< रोमियो 11 >

1 पस मैं कहता हूँ क्या ख़ुदा ने अपनी उम्मत को रद्द कर दिया? हरगिज़ नहीं क्यूँकि मैं भी इस्राईली अब्रहाम की नस्ल और बिनयामीन के क़बीले में से हूँ।
ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.
2 ख़ुदा ने अपनी उस उम्मत को रद्द नहीं किया जिसे उसने पहले से जाना क्या तुम नहीं जानते कि किताब — ए — मुक़द्दस एलियाह के ज़िक्र में क्या कहती है; कि वो ख़ुदा से इस्राईल की यूँ फ़रियाद करता है?
ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?
3 “ऐ ख़ुदावन्द उन्होंने तेरे नबियों को क़त्ल किया और तेरी क़ुरबानगाहों को ढा दिया; अब मैं अकेला बाक़ी हूँ और वो मेरी जान के भी पीछे हैं।”
ಅವನು ದೇವರ ಮುಂದೆ, “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.
4 मगर जवाब'ए 'इलाही उसको क्या मिला? ये कि मैंने “अपने लिए सात हज़ार आदमी बचा रख्खे हैं जिन्होंने बा'ल के आगे घुटने नहीं टेके।”
ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.
5 पस इसी तरह इस वक़्त भी फ़ज़ल से बरगुज़ीदा होने के ज़रिए कुछ बाक़ी हैं।
ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.
6 और अगर फ़ज़ल से बरगुज़ीदा हैं तो आ'माल से नहीं; वर्ना फ़ज़ल फ़ज़ल न रहा।
ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.
7 पस नतीजा क्या हुआ? ये कि इस्राईल जिस चीज़ की तलाश करता है वो उस को न मिली मगर बरगुज़ीदों को मिली और बाक़ी सख़्त किए गए।
ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.
8 चुनाँचे लिखा है, ख़ुदा ने उनको आज के दिन तक सुस्त तबी'अत दी और ऐसी आँखें जो न देखें और ऐसे कान जो न सुनें।
“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
9 और दाऊद कहता है, उनका दस्तरख़्वान उन के लिए जाल और फ़न्दा और ठोकर खाने और सज़ा का ज़रिया बन जाए।
ಇದಲ್ಲದೆ “ಅವರ ಭೋಜನವೇ ಅವರಿಗೆ ಬಲೆಯೂ, ಜಾಲವೂ, ಅಡೆತಡೆಯೂ, ಪ್ರತಿಕಾರವೂ ಆಗಲಿ;
10 उन की आँखों पर अँधेरा छा जाए ताकि न देखें और तू उनकी पीठ हमेशा झुकाए रख।
೧೦ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ.
11 पस मैं पूंछता हूँ क्या यहूदियों ने ऐसी ठोकर खाई कि गिर पड़ें? हरगिज़ नहीं; बल्कि उनकी ग़लती से ग़ैर क़ौमों को नजात मिली ताकि उन्हें ग़ैरत आए।
೧೧ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.
12 पस जब उनका लड़खड़ाना दुनिया के लिए दौलत का ज़रिया और उनका घटना ग़ैर क़ौमों के लिए दौलत का ज़रिया हुआ तो उन का भरपूर होना ज़रूर ही दौलत का ज़रिया होगा
೧೨ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.
13 मैं ये बातें तुम ग़ैर क़ौमों से कहता हूँ, चूँकि मैं ग़ैर क़ौमों का रसूल हूँ इसलिए अपनी ख़िदमत की बड़ाई करता हूँ।
೧೩ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.
14 ताकि किसी तरह से अपनी क़ौम वालों से ग़ैरत दिलाकर उन में से कुछ को नजात दिलाऊँ।
೧೪ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.
15 क्यूँकि जब उनका अलग हो जाना दुनिया के आ मिलने का ज़रिया हुआ तो क्या उन का मक़बूल होना मुर्दों में से जी उठने के बराबर न होगा?
೧೫ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.
16 जब नज़्र का पहला पेड़ा पाक ठहरा तो सारा गुंधा हुआ आटा भी पाक है, और जब जड़ पाक है तो डालियाँ भी पाक ही हैं।
೧೬ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.
17 लेकिन अगर कुछ डालियाँ तोड़ी गई, और तू जंगली ज़ैतून होकर उनकी जगह पैवन्द हुआ, और ज़ैतून की रौग़नदार जड़ में शरीक हो गया।
೧೭ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.
18 तो तू उन डालियों के मुक़ाबिले में फ़ख़्र न कर और अगर फ़ख़्र करेगा तो जान रख कि तू जड़ को नहीं बल्कि जड़ तुझ को संभालती है।
೧೮ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ.
19 पस तू कहेगा, “डालियाँ इसलिए तोड़ी गईं कि मैं पैवन्द हो जाऊँ।”
೧೯ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.
20 अच्छा, वो तो बे'ईमानी की वजह से तोड़ी गई, और तू ईमान की वजह से क़ाईम है; पस मग़रूर न हो बल्कि ख़ौफ़ कर।
೨೦ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.
21 क्यूँकि जब ख़ुदा ने असली डालियों को न छोड़ा तो तुझ को भी न छोड़ेगा।
೨೧ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.
22 पस ख़ुदा की महरबानी और सख़्ती को देख सख़्ती उन पर जो गिर गए हैं; और ख़ुदा की महरबानी तुझ पर बशर्ते कि तू उस महरबानी पर क़ाईम रहे, वर्ना तू भी काट डाला जाएगा।
೨೨ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
23 और वो भी अगर बे'ईमान न रहें तो पैवन्द किए जाएँगे क्यूँकि ख़ुदा उन्हें पैवन्द करके बहाल करने पर क़ादिर है।
೨೩ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.
24 इसलिए कि जब तू ज़ैतून के उस दरख़्त से काट कर जिसकी जड़ ही जंगली है जड़ के बरख़िलाफ़ अच्छे ज़ैतून में पैवन्द हो गया तो वो जो जड़ डालियाँ हैं अपने ज़ैतून में ज़रूर ही पैवन्द हो जाएँगी।
೨೪ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.
25 ऐ भाइयों! कहीं ऐसा न हो कि तुम अपने आपको अक़्लमन्द समझ लो इसलिए में नहीं चाहता कि तुम इस राज़ से ना वाक़िफ़ रहो कि इस्राईल का एक हिस्सा सख़्त हो गया है और जब तक ग़ैर क़ौमें पूरी पूरी दाख़िल न हों वो ऐसा ही रहेगा।
೨೫ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.
26 और इस सूरत से तमाम इस्राईल नजात पाएगा; चुनाँचे लिखा है, छुड़ाने वाला सिय्यून से निकलेगा और बेदीनी को या'क़ूब से दफ़ा करेगा।
೨೬ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
27 “और उनके साथ मेरा ये अहद होगा जब कि मैं उनके गुनाहों को दूर करूँगा।”
೨೭ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.
28 इंजील के ऐ'तिबार से तो वो तुम्हारी ख़ातिर दुश्मन हैं लेकिन बरगुज़ीदगी के ऐ'तिबार से बाप दादा की ख़ातिर प्यार करें।
೨೮ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.
29 इसलिए कि ख़ुदा की ने'अमत और बुलावा ना बदलने वाला है।
೨೯ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.
30 क्यूँकि जिस तरह तुम पहले ख़ुदा के नाफ़रमान थे मगर अब यहूदियों की नाफ़रमानी की वजह से तुम पर रहम हुआ।
೩೦ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,
31 उसी तरह अब ये भी नाफ़रमान हुए ताकि तुम पर रहम होने के ज़रिए अब इन पर भी रहम हो।
೩೧ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.
32 इसलिए कि ख़ुदा ने सब को नाफ़रमानी में गिरफ़्तार होने दिया ताकि सब पर रहम फ़रमाए। (eleēsē g1653)
೩೨ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ. (eleēsē g1653)
33 वाह! ख़ुदा की दौलत और हिक्मत और इल्म क्या ही अज़ीम है उसके फ़ैसले किस क़दर पहुँच से बाहर हैं और उसकी राहें क्या ही बे'निशान हैं।
೩೩ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.
34 ख़ुदावन्द की अक़्ल को किसने जाना? या कौन उसका सलाहकार हुआ?
೩೪“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?
35 या किसने पहले उसे कुछ दिया है, जिसका बदला उसे दिया जाए?
೩೫ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?”
36 क्यूँकि उसी की तरफ़ से, और उसी के वसीले से और उसी के लिए सब चीज़ें हैं; उसकी बड़ाई हमेशा तक होती रहे आमीन। (aiōn g165)
೩೬ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್. (aiōn g165)

< रोमियो 11 >