< मत्ती 12 >

1 उस वक़्त ईसा सबत के दिन खेतों में हो कर गया, और उसके शागिर्दों को भूख लगी और वो बालियां तोड़ — तोड़ कर खाने लगे।
ಯೇಸು ಒಂದು ಸಬ್ಬತ್ ದಿನ ಪೈರಿನ ಹೊಲವನ್ನು ಹಾದುಹೋಗುತ್ತಿದ್ದಾಗ, ಅವರ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
2 फ़रीसियों ने देख कर उससे कहा “देख तेरे शागिर्द वो काम करते हैं जो सबत के दिन करना जायज़ नहीं।”
ಫರಿಸಾಯರು ಅದನ್ನು ಕಂಡು ಯೇಸುವಿಗೆ, “ಇಗೋ, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಮಾಡುತ್ತಿದ್ದಾರೆ,” ಎಂದರು.
3 उसने उनसे कहा “क्या तुम ने ये नहीं पढ़ा कि जब दाऊद और उस के साथी भूखा थे; तो उसने क्या किया?
ಅದಕ್ಕೆ ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?
4 वो क्यूँकर ख़ुदा के घर में गया और नज़्र की रोटियाँ खाईं जिनको खाना उसको जायज़ न था; न उसके साथियों को मगर सिर्फ़ काहिनों को?
ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ತಾನಾಗಲಿ ತನ್ನ ಸಂಗಡಿಗರಾಗಲಿ, ತಿನ್ನುವುದಕ್ಕೆ ಧರ್ಮಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತಿನ್ನಲಿಲ್ಲವೇ?
5 क्या तुम ने तौरेत में नहीं पढ़ा कि काहिन सबत के दिन हैकल में सबत की बेहुरमती करते हैं; और बेक़ुसूर रहते हैं?
ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಉಲ್ಲಂಘಿಸಿದರೂ ನಿರ್ದೋಷಿಗಳಾಗಿದ್ದಾರೆಂದು ನೀವು ನಿಯಮದಲ್ಲಿ ಓದಲಿಲ್ಲವೇ?
6 लेकिन मैं तुम से कहता हूँ कि यहाँ वो है जो हैकल से भी बड़ा है।
ದೇವಾಲಯಕ್ಕಿಂತಲೂ ದೊಡ್ಡವನು ಇಲ್ಲಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.
7 लेकिन अगर तुम इसका मतलब जानते कि, मैं क़ुर्बानी नहीं बल्कि, रहम पसन्द करता हूँ। तो बेक़ुसूरों को क़ुसूरवार न ठहराते।
ಆದರೆ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ, ನಿರಪರಾಧಿಗಳನ್ನು ಖಂಡಿಸುತ್ತಿರಲಿಲ್ಲ.
8 क्यूँकि इब्न — ए — आदम सबत का मालिक है।”
ಏಕೆಂದರೆ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದೇನೆ,” ಎಂದು ಹೇಳಿದರು.
9 वो वहाँ से चलकर उन के इबादतख़ाने में गया।
ಯೇಸು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದರು.
10 और देखो; वहाँ एक आदमी था जिस का हाथ सूखा हुआ था उन्होंने उस पर इल्ज़ाम लगाने के 'इरादे से ये पुछा, “क्या सबत के दिन शिफ़ा देना जायज़ है।”
ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. ಆಗ ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯಸಮ್ಮತವೋ?” ಎಂದು ಕೇಳಿದರು.
11 उसने उनसे कहा, “तुम में ऐसा कौन है जिसकी एक भेड़ हो और वो सबत के दिन गड्ढे में गिर जाए तो वो उसे पकड़कर न निकाले?
ಅದಕ್ಕೆ ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ, ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ?
12 पस आदमी की क़द्र तो भेड़ से बहुत ही ज़्यादा है; इसलिए सबत के दिन नेकी करना जायज़ है।”
ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಮೌಲ್ಯವುಳ್ಳವನಾಗಿದ್ದಾನಲ್ಲವೇ? ಆದ್ದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವುದು ನ್ಯಾಯಸಮ್ಮತವಾಗಿದೆ!” ಎಂದು ಹೇಳಿದರು.
13 तब उसने उस आदमी से कहा “अपना हाथ बढ़ा।” उस ने बढ़ाया और वो दूसरे हाथ की तरह दुरुस्त हो गया।
ಆಗ ಯೇಸು ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದರು. ಅವನು ಕೈಚಾಚಿದಾಗ ಅದು ಸಂಪೂರ್ಣ ವಾಸಿಯಾಗಿ ಇನ್ನೊಂದು ಕೈಯಂತೆಯೇ ಆಯಿತು.
14 इस पर फ़रीसियों ने बाहर जाकर उसके बरख़िलाफ़ मशवरा किया कि उसे किस तरह हलाक करें।
ಆದರೆ ಫರಿಸಾಯರು ಹೊರಗೆ ಹೋಗಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಆಲೋಚನೆಮಾಡಿದರು.
15 ईसा ये मा'लूम करके वहाँ से रवाना हुआ; और बहुत से लोग उसके पीछे हो लिए और उसने सब को अच्छा कर दिया,
ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದರು. ದೊಡ್ಡ ಜನರ ಗುಂಪು ಅವರನ್ನು ಹಿಂಬಾಲಿಸಿತು. ಯೇಸು ಅವರಲ್ಲಿ ಅಸ್ವಸ್ಥರಾದವರನ್ನು ಗುಣಪಡಿಸಿದರು.
16 और उनको ताकीद की, कि मुझे ज़ाहिर न करना।
ಆದರೆ ಯೇಸು ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವರನ್ನು ಎಚ್ಚರಿಸಿದರು.
17 ताकि जो यसायाह नबी की मा'रिफ़त कहा गया था वो पूरा हो।
ಹೀಗೆ ದೇವರು ಪ್ರವಾದಿಯಾದ ಯೆಶಾಯನ ಮುಖಾಂತರ ಹೇಳಿದ ಮಾತು ನೆರವೇರಿತು. ಅದೇನೆಂದರೆ:
18 'देखो, ये मेरा ख़ादिम है जिसे मैं ने चुना मेरा प्यारा जिससे मेरा दिल ख़ुश है। मैं अपना रूह इस पर डालूँगा, और ये ग़ैर क़ौमों को इन्साफ़ की ख़बर देगा।
“ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು.
19 ये न झगड़ा करेगा न शोर, और न बाज़ारों में कोई इसकी आवाज़ सुनेगा।
ಈತನು ಜಗಳವಾಡುವವನಲ್ಲ, ಕೂಗಾಡುವವನಲ್ಲ; ಬೀದಿಗಳಲ್ಲಿ ಈತನ ಸ್ವರವನ್ನು ಯಾರೂ ಕೇಳಿಸಿಕೊಳ್ಳುವುದೂ ಇಲ್ಲ.
20 ये कुचले हुए सरकंडे को न तोड़ेगा और धुवाँ उठते हुए सन को न बुझाएगा; जब तक कि इन्साफ़ की फ़तह न कराए।
ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, ಜಜ್ಜಿದ ದಂಟನ್ನು ಮುರಿಯುವವನಲ್ಲ, ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ.
21 और इसके नाम से ग़ैर क़ौमें उम्मीद रख्खेंगी।
ಈತನ ಹೆಸರಿನಲ್ಲಿಯೇ ಯೆಹೂದ್ಯರಲ್ಲದವರು ನಿರೀಕ್ಷೆ ಇಡುವರು.”
22 उस वक़्त लोग उसके पास एक अंधे गूँगे को लाए; उसने उसे अच्छा कर दिया चुनाँचे वो गूँगा बोलने और देखने लगा।
ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು.
23 “सारी भीड़ हैरान होकर कहने लगी; क्या ये इब्न — ए — आदम है?”
ಆಗ ಜನರೆಲ್ಲರೂ ವಿಸ್ಮಯಗೊಂಡವರಾಗಿ, “ದಾವೀದನ ಪುತ್ರನು ಈತನೇ ಅಲ್ಲವೇ?” ಎಂದರು.
24 फ़रीसियों ने सुन कर कहा, “ये बदरूहों के सरदार बा'लज़बूल की मदद के बग़ैर बदरूहों को नहीं निकालता।”
ಆದರೆ ಫರಿಸಾಯರು ಇದನ್ನು ಕೇಳಿದಾಗ, “ಈತನು ದೆವ್ವಗಳನ್ನು ಓಡಿಸುತ್ತಿರುವುದು ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದಲೇ,” ಎಂದರು.
25 उसने उनके ख़यालों को जानकर उनसे कहा, “जिस बादशाही में फ़ूट पड़ती है वो वीरान हो जाती है और जिस शहर या घर में फ़ूट पड़ेगी वो क़ाईम न रहेगा।
ಯೇಸು ಅವರ ಆಲೋಚನೆಗಳನ್ನು ತಿಳಿದು ಅವರಿಗೆ, “ತನಗೆ ವಿರೋಧವಾಗಿ ವಿಭಜಿಸಿಕೊಳ್ಳುವ ಪ್ರತಿಯೊಂದು ರಾಜ್ಯವು ನಾಶವಾಗುವುದು ಮತ್ತು ತನಗೆ ವಿರೋಧವಾಗಿ ವಿಭಾಗವಾಗಿರುವ ಪ್ರತಿಯೊಂದು ಪಟ್ಟಣವಾಗಲಿ ಮನೆಯಾಗಲಿ ನಿಲ್ಲುವುದಿಲ್ಲ.
26 और अगर शैतान ही शैतान को निकाले तो वो आप ही अपना मुख़ालिफ़ हो गया; फिर उसकी बादशाही क्यूँकर क़ाईम रहेगी?
ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಓಡಿಸಿದರೆ, ಅವನು ತನಗೆ ವಿರೋಧವಾಗಿ ವಿಭಾಗವಾಗಿರುವನು. ಹಾಗಾದರೆ ಅವನ ರಾಜ್ಯವು ನಿಲ್ಲುವುದು ಹೇಗೆ?
27 अगर मैं बा'लज़बूल की मदद से बदरूहों को निकालता हूँ तो तुम्हारे बेटे किस की मदद से निकालते हैं? पस वही तुम्हारे मुन्सिफ़ होंगे।
ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಜನರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.
28 लेकिन अगर मैं ख़ुदा के रूह की मदद से बदरूहों को निकालता हूँ तो ख़ुदा की बादशाही तुम्हारे पास आ पहुँची।
ನಾನು ದೇವರ ಆತ್ಮನಿಂದ ದೆವ್ವಗಳನ್ನು ಓಡಿಸುವುದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
29 या क्यूँकर कोई आदमी किसी ताक़तवर के घर में घुस कर उसका माल लूट सकता है; जब तक कि पहले उस ताक़तवर को न बाँध ले? फिर वो उसका घर लूट लेगा।
“ಇದಲ್ಲದೆ, ಯಾವನಾದರೂ ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ, ಅವನ ಮನೆಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸೂರೆ ಮಾಡಲಾದೀತೇ? ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.
30 जो मेरे साथ नहीं वो मेरे ख़िलाफ़ है और जो मेरे साथ जमा नहीं करता वो बिखेरता है।
“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.
31 इसलिए मैं तुम से कहता हूँ कि आदमियों का हर गुनाह और कुफ़्र तो मुआफ़ किया जाएगा; मगर जो कुफ़्र रूह के हक़ में हो वो मु'आफ़ न किया जाएगा।”
ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.
32 “और जो कोई इब्न — ए — आदम के ख़िलाफ़ कोई बात कहेगा वो तो उसे मु'आफ़ की जाएगी; मगर जो कोई रूह — उल — क़ुद्दूस के ख़िलाफ़ कोई बात कहेगा; वो उसे मु'आफ़ न की जाएगी न इस आलम में न आने वाले में।” (aiōn g165)
ಯಾರಾದರೂ ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ, ಈ ಯುಗದಲ್ಲೇ ಆಗಲಿ ಬರುವ ಯುಗದಲ್ಲೇ ಆಗಲಿ ಅದಕ್ಕಾಗಿ ಅವರಿಗೆ ಕ್ಷಮೆ ದೊರಕುವುದಿಲ್ಲ. (aiōn g165)
33 “या तो दरख़्त को भी अच्छा कहो; और उसके फल को भी अच्छा, या दरख़्त को भी बुरा कहो और उसके फल को भी बुरा; क्यूँकि दरख़्त फल से पहचाना जाता है।
“ಮರವು ಒಳ್ಳೆಯದಾಗಿದ್ದರೆ, ಅದರ ಫಲವು ಒಳ್ಳೆಯದಾಗಿರುವುದು; ಮರವು ಕೆಟ್ಟದ್ದಾಗಿದ್ದರೆ, ಅದರ ಫಲವು ಕೆಟ್ಟದ್ದಾಗಿರುವುದು. ಏಕೆಂದರೆ ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು.
34 ऐ साँप के बच्चो! तुम बुरे होकर क्यूँकर अच्छी बातें कह सकते हो? क्यूँकि जो दिल में भरा है वही मुँह पर आता है।
ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.
35 अच्छा आदमी अच्छे ख़ज़ाने से अच्छी चीज़ें निकालता है; बुरा आदमी बुरे ख़ज़ाने से बुरी चीज़ें निकालता है।
ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.
36 मैं तुम से कहता हूँ; कि जो निकम्मी बात लोग कहेंगे; 'अदालत के दिन उसका हिसाब देंगे।
ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
37 क्यूँकि तू अपनी बातों की वजह से रास्तबाज़ ठहराया जाएगा; और अपनी बातों की वजह से क़ुसूरवार ठहराया जाएगा।”
ನೀನು ನಿನ್ನ ಮಾತುಗಳಿಂದಲೇ ನೀತಿವಂತನೆಂದು ನಿರ್ಣಯಿಸಲಾಗುವುದು ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ನಿರ್ಣಯಿಸಲಾಗುವುದು,” ಎಂದು ಹೇಳಿದರು.
38 इस पर कुछ आलिमों और फ़रीसियों ने जवाब में उससे कहा, “ऐ उस्ताद हम तुझ से एक निशान देखना चहते हैं।”
ಆಗ ನಿಯಮ ಬೋಧಕರೂ ಫರಿಸಾಯರೂ, “ಬೋಧಕರೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ಕಾಣಬೇಕೆಂದಿದ್ದೇವೆ,” ಎಂದು ಕೇಳಿದರು.
39 उस ने जवाब देकर उनसे कहा, इस ज़माने के बुरे और बे'ईमान लोग निशान तलब करते हैं; मगर यहून्ना नबी के निशान के सिवा कोई और निशान उनको न दिया जाएगा।
ಯೇಸು ಉತ್ತರವಾಗಿ ಅವರಿಗೆ, “ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ.
40 क्यूँकि जैसे यहून्ना तीन रात तीन दिन मछली के पेट में रहा; वैसे ही इबने आदम तीन रात तीन दिन ज़मीन के अन्दर रहेगा।
ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.
41 निनवे शहर के लोग 'अदालत के दिन इस ज़माने के लोगों के साथ खड़े होकर इनको मुजरिम ठहराएँगे; क्यूँकि उन्होंने यहून्ना के एलान पर तौबा कर ली; और देखो, यह वो है जो यहून्ना से भी बड़ा है।
ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ನಿಂತು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ.
42 दक्खिन की मलिका 'अदालत के दिन इस ज़माने के लोगों के साथ उठकर इनको मुजरिम ठहराएगी; क्यूँकि वो दुनिया के किनारे से सुलैमान की हिक्मत सुनने को आई; और देखो यहाँ वो है जो सुलैमान से भी बड़ा है।
ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.
43 “जब बदरूह आदमी में से निकलती है तो सूखे मक़ामों में आराम ढूँडती फिरती है, और नहीं पाती।
“ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ, ಅದು,
44 तब कहती है, मैं अपने उस घर में फिर जाऊँगी जिससे निकली थी। और आकर उसे ख़ाली और झड़ा हुआ और आरास्ता पाती है।
‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು, ಆ ಮನೆಯು ಬರಿದಾಗಿಯೂ ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.
45 फिर जा कर और सात रूहें अपने से बुरी अपने साथ ले आती है और वो दाख़िल होकर वहाँ बसती हैं; और उस आदमी का पिछला हाल पहले से बदतर हो जाता है, इस ज़माने के बुरे लोगों का हाल भी ऐसा ही होगा।”
ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು.
46 जब वो भीड़ से ये कह रहा था, उसकी माँ और भाई बाहर खड़े थे, और उससे बात करना चहते थे।
ಯೇಸು ಇನ್ನೂ ಜನರ ಸಂಗಡ ಮಾತನಾಡುತ್ತಿದ್ದಾಗ, ಅವರ ತಾಯಿ ಮತ್ತು ಸಹೋದರರು ಅವರೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
47 किसी ने उससे कहा, “देख तेरी माँ और भाई बाहर खड़े हैं और तुझ से बात करना चाहते हैं।”
ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು.
48 उसने ख़बर देने वाले को जवाब में कहा “कौन है मेरी माँ और कौन हैं मेरे भाई?”
ಅದಕ್ಕೆ ಯೇಸು ತಮಗೆ ಹೇಳಿದವನಿಗೆ ಉತ್ತರವಾಗಿ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ,
49 फिर अपने शागिर्दों की तरफ़ हाथ बढ़ा कर कहा, “देखो, मेरी माँ और मेरे भाई ये हैं।
ಶಿಷ್ಯರ ಕಡೆಗೆ ತಮ್ಮ ಕೈಚಾಚಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು.
50 क्यूँकि जो कोई मेरे आस्मानी बाप की मर्ज़ी पर चले वही मेरा भाई, मेरी बहन और माँ है।”
ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.

< मत्ती 12 >