< अम्सा 1 >

1 इस्राईल के बादशाह सुलेमान बिन दाऊद की अम्साल:
ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು:
2 हिकमत और तरबियत हासिल करने, और समझ की बातों का फ़र्क़ करने के लिए,
ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ; ವಿವೇಕದ ಮಾತುಗಳನ್ನು ಗ್ರಹಿಸುವುದಕ್ಕೆ;
3 'अक़्लमंदी और सदाक़त और 'अद्ल, और रास्ती में तरबियत हासिल करने के लिए;
ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು ನ್ಯಾಯ ಮತ್ತು ಯುಕ್ತವಾದವುಗಳನ್ನು ನಡೆಸುವ ಜ್ಞಾನೋಕ್ತಿಗಳು;
4 सादा दिलों को होशियारी, जवान को 'इल्म और तमीज़ बख़्शने के लिए,
ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.
5 ताकि 'अक़्लमंद आदमी सुनकर 'इल्म में तरक़्क़ी करे और समझदार आदमी दुरुस्त मश्वरत तक पहुँचे,
ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ; ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.
6 जिस से मसल और तम्सील को, 'अक़्लमंदों की बातों और उनके पोशीदा राज़ो को समझ सके।
ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು ಅರ್ಥಮಾಡಿಕೊಳ್ಳಲು ಇವು ಬರೆಯಲಾಗಿವೆ.
7 ख़ुदावन्द का ख़ौफ़ 'इल्म की शुरू'आत है; लेकिन बेवक़ूफ़ हिकमत और तरबियत की हिक़ारत करते हैं।
ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.
8 ऐ मेरे बेटे, अपने बाप की तरबियत पर कान लगा, और अपनी माँ की ता'लीम को न छोड़;
ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು, ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.
9 क्यूँकि वह तेरे सिर के लिए ज़ीनत का सेहरा, और तेरे गले के लिए तौक़ होंगी।
ಅವು ನಿನ್ನ ತಲೆಗೆ ಸುಂದರ ಕಿರೀಟ ನಿನ್ನ ಕೊರಳನ್ನು ಅಲಂಕರಿಸುವ ಹಾರ.
10 ऐ मेरे बेटे, अगर गुनहगार तुझे फुसलाएँ, तू रज़ामंद न होना।
ಮಗನೇ, ಪಾಪಿಗಳು ನಿನ್ನನ್ನು ಸೆಳೆದರೆ ನೀನು ಒಪ್ಪಬೇಡ.
11 अगर वह कहें, हमारे साथ चल, हम खू़न करने के लिए ताक में बैठे, और छिपकर बेगुनाह के लिए नाहक़ घात लगाएँ,
ಒಂದು ವೇಳೆ ಅವರು ನಿನಗೆ, “ನಮ್ಮೊಂದಿಗೆ ಬಾ, ಜನರ ರಕ್ತಕ್ಕಾಗಿ ಒಳಸಂಚು ಮಾಡೋಣ, ನಿರಪರಾಧಿಯ ರಕ್ತಕ್ಕಾಗಿ;
12 हम उनको इस तरह ज़िन्दा और पूरा निगल जाएँ जिस तरह पाताल मुर्दों को निगल जाता है। (Sheol h7585)
ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ ಗುಂಡಿಯೊಳಕ್ಕೆ ಹೋಗುವವರನ್ನು ಸಂಪೂರ್ಣವಾಗಿ ನಾವು ಅವರನ್ನು ನುಂಗಿಬಿಡೋಣ. (Sheol h7585)
13 हम को हर क़िस्म का 'उम्दा माल मिलेगा, हम अपने घरों को लूट से भर लेंगे;
ಅಮೂಲ್ಯವಾದ ಸೊತ್ತನ್ನೆಲ್ಲಾ ನಾವು ಕಂಡುಹಿಡಿದು ಕೊಳ್ಳೆಹೊಡೆದು ನಮ್ಮ ಮನೆಗಳನ್ನು ತುಂಬಿಕೊಳ್ಳೋಣ;
14 तू हमारे साथ मिल जा, हम सबकी एक ही थैली होगी,
ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಾವೆಲ್ಲರೂ ಹಣಹಂಚಿಕೊಳ್ಳೋಣ,” ಎಂದು ಹೇಳುವುದಾದರೆ.
15 तो ऐ मेरे बेटे, तू उनके साथ न जाना, उनकी राह से अपना पाँव रोकना।
ಮಗನೇ, ಅವರೊಂದಿಗೆ ಸೇರಬೇಡ, ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.
16 क्यूँकि उनके पाँव बदी की तरफ़ दौड़ते हैं, और खू़न बहाने के लिए जल्दी करते हैं।
ಏಕೆಂದರೆ ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತಸುರಿಸುವುದಕ್ಕೆ ಆತುರಪಡುತ್ತವೆ.
17 क्यूँकि परिंदे की आँखों के सामने, जाल बिछाना बेकार है।
ಪಕ್ಷಿಗಳ ಕಣ್ಣೆದುರಿಗೆ ಕಾಣುವಂತೆ ಬಲೆಯನ್ನು ಹರಡುವುದು ವ್ಯರ್ಥವಲ್ಲವೇ!
18 और यह लोग तो अपना ही खू़न करने के लिए ताक में बैठते हैं, और छिपकर अपनी ही जान की घात लगाते हैं।
ಈ ಜನರು ಒಳಸಂಚು ಮಾಡುವುದು ತಮ್ಮ ಸ್ವಂತ ರಕ್ತಕ್ಕೆ. ಅವರು ಮಾಡುವ ದುರಾಲೋಚನೆ ಅವರನ್ನೇ ನಾಶಮಾಡುವುದು.
19 नफ़े' के लालची की राहें ऐसी ही हैं, ऐसा नफ़ा' उसकी जान लेकर ही छोड़ता है।
ಅಕ್ರಮ ಲಾಭದ ಬೆನ್ನಟ್ಟಿ ಹೋಗುವವರೆಲ್ಲರ ಗತಿ ಇದೇ. ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.
20 हिकमत कूचे में ज़ोर से पुकारती है, वह रास्तों में अपनी आवाज़ बलन्द करती है;
ಜ್ಞಾನವೆಂಬಾಕೆಯು ಬೀದಿಯಲ್ಲಿ ಕೂಗುತ್ತಾಳೆ, ಬಹಿರಂಗ ಸ್ಥಳಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
21 वह बाज़ार की भीड़ में चिल्लाती है; वह फाटकों के दहलीज़ पर और शहर में यह कहती है:
ಜನಭರಿತ ಬೀದಿಗಳಲ್ಲಿ ಆಕೆ ಕರೆಯುತ್ತಾಳೆ, ಪಟ್ಟಣದ ಹೆಬ್ಬಾಗಿಲುಗಳಲ್ಲಿ ಹೀಗೆಂದು ಭಾಷಣ ಮಾಡುತ್ತಾಳೆ:
22 “ऐ नादानो, तुम कब तक नादानी को दोस्त रख्खोगे? और ठट्ठाबाज़ कब तक ठठ्ठाबाज़ी से और बेवक़ूफ़ कब तक 'इल्म से 'अदावत रख्खेंगे?
“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?
23 तुम मेरी मलामत को सुनकर बाज़ आओ, देखो, मैं अपनी रूह तुम पर उँडेलूँगी, मैं तुम को अपनी बातें बताऊँगी।
ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ! ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು.
24 चूँकि मैंने बुलाया और तुम ने इंकार किया मैंने हाथ फैलाया और किसी ने ख़याल न किया,
ನಾನು ಕರೆದಾಗ ನೀವು ನನ್ನನ್ನು ತಿರಸ್ಕರಿಸಿದ್ದೀರಿ ನಾನು ನನ್ನ ಕೈಚಾಚಿದಾಗ ಯಾರೂ ಮನುಷ್ಯನೂ ಗಮನಿಸಲಿಲ್ಲ.
25 बल्कि तुम ने मेरी तमाम मश्वरत को नाचीज़ जाना, और मेरी मलामत की बेक़द्री की;
ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ; ನನ್ನ ಗದರಿಕೆಯನ್ನು ನೀವು ಬೇಡವೆಂದು ತಳ್ಳಿಬಿಟ್ಟಿದ್ದರಿಂದ
26 इसलिए मैं भी तुम्हारी मुसीबत के दिन हसूँगी; और जब तुम पर दहशत छा जाएगी तो ठठ्ठा मारूँगी।
ಬಿರುಗಾಳಿಯಂತೆ ನಿಮಗೆ ವಿಪತ್ತು ಬಂದಾಗ ನಾನು ನಗುವೆನು. ಆಪತ್ತು ನಿಮ್ಮನ್ನು ಹಿಂದಿಕ್ಕಿದಾಗ, ನಾನು ಪರಿಹಾಸ್ಯ ಮಾಡುವೆನು.
27 या'नी जब दहशत तूफ़ान की तरह आ पड़ेगी, और आफ़त बगोले की तरह तुम को आ लेगी, जब मुसीबत और जाँकनी तुम पर टूट पड़ेगी।
ಚಂಡಮಾರುತವು ನಿಮ್ಮನ್ನು ಬಿರುಗಾಳಿಯಂತೆ ತಾಕಿದಾಗ, ವಿಪತ್ತು ಸುಂಟರಗಾಳಿಯಂತೆ ನಿಮ್ಮ ಮೇಲೆ ಬೀಸಿದಾಗ, ಯಾತನೆ ಮತ್ತು ತೊಂದರೆ ನಿಮ್ಮನ್ನು ಆವರಿಸಿದಾಗಲೂ ಪರಿಹಾಸ್ಯಕ್ಕೆ ಒಳಗಾಗುವಿರಿ.
28 तब वह मुझे पुकारेंगे, लेकिन मैं जवाब न दूँगी; और दिल ओ जान से मुझे ढूंडेंगे, लेकिन न पाएँगे।
“ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು. ಅವರು ನನ್ನನ್ನು ಆತುರದಿಂದ ಹುಡುಕುವರು, ಆದರೆ ಅವರು ನನ್ನನ್ನು ಕಂಡುಕೊಳ್ಳುವುದಿಲ್ಲ.
29 इसलिए कि उन्होंने 'इल्म से 'अदावत रख्खी, और ख़ुदावन्द के ख़ौफ़ को इख़्तियार न किया।
ಏಕೆಂದರೆ ಅವರು ಅರಿವನ್ನು ಹಗೆಮಾಡಿ, ಯೆಹೋವ ದೇವರಿಗೆ ಭಯಪಡುವುದನ್ನು ಆರಿಸಿಕೊಳ್ಳದೆ ಹೋದರು.
30 उन्होंने मेरी तमाम मश्वरत की बेक़द्री की, और मेरी मलामत को बेकार जाना।
ನನ್ನ ಬುದ್ಧಿವಾದವನ್ನು ಸ್ವೀಕರಿಸದೆ, ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದರು.
31 तब वह अपनी ही चाल चलन का फल खाएँगे, और अपने ही मन्सूबों से पेट भरेंगे।
ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ, ತಮ್ಮ ಸ್ವಂತ ಕುಯುಕ್ತಿಗಳಿಂದಲೇ ಹೊಟ್ಟೆ ತುಂಬಿಕೊಳ್ಳುವರು.
32 क्यूँकि नादानों की नाफ़रमानी, उनको क़त्ल करेगी, और बेवक़ूफ़ों की बेवक़ूफ़ी उनकी हलाकत का ज़रिया' होगी।
ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು. ಜ್ಞಾನಹೀನರ ನಿಶ್ಚಿಂತೆಯು ಅವರನ್ನು ನಾಶಮಾಡುವುದು.
33 लेकिन जो मेरी सुनता है, वह महफ़ूज़ होगा, और आफ़त से निडर होकर इत्मिनान से रहेगा।”
ನನಗೆ ಕಿವಿಗೊಡುವವರಾದರೋ ಸುರಕ್ಷಿತರಾಗಿ ಜೀವಿಸುವರು, ಕೇಡಿನ ಭಯವಿಲ್ಲದೇ ನೆಮ್ಮದಿಯಿಂದ ಇರುವರು.”

< अम्सा 1 >