< यर्म 51 >

1 ख़ुदावन्द यूँ फ़रमाता है कि देख, मैं बाबुल पर और उस मुखालिफ़ दार — उस — सल्तनत के रहनेवालों पर एक मुहलिक हवा चलाऊँगा।
ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು.
2 और मैं उसाने वालों को बाबुल में भेजूँगा कि उसे उसाएँ, और उसकी सरज़मीन को ख़ाली करें; यक़ीनन उसकी मुसीबत के दिन वह उसके दुश्मन बनकर उसे चारों तरफ़ से घेर लेंगे।
ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು. ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.
3 उसके कमानदारों और ज़िरहपोशों पर तीरअन्दाज़ी करो; तुम उसके जवानों पर रहम न करो, उसके तमाम लश्कर को बिल्कुल हलाक करो।
ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.
4 मक़्तूल कसदियों की सरज़मीन में गिरेंगे, और छिदे हुए उसके बाज़ारों में पड़े रहेंगे।
ಕಸ್ದೀಯರು ತಮ್ಮ ದೇಶದಲ್ಲಿ ಹತರಾಗಿ ಬೀಳುವರು, ಬಾಬೆಲಿನ ಬೀದಿಗಳಲ್ಲಿ ಇರಿಯಲ್ಪಟ್ಟು ಮಣ್ಣುಪಾಲಾಗುವರು.
5 क्यूँकि इस्राईल और यहूदाह को उनके ख़ुदा रब्ब — उल — अफ़वाज ने तर्क नहीं किया; अगरचे इनका मुल्क इस्राईल के क़ुद्दूस की नाफ़रमानी से पुर है।
ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.
6 बाबुल से निकल भागो, और हर एक अपनी जान बचाए, उसकी बदकिरदारी की सज़ा में शरीक होकर हलाक न हो, क्यूँकि यह ख़ुदावन्द के इन्तक़ाम का वक़्त है; वह उसे बदला देता है।
ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.
7 बाबुल ख़ुदावन्द के हाथ में सोने का प्याला था, जिसने सारी दुनिया को मतवाला किया; क़ौमों ने उसकी मय पी, इसलिए वह दीवाने हैं।
ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.
8 बाबुल अचानक गिर गया और ग़ारत हुआ, उस पर वावैला करो; उसके ज़ख़्म के लिए बलसान लो, शायद वह शिफ़ा पाए।
ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.
9 हम तो बाबुल की शिफ़ायाबी चाहते थे लेकिन वह शिफ़ायाब न हुआ, तुम उसको छोड़ो, आओ, हम सब अपने अपने वतन को चले जाएँ, क्यूँकि उसकी आवाज़ आसमान तक पहुँची और अफ़लाक तक बुलन्द हुई।
ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.
10 ख़ुदावन्द ने हमारी रास्तबाज़ी को आशकारा किया; आओ, हम सिय्यून में ख़ुदावन्द अपने ख़ुदा के काम का बयान करें।
೧೦ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!
11 तीरों को सैक़ल करो, सिपरों को तैयार रख्खो; ख़ुदावन्द ने मादियों के बादशाहों की रूह को उभारा है, क्यूँकि उसका इरादा बाबुल को बर्बाद करने का है; क्यूँकि यह ख़ुदावन्द का, या'नी उसकी हैकल का इन्तक़ाम है।
೧೧ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!
12 बाबुल की दीवारों के सामने झंडा खड़ा करो पहरे की चौकियाँ मज़बूत करो, पहरेदारों को बिठाओ, कमीनगाहें तैयार करो; क्यूँकि ख़ुदावन्द ने अहल — ए — बाबुल के हक़ में जो कुछ ठहराया और फ़रमाया था, इसलिए पूरा किया।
೧೨ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.
13 ऐ नहरों पर सुकूनत करने वाली, जिसके ख़ज़ाने फ़िरावान हैं; तेरी तमामी का वक़्त आ पहुँचा और तेरी ग़ारतगरी का पैमाना पुर हो गया।
೧೩ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.
14 रब्ब — उल — अफ़वाज ने अपनी ज़ात की क़सम खाई है, कि यक़ीनन मैं तुझ में लोगों को टिड्डियों की तरह भर दूँगा, और वह तुझ पर जंग का नारा मारेंगे।
೧೪ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.
15 उसी ने अपनी क़ुदरत से ज़मीन को बनाया, उसी ने अपनी हिकमत से जहाँ को क़ाईम किया, और अपनी 'अक़्ल से आसमान को तान दिया है;
೧೫ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ.
16 उसकी आवाज़ से आसमान में पानी की फ़िरावानी होती है, और वह ज़मीन की इन्तिहा से बुख़ारात उठाता है; वह बारिश के लिए बिजली चमकाता है और अपने ख़ज़ानों से हवा चलाता है।
೧೬ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
17 हर आदमी हैवान ख़सलत और बे — 'इल्म हो गया है, सुनार अपनी खोदी हुई मूरत से रुस्वा है; क्यूँकि उसकी ढाली हुई मूरत बातिल है, उनमें दम नहीं।
೧೭ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
18 वह बातिल — फ़े'ल — ए — फ़रेब हैं, सज़ा के वक़्त बर्बाद हो जाएँगी।
೧೮ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.
19 या'क़ूब का हिस्सा उनकी तरह नहीं, क्यूँकि वह सब चीज़ों का ख़ालिक़ है और इस्राईल उसकी मीरास का 'असा है; रब्बउल — अफ़वाज उसका नाम है।
೧೯ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು.
20 तू मेरा गुर्ज़ और जंगी हथियार है, और तुझी से मैं क़ौमों को तोड़ता और तुझी से सल्तनतों को बर्बाद करता हूँ।
೨೦ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;
21 तुझी से मैं घोड़े और सवार को कुचलता, और तुझी से रथ और उसके सवार को चूर करता हूँ;
೨೧ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ; ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ;
22 तुझी से मर्द — ओ — ज़न और पीर — ओ — जवान को कुचलता, और तुझ ही से नौखेंज़ लड़कों और लड़कियों को पीस डालता हूँ;
೨೨ನಿನ್ನಿಂದ ಸ್ತ್ರೀಪುರುಷರನ್ನು ನಾಶಮಾಡುತ್ತೇನೆ; ನಿನ್ನಿಂದ ಬಾಲಕರನ್ನು ಮತ್ತು ವೃದ್ಧರನ್ನು ನಾಶ ಮಾಡುತ್ತೇನೆ; ನಿನ್ನಿಂದ ಯುವತೀ ಮತ್ತು ಯುವಕರನ್ನು ನಾಶಮಾಡುವೆನು;
23 और तुझी से चरवाहे और उसके गल्ले को कुचलता, और तुझी से किसान और उसके जोड़ी बैल को, और तुझी से सरदारों और हाकिमों को चूर — चूर कर देता हूँ।
೨೩ನಿನ್ನಿಂದ ಕುರುಬನನ್ನೂ ಹಾಗು ಹಿಂಡನ್ನೂ ನಾಶಮಾಡುತ್ತೇನೆ; ನಿನ್ನಿಂದ ರೈತನನ್ನೂ ಹಾಗೂ ನೊಗದ ಎತ್ತುಗಳನ್ನೂ ನಾಶಮಾಡುವೆನು; ನಿನ್ನಿಂದ ದೇಶಾಧಿಪತಿಗಳನ್ನೂ ಮತ್ತು ನಾಡ ಒಡೆಯರನ್ನೂ ನಾಶಮಾಡುವೆನು;
24 और मैं बाबुल को और कसदिस्तान के सब बाशिन्दों को उस तमाम नुक़्सान का, जो उन्होंने सिय्यून को तुम्हारी आँखों के सामने पहुँचाया है इवज़ देता हूँ ख़ुदावन्द फ़रमाता है।
೨೪ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’” ಎಂದು ಯೆಹೋವನು ಅನ್ನುತ್ತಾನೆ.
25 देख ख़ुदावन्द फ़रमाता है, ऐ हलाक करने वाले पहाड़, जो तमाम इस ज़मीन को हलाक करता है, मैं तेरा मुख़ालिफ़ हूँ और मैं अपना हाथ तुझ पर बढ़ाऊँगा, और चट्टानों पर से तुझे लुढ़काऊँगा, और तुझे जला हुआ पहाड़ बना दूँगा।
೨೫ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.
26 न तुझ से कोने का पत्थर, और न बुनियाद के लिए पत्थर लेंगे; बल्कि तू हमेशा तक वीरान रहेगा, ख़ुदावन्द फ़रमाता है।
೨೬ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು, ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ” ಎಂಬುದೇ.
27 'मुल्क में झण्डा खड़ा करो, क़ौमों में नरसिंगा फूँको उनको उसके ख़िलाफ़ मख़सूस करो अरारात और मिन्नी और अश्कनाज़ की ममलुकतों को उस पर चढ़ा लाओ; उसके ख़िलाफ़ सिपहसालार मुक़र्रर करो और सवारों को मुहलिक टिड्डियों की तरह चढ़ा लाओ।
೨೭“ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.
28 क़ौमों को मादियों के बादशाहों को और सरदारों और हाकिमों और उनकी सल्तनत के तमाम मुमालिक को मख़सूस करो कि उस पर चढ़ाई करें।
೨೮ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.
29 और ज़मीन काँपती और दर्द में मुब्तिला है, क्यूँकि ख़ुदावन्द के इरादे बाबुल की मुखालिफ़त में क़ाईम रहेंगे, कि बाबुल की सरज़मीन को वीरान और ग़ैरआबाद कर दे।
೨೯ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.
30 बाबुल के बहादुर लड़ाई से दस्तबरदार और क़िलों' में बैठे हैं, उनका ज़ोर घट गया, वह 'औरतों की तरह हो गए; उसके घर जलाए गए, उसके अड़बंगे तोड़े गए।
೩೦ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.
31 हरकारा हरकारे से मिलने को और क़ासिद से मिलने को दौड़ेगा कि बाबुल के बादशाह को इत्तला दे, कि उसका शहर हर तरफ़ से ले लिया गया;
೩೧ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ, ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,
32 और गुज़रगाहें ले ली गई, और नेस्तान आग से जलाए गए और फ़ौज हड़बड़ा गईं।
೩೨ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ’ ಎಂದು ತಿಳಿಸುವರು.”
33 क्यूँकि रब्ब — उल — अफ़वाज, इस्राईल का ख़ुदा, यूँ फ़रमाता है कि: दुख़्तर — ए — बाबुल खलीहान की तरह है, जब उसे रौंदने का वक़्त आए, थोड़ी देर है कि उसकी कटाई का वक़्त आ पहुँचेगा।
೩೩ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.
34 “शाह — ए — बाबुल नबूकदनज़र ने मुझे खा लिया, उसने मुझे शिकस्त दी है, उसने मुझे ख़ाली बर्तन की तरह कर दिया अज़दहा की तरह वह मुझे निगल गया, उसने अपने पेट को मेरी ने'मतों से भर लिया; उसने मुझे निकाल दिया;
೩೪ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.
35 सिय्यून के रहनेवाले कहेंगे, जो सितम हम पर और हमारे लोगों पर हुआ, बाबुल पर हो।” और येरूशलेम कहेगा, मेरा ख़ून अहल — ए — कसदिस्तान पर हो।
೩೫ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ; ‘ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ’ ಎಂದು ಯೆರೂಸಲೇಮಿನವರು ಹೇಳುತ್ತಾರೆ.”
36 इसलिए ख़ुदावन्द यूँ फ़रमाता है कि: देख, मैं तेरी हिमायत करूँगा और तेरा इन्तक़ाम लूँगा, और उसके बहर को सुखाऊँगा और उसके सोते को ख़ुश्क कर दूँगा;
೩೬ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.
37 और बाबुल खण्डर हो जाएगा, और गीदड़ों का मक़ाम और हैरत और सुस्कार का ज़रिया' होगी और उसमें कोई न बसेगा।
೩೭ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.
38 वह जवान बबरों की तरह इकटठे गरजेंगे, वह शेर बच्चों की तरह ग़ुर्राएँगे।
೩೮ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ.
39 उनकी हालत — ए — तैश में मैं उनकी ज़ियाफ़त करके उनको मस्त करूँगा, कि वह जद्द में आएँ और दाइमी ख़्वाब में पड़े रहें और बेदार न हों, ख़ुदावन्द फ़रमाता है।
೩೯ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.
40 मैं उनको बर्रों और मेंढों की तरह बकरों के साथ मसलख़ पर उतार लाऊँगा।
೪೦“ನಾನು ಅವರನ್ನು ಕುರಿ, ಟಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು.
41 शेशक क्यूँकर ले लिया गया! हाँ, तमाम रु — ए — ज़मीन का खम्बा यकबारगी ले लिया गया। बाबुल क़ौमों के बीच कैसा वीरान हुआ!
೪೧ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ!
42 समन्दर बाबुल पर चढ़ गया है, वह उसकी लहरों की कसरत से छिप गया।
೪೨ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.
43 उसकी बस्तियाँ उजड़ गईं, वह ख़ुश्क ज़मीन और सहरा हो गया ऐसी सरज़मीन जिसमें न कोई बसता हो और न वहाँ आदमज़ाद का गुज़र हो।
೪೩ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.
44 क्यूँकि मैं बाबुल में बेल को सज़ा दूँगा, और जो कुछ वह निगल गया है उसके मुँह से निकालूँगा, और फिर क़ौमें उसकी तरफ़ रवाँ न होंगी; हाँ, बाबुल की फ़सील गिर जाएगी।
೪೪ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.
45 ऐ मेरे लोगों, उसमें से निकल आओ, और तुम में से हर एक ख़ुदावन्द के क़हर — ए — शदीद से अपनी जान बचाए।
೪೫ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.
46 न हो कि तुम्हारा दिल सुस्त हो, और तुम उस अफ़वाह से डरो जो ज़मीन में सुनी जाएगी; एक अफ़वाह एक साल आएगी और फिर दूसरी अफ़वाह दूसरे साल में, और मुल्क में ज़ुल्म होगा और हाकिम हाकिम से लड़ेगा।
೪೬ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರ್ಷ ಒಂದು ಸುದ್ದಿಯು, ಮತ್ತೊಂದು ವರ್ಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವುದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.
47 इसलिए देख, वह दिन आते हैं कि मैं बाबुल की तराशी हुई मूरतों से इन्तक़ाम लूँगा और उसकी तमाम सरज़मीं रुस्वा होगी और उसके सब मक़्तूल उसी में पड़े रहेंगे।
೪೭ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.
48 तब आसमान और ज़मीन और सब कुछ जो उनमें है, बाबुल पर शादियाना बजाएँगे; क्यूँकि ग़ारतगर उत्तर से उस पर चढ़ आएँगे, ख़ुदावन्द फ़रमाता है।
೪೮ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು; ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.”
49 जिस तरह बाबुल में बनी — इस्राईल क़त्ल हुए, उसी तरह बाबुल में तमाम मुल्क के लोग क़त्ल होंगे।
೪೯“ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ, ಹಾಗೆಯೇ ಬಾಬೆಲೂ ಹತವಾಗುವುದು.
50 तुम जो तलवार से बच गए हो, खड़े न हो, चले जाओ! दूर ही से ख़ुदावन्द को याद करो, और येरूशलेम का ख़याल तुम्हारे दिल में आए।
೫೦ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.
51 'हम परेशान हैं, क्यूँकि हम ने मलामत सुनी; हम शर्मआलूदा हुए, क्यूँकि ख़ुदावन्द के घर के हैकलों में अजनबी घुस आए।
೫೧ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ?
52 इसलिए देख, वह दिन आते हैं, ख़ुदावन्द फ़रमाता है, कि मैं उसकी तराशी हुई मूरतों को सज़ा दूँगा; और उसकी तमाम सल्तनत में घायल कराहेंगे।
೫೨ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.
53 हरचन्द बाबुल आसमान पर चढ़ जाए और अपने ज़ोर की इन्तिहा तक मुस्तहकम हो बैठे तो भी ग़ारतगर मेरी तरफ़ से उस पर चढ़ आएँगे, ख़ुदावन्द फ़रमाता है।
೫೩ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”
54 बाबुल से रोने की और कसदियों की सरज़मीन से बड़ी हलाकत की आवाज़ आती है।
೫೪“ಆಹಾ, ಬಾಬೆಲಿನಿಂದ ಮೊರೆಯೂ, ಕಸ್ದೀಯರ ದೇಶದಿಂದ ಮಹಾನಾಶದ ಶಬ್ದವೂ ಕೇಳಿ ಬರುತ್ತದೆ!
55 क्यूँकि ख़ुदावन्द बाबुल को ग़ारत करता है, और उसके बड़े शोर — ओ — ग़ुल को बर्बाद करेगा; उनकी लहरें समन्दर की तरह शोर मचाती हैं उनके शोर की आवाज़ बुलंद है;
೫೫ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ; ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ;
56 इसलिए कि ग़ारतगर उस पर, हाँ, बाबुल पर चढ़ आया है, और उसके ताक़तवर लोग पकड़े जायेंगे उनकी कमाने तोड़ी जायेंगी क्यूँकि ख़ुदावन्द इन्तक़ाम लेनेवाला ख़ुदा है, वह ज़रूर बदला लेगा।
೫೬ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ.
57 मैं हाकिम — ओ — हुक्मा को और उसके सरदारों और हाकिमों को मस्त करूँगा, और वह दाइमी ख़्वाब में पड़े रहेंगे और बेदार न होंगे, वह बादशाह फ़रमाता है, जिसका नाम रब्ब — उल — अफ़वाज है।
೫೭ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”
58 “रब्ब — उल — अफ़वाज यूँ फ़रमाता है कि: बाबुल की चौड़ी फ़सील बिल्कुल गिरा दी जाएगी, और उसके बुलन्द फाटक आग से जला दिए जाएँगे। यूँ लोगों की मेहनत बे फ़ायदा ठहरेगी, और क़ौमों का काम आग के लिए होगा और वह मान्दा होंगे।”
೫೮ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.
59 यह वह बात है, जो यरमियाह नबी ने सिरायाह — बिन — नेयिरियाह — बिन — महसियाह से कही, जब वह शाह — ए — यहूदाह सिदक़ियाह के साथ उसकी सल्तनत के चौथे बरस बाबुल में गया, और यह सिरायाह ख़्वाजासराओं का सरदार था।
೫೯ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.)
60 और यरमियाह ने उन सब आफ़तों को जो बाबुल पर आने वाली थीं, एक किताब में क़लमबन्द किया; या'नी इन सब बातों को जो बाबुल के बारे में लिखी गई हैं।
೬೦ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.
61 और यरमियाह ने सिरायाह से कहा, कि “जब तू बाबुल में पहुँचे, तो' इन सब बातों को पढ़ना,
೬೧ಅವನು ಸೆರಾಯನಿಗೆ ಹೀಗೆ ಹೇಳಿದನು, “ನೋಡು, ನೀನು ಬಾಬಿಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ,
62 और कहना, 'ऐ ख़ुदावन्द, तूने इस जगह की बर्बादी के बारे में फ़रमाया है कि मैं इसको बर्बाद करूँगा, ऐसा कि कोई इसमें न बसे, न इंसान न हैवान, लेकिन हमेशा वीरान रहे।
೬೨‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.
63 और जब तू इस किताब को पढ़ चुके, तो एक पत्थर इससे बाँधना और फ़रात में फेंक देना;
೬೩ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ, ಯೂಫ್ರೆಟಿಸ್ ನದಿಯ ಮಧ್ಯದೊಳಗೆ ಹಾಕಿ,
64 और कहना, 'बाबुल इसी तरह डूब जाएगा, और उस मुसीबत की वजह से जो मैं उस पर डाल दूँगा, फिर न उठेगा और वह मान्दा होंगे।” यरमियाह की बातें यहाँ तक हैं।
೬೪ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.

< यर्म 51 >