की कोठरी में रख गए, और वह बातें बादशाह को कह सुनाईं।
೨೦ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು.
21 तब बादशाह ने यहूदी को भेजा कि तूमार लाए, और वह उसे इलीसमा' मुन्शी की कोठरी में से ले आया। और यहूदी ने बादशाह और सब हाकिम को जो बादशाह के सामने खड़े थे, उसे पढ़कर सुनाया।
೨೧ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.
22 और बादशाह ज़मिस्तानी महल में बैठा था, क्यूँकि नवाँ महीना था और उसके सामने अंगेठी जल रही थी।
೨೨ಆಗ ಪುಷ್ಯಮಾಸ; ಅರಸನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯು ಉರಿಯುತ್ತಿತ್ತು.
23 जब यहूदी ने तीन चार वर्क़ पढ़े, तो उसने उसे मुन्शी के क़लम तराश से काटा और अंगेठी की आग में डाल दिया, यहाँ तक कि तमाम तूमार अंगेठी की आग में भसम हो गया।
೨೩ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.
24 लेकिन वह न डरे, न उन्होंने अपने कपड़े फाड़े, न बादशाह ने न उसके मुलाज़िमों में से किसी ने जिन्होंने यह सब बातें सुनी थीं।
೨೪ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.
25 लेकिन इलनातन, और दिलायाह, और जमरियाह ने बादशाह से 'अर्ज़ की कि तूमार को न जलाए, लेकिन उसने उनकी एक न सुनी।
೨೫ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.
26 और बादशाह ने शाहज़ादे यरहमिएल को और शिरायाह — बिन अज़रिएल और सलमियाह बिन अबदिएल को हुक्म दिया कि बारूक मुन्शी और यरमियाह नबी को गिरफ़्तार करें, लेकिन ख़ुदावन्द ने उनको छिपाया।
೨೬ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.
27 और जब बादशाह तूमार और उन बातों को जो बारूक ने यरमियाह की ज़बानी लिखी थीं, जला चुका तो ख़ुदावन्द का यह कलाम यरमियाह पर नाज़िल हुआ:
೨೭ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರುಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ,
28 कि “तू दूसरा तूमार ले, और उसमें वह सब बातें लिख जो पहले तूमार में थीं, जिसे शाह — ए — यहूदाह यहूयक़ीम ने जला दिया।
೨೮“ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.
29 और शाह — ए — यहूदाह यहूयक़ीम से कह कि 'ख़ुदावन्द यूँ फ़रमाता है: तूने तूमार को जला दिया और कहा है, तू ने उसमें यूँ क्यूँ लिखा कि शाह — ए — बाबुल यक़ीनन आएगा और इस मुल्क को हलाक करेगा, और न इसमें इंसान बाक़ी छोड़ेगा न हैवान?”
೨೯ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.
30 इसलिए शाह — ए — यहूदाह यहूयक़ीम के बारे में ख़ुदावन्द यूँ फ़रमाता है कि: उसकी नसल में से कोई न रहेगा जो दाऊद के तख़्त पर बैठे, और उसकी लाश फेंकी जाएगी, ताकि दिन की गर्मी में और रात को पाले में पड़ी रहे;
೩೦ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.
31 और मैं उसको और उसकी नसल को और उसके मुलाज़िमों को उनकी बदकिरदारी की सज़ा दूँगा। मैं उन पर और येरूशलेम के बाशिन्दों पर और यहूदाह के लोगों पर वह सब मुसीबत लाऊँगा, जिसका मैंने उनके ख़िलाफ़ 'ऐलान किया लेकिन उन्होंने न सुना।
೩೧ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’” ಎಂದು ಹೇಳಿದನು.
32 तब यरमियाह ने दूसरा तूमार लिया और बारूक — बिन — नेयिरियाह मुन्शी को दिया, और उसने उस किताब की सब बातें जिसे शाह — ए — यहूदाह यहूयक़ीम ने आग में जलाया था, यरमियाह की ज़बानी उसमें लिखीं और उनके अलावा वैसी ही और बहुत सी बातें उनमें बढ़ा दी गईं।
೩೨ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂತಹ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.