< यूए 1 >

1 ख़ुदावन्द का कलाम जो यूएल — बिन फ़तूएल पर नाज़िल हुआ:
ಪೆತುಯೇಲನ ಮಗನಾದ ಯೋಯೇಲನಿಗೆ ಬಂದ ಯೆಹೋವ ದೇವರು ವಾಕ್ಯವು:
2 ऐ बूढ़ो, सुनो, ऐ ज़मीन के सब रहने वालों, कान लगाओ! क्या तुम्हारे या तुम्हारे बाप — दादा के दिनों में कभी ऐसा हुआ?
ಹಿರಿಯರೇ, ಇದನ್ನು ಕೇಳಿರಿ: ದೇಶದ ನಿವಾಸಿಗಳೇ, ಕಿವಿಗೊಡಿರಿ. ಇಂಥ ದುರ್ಘಟನೆಯು ನಿಮ್ಮ ದಿವಸಗಳಲ್ಲಾದರೂ ನಿಮ್ಮ ಪೂರ್ವಿಕರ ದಿವಸಗಳಲ್ಲಾದರೂ ಉಂಟಾಯಿತೋ?
3 तुम अपनी औलाद से इसका तज़किरा करो, और तुम्हारी औलाद अपनी औलाद से, और उनकी औलाद अपनी नसल से बयान करे।
ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ, ಅವರ ಮಕ್ಕಳೂ ಮತ್ತೊಂದು ತಲಾಂತರಕ್ಕೂ ತಿಳಿಸಲಿ.
4 जो कुछ टिड्डियों के एक ग़ोल से बचा, उसे दूसरा ग़ोल निगल गया; और जो कुछ दूसरे से बचा, उसे तीसरा ग़ोल चट कर गया; और जो कुछ तीसरे से बचा, उसे चौथा ग़ोल खा गया।
ಚೂರಿಮಿಡತೆ ತಿಂದು, ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದು ಬಿಟ್ಟಿದ್ದನ್ನು, ಕುದುರೆಮಿಡತೆ ತಿಂದುಬಿಟ್ಟಿತು. ಕುದುರೆಮಿಡತೆ ಬಿಟ್ಟಿದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.
5 ऐ मतवालो, जागो और मातम करो; ऐ मयनौशी करने वालों, नई मय के लिए चिल्लाओ, क्यूँकि वह तुम्हारे मुँह से छिन गई है।
ಅಮಲೇರಿದವರೇ, ಎಚ್ಚೆತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾರಸದ ನಿಮಿತ್ತ ಗೋಳಾಡಿರಿ; ಏಕೆಂದರೆ, ಅದು ನಿಮ್ಮ ಬಾಯಿಗೆ ಇನ್ನು ದೊರಕುವುದಿಲ್ಲ.
6 क्यूँकि मेरे मुल्क पर एक क़ौम चढ़ आई है, उनके दाँत शेर — ए — बबर के जैसे हैं, और उनकी दाढ़ें शेरनी की जैसी हैं।
ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು. ಅದು ಬಲವಾದದ್ದೂ, ಲೆಕ್ಕವಿಲ್ಲದ್ದೂ; ಅದರ ಕೋರೆಗಳು ಸಿಂಹದ ಹಲ್ಲುಗಳು, ಸಿಂಹಿಣಿಯ ಹಲ್ಲುಗಳು ಅದಕ್ಕೆ ಇವೆ.
7 उन्होंने मेरे ताकिस्तान को उजाड़ डाला, और मेरे अंजीर के दरख़्तों को तोड़ डाला; उन्होंने उनको बिल्कुल छील छालकर फेंक दिया, उनकी डालियाँ सफ़ेद निकल आईं।
ಅದು ನನ್ನ ದ್ರಾಕ್ಷಿಬಳ್ಳಿಯನ್ನು ಹಾಳು ಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ. ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ. ಅದರ ಕೊಂಬೆಗಳು ಬಿಳುಪಾದವು.
8 तुम मातम करो, जिस तरह दुल्हन अपनी जवानी के शौहर के लिए टाट ओढ़ कर मातम करती है।
ಯೌವನದ ಗಂಡನಿಗೋಸ್ಕರ ಗೋಣಿತಟ್ಟು ಧರಿಸಿ, ಕನ್ಯೆಯ ಹಾಗೆ ಪ್ರಲಾಪಿಸು.
9 नज़्र की कु़र्बानी और तपावन ख़ुदावन्द के घर से मौकूफ़ हो गए। ख़ुदावन्द के ख़िदमत गुज़ार, काहिन मातम करते हैं।
ಧಾನ್ಯ ಸಮರ್ಪಣೆಯನ್ನಾಗಲಿ ಪಾನಾರ್ಪಣೆಯನ್ನಾಗಲಿ ಯೆಹೋವ ದೇವರ ಆಲಯದಲ್ಲಿ ಅರ್ಪಿಸುವುದಿಲ್ಲ. ಯೆಹೋವ ದೇವರ ಸೇವಕರಾದ ಯಾಜಕರು ಗೋಳಾಡುತ್ತಾರೆ.
10 खेत उजड़ गए, ज़मीन मातम करती है, क्यूँकि ग़ल्ला ख़राब हो गया है; नई मय ख़त्म हो गई, और तेल बर्बाद हो गया।
ಹೊಲವು ಹಾಳಾಗಿದೆ; ಭೂಮಿಯು ಒಣಗಿದೆ, ಧಾನ್ಯವು ನಾಶವಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ತೀರಿಹೋಗಿದೆ.
11 ऐ किसानो, शर्मिन्दगी उठाओ, ऐ ताकिस्तान के बाग़बानों, मातम करो, क्यूँकि गेहूँ और जौ और मैदान के तैयार खेत बर्बाद हो गए।
ರೈತರೇ, ರೋದಿಸಿರಿ, ತೋಟಗಾರರೇ, ಪರಿತಪಿಸಿರಿ; ಗೋಧಿ ಮತ್ತು ಜವೆಗೋಧಿಗಾಗಿ ದುಃಖಿಸಿ; ಏಕೆಂದರೆ ಹೊಲದ ಬೆಳೆ ನಾಶವಾಗಿದೆ.
12 ताक ख़ुश्क हो गई; अंजीर का दरख़्त मुरझा गया। अनार और खजूर और सेब के दरख़्त, हाँ मैदान के तमाम दरख़्त मुरझा गए; और बनी आदम से खुशी जाती रही'।
ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.
13 ऐ काहिनो, कमरें कस कर मातम करो, ऐ मज़बह पर ख़िदमत करने वालो, वावैला करो। ऐ मेरे ख़ुदा के ख़ादिमों, आओ रात भर टाट ओढ़ो! क्यूँकि नज़्र की क़ुर्बानी और तपावन तुम्हारे ख़ुदा के घर से मौक़ूफ़ हो गए।
ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.
14 रोज़े के लिए एक दिन मुक़द्दस करो; पाक महफ़िल बुलाओ। बुज़ुर्गों और मुल्क के तमाम बाशिंदों को ख़ुदावन्द अपने ख़ुदा के घर में जमा' करके उससे फ़रियाद करो
ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.
15 उस दिन पर अफ़सोस! क्यूँकि ख़ुदावन्द का दिन नज़दीक है, वह क़ादिर — ए — मुतलक़ की तरफ़ से बड़ी हलाकत की तरह आएगा।
ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು.
16 क्या हमारी आँखों के सामने रोज़ी मौक़ूफ़ नहीं हुई, और हमारे ख़ुदा के घर से खु़शीओ — शादमानी जाती नहीं रही?
ನಮ್ಮ ಕಣ್ಣೆದುರೇ ಆಹಾರವು ಹಾಳಾಯಿತಲ್ಲಾ. ಸಂತೋಷವೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತಲ್ಲವೇ?
17 बीज ढेलों के नीचे सड़ गया; ग़ल्लाख़ाने ख़ाली पड़े हैं, खत्ते तोड़ डाले गए; क्यूँकि खेती सूख गई।
ಬೀಜಗಳು ಹೆಂಟೆಗಳ ಕೆಳಗೆ ಕೆಟ್ಟು ಹೋಗಿವೆ. ಉಗ್ರಾಣಗಳು ನಾಶವಾಗಿವೆ. ಕಣಜಗಳು ಕುಸಿದುಬಿದ್ದಿವೆ. ಏಕೆಂದರೆ ಧಾನ್ಯವು ಒಣಗಿದೆ.
18 जानवर कैसे कराहते हैं! गाय — बैल के गल्ले परेशान हैं क्यूँके उनके लिए चरागाह नहीं है; हाँ, भेड़ों के गल्ले भी बर्बाद हो गए हैं।
ಪಶುಗಳು ನರಳುತ್ತವೆ. ದನದ ಹಿಂಡುಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ; ಕುರಿಮಂದೆಗಳು ಸಹ ಕಷ್ಟಪಡುತ್ತಲಿವೆ.
19 ऐ ख़ुदावन्द, मैं तेरे सामने फ़रियाद करता हूँ। क्यूँकि आग ने वीराने की चरागाहों को जला दिया, और शो'ले ने मैदान के सब दरख़्तों को राख कर दिया है।
ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ. ಬೆಂಕಿಯು ಹುಲ್ಲುಗಾವಲನ್ನು ದಹಿಸಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿವೆ.
20 जंगली जानवर भी तेरी तरफ़ निगाह रखते हैं, क्यूँकि पानी की नदियाँ सूख गई, और आग वीराने की चरागाहों को खा गईं।
ಕಾಡುಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿ ಹೋಗಿವೆ. ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.

< यूए 1 >