< यर्म 49 >
1 बनी 'अम्मोन के बारे में ख़ुदावन्द का इन्साफ़ फ़रमाता है कि: क्या इस्राईल के बेटे नहीं हैं? क्या उसका कोई वारिस नहीं? फिर मिलकूम ने क्यूँ जद्द पर क़ब्ज़ा कर लिया, और उसके लोग उसके शहरों में क्यूँ बसते हैं?
೧ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
2 इसलिए देख, वह दिन आते हैं, ख़ुदावन्द फ़रमाता है, कि मैं बनी 'अम्मोन के रब्बह में लड़ाई का हुल्लड़ बर्पा करूँगा; और वह खंडर हो जाएगा और उसकी बेटियाँ आग से जलाई जाएँगी; तब इस्राईल उनका जो उसके वारिस बन बैठे थे, वारिस होगा, ख़ुदावन्द फ़रमाता है।
೨ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
3 “ऐ हस्बोन, वावैला कर, कि 'ऐ बर्बाद की गई। ऐ रब्बाह की बेटियो, चिल्लाओ, और टाट ओढ़कर मातम करो और इहातों में इधर उधर दौड़ो, क्यूँकि मिलकूम ग़ुलामी में जाएगा और उसके काहिन और हाकिम भी साथ जाएँगे।
೩“ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
4 तू क्यूँ वादियों पर फ़ख़्र करती है? तेरी वादी सेराब है, ऐ बरगश्ता बेटी, तू अपने ख़ज़ानों पर भरोसा करती है, कि 'कौन मुझ तक आ सकता है?'
೪‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?
5 देख, ख़ुदावन्द, रब्ब — उल — अफ़वाज फ़रमाता है: मैं तेरे सब इर्दगिर्द वालों का ख़ौफ़ तुझ पर ग़ालिब करूँगा; और तुम में से हर एक आगे हाँका जाएगा, और कोई न होगा जो आवारा फिरने वालों को जमा' करे।
೫ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.
6 मगर उसके बाद मैं बनी 'अम्मोन को ग़ुलामी से वापस लाऊँगा, ख़ुदावन्द फ़रमाता है।”
೬ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
7 अदोम के बारे में। रब्ब — उल — अफ़वाज यूँ फ़रमाता है कि: “क्या तेमान में ख़िरद मुतलक़ न रही? क्या तदबीरों की मसलहत जाती रही? क्या उनकी 'अक़्ल उड़ गई?
೭ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
8 ऐ ददान के बाशिन्दों, भागो, लौटो, और नशेबों में जा बसो! क्यूँकि मैं इन्तक़ाम के वक़्त उस पर ऐसौ की जैसी मुसीबत लाऊँगा।
೮ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.
9 अगर अँगूर तोड़ने वाले तेरे पास आएँ, तो क्या कुछ दाने बाक़ी न छोड़ेंगे? या अगर रात को चोर आएँ, तो क्या वह हस्ब — ए — ख़्वाहिश ही न तोड़ेंगे?
೯ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.
10 लेकिन मैं ऐसौ को बिल्कुल नंगा करूँगा, उसके पोशीदा मकानों को बे — पर्दा कर दूँगा कि वह छिप न सके; उसकी नसल और उसके भाई और उसके पड़ोसी सब बर्बाद किए जाएँगे, और वह न रहेगा।
೧೦ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.
11 तू अपने यतीम फ़र्ज़न्दों को छोड़, मैं उनको ज़िन्दा रख्खूंगा; और तेरी बेवाएँ मुझ पर भरोसा करें।”
೧೧ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.
12 क्यूँकि ख़ुदावन्द यूँ फ़रमाता है: कि “देख, जो सज़ावार न थे कि प्याला पीएँ, उन्होंने ख़ूब पिया; क्या तू बे — सज़ा छूट जाएगा? तू बेसज़ा न छूटेगा, बल्कि यक़ीनन उसमें से पिएगा।
೧೨ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
13 क्यूँकि मैंने अपनी ज़ात की क़सम खाई है, ख़ुदावन्द फ़रमाता है, कि बुसराह जा — ए — हैरत और मलामत और वीरानी और ला'नत होगा; और उसके सब शहर अबद — उल — आबाद वीरान रहेंगे।”
೧೩ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”
14 मैंने ख़ुदावन्द से एक ख़बर सुनी है, बल्कि एक क़ासिद यह कहने को क़ौमों के बीच भेजा गया है: जमा' हो और उस पर जा पड़ो, और लड़ाई कि लिए उठो।
೧೪ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
15 क्यूँकि देख, मैंने तुझे क़ौमों के बीच हक़ीर, और आदमियों के बीच ज़लील किया।
೧೫ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.
16 तेरी हैबत और तेरे दिल के ग़ुरूर ने तुझे फ़रेब दिया है। ऐ तू जो चट्टानों के शिगाफ़ों में रहती है, और पहाड़ों की चोटियों पर क़ाबिज़ है; अगरचे तू 'उक़ाब की तरह अपना आशियाना बुलन्दी पर बनाए, तो भी मैं वहाँ से तुझे नीचे उतारूँगा, ख़ुदावन्द फ़रमाता है।
೧೬ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”
17 “अदोम भी जा — ए — हैरत होगा, हर एक जो उधर से गुज़रेगा हैरान होगा, और उसकी सब आफ़तों की वजह से सुस्कारेगा।
೧೭ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
18 जिस तरह सदूम और 'अमूरा और उनके आस पास के शहर ग़ारत हो गए, उसी तरह उसमें भी न कोई आदमी बसेगा, न आदमज़ाद वहाँ सुकूनत करेगा, ख़ुदावन्द फ़रमाता है।
೧೮ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.
19 देख, वह शेर — ए — बबर की तरह यरदन के जंगल से निकलकर मज़बूत बस्ती पर चढ़ आएगा; लेकिन मैं अचानक उसको वहाँ से भगा दूँगा, और अपने बरगुज़ीदा को उस पर मुक़र्रर करूँगा; क्यूँकि मुझ सा कौन है? कौन है जो मेरे लिए वक़्त मुक़र्रर करे? और वह चरवाहा कौन है जो मेरे सामने खड़ा हो सके?
೧೯ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
20 तब ख़ुदावन्द की मसलहत को, जो उसने अदोम के ख़िलाफ़ ठहराई है और उसके इरादे को जो उसने तेमान के बाशिन्दों के ख़िलाफ़ किया है, सुनो, उनके गल्ले के सबसे छोटों को भी घसीट ले जाएँगे, यक़ीनन उनका घर भी उनके साथ बर्बाद होगा।
೨೦ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
21 उनके गिरने की आवाज़ से ज़मीन काँप जाएगी, उनके चिल्लाने का शोर बहर — ए — कु़लजु़म तक सुनाई देगा।
೨೧ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!
22 देख, वह चढ़ आएगा और 'उक़ाब की तरह उड़ेगा, और बुसराह के ख़िलाफ़ बाज़ू फैलाएगा; और उस दिन अदोम के बहादुरों का दिल ज़च्चा के दिल की तरह होगा।”
೨೨ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
23 दमिश्क़ के बारे में: “हमात और अरफ़ाद शर्मिन्दा हैं क्यूँकि उन्होंने बुरी ख़बर सुनी, वह पिघल गए समन्दर ने जुम्बिश खाई, वह ठहर नहीं सकता।
೨೩ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
24 दमिश्क़ का ज़ोर टूट गया, उसने भागने के लिए मुँह फेरा, और थरथराहट ने उसे आ लिया; ज़च्चा के से रंज — ओ — दर्द ने उसे आ पकड़ा।
೨೪ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
25 यह क्यूँकर हुआ कि वह नामवर शहर, मेरा शादमान शहर, नहीं बचा?
೨೫ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!
26 इसलिए उसके जवान उसके बाज़ारों में गिर जाएँगे, और सब जंगी मर्द उस दिन काट डाले जाएँगे, रब्ब — उल — अफ़वाज फ़रमाता है।
೨೬ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
27 और मैं दमिश्क़ की शहरपनाह में आग भड़काऊँगा, जो बिन — हदद के महलों को भसम कर देगी।”
೨೭ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.
28 क़ीदार के बारे में और हसूर की सल्तनतों के बारे में जिनको शाह — ए — बाबुल नबूकदनज़र ने शिकस्त दी। ख़ुदावन्द यूँ फ़रमाता है: “उठो, क़ीदार पर चढ़ाई करो, और अहल — ए — मशरिक़ को हलाक करो।
೨೮ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
29 वह उनके ख़ेमों और गल्लों को ले लेंगे; उनके पर्दों और बर्तनों और ऊँटो को छीन ले जाएँगे; और वह चिल्ला कर उनसे कहेंगे कि चारों तरफ़ ख़ौफ़ है!”
೨೯“ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”
30 भागो, दूर निकल जाओ, नशेब में बसो, ऐ हसूर के बाशिन्दो, ख़ुदावन्द फ़रमाता है; क्यूँकि शाह — ए — बाबुल नबूकदनज़र ने तुम्हारी मुखालिफ़त में मश्वरत की और तुम्हारे ख़िलाफ़ इरादा किया है।
೩೦ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
31 ख़ुदावन्द फ़रमाता है, उठो, उस आसूदा क़ौम पर, जो बे — फ़िक्र रहती है, जिसके न किवाड़े हैं न अड़बंगे और अकेली है चढ़ाई करो
೩೧ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!
32 उनके ऊँट ग़नीमत के लिए होंगे, और उनके चौपायों की कसरत लूट के लिए; और मैं उन लोगों को जो गाओदुम दाढ़ी रखते हैं, हर तरफ़ हवा में तितर — बितर करूँगा; और मैं उन पर हर तरफ़ से आफ़त लाऊँगा, ख़ुदावन्द फ़रमाता है।
೩೨ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
33 हसूर गीदड़ों का मक़ाम, हमेशा का वीराना होगा; न कोई आदमी वहाँ बसेगा, और न कोई आदमज़ाद उसमें सुकूनत करेगा।
೩೩ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”
34 ख़ुदावन्द का कलाम जो शाह — ए — यहूदाह सिदक़ियाह की सल्तनत के शुरू' में 'ऐलाम के बारे में यरमियाह नबी पर नाज़िल हुआ।
೩೪ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
35 कि रब्ब — उल — अफ़वाज यूँ फ़रमाता है कि: देख मैं एलाम की कमान उनकी बड़ी तवानाई को तोड़ डालूँगा।
೩೫“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.
36 और चारों हवाओं को आसमान के चारों कोनों से ऐलाम पर लाऊँगा, और उन चारों हवाओं की तरफ़ उनको तितर — बितर करूँगा; और कोई ऐसी क़ौम न होगी, जिस तक ऐलाम के जिलावतन न पहुँचेंगे।
೩೬ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.
37 क्यूँकि मैं ऐलाम को उनके मुख़ालिफ़ों और जानी दुश्मनों के आगे हिरासाँ करूँगा; और उन पर एक बला या'नी क़हर — ए — शदीद को नाज़िल करूँगा। ख़ुदावन्द फ़रमाता है, और तलवार को उनके पीछे लगा दूँगा, यहाँ तक कि उनको नाबूद कर डालूँगा;
೩೭ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
38 और मैं अपना तख़्त 'ऐलाम में रखूंगा, और वहाँ से बादशाह और हाकिम को नाबूद करूँगा, ख़ुदावन्द फ़रमाता है।
೩೮ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
39 “लेकिन आख़िरी दिनों में यूँ होगा, कि मैं ऐलाम को ग़ुलामी से वापस लाऊँगा, ख़ुदावन्द फ़रमाता है।”
೩೯ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”